ಬೆಂಗಳೂರು : ಇಂದು ಬೆಳಿಗ್ಗೆ ವಿಧಾನಸೌಧದ ಮೂರನೇ ಮಹಡಿಯ, 314ರ ಕೊಠಡಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ. ಎಸ್. ಈಶ್ವರಪ್ಪ ಅವರ ಕೊಠಡಿ ಪೂಜಾ ಕಾರ್ಯಕ್ರಮವು ಜರುಗಿತು. ಪೂಜೆಯಲ್ಲಿ ಸಿಬ್ಬಂದಿ ಮತ್ತು ಹಿರಿಯ ಮುಖಂಡರುಗಳು ಭಾಗವಹಿಸಿದ್ದರು.
ನಂತರ ವಿಧಾನಸೌಧದ ಮೂರನೇ ಮಹಡಿಯ 313ರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯನ್ನು ಸಚಿವರಾದ ಕೆ.ಎಸ್.ಈಶ್ವರಪ್ಪರವರು ನಡೆಸಿದರು.
ಇಲಾಖೆ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳ ಕುರಿತು ಮತ್ತು ಕಾಮಗಾರಿಗಳ ಪೂರ್ಣ ಮಾಡಲು ಇರುವ ಕಾಲಾವಧಿ ಮತ್ತು ತುರ್ತು ಕಾಮಗಾರಿಗಳನ್ನು ಕೈಗೊಳ್ಳುವ ಕುರಿತು ಕೂಡ ಅಧಿಕಾರಿಗಳಿಗೆ ಸಲಹೆ ನೀಡಿದರು.
ಇಲಾಖೆಯಲ್ಲಿ ನಡೆಯುತ್ತಿರುವ ಪ್ರತಿಯೊಂದು ಕಾಮಗಾರಿಯೂ ಕೂಡ ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಬೇಕು ಮತ್ತು ಗ್ರಾಮೀಣ ಭಾಗದ ಕಟ್ಟ ಕಡೆಯ ವ್ಯಕ್ತಿಗೂ ಇಲಾಖೆಯ ಯೋಜನೆ ತಲುಪುವಂತೆಯಾಗಬೇಕೆಂದು ತಿಳಿಸಿದರು.
ಹಿರಿಯ ಅಧಿಕಾರಿಗಳಾದ ಶ್ರೀ ಎಲ್ ಕೆ ಅತೀಕ್, ಶ್ರೀಮತಿ ಉಮಾಮಹದೇವನ, ಶ್ರೀ ಅನಿರುದ್ಧ ಶ್ರವಣ, ಡಾ.ಆರ್.ವಿಶಾಲ್, ಶ್ರೀಮತಿ ಪ್ರಿಯಾಂಕ ಮೇರಿ ಫ್ರಾನ್ಸ್ಸಿಸ್, ಶ್ರೀ ಪ್ರಭಾಕರ್ ಹಮಿಗಿ ಮತ್ತು ವಿಶೇಷಾಧಿಕಾರಿಯಾದ ಶ್ರೀ ಜಿ.ಜಯರಾಮ್ ಮತ್ತು ಆಪ್ತ ಕಾರ್ಯದರ್ಶಿಯಾದ ಶ್ರೀ ಸಿ ಎನ್ ಮಂಜುನಾಥ್ ರವರು ಭಾಗವಹಿಸಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ