ಬೆಂಗಳೂರು: ಬಿಜೆಪಿಗೆ ರಾಜ್ಯದೆಲ್ಲೆಡೆ ಜನಬೆಂಬಲ ವ್ಯಕ್ತವಾಗುತ್ತಿದ್ದು, ಕೇಂದ್ರ- ರಾಜ್ಯ ಸರಕಾರಗಳ ಸಾಧನೆಯನ್ನು ಗಮನಿಸಿದ ಜನತೆ ಮತ್ತೊಮ್ಮೆ ಪಕ್ಷವನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ.ಸದಾನಂದ ಗೌಡ ಅವರು ತಿಳಿಸಿದರು.
ಮಡಿಕೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಬಾರಿ ಜನತೆ ಸುಳ್ಳುಕೋರರ ಪಕ್ಷ ಕಾಂಗ್ರೆಸ್ನವರಿಗೆ ಪಾಠ ಕಲಿಸುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು.
ಶಾಸಕ ಅಪ್ಪಚ್ಚು ರಂಜನ್, ಪಕ್ಷದ ಜಿಲ್ಲಾ ಅಧ್ಯಕ್ಷ ರಾಬಿನ್ ದೇವಯ್ಯ, ಯಾತ್ರೆ ಸಂಚಾಲಕ ರಾಜೇಂದ್ರ, ಸಹ ಸಂಚಾಲಕ ದತ್ತಾತ್ರಿ ಸ್ಥಳೀಯ ಮುಖಂಡರು ಹಾಜರಿದ್ದರು. ಬಳಿಕ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ವಿವಿಧೆಡೆ ಭರ್ಜರಿ ರೋಡ್ ಷೋ ನಡೆಯಿತು. ಮುಖಂಡರು, ಕಾರ್ಯಕರ್ತರು ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ