ಬೆಂಗಳೂರು: ಕಾಂಗ್ರೆಸ್ಸಿಗರದು ಸ್ವಾರ್ಥ, ವಂಶಪಾರಂಪರ್ಯದ ಪಕ್ಷ ಎಂದು ರಾಜ್ಯದ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ್ ಅವರು ಟೀಕಿಸಿದರು.
ಬಂಗಾರಪೇಟೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಸಹಕಾರದೊಂದಿಗೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಬಿಜೆಪಿ ಸರಕಾರ ಶ್ರಮಿಸಿದೆ. ಕೋಲಾರದ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನೂ ಜಾರಿಗೊಳಿಸಿದೆ ಎಂದು ತಿಳಿಸಿದರು.
ಕೋಲಾರದ ಮೂಲಕ ಸಿದ್ದರಾಮಯ್ಯರ ರಾಜಕೀಯ ನಿವೃತ್ತಿ ಆಗಲಿ ಎಂದು ಅವರು ಆಶಿಸಿದರು. ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಕೋಮುವಾದದ ಪಕ್ಷ ಎಂದು ತಿಳಿಸಿದರು. ಜನಹಿತ ಕಾಪಾಡಲು ಬಿಜೆಪಿ ಸದಾ ಬದ್ಧ ಎಂದು ತಿಳಿಸಿದರು. ಬಿಜೆಪಿ ಬೆಂಬಲಿಸಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಅವಕಾಶ ಕೊಡಿ ಎಂದು ಮನವಿ ಮಾಡಿದರು.
ದೆಹಲಿ ಸಂಸದ ಮನೋಜ್ ತಿವಾರಿ, ಸಂಸದರಾದ ಪಿ.ಸಿ.ಮೋಹನ್, ಮುನಿಸ್ವಾಮಿ, ಸಚಿವ ಮುನಿರತ್ನ, ಜಿಲ್ಲಾಧ್ಯಕ್ಷ ಡಾ ವೇಣುಗೋಪಾಲ್ ಅವರು ಭಾಗವಹಿಸಿದ್ದರು.
ಬಳಿಕ ವಿವಿಧೆಡೆ ನಡೆದ ರೋಡ್ ಷೋದಲ್ಲಿ ಮುಖಂಡರು, ಸಹಸ್ರಾರು ಜನ ಕಾರ್ಯಕರ್ತರು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ