Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121
ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ಮುಳುಗಿ ನಾಡು, ದೇಶಕ್ಕೆ ಒಳಿತಾಗಲಿದೆ: ಬಸವರಾಜ ಬೊಮ್ಮಾಯಿ – I am BJP
May 6, 2025

ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ಮುಳುಗಿ ನಾಡು, ದೇಶಕ್ಕೆ ಒಳಿತಾಗಲಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ಮುಳುಗಲಿದೆ. ಅದರಿಂದ ದೇಶಕ್ಕೆ ಮತ್ತು ನಾಡಿಗೆ ಒಳ್ಳೆಯದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಕೊರಟಗೆರೆಯಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆಯ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮುಳುಗುವ ಹಡಗು. ಅದು ಮುಳುಗಿ ಸಂಪೂರ್ಣವಾಗಿ ಎಲ್ಲರನ್ನು ಮುಳುಗಿಸಲಿದೆ. ಅದು ಈಗಾಗಲೇ ಉತ್ತರಪ್ರದೇಶ, ಗುಜರಾತ್, ಪಂಜಾಬ್, ಹರಿಯಾಣ ಸೇರಿ ಎಲ್ಲ ಕಡೆ ಮುಳುಗಿದೆ ಎಂದು ತಿಳಿಸಿದರು.

ವಿಶ್ವವಂದ್ಯ ನಾಯಕ ನರೇಂದ್ರ ಮೋದಿಜಿ ಅವರ ಕೈ ಬಲಪಡಿಸಿ. ಅವರು ದೇಶಭಕ್ತ. ಅವರು ವಿಶ್ವಮನ್ನಣೆಯ ನಾಯಕ. ಇಡೀ ಜಗತ್ತು ನರೇಂದ್ರ ಮೋದಿ ಅವರ ನಾಯಕತ್ವ ಒಪ್ಪಿದೆ. ಪಾಕಿಸ್ತಾನವು ಮೋದಿ ಅವರ ನಾಯಕತ್ವ ಬಯಸುತ್ತಿದೆ. ಚೀನಾದ ಜನರೂ ಭಾರತದ ಆಡಳಿತ, ಮೋದಿಜಿ ನಾಯಕತ್ವವನ್ನು ಬಯಸುತ್ತಾರೆ ಎಂದರು.

ಇಂಗ್ಲೆಂಡಿನಲ್ಲಿ ರಾಹುಲ್ ಗಾಂಧಿ ಅವರು ಭಾರತದ ಪ್ರಜಾಪ್ರಭುತ್ವದ ವಿರುದ್ಧ ಮಾತನಾಡಿದ್ದಾರೆ. ಈ ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಿದವರು, ವಿರೋಧ ಪಕ್ಷದವರನ್ನು ಜೈಲಿಗೆ ಹಾಕಿದವರು, ಪತ್ರಿಕೆಗಳನ್ನು ಬಂದ್ ಮಾಡಿ ಸ್ವಾತಂತ್ರ್ಯ ಹರಣ ಮಾಡಿದವರು ಕಾಂಗ್ರೆಸ್ಸಿಗರು. ಅಂಥವರಿಗೆ ಮತ ಹಾಕದಿರಿ ಎಂದು ಮನವಿ ಮಾಡಿದರು.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರದ್ದೇ ಅವರಿಗೆ ಗ್ಯಾರಂಟಿ ಇಲ್ಲ. ಅವರು ಜನರಿಗೆ ಗ್ಯಾರಂಟಿ ಕಾರ್ಡ್ ಕೊಡುತ್ತಿದ್ದಾರೆ ಎಂದು ಟೀಕಿಸಿದರು. ಜನರನ್ನು ಯಾಮಾರಿಸಲು ಬೊಗಳೆ ಬಿಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ಸಿನದು ಬೊಗಳೆ ಭರವಸೆಯ ವಿಸಿಟಿಂಗ್ ಕಾರ್ಡ್ ಅಷ್ಟೇ ಎಂದು ತಿಳಿಸಿದರು. ಇದಕ್ಕೆ ಬೆಲೆ ಇಲ್ಲ. ಜನರನ್ನು ಪದೇಪದೇ ಮೋಸ ಮಾಡಲಾಗದು ಎಂದು ಕಾಂಗ್ರೆಸ್ಸಿನವರು ಅರ್ಥ ಮಾಡಿಕೊಳ್ಳಲಿ ಎಂದರು.

ಕಮಲ ಅರಳಿಸಲು ವಿನಂತಿಸಿದ ಅವರು, ಕಿಸಾನ್ ಸಮ್ಮಾನ್ ಯೋಜನೆ, ವಿದ್ಯಾನಿಧಿ, ಸಂಧ್ಯಾ ಸುರಕ್ಷಾ ಸೇರಿ ವಿವಿಧ ಜನಪರ ಯೋಜನೆಗಳ ವಿವರವನ್ನು ಜನರಿಗೆ ತಿಳಿಸಿ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು. ಜನಕಲ್ಯಾಣ ಸರಕಾರವನ್ನು ಕರ್ನಾಟಕದಲ್ಲಿ ಸ್ಥಾಪಿಸಿ ಎಂದು ಮನವಿ ಮಾಡಿದರು.

ಕಾಂಗ್ರೆಸ್ಸಿಗರು ಮೀಸಲಾತಿ ಕುರಿತು ಮಾತನ್ನಷ್ಟೇ ಆಡಿದ್ದಾರೆ. ನಾವು 40 ವರ್ಷಗಳ ಮೀಸಲಾತಿ ಬೇಡಿಕೆಯನ್ನು ಈಡೇರಿಸಿದ್ದೇವೆ ಎಂದು ತಿಳಿಸಿದರು. ಸಂಸದ ಬಸವರಾಜ್, ಸಚಿವರಾದ ಆರ್.ಅಶೋಕ್, ಬಿ.ಸಿ.ನಾಗೇಶ್, ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ವಿಧಾನಪರಿಷತ್ ಸದಸ್ಯ ಅ. ದೇವೇಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ಯಾತ್ರೆ ಸಂಚಾಲಕ ಸಚ್ಚಿದಾನಂದಮೂರ್ತಿ, ಜಿಲ್ಲಾಧ್ಯಕ್ಷ ಬಿ.ಕೆ.ಮಂಜುನಾಥ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *