Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121
ಮೀಸಲಾತಿ ವಿಚಾರದಲ್ಲಿ ಸಿಎಂ ಇಚ್ಛಾಶಕ್ತಿ ಪ್ರದರ್ಶನ – ಪ್ರಭು ಚವ್ಹಾಣ್ – I am BJP
May 6, 2025

ಮೀಸಲಾತಿ ವಿಚಾರದಲ್ಲಿ ಸಿಎಂ ಇಚ್ಛಾಶಕ್ತಿ ಪ್ರದರ್ಶನ – ಪ್ರಭು ಚವ್ಹಾಣ್

ಬೆಂಗಳೂರು : ಒಳ ಮೀಸಲಾತಿ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸಚಿವ ಸಂಪುಟದ ನಿರ್ಣಯ ಸ್ವಾಗತಾರ್ಹ ಎಂದು ರಾಜ್ಯದ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಮಾಜಕ್ಕೆ ಮತ್ತು ಇತರ ಯಾವುದೇ ಸಮಾಜಕ್ಕೆ ಅನ್ಯಾಯ ಆಗಿಲ್ಲ. ಅತ್ಯುತ್ತಮ ನಿರ್ಣಯ ಇದಾಗಿದೆ. ನಮ್ಮ ಸರಕಾರದ ಅವಧಿಯಲ್ಲಿ ಮುಖ್ಯಮಂತ್ರಿಗಳ ಇಚ್ಛಾಶಕ್ತಿಯಿಂದ ಎಲ್ಲ ಸಮುದಾಯದವರಿಗೆ ಮೀಸಲಾತಿ ಮೂಲಕ ನ್ಯಾಯ ಲಭಿಸಲಿದೆ ಎಂದು ಅವರು ತಿಳಿಸಿದರು.

ಬಂಜಾರ, ಬೋವಿ, ಕೊರಚ, ಕೊರಮರನ್ನು ಎಸ್‍ಸಿ ಪಟ್ಟಿಯಿಂದ ಹೊರಗಿಡುವ ಪ್ರಶ್ನೆ ಇಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ. ಇದರ ಬಗ್ಗೆ ರಾಷ್ಟ್ರೀಯ ಆಯೋಗಕ್ಕೆ ಪತ್ರ ಬರೆಯಲಾಗಿದೆ. ಎಡ, ಬಲ ಎಲ್ಲರೂ ಅಣ್ಣ ತಮ್ಮಂದಿರಂತೆ ಇದ್ದೇವೆ ಎಂದು ವಿವರಿಸಿದರು. ಹಲವು ವರ್ಷಗಳಿಂದ ಗಲಾಟೆ ಇತ್ತು; ಅದು ಈಗ ಬಗೆಹರಿದಿದೆ ಎಂದು ತಿಳಿಸಿದರು.

ಸದಾಶಿವ ಆಯೋಗದ ವರದಿ ಬಗ್ಗೆ ಅಧ್ಯಯನ ಮಾಡಿ ವರದಿ ನೀಡಲು ಕ್ಯಾಬಿನೆಟ್ ಉಪ ಸಮಿತಿ ರಚಿಸಲಾಗಿತ್ತು. ಇದೊಂದು ಒಳ್ಳೆಯ ನಿರ್ಣಯ. ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು. ಹಲವು ವರ್ಷಗಳಿಂದ ಇದರ ಕುರಿತು ಬೇಡಿಕೆ ಇತ್ತು ಎಂದು ನುಡಿದರು.

ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ನ್ಯಾ. ಸದಾಶಿವ ಆಯೋಗವನ್ನು ಕಾಂಗ್ರೆಸ್ ಪಕ್ಷದ ಸರಕಾರ ನೇಮಿಸಿತ್ತು. ಬಿಜೆಪಿ ಅದನ್ನು ನೇಮಿಸಿದ್ದಲ್ಲ ಎಂದರಲ್ಲದೆ, ಆಯೋಗದ ವರದಿಯನ್ನು ಜಾರಿಗೊಳಿಸದೆ ಇರಲು ಕಾರಣವೇನು ಎಂದು ಪ್ರಶ್ನಿಸಿದರು.

ಕಣ್ಣೊರೆಸಲು ಆಯೋಗ ರಚಿಸಲಾಯಿತೇ?
ಕಾಂಗ್ರೆಸ್ ಪಕ್ಷದವರಿಂದ ಕಣ್ಣೊರೆಸಲು ಆಯೋಗ ರಚಿಸಲಾಯಿತೇ? ದಲಿತರ ಮೂಗಿಗೆ ತುಪ್ಪ ಸವರಲು ಆಯೋಗ ರಚಿಸಲಾಗಿತ್ತೇ? ವೋಟ್ ಬ್ಯಾಂಕಾಗಿ ಅವರನ್ನು ಉಳಿಸಿಕೊಳ್ಳಲು ಇದನ್ನು ಮಾಡಿದ್ದರೇ? ಒಂದು ವೇಳೆ ನಿಮಗೆ ನಿಜವಾದ ಕಳಕಳಿ ಇದ್ದರೆ ನಿಮ್ಮ ವರದಿಯನ್ನು ನೀವು ಜಾರಿ ಮಾಡಬೇಕಿತ್ತು ಎಂದು ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದರು.

5 ವರ್ಷಗಳಾಗಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯರವರು, 14 ತಿಂಗಳು ಸಿಎಂ ಆಗಿದ್ದ ಕುಮಾರಸ್ವಾಮಿಯವರು ವರದಿ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ನಾವು ಸಮಿತಿ ರಚಿಸಿ ಅದರ ಆಧಾರದಲ್ಲಿ ಅನುಷ್ಠಾನಕ್ಕೆ ತಂದಿದ್ದೇವೆ ಎಂದು ವಿವರಿಸಿದರು.

ಆರು ವರ್ಷ ಜಾರಿ ಮಾಡದವರು ಈಗ ಮತ್ತೆ ಆಶ್ವಾಸನೆ ಕೊಡುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ಅವರದು ದಿಟ್ಟ ನಿರ್ಧಾರ. ಇದನ್ನು ನಮ್ಮ ಎಲ್ಲ ಸಮುದಾಯಗಳು ಒಕ್ಕೊರಲಿನಿಂದ ಸ್ವಾಗತಿಸುತ್ತಿವೆ ಎಂದು ತಿಳಿಸಿದರು.
ಗೊಂದಲಗಳಿಗೆ ತೆರೆ ಎಳೆಯಬೇಕು. ಅಣ್ಣತಮ್ಮಂದಿರಂತೆ ಇರಬೇಕು ಎಂದು ಎಲ್ಲ ಸಮುದಾಯಗಳಿಗೆ ಅವರು ಮನವಿ ಮಾಡಿದರು. ಮೀಸಲಾತಿ ವಿಚಾರದಲ್ಲಿ ಎಡ, ಬಲ, ಲಂಬಾಣಿ, ಬೋವಿ ಇತ್ಯಾದಿ ಗೊಂದಲ ಇತ್ತು. ಬಂಜಾರ, ಬೋವಿ, ಕೊರಚ, ಕೊರಮರನ್ನು ಎಸ್‍ಸಿ ಪಟ್ಟಿಯಿಂದ ಹೊರಗಿಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದರು.

ಕಾಂಗ್ರೆಸ್ಸಿನ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಖಂಡಿಸಿದ ಅವರು, ಕಾಂಗ್ರೆಸ್ ಪಕ್ಷದವರು ಕೇವಲ ಮತಕ್ಕಾಗಿ ಮೊಸಳೆಕಣ್ಣೀರು ಸುರಿಸುತ್ತಿದ್ದಾರೆ ಎಂದು ಆರೋಪಿಸಿದರು. ಅವರ ಅಂಡಿಗೆ ಈಗಾಗಲೇ ಬೆಂಕಿ ಬಿದ್ದಿದೆಯೇ ಎಂದು ಪ್ರಶ್ನಿಸಿದರು.

ಬಹುದಿನಗಳ ಕಾಲದಿಂದ ನೆನೆಗುದಿಗೆ ಬಿದ್ದ ವಿಚಾರಕ್ಕೆ ಈಗ ಪರಿಹಾರ ಸಿಕ್ಕಿದೆ. ಸಾಧಕ- ಬಾಧಕ ಅಭ್ಯಸಿಸಿ ನಿರ್ಣಯ ಮಾಡಿದ್ದೇವೆ ಎಂದು ತಿಳಿಸಿದರು. ಮೀಸಲಾತಿ ಪಡೆಯುವವರೆಲ್ಲರೂ ಭಿಕ್ಷುಕರೇ ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಮರು ಪ್ರಶ್ನೆ ಹಾಕಿದರು. ಮೀಸಲಾತಿ ಎಂಬುದು ಹಕ್ಕು. ಗ್ಯಾರಂಟಿ ಕಾರ್ಡ್ ಎಂಬುದು ಭಿಕ್ಷೆ. ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ಅಸಾಂವಿಧಾನಿಕ ಎಂದು ಅವರನ್ನು ಅಲ್ಲಿಂದ ಹೊರಗಿಟ್ಟು ಶೇ 10ರಷ್ಟು ಇಡಬ್ಲ್ಯುಎಸ್‍ಗೆ ಸೇರಿಸಿದ್ದೇವೆ ಎಂದು ವಿವರಿಸಿದರು.

Leave a Reply

Your email address will not be published. Required fields are marked *