Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121
ಫಲಾನುಭವಿಗಳ ಜೊತೆ ಸೆಲ್ಫಿ: ಗೀತಾ ವಿವೇಕಾನಂದ – I am BJP
May 6, 2025

ಫಲಾನುಭವಿಗಳ ಜೊತೆ ಸೆಲ್ಫಿ: ಗೀತಾ ವಿವೇಕಾನಂದ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಮತ್ತು ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಸೂಚನೆ ಮೇರೆಗೆ ರಾಷ್ಟ್ರೀಯ ಮಹಿಳಾ ಮೋರ್ಚಾವು ‘ಸೆಲ್ಫಿ ವಿದ್ ಬೆನೆಫಿಷಿಯರಿ’ ಎಂಬ ಕಾರ್ಯಕ್ರಮವನ್ನು ರಾಜ್ಯದಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಹಮ್ಮಿಕೊಳ್ಳಲಿದೆ ಎಂದು ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀಮತಿ ಗೀತಾ ವಿವೇಕಾನಂದ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯಗಳಲ್ಲಿ ಕಾರ್ಯಕ್ರಮ ಪ್ರಾರಂಭವಾಗಿದೆ. ಏಪ್ರಿಲ್‍ನಲ್ಲಿ ನಮ್ಮ ರಾಜ್ಯದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸರಕಾರದ ವಿವಿಧ ಯೋಜನೆಗಳ 1 ಸಾವಿರ ಫಲಾನುಭವಿಗಳ ಜೊತೆ ಸೆಲ್ಫಿ ತೆಗೆದುಕೊಳ್ಳಲಿದ್ದೇವೆ. ಕೇವಲ ಸೆಲ್ಫಿ ತೆಗೆದುಕೊಂಡು ಫೇಸ್‍ಬುಕ್ ಅಥವಾ ವಾಟ್ಸಪ್‍ನಲ್ಲಿ ಹಾಕುತ್ತಿಲ್ಲ. ನರೇಂದ್ರ ಮೋದಿಜಿ ಅವರ ಆ್ಯಪ್‍ನಲ್ಲಿ ಫಲಾನುಭವಿಯ ಹೆಸರು, ಯೋಜನೆ ವಿವರದೊಂದಿಗೆ ಅಪ್‍ಲೋಡ್ ಮಾಡಲಿದ್ದೇವೆ ಎಂದರು.

ಕೇಂದ್ರದಲ್ಲಿ ನರೇಂದ್ರ ಮೋದಿಜಿ ಅವರ ಸರಕಾರ ಮತ್ತು ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರಕಾರಗಳು ಕಾರ್ಯ ನಿರ್ವಹಿಸುತ್ತಿವೆ. ಅವುಗಳು ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿವೆ. ಮಹಿಳೆಯರಿಗೆ ಅನುಕೂಲವಾಗುವ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿವೆ ಎಂದು ತಿಳಿಸಿದರು.

ಕೇಂದ್ರದ ಜಲಜೀವನ್ ಮಿಷನ್, ಉಜಾಲಾ, ಸ್ವಚ್ಛ ಭಾರತ್ ಅಡಿಯಲ್ಲಿ ಶೌಚಾಲಯ ನಿರ್ಮಾಣದ ಯೋಜನೆಗಳು, ಮಹಿಳೆಯರ ಆರ್ಥಿಕ ಸಬಲೀಕರಣ ಯೋಜನೆಗಳು ಜಾರಿಯಾಗಿವೆ. ರಾಜ್ಯದಲ್ಲಿ ಬಜೆಟ್ ಮಂಡನೆ ವೇಳೆ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್, ಸಿಎಂ ರೈತ ವಿದ್ಯಾನಿಧಿ ಅಡಿಯಲ್ಲಿ ಸ್ಕಾಲರ್‍ಶಿಪ್, ಉದ್ಯೋಗಸ್ಥ ಮಹಿಳೆಯರಿಗೆ ಸಾಲ, ಸ್ವಸಹಾಯ ಸಂಘಗಳಿಗೆ ಸಾಲ, ಪ್ರೋತ್ಸಾಹ ಕೊಡುವುದು- ಈ ರೀತಿ ಅನೇಕ ಮಹಿಳಾಪರ ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಅನುಷ್ಠಾನಕ್ಕೆ ತಂದಿವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಡಾ|| ಸೈಯದ್ ಜಾಫರ್ ಇಸ್ಲಾಂ, ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್, ಜಿಲ್ಲಾ ಅಧ್ಯಕ್ಷೆಯರಾದ ಆಶಾ ರಾವ್, ವಿಜಯಲಕ್ಷ್ಮಿ ಮತ್ತು ರೇಖಾ ಗೋವಿಂದ್ ಅವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *