Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121
ಕರ್ನಾಟಕದಲ್ಲಿ ತಾಲಿಬಾನಿ ಸರಕಾರ ರಚಿಸಲು ಕಾಂಗ್ರೆಸ್ ಪಕ್ಷದ ಸಿದ್ಧತೆ- ಪ್ರತಾಪಸಿಂಹ – I am BJP
May 7, 2025

ಕರ್ನಾಟಕದಲ್ಲಿ ತಾಲಿಬಾನಿ ಸರಕಾರ ರಚಿಸಲು ಕಾಂಗ್ರೆಸ್ ಪಕ್ಷದ ಸಿದ್ಧತೆ- ಪ್ರತಾಪಸಿಂಹ

ಬೆಂಗಳೂರು: ಎಸ್‍ಡಿಪಿಐ, ಕೆಎಫ್‍ಡಿ, ಪಿಎಫ್‍ಐ ಕಾರ್ಯಕರ್ತರು ಸಿದ್ದರಾಮಯ್ಯನವರ ದತ್ತು ಮಕ್ಕಳು ಎಂದು ಸಂಸದ ಪ್ರತಾಪಸಿಂಹ ಅವರು ಆರೋಪಿಸಿದರು.

ಮೈಸೂರಿನ ಮಾಧ್ಯಮ ಕೇಂದ್ರದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದಲ್ಲಿ ತಾಲಿಬಾನಿ ಸರಕಾರವನ್ನು ಎಸ್‍ಡಿಪಿಐ ಬೆಂಬಲದೊಂದಿಗೆ ತರಲು ಹೊರಟಿದ್ದಾರೆ. ಇದನ್ನು ಗಮನಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರವಿಡಿ ಎಂದು ಮನವಿ ಮಾಡಿದರು.

2047ರಲ್ಲಿ ಭಾರತವನ್ನು ಇಸ್ಲಾಮಿಕ್ ರಾಷ್ಟ್ರ ಮಾಡಲು ಹೊರಟ ಭಯೋತ್ಪಾದಕರನ್ನು ಬೆಂಬಲಿಸುವ ಸಂಘಟನೆಗಳ ಜೊತೆ ಕೈಜೋಡಿಸಿದ್ದಾರೆ. ಕಾಂಗ್ರೆಸ್ ಸರಕಾರ ಬಂದರೆ ಕರ್ನಾಟಕದಲ್ಲಿ ರಾಜಕೀಯ ಹತ್ಯೆಗಳು ನಡೆಯಲಿವೆ ಎಂದು ಎಚ್ಚರಿಸಿದರು. ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಅಧಿಕಾರದ ಅವಧಿಯಲ್ಲಿ ನಡೆದ ಅನೇಕ ಹತ್ಯೆಗಳ ಕುರಿತು ಅವರು ಮಾಹಿತಿ ನೀಡಿದರು.

ಸಿದ್ದರಾಮಯ್ಯ ಅವಧಿಯಲ್ಲಿ ಪೊಲೀಸ್ ಅಧಿಕಾರಿಗಳ ಅನುಮಾನಾಸ್ಪದ ಸಾವು ಮುಂದುವರಿಯಿತು. ಅನೇಕ ಅಧಿಕಾರಿಗಳ ಮೇಲೆ ದಾಳಿ ನಡೆಯಿತು. ಸಿದ್ದರಾಮಯ್ಯನವರ ಸಾಕು ಮಕ್ಕಳಿಂದ ಇದೆಲ್ಲ ಆಗಿದೆ. ತಮ್ಮ ಪಕ್ಷದ ಶಾಸಕರ ಮೇಲೆ ದಾಳಿ ನಡೆದರೂ ಕಾಂಗ್ರೆಸ್ಸಗರು ಎಚ್ಚರವಾಗಲಿಲ್ಲ ಎಂದು ಟೀಕಿಸಿದರು.

ರಾಜ್ಯ ಇನ್ನೊಂದು ಕೇರಳ ಆಗಲಿದೆ ಎಂದು ಎಚ್ಚರಿಸಿದರು. ಎಸ್‍ಡಿಪಿಐಗೆ ರಾಜ್ಯ ಕೊಡುವ ಮನಸ್ಥಿತಿ ಇದು ಎಂದು ಎಚ್ಚರಿಸಿದರು. ಕರ್ನಾಟಕವನ್ನು ಒಡೆಯುವ ದಿನ ದೂರವಿಲ್ಲ. ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಿ ಎಂದು ಎಚ್ಚರಿಸಿದರು.

ಸೋಮಣ್ಣ ಅವರು ಸೋಮವಾರ ವರುಣಾ ಮತ್ತು ಚಾಮರಾಜನಗರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಅಪ್ಪ ಮತ್ತು ಮಗನ ಕಾರುಬಾರು, ದರ್ಬಾರ್ ಅಂತ್ಯವಾಗುವ ದಿನ ಹತ್ತಿರವಾಗುತ್ತಿದೆ. ಮೈಸೂರು ಭಾಗದಲ್ಲಿ 8-10 ಸೀಟು ಗೆಲ್ಲಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರು- ಬೆಂಗಳೂರು ಹೈವೇ ಕಾರ್ಯಗತವಾಗಿದೆ. ಜಲಜೀವನ್ ಮಿಷನ್‍ನಲ್ಲಿ ಗ್ರಾಮಾಂತರದ ಎಲ್ಲ ಮನೆಗಳಿಗೆ ನಳ್ಳಿ ನೀರು ಕೊಡಲಿದ್ದೇವೆ. ಅಭಿವೃದ್ಧಿ ಕಾರ್ಯವನ್ನು ಗಮನಿಸಿ ಬಿಜೆಪಿ ಬೆಂಬಲಿಸಿ ಎಂದು ಮನವಿ ಮಾಡಿದರು.

ಮೈಸೂರು ಜಿಲ್ಲಾ ಅಧ್ಯಕ್ಷ ಶ್ರೀವತ್ಸ, ಚಾಮುಂಡೇಶ್ವರಿ ಕ್ಷೇತ್ರದ ಅಭ್ಯರ್ಥಿ ವಿ. ಕವಿಶ್ ಗೌಡ, ಮೂಡಾ ಅಧ್ಯಕ್ಷ ಯಶಸ್ವಿನಿ ಸೋಮಶೇಖರ್ ಇದ್ದರು.

Leave a Reply

Your email address will not be published. Required fields are marked *