ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ದಿ|| ಎಂ.ಪಿ. ಪ್ರಕಾಶ್ ಇವರ ಪುತ್ರಿ, ಮೊಮ್ಮಗ ಮತ್ತು ಬೆಂಬಲಿಗರು ಇಂದು ಬಿಜೆಪಿ ಸೇರಿದರು.
ನಗರದ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ಈ ಸೇರ್ಪಡೆ ಕಾರ್ಯಕ್ರಮ ಜರುಗಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ರಾಜ್ಯ ವಕ್ತಾರರು ಮತ್ತು ವಿಧಾನಪರಿಷತ್ ಸದಸ್ಯೆ ಡಾ. ತೇಜಸ್ವಿನಿ ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರು ಇದ್ದರು.
ಮಾಜಿ ಉಪಮುಖ್ಯಮಂತ್ರಿ ದಿ|| ಎಂ.ಪಿ. ಪ್ರಕಾಶ್ ಇವರ ಪುತ್ರಿ ಶ್ರೀಮತಿ ಎಂ.ಪಿ. ಸುಮಾ ವಿಜಯ, ಮಾಜಿ ಉಪಮುಖ್ಯಮಂತ್ರಿ ದಿ|| ಎಂ.ಪಿ. ಪ್ರಕಾಶ್ ಮೊಮ್ಮಗ ಸಾತ್ವಿಕ್ ವಿಜಯಕುಮಾರ್ ಹಿರೇಮಠ, ಮಾಜಿ ಉಪಮುಖ್ಯಮಂತ್ರಿ ದಿ|| ಎಂ.ಪಿ. ಪ್ರಕಾಶ್ ಅವರ ಅಳಿಯ ವಿಜಯಕುಮಾರ್ ಬಸವಣ್ಣಯ್ಯ ಹಿರೇಮಠ ಅವರು ಇಂದು ಬಿಜೆಪಿ ಸೇರಿದರು.
ಇವರಲ್ಲದೆ, ಪುರಸಭೆ ಮಾಜಿ ಅಧ್ಯಕ್ಷರಾದ ಶ್ರೀಮತಿ ಹಣ್ಣಿ ವೀರಮ್ಮ, ಶ್ರೀಮತಿ ಪವಿತ್ರಾ ರಾಮಸ್ವಾಮಿ, ಯಮುನಪ್ಪ, ಕೋಡಿಹಳ್ಳಿ ಕೊಟ್ರೇಶ್, ಪುರಸಭೆ ಮಾಜಿ ಸದಸ್ಯ ರಾಮಸ್ವಾಮಿ ಚೈತನ್ಯ, ಟಿ.ಎ.ಪಿ.ಸಿ.ಎಂ.ಎಸ್. ಮಾಜಿ ಸದಸ್ಯ ಎಸ್. ಯಮುನೂರಪ್ಪ, ಗ್ರಾಮ ಪಂಚಾಯತಿ ಸದಸ್ಯ ಬಿ.ಎಂ. ಅಭಿಷೇಕ್, ಮುಖಂಡರಾದ ಸುದರ್ಶನ ಶಿಲ್ಪಿ, ಹನುಮಂತು, ಸುರೇಶ್ ಕಾಯಣ್ಣನವರ, ಗ್ರಾಮ ಪಂಚಾಯತಿ ಮಾಜಿ ಸದಸ್ಯ ಕಿರಣ್ ಕುಮಾರ್ ಲಿಂಗದಹಳ್ಳಿ, ಪತ್ರಕರ್ತೆ ಶ್ರೀಮತಿ ಎಂ.ಪಿ.ಅರುಣ ಮತ್ತು ಸಮಾಜಸೇವಕಿ ಶ್ರೀಮತಿ ಗೀತಾ ದೇಸಾಯಿ ಅವರು ಪಕ್ಷಕ್ಕೆ ಸೇರ್ಪಡೆಯಾದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ