ಬೆಂಗಳೂರು: ರಾಜ್ಯ ಅಬಕಾರಿ ಸಚಿವ ಕೆ. ಗೋಪಾಲಯ್ಯನವರು ಇಂದು, ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕಾರ್ಯಸಿದ್ಧಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ವೃಷಭಾವತಿನಗರ ಹಾಗೂ ಕಾಮಾಕ್ಷಿಪಾಳ್ಯದಲ್ಲಿ ಚುನಾವಣಾ ಪ್ರಚಾರ ಮಾಡಿದರು. ಬಿಜೆಪಿ ರಾಜ್ಯಾಧ್ಯಾಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಕ್ಷೇತ್ರದ ಕಾರ್ಯಕರ್ತರು ಸಾಥ್ ನೀಡಿದರು.
ಮನೆ ಮನೆಗೆ ತೆರಳಿ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ತಿಳಿಸಿ ಮತಯಾಚನೆ ಮಾಡಿದರು. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಜಯಗಳಿಸಿ, ಸರ್ಕಾರವನ್ನು ನಾವೇ ರಚನೆ ಮಾಡಲಿದ್ದೇವೆ. ನನ್ನ ಮತದಾರರು ನನ್ನ ಪರವಾಗಿ ಇದ್ದಾರೆ. ಈ ಬಾರಿ ಕೇತ್ರದಲ್ಲಿ ಬಹುಮತದಿಂದ ಗೆದ್ದು ಬರುತ್ತೇನೆ ಎಂದು ಗೋಪಾಲಯ್ಯ ಅವರು ಹೇಳಿದರು.
ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ. ನರೇಂದ್ರಬಾಬು, ಪಕ್ಷದ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ