Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121
ಹಿಂದೂಗಳ ಭಾವನೆ, ಶ್ರದ್ಧೆಗೆ ಧಕ್ಕೆ ತರುತ್ತಿದೆ ಕಾಂಗ್ರೆಸ್ ಪಕ್ಷ- ಶೋಭಾ ಕರಂದ್ಲಾಜೆ – I am BJP
May 6, 2025

ಹಿಂದೂಗಳ ಭಾವನೆ, ಶ್ರದ್ಧೆಗೆ ಧಕ್ಕೆ ತರುತ್ತಿದೆ ಕಾಂಗ್ರೆಸ್ ಪಕ್ಷ- ಶೋಭಾ ಕರಂದ್ಲಾಜೆ

ಬೆಂಗಳೂರು: ಹಿಂದೂಗಳ ಭಾವನೆ ಮತ್ತು ಶ್ರದ್ಧೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಕು.ಶೋಭಾ ಕರಂದ್ಲಾಜೆ ಅವರು ಆಕ್ಷೇಪಿಸಿದರು.

ಮಹಾಲಕ್ಷ್ಮೀ ಲೇಔಟ್‍ನ ಶ್ರೀ ಪ್ರಸನ್ನ ವೀರಾಂಜನೇಯ ದೇವಸ್ಥಾನದಲ್ಲಿ ಇಂದು ಪೂಜಾ ವಿಧಿವಿಧಾನ ನೆರವೇರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಬಜರಂಗವನ್ನು ನಿಷೇಧಿಸುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿದೆ. ಇದರಿಂದ ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಸುರ್ಜೇವಾಲಾ ಅವರು ಮಾಧ್ಯಮಗಳ ಜೊತೆ ಮಾತನಾಡುವಾಗ ಆಂಜನೇಯನನ್ನು ಅಪಮಾನ ಮಾಡಿದ್ದಾರೆ ಎಂದು ತಿಳಿಸಿದರು.

ಆಂಜನೇಯನ ಜನ್ಮಸ್ಥಳ ಕಿಷ್ಕಿಂಧಾ ಎಂದು ನಾವು ನಂಬಿದ್ದೇವೆ. ಭಕ್ತರೂ ನಂಬಿಕೆ ಇಟ್ಟಿದ್ದಾರೆ. ಆಂಜನೇಯ ಕರ್ನಾಟಕದಲ್ಲಿ ಹುಟ್ಟಿದನೇ ಎಂಬ ಸಂಶಯವನ್ನು ಸುರ್ಜೇವಾಲಾ ವ್ಯಕ್ತಪಡಿಸಿದ್ದಾರೆ. ಆಂಜನೇಯನ ತಂದೆ ಸೂರ್ಯ, ತಾಯಿ ಆಂಜನೇಯ ಎಂದು ಹೇಳಿದ್ದಾರೆ. ಹಿಂದೂ ದೇವರಿಗೆ ಅವಮಾನ ಮಾಡುವ ಮತ್ತು ಅವರ ಕುರಿತು ಸಂಶಯ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆಕ್ಷೇಪಿಸಿದರು.

ಗೋಹತ್ಯಾ ನಿಷೇಧ ಕಾಯ್ದೆ ರದ್ದು, ಮತಾಂತರ ನಿಷೇಧ ಕಾಯ್ದೆ ರದ್ದು ಮಾಡುವುದಾಗಿ ಕಾಂಗ್ರೆಸ್ ಪಕ್ಷ ಹೇಳುತ್ತಿದೆ. ಬಹುಸಂಖ್ಯಾತರಿಗೆ ಅಪಮಾನ, ನಮ್ಮ ದೇವಸ್ಥಾನ, ಮಠ, ಮಂದಿರ, ವಿಚಾರÀಗಳಿಗೆ ಕಾಂಗ್ರೆಸ್ ಅವಹೇಳನ ಮಾಡುತ್ತಿದೆ. ಇದರ ವಿರುದ್ಧ ನಮ್ಮ ಹೋರಾಟ ಇದೆ. ಚುನಾವಣೆ, ರಾಜಕೀಯವೇ ಬೇರೆ. ನಮ್ಮ ಆಚಾರ- ವಿಚಾರಗಳನ್ನು ಉಳಿಸಲು ಹೋರಾಟ ಮಾಡಲಿದ್ದೇವೆ ಎಂದರು.

ಮೊನ್ನೆ ಹನುಮಾನ್ ಚಾಲೀಸ ಪಠಿಸಿದ್ದೇವೆ. ಇವತ್ತು ಭಕ್ತರೆಲ್ಲರು ಸೇರಿ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ, ನಗರದ ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸವನ್ನು ಪಠಣ ಮಾಡಿ, ಧರ್ಮದ ರಕ್ಷಣೆಗೆ ನಮಗೆ ಶಕ್ತಿ ಕೊಡು ಎಂದು ಆಂಜನೇಯನನ್ನು ಮತ್ತೆ ಪ್ರಾರ್ಥಿಸಿದ್ದೇವೆ ಎಂದು ತಿಳಿಸಿದರು.

ಕರ್ನಾಟಕದ ಅಭಿವೃದ್ಧಿ ಆಗಬೇಕು. ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ನಡೆಯಬೇಕು ಎಂಬ ಆಶಯ ಬಿಜೆಪಿಯದು. ನಾವು ಡಬಲ್ ಎಂಜಿನ್ ಸರಕಾರದ ಸಾಧನೆ ಆಧಾರದಲ್ಲಿ ಚುನಾವಣಾ ಕಣಕ್ಕೆ ಇಳಿದು ಮತ ಕೇಳಿದ್ದೇವೆ ಎಂದು ತಿಳಿಸಿದರು.

ಸಚಿವ ಗೋಪಾಲಯ್ಯ, ಬಿಬಿಎಂಪಿ ಮಾಜಿ ಉಪಮೇಯರ್ ಎಸ್ ಹರೀಶ್, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

Leave a Reply

Your email address will not be published. Required fields are marked *