ಬೈಂದೂರು : ತಾಲೂಕು ಕಚೇರಿಯಲ್ಲಿ ನಡೆದ ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ, ಒಕ್ಕಲಿಗರ ಅಭಿವೃದ್ಧಿ ನಿಗಮ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಮದ ಅಧಿಕಾರಿಗಳ ಸಭೆ ನಡೆಸಿ, ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಹಾಕಿರುವ ಫಲಾನುಭವಿಗಳ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ, ಫಲಾನುಭವಿಗಳಿಗೆ ಶೀಘ್ರವಾಗಿ ಸೌಲಭ್ಯ ದೊರಕಿಸಿಕೊಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಇರುವ ನಿಗಮಗಳಲ್ಲಿ ಅನುಷ್ಠಾನಗೊಳ್ಳುವ ಸಾಲ ಸೌಲಭ್ಯ ಯೋಜನೆಗಳು ಅರ್ಹತೆ ಇದ್ದ ಎಲ್ಲರಿಗೂ ತಲುಪಲು ವಿಫಲವಾಗಿದೆ. ಪ್ರತಿಯೊಂದು ಯೋಜನೆಯಡಿ ನೂರಾರು ಅರ್ಜಿಗಳು ಆನ್ ಲೈನ್ ನಲ್ಲಿ ದಾಖಲಾಗಿದ್ದರೂ ಕೇವಲ 01 ಅಥವಾ 02 ಬೆರಳೆಣಿಕೆಯ ಗುರಿ ನಿಗದಿಪಡಿಸುತ್ತಿರುವ ಕಾರಣ ಹೆಚ್ಚಿನ ಸಂಖ್ಯೆಯ ಫಲನುಭವಿಗಳನ್ನು ಆಯ್ಕೆ ಮಾಡಲು ಸಮಿತಿಗೆ ಸಾಧ್ಯವಾಗುತ್ತಿಲ್ಲ. ನೂರಾರು ಅರ್ಜಿಗಳಿಗೆ ಒಂದಂಕಿಯ ಗುರಿ ನಿಗದಿ ಪಡಿಸುವುದು ಅವೈಜ್ಞಾನಿಕ. ಇಂತಹ ಪರಿಸ್ಥಿತಿ ಇರುವಾಗ ಆಯ್ಕೆ ಸಮಿತಿಯೇ ಅಪ್ರಸ್ತುತ ಎಂದು ಕಿಡಿಕಾರಿದರು.
ಅರ್ಹರಿಗೆ ಯೋಜನೆಯ ಪ್ರಯೋಜನ ತಲುಪಿಸಿ, ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ಗಂಭೀರವಾಗಿ ಯೋಚಿಸಬೇಕು ಹಾಗೂ ಮೇಲಧಿಕಾರಿಗಳಿಗೆ ವರದಿ ಮಾಡಬೇಕು. ಇಂತಹ ಯೋಜನೆಗಳಲ್ಲಿ ಪ್ರತಿ ಯೋಜನೆಯಡಿಯಲ್ಲಿ ವರ್ಷಕ್ಕೆ ಕನಿಷ್ಠ 10 ಫಲಾನುಭವಿಗಳ ಆಯ್ಕೆಗೆ ಅವಕಾಶ ನೀಡಬೇಕು ಇಲ್ಲದಿದ್ದರೆ ಆ ಯೋಜನೆಯನ್ನೇ ಸರಕಾರ ರದ್ದು ಪಡಿಸುವುದು ಉತ್ತಮ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿವರ್ಷ ಹೊಸದಾಗಿ ಅರ್ಜಿ ಸಲ್ಲಿಸುವ ಬದಲು ಈ ಹಿಂದೆ ನಿರ್ದಿಷ್ಟ ಯೋಜನೆಯಡಿ ಅರ್ಜಿ ಹಾಕಿ ಸೌಲಭ್ಯ ದೊರಕದೇ ಇರುವವರ ಅರ್ಜಿಗಳು ಮುಂದಿನ ವರ್ಷಗಳಲ್ಲಿ ಪರಿಗಣನೆಗೆ ಬರುವ ಹಾಗೆ ಆನ್ ಲೈನ್ ತಂತ್ರಾoಶದಲ್ಲಿ ಅಗತ್ಯ ಬದಲಾವಣೆ ಮಾಡಲು ಕ್ರಮ ವಹಿಸುವುದರ ಮೂಲಕ ಅರ್ಜಿದಾರರ ಹಣ ಹಾಗೂ ಶ್ರಮ ವ್ಯರ್ಥವಾಗುವುದನ್ನು ತಪ್ಪಿಸುವಂತಾಗಬೇಕು ಎಂದರು.
ಸಭೆಯಲ್ಲಿ ಡಿ.ದೇವರಾಜು ಅರಸು ಅಭಿವೃದ್ಧಿ ನಿಗಮ, ಒಕ್ಕಲಿಗರ ನಿಗಮ ಹಾಗೂ ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳು ಹಾಗೂ ಆಯ್ಕೆ ಸಮಿತಿಯ ಸದಸ್ಯರುಗಳು ಮತ್ತು ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ