Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ – I am BJP
May 6, 2025

ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ

ಮೈಕ್ರೋ ಫೈನಾನ್ಸ್ ದಂಧೆಗೆ ಸರಕಾರದ ಕುಮ್ಮಕ್ಕು: ಛಲವಾದಿ ನಾರಾಯಣಸ್ವಾಮಿ ಟೀಕೆ

ಬೆಂಗಳೂರು: ಮೈಕ್ರೋ ಫೈನಾನ್ಸ್ ದಂಧೆಗೆ ಸರಕಾರದ ಕುಮ್ಮಕ್ಕೂ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸರಕಾರದ ಕುಮ್ಮಕ್ಕು ಇಲ್ಲದಿದ್ದರೆ ಇದು ಇಲ್ಲಿನವರೆಗೆ ಮುಂದುವರೆಯುತ್ತಿರಲಿಲ್ಲ; ಎರಡೂ ಕಡೆಯಿಂದ ವಸೂಲಿ ಮಾಡಲು ಪೊಲೀಸರಿಗೆ ಇದು ದಂಧೆಯಾಗಿತ್ತು ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಅನೇಕರ ಮಾರಣಹೋಮ ಆದ ಬಳಿಕ ಸರಕಾರವು ಎಚ್ಚತ್ತು ಇವತ್ತು ಒಂದು ಸಭೆ ಕರೆದು ಮೈಕ್ರೋ ಫೈನಾನ್ಸ್ ವಿಚಾರದಲ್ಲಿ ಚರ್ಚೆ ನಡೆಸಿದೆ. ಹೊಸ ಕಾನೂನು ತರುವ ಮತ್ತು ಅವರನ್ನು ಹದ್ದುಬಸ್ತಿನಲ್ಲಿಡುವ ಕೆಲಸ ಮಾಡುವುದಾಗಿ ತಿಳಿಸಿದೆ ಎಂದರು.
ಮೈಕ್ರೋ ಫೈನಾನ್ಸ್‍ಗಳ ಸಮಸ್ಯೆ ಕುರಿತು ಅನೇಕ ಮುಖಂಡರು ಗಮನ ಸೆಳೆದರೂ ಸರಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿತ್ತು. ಕೊನೆಗೂ ಇವತ್ತು ಒಂದು ತೀರ್ಮಾನಕ್ಕೆ ಬಂದಿದೆ. ಫೈನಾನ್ಸ್ ವಸೂಲಿಗೆ ತೊಂದರೆ ಕೊಟ್ಟರೆ, ಗೂಂಡಾಗಳನ್ನು ಕಳುಹಿಸಿದರೆ ಅವರನ್ನು ಬಂಧಿಸುವುದಾಗಿ ಹೇಳಿದ್ದಾರೆ. ಜನರ ಹಿತದೃಷ್ಟಿಯಿಂದ ಇದು ಸ್ವಾಗತಾರ್ಹ; ಕಾಂಗ್ರೆಸ್ ಸರಕಾರದ ಹಿತದೃಷ್ಟಿಯಿಂದ ಅಲ್ಲ ಎಂದು ತಿಳಿಸಿದರು.

ಮಂತ್ರಿಗಳು, ಶಾಸಕರಿಂದ ಆನ್‍ಲೈನ್ ಗೇಮ್ಸ್ ಕಂಪೆನಿ
ಮೈಕ್ರೋ ಫೈನಾನ್ಸ್‍ನಲ್ಲಿ ಆಗುವ ಅನಾಹುತಕ್ಕಿಂತ 10ರಷ್ಟು ಅನಾಹುತಗಳು ಆನ್‍ಲೈನ್ ಗೇಮ್ಸ್ ಮೂಲಕ ಆಗುತ್ತಿದೆ ಎಂದು ಅವರು ತಿಳಿಸಿದರು. ಸರಕಾರದ ಕೆಲವು ಮಂತ್ರಿಗಳು, ಶಾಸಕರು ಆನ್‍ಲೈನ್ ಗೇಮ್ಸ್ ಕಂಪೆನಿಗಳನ್ನು ಮಾಡಿಕೊಂಡು ಜನರಿಂದ ಸುಲಿಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅನೇಕ ಯುವಕರು ಬೀದಿಪಾಲಾಗುತ್ತಿದ್ದಾರೆ. ರಮ್ಮಿ ಆಟದ ಮೂಲಕ ಸುಲಭದಲ್ಲಿ ಹಣ ಬರುವ ಸಾಮಾಜಿಕ ಜಾಲತಾಣದ ಜಾಹೀರಾತುಗಳನ್ನು ನಂಬಿ ಜನರ ಪ್ರಾಣ ಹಿಂಡುವ ಕೆಲಸ ಮಾಡುತ್ತಿದ್ದಾರೆ. ಎಷ್ಟೋ ಜನರು ಗೇಮ್‍ನಲ್ಲಿ ಸೋತ ಬಳಿಕ ಕಳ್ಳತನ ಮಾಡಿ ಆ ದುಡ್ಡು ಕಟ್ಟುತ್ತಾರೆ. ಇವತ್ತು ದರೋಡೆಗಳು, ಕಳ್ಳತನಗಳು ಇದೇ ಕಾರಣಕ್ಕಾಗಿ ಆಗುತ್ತಿವೆ ಎಂದು ತಿಳಿಸಿದರು.
ಇದರ ಬೇರು ಹುಡುಕಬೇಕಿದೆ. ಆನ್‍ಲೈನ್ ಗೇಮ್ ಕಾರಣದಿಂದ ಕಳ್ಳತನ, ದರೋಡೆ ಆಗುತ್ತಿದೆÉಂದು ವಿಶ್ಲೇಷಿಸಿದರು. ಅನೇಕರು ಕೆಲಸ ಬಿಟ್ಟು ಈ ಗೇಮ್ ಆಡುತ್ತಿದ್ದಾರೆ. ಇನ್ನೂ ಅನೇಕರು ಹೆಚ್ಚು ಸಾಲ ಮಾಡಿಕೊಂಡು ಕಟ್ಟಲಾಗದೆ ಪ್ರಾಣತ್ಯಾಗ ಮಾಡುತ್ತಿದ್ದಾರೆ ಎಂದು ವಿವರಿಸಿದರು. ಇದರ ಬಗ್ಗೆಯೂ ತೀಕ್ಷ್ಣ ಕ್ರಮ ಕೈಗೊಳ್ಳುವಂತೆ ಕೋರಿದರು. ಆನ್‍ಲೈನ್ ಗೇಮ್‍ನಲ್ಲಿ ಇರುವವರ ರಕ್ಷಣೆ ಮಾಡುತ್ತಿದ್ದಾರೆ ಎಂದು ದೂರಿದರು.

ಇದು ಹಗೆತನದ ರಾಜಕೀಯವಲ್ಲವೇ?
ಯದುವೀರ್ ಅವರು ಬಿಜೆಪಿ ಸಂಸದರಾಗಿದ್ದು, ಅವರ ಆಸ್ತಿಗಳ ಮೇಲೆ ಕಾಂಗ್ರೆಸ್ ಸರಕಾರ ಕಣ್ಣು ಹಾಕಿದೆ. ಒಂದು ಕಡೆ ಚಾಮುಂಡೇಶ್ವರಿ ಬೆಟ್ಟಕ್ಕೆ, ಅಲ್ಲಿನ ಆಸ್ತಿಗಳ ಮೇಲೆ ಕಣ್ಣು ಹಾಕಿದ್ದಾರೆ. ಇನ್ನೊಂದು ಕಡೆ ಬೆಂಗಳೂರಿನ ಅರಮನೆ ಮೇಲೆ ಕೂಡ ಕಣ್ಣು ಹಾಕಿದ್ದಾರೆ ಎಂದು ಆರೋಪಿಸಿದರು. ಅವರು ಕಾಂಗ್ರೆಸ್ಸಿನ ಸಂಸದರಾಗಿದ್ದರೆ ಅವರ ಆಸ್ತಿಗಳ ಮೇಲೆ ಕಣ್ಣು ಹಾಕುತ್ತಿರಲಿಲ್ಲ ಎಂದು ನುಡಿದರು. ಇದು ಹಗೆತನದ ರಾಜಕಾರಣವಲ್ಲವೇ ಎಂದು ಕೇಳಿದರು.

ಇದಕ್ಕೆ ಸುಗ್ರೀವಾಜ್ಞೆ ಬೇಕಿತ್ತೇ? ಸದಾಶಿವನಗರದಲ್ಲಿ ಒಂದಡಿ ಜಾಗಕ್ಕೆ ಒಂದು ಲಕ್ಷ ಇರಬಹುದು. ಇಂಥ ಪರಿಸ್ಥಿತಿಯಲ್ಲಿ ನೀವು ಯಾರ ಆಸ್ತಿಗೆ ಕಣ್ಣು ಹಾಕುತ್ತಿದ್ದೀರಿ? ಇದು ಹಗೆತನದ ಪರಮಾವಧಿಯ ರಾಜಕಾರಣ ಎಂದು ಟೀಕಿಸಿದರು.

Leave a Reply

Your email address will not be published. Required fields are marked *