ಕೋವಿಡ್ 19ರ ಸಂಕಷ್ಟದ ಸಂದರ್ಭದಲ್ಲಿ ಅವಿರತವಾಗಿ ಜನರ ಆರೋಗ್ಯದ ಹಿತದೃಷ್ಟಿಯಿಂದ ರಾತ್ರಿ ಹಗಲೆನ್ನದೆ ಶ್ರಮಿಸಿದ ನಮ್ಮ ಬೆಳ್ತಂಗಡಿ ತಾಲೂಕಿನ 246 ಆಶಾ ಕಾರ್ಯಕರ್ತೆಯರಿಗೆ ಶಾಸಕ ಹರೀಶ್ ಪೂಂಜಾ ಮುಂದಾಳುತ್ವದ ಶ್ರಮಿಕ ಸೇವಾ ಟ್ರಸ್ಟ್ ಮುಖಾಂತರ ಮೊಬೈಲ್ ವಿತರಣಾ ಕಾರ್ಯಕ್ರಮ ನಡೆಯಿತು.
ಕರ್ನಾಟಕ ರಾಜ್ಯದ ಕಾರ್ಮಿಕ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸಿದರು. ಕೋವಿಡ್ 3ನೆ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ತಂತ್ರಜ್ಞಾನ ಸಹಕಾರಿಯಾಗಲಿದೆ ಎನ್ನುವ ನಿಟ್ಟಿನಲ್ಲಿ ಮೊಬೈಲ್ ನೀಡಲಾಗಿದೆ ಎಂದು ಹರೀಶ್ ಪೂಂಜಾ ಅವರು ಹೇಳಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್,ತಾಲೂಕು ವೈದ್ಯಧಿಕಾರಿಗಳಾದ ಡಾ.ಕಲಾಮಧು, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪುಷ್ಪಾವತಿ ಶೆಟ್ಟಿ, ಬದುಕು ಕಟ್ಟೋಣ ಬನ್ನಿ ತಂಡದ ಮುಖ್ಯಸ್ಥರಾದ ಶ್ರೀ ರಾಜೇಶ್ ಪೈ ಹಾಗೂ ಮೋಹನ್ ಉಜಿರೆ,ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶ್ರೀನಿವಾಸ್ ರಾವ್ ಧರ್ಮಸ್ಥಳ ಹಾಗೂ ಗಣೇಶ್ ನಾವರ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ