Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121
ಕರ್ನಾಟಕದಲ್ಲಿ ಫಾರ್ಮಾ ಪಾರ್ಕ್, ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ – ಕೇಂದ್ರ ಸಚಿವ ಭಗವಂತ್ ಖೂಬಾ – I am BJP
May 7, 2025

ಕರ್ನಾಟಕದಲ್ಲಿ ಫಾರ್ಮಾ ಪಾರ್ಕ್, ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ – ಕೇಂದ್ರ ಸಚಿವ ಭಗವಂತ್ ಖೂಬಾ

ಬೆಂಗಳೂರು: ಕರ್ನಾಟಕದಲ್ಲಿ ಒಂದು ಫಾರ್ಮಾ ಪಾರ್ಕ್ ಮತ್ತು ಒಂದು ಪ್ಲಾಸ್ಟಿಕ್ ಪಾರ್ಕ್ ಸ್ಥಾಪಿಸಲು ಕೇಂದ್ರ ಸರಕಾರ ಯೋಜಿಸಿದೆ ಎಂದು ಕೇಂದ್ರ ನವೀನ ಮತ್ತು ನವೀಕರಿಸಬಲ್ಲ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವರಾದ ಶ್ರೀ ಭಗವಂತ್ ಖೂಬಾ ಅವರು ತಿಳಿಸಿದರು.

ಬೀದರ್‌ನಲ್ಲಿ ಇಂದು ಜನಾಶೀರ್ವಾದ ಯಾತ್ರೆ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಯಾದಗಿರಿ ಜಿಲ್ಲೆಯ ಕಡೇಚೂರಿನಲ್ಲಿ ಫಾರ್ಮ ಪಾರ್ಕ್ ಅನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಜಮೀನು ಹೊರತುಪಡಿಸಿ ಇತರ ಮೂಲಸೌಕರ್ಯಕ್ಕೆ ಒಂದು ಸಾವಿರ ಕೋಟಿ ರೂಪಾಯಿ ಹೂಡಿಕೆ ಇರುವ ಯೋಜನೆ ಇದಾಗಿದೆ. ರಾಜ್ಯ ಸರಕಾರ ಜಮೀನು ನೀಡಬೇಕಾಗುವುದು. ಹೂಡಿಕೆದಾರರಿಗೆ ರಾಜ್ಯ ಸರಕಾರದಿಂದ ಕಡಿಮೆ ದರದಲ್ಲಿ ವಿದ್ಯುತ್, ನೀರು, ಜಮೀನು, ಟ್ರೀಟ್‍ಮೆಂಟ್ ಪ್ಲಾಂಟ್ ನೀಡಬೇಕಾಗುತ್ತದೆ. ಬಹುತೇಕ ನಮ್ಮ ರಾಜ್ಯಕ್ಕೆ ಇದು ಸಿಗುವ ಅವಕಾಶವಿದೆ ಎಂದರು.

ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಮಂಗಳೂರು ಮತ್ತು ಯಾದಗಿರಿಯಿಂದ ಪ್ರಸ್ತಾವನೆ ಬಂದಿದೆ. ಕೆಮಿಕಲ್ ಇಂಡಸ್ಟ್ರಿಗಳಿರುವ ಕಾರಣ ಮಂಗಳೂರಿನಲ್ಲಿ ಇದು ಸ್ಥಾಪನೆ ಆಗುವ ಸಾಧ್ಯತೆ ಹೆಚ್ಚು. ಮೂಲಸೌಕರ್ಯಕ್ಕೆ 100 ಕೋಟಿ ಹೂಡಿಕೆ ಇರುತ್ತದೆ ಎಂದು ತಿಳಿಸಿದರು.ರಾಜ್ಯ ಸರಕಾರ ಹೆಚ್ಚು ಮುತುವರ್ಜಿ – ಹಣದ ಸಹಕಾರ ವಹಿಸಿದಾಗ ಯೋಜನೆ ಸಿಗಲು ಸಾಧ್ಯವಾಗುತ್ತದೆ. ಬೀದರ್ ಜಿಲ್ಲೆಗೆ ಬರಬೇಕಿದ್ದ ಯೋಜನೆಗಳು ಹಿಂದೆ ಕಾಂಗ್ರೆಸ್ ರಾಜ್ಯ ಸರಕಾರದ ಅಸಹಕಾರ, ಜಮೀನು ಸಿಗದ ಕಾರಣದಿಂದ ಅನುಷ್ಠಾನಗೊಂಡಿರಲಿಲ್ಲ ಎಂದು ಅವರು ವಿವರಿಸಿದರು. ಈಗ ಕೇಂದ್ರ- ರಾಜ್ಯ ಸರಕಾರಗಳೆರಡೂ ಬಿಜೆಪಿಯದ್ದೇ ಇವೆ. ಆದ್ದರಿಂದ ಸಮಸ್ಯೆ ಆಗಲಾರದು ಎಂದರು.

ಪ್ರಧಾನಿಯವರ ಜನಪ್ರಿಯತೆ ಹೆಚ್ಚಳದ ಆತಂಕದಿಂದ ಬಿಜೆಪಿಯೇತರ ರಾಜ್ಯ ಸರಕಾರಗಳು ಕಡಿಮೆ ಬೆಲೆಯ ಔಷಧಿ ನೀಡುವ ಜನೌಷಧಿ ಕೇಂದ್ರಗಳನ್ನು ತೆರೆದಿಲ್ಲ. ಅಂಥ ರಾಜ್ಯಗಳಲ್ಲಿ ತಮ್ಮ ಖಾತೆ ವತಿಯಿಂದ ಜನೌಷಧಿ ಕೇಂದ್ರಗಳನ್ನು ತೆರೆದು ವಹಿವಾಟು ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದರು.

ಬೀದರ್‍ನಲ್ಲಿ ಮುನ್ಸಿಪಾಲಿಟಿ ಜೊತೆ ಸಹಭಾಗಿತ್ವದಲ್ಲಿ ವಿದ್ಯುತ್ ಉತ್ಪಾದನೆಗೆ ಅವಕಾಶವಿದೆ. ಯಾರಾದರೂ ಹೂಡಿಕೆದಾರರು ಮುಂದಾದರೆ ಅವಕಾಶ ನೀಡಲಾಗುವುದು ಎಂದರು. ಒಂದು ಮೆಗಾವಾಟ್ ವಿದ್ಯುತ್ ಉತ್ಪಾದನೆಗೆ 3.75 ಕೋಟಿಯಿಂದ 4 ಕೋಟಿ ಹೂಡಿಕೆ ಅಗತ್ಯವಿದೆ. ರಾಜಸ್ಥಾನ, ಗುಜರಾತ್ ರಾಜ್ಯಗಳಲ್ಲಿ 4ರಿಂದ 5 ಹೂಡಿಕೆದಾರರು ಖಾಸಗಿ- ಸಾರ್ವಜನಿಕ ರಂಗದ ಸಹಭಾಗಿತ್ವದಡಿ ವಿದ್ಯುತ್ ಉತ್ಪಾದನೆಗೆ ಉತ್ಸಾಹ ತೋರುತ್ತಿದ್ದಾರೆ ಎಂದು ವಿವರಿಸಿದರು.

ರೈತರಿಗೆ ಸಂಬಂಧಿಸಿದ ವಿವಿಧ ಯೋಜನೆಗಳನ್ನು ಜನಪ್ರಿಯಗೊಳಿಸಲು ಮಾಧ್ಯಮಗಳ ನೆರವು ಪಡೆಯಲಾಗುವುದು ಎಂದ ಅವರು, ಈ ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರದ ಸಚಿವನಾಗಿ ಗರಿಷ್ಠ ಪ್ರಯತ್ನ ಮಾಡಲಿದ್ದೇನೆ ಎಂದು ತಿಳಿಸಿದರು.

ಜಿಲ್ಲೆಯ ಆರು ಶಾಸಕರು ಪಕ್ಷಭೇದ ಮರೆತು ಜಿಲ್ಲೆಗೆ ಅವಶ್ಯಕ ಯೋಜನೆಗಳ ಜಾರಿಗೆ ಶ್ರಮಿಸಬೇಕಿದೆ. ರಾಜಕಾರಣ ಮಾಡಲು ಹತ್ತಾರು ವಿಷಯ ಇರುತ್ತದೆ. ಆದರೆ, ಅಭಿವೃದ್ಧಿ ಯೋಜನೆ ವಿಷಯದಲ್ಲಿ ರಾಜಕೀಯ ಮಾಡಬಾರದು ಎಂದು ಕಿವಿಮಾತು ಹೇಳಿದರು. ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಜಗದೀಶ್ ಹಿರೇಮನಿ, ವಿಭಾಗ ಸಹಪ್ರಭಾರಿಗಳಾದ ಶ್ರೀ ಈಶ್ವರ್ ಸಿಂಗ್ ಠಾಕೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅಶೋಕ್ ಹೊಕ್ರಾಣೆ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *