Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121
ಸದ್ಯಕ್ಕಂತೂ ಭಾರತ ಸುರಕ್ಷಿತವಾದ ಕೈಗಳಲ್ಲಿ ಇರೋದಂತೂ ಸತ್ಯ… – I am BJP
May 6, 2025

ಸದ್ಯಕ್ಕಂತೂ ಭಾರತ ಸುರಕ್ಷಿತವಾದ ಕೈಗಳಲ್ಲಿ ಇರೋದಂತೂ ಸತ್ಯ…

ಅಲ್ಲಿ ಅಫ್ಘಾನಿಸ್ತಾನ ದೇಶದ ಅಧ್ಯಕ್ಷ ಕೇವಲ ನಾಲ್ಕು ಕೋಟಿ ಜನರನ್ನ ಉಗ್ರರ ಕೈಯಲ್ಲಿ ಬಿಟ್ಟು ದೇಶ ಬಿಟ್ ಓಡೋದ, ಇಲ್ಲಿ 139 ಕೋಟಿ ಜನರ ಸುರಕ್ಷತೆಯ ಜವಾಬ್ದಾರಿ ಹೊತ್ತಿರುವ ಭಾರತದ ಪ್ರಧಾನಿ ಒಲಿಂಪಿಕ್ ಕ್ರೀಡಾಕೂಟದಿಂದ ವಾಪಾಸ್ ಬಂದ ಕ್ರೀಡಾಪಟುಗಳ ಜೊತೆ ತಣ್ಣಗೆ ಐಸ್ ಕ್ರೀಂ ತಿನ್ಕೊಂಡ್ ಎನ್ಜಾಯ್ ಮಾಡ್ತಿದ್ದಾರೆ…

ಅಫ್ಘಾನಿಸ್ತಾನದ ರಾಜಕೀಯ, ತಾಲಿಬಾನ್ ಆಕ್ರಮಣ, ಅಮೇರಿಕದ ಸ್ವಾರ್ಥ ಮನೋಭಾವ, ರಷ್ಯಾ ಮತ್ತು ಚೀನಾಗಳ ಕುತಂತ್ರ ನಡೆ, ಕೊನೆಗೆ ತಾಲಿಬಾನಿಗಳ ಕೈಗೆ ಅಫ್ಘಾನಿಸ್ತಾನದ ಆಡಳಿತ, ಮುಂದೆ ಏನಿದ್ರು ಷರಿಯಾ ಕಾನೂನುಗಳ ಜೊತೆ ಒಂದು ಮತಾಂದತೆಯ ಅಟ್ಟಹಾಸ ಅಷ್ಟೇ, ಈಗ ಅಫ್ಘಾನಿಸ್ತಾನದಲ್ಲಿ ನಡಿತಿರೊದು ಟ್ರೈಲರ್ ಅಷ್ಟೇ, ಪಿಚ್ಚರ್ ಅಭೀ ಬಾಕಿ ಹೈ, ತಾಲಿಬಾನ್ ಉಗ್ರರ ಬಗ್ಗೆ ಮಾಹಿತಿ ಬೇಕು ಅಂದ್ರೆ ರವಿ ಬೆಳಗೆರೆಯವರ “ಮುಸ್ಲಿಂ” ಅದು ದೈವ ಸೈನಿಕರ ಲೋಕ ಅನ್ನೋ ಪುಸ್ತಕ ಓದಿದ್ರೆ ಗೊತ್ತಾಗುತ್ತೆ, ಅಫ್ಘಾನಿಸ್ತಾನದ ವಿಚಾರ ಹಾಗಿರ್ಲಿ ಇಲ್ಲಿ ನಮ್ಮ ವಿಚಾರ ಒಂಚೂರ್ ನೋಡೋಣ…

ಮೋದಿ ಅಧಿಕಾರಕ್ಕೆ ಬಂದ್ಮೇಲೆ ಸೇನೆಯ ಕ್ಯಾಂಪುಗಳ ಮೇಲೆ ಭಯೋತ್ಪಾದನ ದಾಳಿ ಆಗಿರೋದ್ ಬಿಟ್ರೆ ನಾಗರಿಕರ ಮೇಲೆ ( ಮುಂಬೈ ತಾಜ್ ಹೋಟೇಲ್ ಮೇಲಿನ ದಾಳಿ ರೀತಿ) ಯಾವುದೇ ಭಯೋತ್ಪಾದನ ದಾಳಿಗಳು ಆಗಿಲ್ಲ, ಯಾಕಂದ್ರೆ ಭಾರತದ ರಕ್ಷಣಾ ವ್ಯವಸ್ಥೆ ಅಷ್ಟರ ಮಟ್ಟಿಗೆ ಬಲಿಷ್ಠವಾಗಿದೆ…

ಮೋದಿ ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ಸೋತಿದ್ದಾರೆ, ಬೆಲೆ ಏರಿಕೆ ಗಗನ ಮುಟ್ಟಿದೆ, ಮೋದಿ ಬರಿ ಭಾಷಣ ಮಾಡುತ್ತಾರೆ, ಎಲ್ಲಿ ಲೇಸರ್ ಬೇಲಿ? ತಾವೇ ರೈಲಿನಲ್ಲಿ ಕಸ ಎಸೆದು ನೋಡಿ ಇದು ಮೋದಿಯ ಸ್ವಚ್ಛ ಭಾರತ ಅಂತ ಅನ್ನೋರ ನಡುವೆ ಮೋದಿ ಸದ್ದಿಲ್ಲದೆ ಭಾರತದ ರಕ್ಷಣಾ ವ್ಯವಸ್ಥೆಯನ್ನ ಅತ್ಯುತ್ತಮವಾಗಿ ನಿರ್ಮಿಸಿದ್ದಾರೆ, ಎಲ್ಲ ಸಹಜವಾಗಿ ಜೀವನ ನಡಿತಿದೆ ಅನ್ನುವಾಗ್ಲೇ ಇಂಟಲಿಜೆನ್ಸ್ ರವರು ಭಟ್ಕಳದ ಯಾವುದೊ ಮನೆಗೆ ನುಗ್ಗಿ ಉಗ್ರರ ಸಂಪರ್ಕ ಹೊಂದಿರುವವರನ್ನ ಕರೆದುಕೊಂಡು ಹೋಗ್ತಾರೆ, ಇನ್ನೆಲ್ಲೋ ಒಳಗಿನ ಶತ್ರುಗಳು ಸಂಚು ರೂಪಿಸಿದ್ರೆ ಅಷ್ಟೇ ಸೂಕ್ಷ್ಮವಾಗಿ ಗುಪ್ತಚರ ಇಲಾಖೆ ಕೆಲಸ ಮಾಡಿ ದಾಳಿ ಆಗದಂತೆ ತಡೆಯುತ್ತೆ, ಒಟ್ನಲ್ ಉಗ್ರರು ಭಾರತದಲ್ಲಿ ಬಾಂಬ್ ಹಾಕೋದ್ ಹಾಳಾಗೋಗ್ಲಿ ಸಣ್ಣ ಗಲಭೆ ಮಾಡೋಕೂ ಯೋಚನೆ ಮಾಡ್ಬೇಕು ಆ ರೀತಿಯ ರಕ್ಷಣಾ ವ್ಯವಸ್ಥೆ ಭಾರತದಲ್ಲಿದೆ…

ಇದು ಮೋದಿ ಅಮಿತ್ ಶಾ ರವರ ಚಾಣಾಕ್ಷತನವೂ ಹೌದು, ಇನ್ನು ಕೇಂದ್ರ ಸರ್ಕಾರ ಕೊಟ್ಟಿರೊ ಸ್ವಾತಂತ್ರ್ಯವನ್ನ ಕಾಶ್ಮೀರದಲ್ಲಿ ಭಾರತೀಯ ಸೇನೆ ಯಾವ ರೀತಿ ಬಳಸಿಕೊಂಡು ಉಗ್ರರ ಬೇಟೆ ಆಡ್ತಿದೆ ಅನ್ನೋದು ಎಲ್ರಿಗೂ ಗೊತ್ತಿರುವ ವಿಚಾರ, ಸದೃಢ ನಾಯಕತ್ವ ಇರೋದ್ರಿಂದ ಕಾಶ್ಮೀರದ ಪರಿಸ್ಥಿತಿ ಈಗ ಲಾಲ್ ಚೌಕ್ನಲ್ಲಿ ತ್ರಿವರ್ಣಧ್ವಜ ಹಾಕುವಷ್ಟರ ಮಟ್ಟಕ್ಕೆ ಉತ್ತಮವಾಗಿದೆ, ಇಲ್ದಿದ್ರೆ ಅಲ್ಲಿನ ಪರಿಸ್ಥಿತಿ ಸಿರಿಯಾ ಅಫ್ಘಾನಿಸ್ತಾನದ ಥರ ಆಗಿರ್ತಿತ್ತು…

ರಾಜಕೀಯದಲ್ಲಿ ಸೋಲು ಗೆಲವು ಸಹಜ, ಬೆಲೆ ಏರಿಕೆಯೇ ಪ್ರಮುಖ ಕಾರಣ ಓಟ್ ಹಾಕ್ದೆ ಇರೋಕೆ ಅಂತ ಮೋದಿಯನ್ನ ಸೋಲಿಸಿದ್ರೆ ಮತ್ತೊಂದು ಪಕ್ಷ ಅಧಿಕಾರಕ್ಕೆ ಬರುತ್ತೆ ಮತ್ತೊಬ್ಬರು ಪ್ರಧಾನಿ ಆಗ್ತಾರೆ, ದೇಶ ಅದರ ಪಾಡಿಗೆ ಅದು ನಡಿಯುತ್ತೆ, ಆದ್ರೆ ಸ್ವಲ್ಪ ಹುಷಾರು ತಪ್ಪಿದರೂ ಭಾರತ ಇನ್ನಿಲ್ಲದ ತೊಂದರೆಗೆ ಸಿಲುಕುತ್ತೆ, ನಾಲ್ಕು ಕೋಟಿ ಅಫ್ಘಾನಿಸ್ತಾನಿಗಳು ಕೇವಲ ಜೀವ ಉಳಿಸಿಕೊಳ್ಳುವ ಸಲುವಾಗಿ ವಿಮಾನದ ರೆಕ್ಕೆಯ ಹತ್ತಿರ ಹತ್ತಿ ಕುಳಿತು ಕೆಳಗೆ ಬಿದ್ದು ಸಾಯ್ತಿದ್ದಾರೆ ಅಂದ್ರೆ ಅಲ್ಲಿನ ಪರಿಸ್ಥಿತಿ ಅದಿನ್ನೆಷ್ಟು ಘೋರವಾಗಿ ಇರ್ಬೋದು, ಅಮೆರಿಕಾದ ಏರ್‌ಪೋರ್ಟ್ ಗಳಲ್ಲಿ ಮುಸಲ್ಮಾನರನ್ನ ಹೇಗೆ ಚೆಕ್ ಮಾಡ್ತಾರೆ ಅಂತ ಶಾರುಕ್ ಖಾನಿಗೆ ಗೊತ್ತು, ಚೀನಾದಲ್ಲಿ ಮುಸಲ್ಮಾನರನ್ನ ಹೇಗೆ ನೆಡೆಸಿಕೊಳ್ತಾರೆ ಅನ್ನೋದು ಅಮೀರ್ ಖಾನಿಗೂ ಗೊತ್ತು, ಭಾರತದಲ್ಲಿ ಮುಸಲ್ಮಾನರು ಹೇಗೆ ಬದುಕ್ತಿದ್ದಾರೆ ಅನ್ನೋದು ಈ ದೇಶದ ಎಡಮಂಗಗಳಿಗೂ ಗೊತ್ತು, ಆದ್ರೂ ಭಾರತ ಸುರಕ್ಷಿತವಲ್ಲ ಅಂತ ಬಾಯಿ ಬಡ್ಕೋತಾರೆ ಅದನ್ನ ಬಸೀರ ಹೆಡ್ಲೈನ್ ಹಾಕಿ ವಿಕೃತಿ ಮೆರಿತಾನೆ…

ರಾಜಕೀಯ ಪರ ವಿರೋಧ, ಸಿದ್ಧಾಂತಗಳ ಭಿನ್ನಾಭಿಪ್ರಾಯ, ಜಾತಿ ರಾಜಕಾರಣ, ಭ್ರಷ್ಟ ವ್ಯವಸ್ಥೆ, ಇದೆಲ್ಲದರ ನಡುವೆ ಭಾರತವನ್ನ ಮೋದಿ ಮುನ್ನೆಡಿಸಿದ ರೀತಿಯನ್ನ ಭವಿಷ್ಯದಲ್ಲಿ ಎಲ್ಲರೂ ನೆನೆಪು ಮಾಡಿಕೊಳ್ತಾರೆ, ಮುಂದಿನ ಸವಾಲು ತಾಲಿಬಾನಿಗಳಿಂದ ಭಾರತಕ್ಕೆ ಆಗುವ ಅಪಾಯ ತಡೆಯೋದು ಹಾಗೂ ಭಾರತದ ಅನ್ನ ತಿಂದು ತಾಲಿಬಾನಿಗಳ ಪರ ನಿಲ್ಲೊ ಭಾರತದ ಕೆಲವು ವಿಕೃತ ಮನಸ್ಥಿತಿಗಳ ವಿರುದ್ಧ ಹೋರಾಡೋದು, ಇವೆರಡೂ ಸಮಸ್ಯೆಗಳನ್ನ ದಿಟ್ಟವಾಗಿ ಎದುರಿಸೊ ತಾಕತ್ತು ಸಧ್ಯಕ್ಕಿರೊ ಕೇಂದ್ರ ಸರ್ಕಾರಕ್ಕೆ ಇದೆ, ಇದನ್ನೂ ಮೀರಿ ಭಾರತದಲ್ಲಿ ಅನಾಹುತಗಳು ಜರುಗಿದ್ರೆ ಅದಕ್ಕೆ ನಮ್ಮಲ್ಲಿರೊ ತಾಲಿಬಾನಿ ಮನಸ್ಥಿತಿಗಳೇ ಕಾರಣ ಆಗಿರ್ತಾರೆ…

ಕ್ರೆಡಿಟ್ ಭಾರತೀಯ ಸೇನೆಗಾದ್ರು ಕೊಡಿ, ಗುಪ್ತಚರ ಇಲಾಖೆಗಾದ್ರು ಕೊಡಿ ಅಥ್ವ ಕೇಂದ್ರ ಸರ್ಕಾರಕ್ಕಾದ್ರು ಕೊಡಿ ಆದ್ರೆ ಸಧ್ಯಕ್ಕಂತೂ ಭಾರತ ಸುರಕ್ಷಿತವಾದ ಕೈಗಳಲ್ಲಿ ಇರೋದಂತೂ ಸತ್ಯ…

Leave a Reply

Your email address will not be published. Required fields are marked *