Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121
ಕರ್ನಾಟಕದಲ್ಲೂ ಮತ್ತೆ ಬಿಜೆಪಿ ಅಧಿಕಾರಕ್ಕೆ : ಅರುಣ್ ಸಿಂಗ್ ವಿಶ್ವಾಸ – I am BJP
May 7, 2025

ಕರ್ನಾಟಕದಲ್ಲೂ ಮತ್ತೆ ಬಿಜೆಪಿ ಅಧಿಕಾರಕ್ಕೆ : ಅರುಣ್ ಸಿಂಗ್ ವಿಶ್ವಾಸ

ಬೆಂಗಳೂರು : ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿಜಿ ಅವರ ಪರವಾದ ಅಲೆ ಇದೆ. ಪಂಚ ರಾಜ್ಯ ಚುನಾವಣೆಯಲ್ಲಿ ಇದು ಸಾಬೀತಾಗಿದೆ. ಅದೇರೀತಿ ರಾಜ್ಯದಲ್ಲೂ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಹಾವೇರಿ ಜಿಲ್ಲೆಯ ಮಾಸೂರಿನಲ್ಲಿ ಇಂದು ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನಪರ ಕಾರ್ಯಗಳಿಂದಾಗಿ ಬಿಜೆಪಿ ಮತ್ತೆ 150ಕ್ಕೂ ಹೆಚ್ಚು ಸ್ಥಾನ ಗಳಿಸಿ ಅಧಿಕಾರ ಪಡೆಯಲಿದೆ. ಪಂಚ ರಾಜ್ಯ ಚುನಾವಣೆಯಲ್ಲಿ ಗೋವಾ, ಮಣಿಪುರ, ಉತ್ತರಾಖಂಡ, ಉತ್ತರಪ್ರದೇಶಗಳಲ್ಲಿ ಬಿಜೆಪಿ ಅಧಿಕಾರ ಗಳಿಸಿದೆ. ಕರ್ನಾಟಕದಲ್ಲೂ ಅದೇ ಮಾದರಿಯಲ್ಲಿ ಜನರು ಬಿಜೆಪಿಗೆ ಮತ ಕೊಟ್ಟು ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಡವರು, ರೈತರು, ಮಹಿಳೆಯರು ಬಿಜೆಪಿ ಮತ್ತು ಮೋದಿಜಿ ಅವರ ಪರವಾಗಿದ್ದಾರೆ. ಜನಧನ್, ಕಿಸಾನ್ ಸಮ್ಮಾನ್ ಪರಿಣಾಮವಾಗಿ ರೈತರು ಮತ್ತು ಮಹಿಳೆಯರು ಬಿಜೆಪಿ ಪರವಿದ್ದಾರೆ. ಮನೆಮನೆಗೆ ನಳ್ಳಿ ನೀರು ಅಭಿಯಾನ ಯಶಸ್ವಿಯಾಗಿದೆ ಎಂದು ವಿವರಿಸಿದರು. ಉಜ್ವಲ ಯೋಜನೆ, ಶೌಚಾಲಯ ನಿರ್ಮಾಣದಂಥ ಪ್ರಮುಖ ಯೋಜನೆಗಳು ಜಾರಿಯಾಗಿವೆ ಎಂದರು.

ಕಾಂಗ್ರೆಸ್ ಅಲ್ಪಸಂಖ್ಯಾತರ ಪರವಾಗಿತ್ತು. ಆದರೆ, ಮೋದಿಜಿ ಸರಕಾರವು ರೈತರು ಮತ್ತು ಬಡವರ ಪರವಾಗಿದೆ. ಈ ಜಿಲ್ಲೆ ಮಾತ್ರವಲ್ಲದೆ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಕಾರ್ಯ ನಿರಂತರವಾಗಿ ನಡೆದಿದೆ ಎಂದು ಮೆಚ್ಚುಗೆ ಸೂಚಿಸಿದರು.

ಕಾಂಗ್ರೆಸ್ 2 ರಾಜ್ಯಗಳಲ್ಲಿ ಮಾತ್ರ ಅಧಿಕಾರ ಉಳಿಸಿಕೊಂಡಿದೆ. ಮುಂದೆ ಅಲ್ಲಿಯೂ ಅದು ಅಧಿಕಾರ ಕಳಕೊಳ್ಳಲಿದೆ. ಭಾರತ್ ಜೋಡೋ ಯಾತ್ರೆ ನಡುವೆ ಅನೇಕ ಕಾಂಗ್ರೆಸ್ಸಿಗರು ಆ ಪಕ್ಷ ತೊರೆಯುತ್ತಿದ್ದಾರೆ ಎಂದು ವಿವರಿಸಿದರು. ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರಕಾರಗಳ ಜನಪರ ಕಾರ್ಯಗಳ ಕುರಿತು ಮಾಹಿತಿ ನೀಡಿ, ಬಿಜೆಪಿ ಪರವಾಗಿ ಜನರು ನಿಲ್ಲಲಿದ್ದಾರೆ ಎಂದು ವಿಶ್ವಾಸದಿಂದ ನುಡಿದರು. ಅತಿ ಹೆಚ್ಚು ಮತದೊಂದಿಗೆ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಜನರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಚಿವರಾದ ಬಿ.ಸಿ ಪಾಟೀಲ್, ಶಿವರಾಮ್ ಹೆಬ್ಬಾರ್, ವಿಭಾಗ ಪ್ರಭಾರಿ ಲಿಂಗರಾಜ ಪಾಟೀಲ್, ಜಿಲ್ಲಾಧ್ಯಕ್ಷ ಸಿದ್ದರಾಜು ಕಲಕೋಟಿ, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪ್ರಭಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಅರುಣ್ ಸಿಂಗ್ ಅವರೊಂದಿಗೆ ಕವಿ ಸರ್ವಜ್ಞರ ಮೂರ್ತಿಗೆ ಮಾಲಾರ್ಪಣೆ ಮಾಡಲಾಯಿತು.

Leave a Reply

Your email address will not be published. Required fields are marked *