Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Warning: Cannot modify header information - headers already sent by (output started at /home3/buntss5v/iambjp.in/wp-includes/functions.php:6121) in /home3/buntss5v/iambjp.in/wp-includes/feed-rss2.php on line 8
A. Narayanaswamy – I am BJP https://iambjp.in Making Bharat Vishwa Guru Thu, 19 Aug 2021 11:00:20 +0000 en-US hourly 1 https://wordpress.org/?v=6.8.1 https://iambjp.in/wp-content/uploads/2021/08/cropped-Smal-Logo-32x32.png A. Narayanaswamy – I am BJP https://iambjp.in 32 32 ನ್ಯಾಯಬೆಲೆ ಅಂಗಡಿಗೆ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಭೇಟಿ https://iambjp.in/archives/396 https://iambjp.in/archives/396#respond Thu, 19 Aug 2021 11:00:20 +0000 https://iambjp.in/?p=396 ಕೇಂದ್ರ ಸಮಾಜ ಕಲ್ಯಾಣ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾದ ಶ್ರೀ ಎ. ನಾರಾಯಣಸ್ವಾಮಿ ಅವರು ಇಂದು ಜನಾಶೀರ್ವಾದ ಯಾತ್ರೆಯ ಭಾಗವಾಗಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರ ನಗರದ ನ್ಯಾಯಬೆಲೆ ಅಂಗಡಿ ಹಾಗೂ ಗೊಬ್ಬರದ ಅಂಗಡಿ ಭೇಟಿ ನೀಡಿದರು.

ಸಂಸದರಾದ ಶ್ರೀ ಶಿವಕುಮಾರ್ ಉದಾಸಿ, ಶಾಸಕರಾದ ಶ್ರೀ ಅರುಣ್ ಕುಮಾರ್ ಪೂಜಾರ್, ಜಿಲ್ಲಾಧ್ಯಕ್ಷರಾದ ಶ್ರೀ ಸಿದ್ದರಾಜ ಕಲಕೋಟಿ, ಹಾಗೂ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಕೆ.ಎಸ್ ನವೀನ್, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಯಾವತ್ತೂ ಮೀಸಲಾತಿ ಪರವಾಗಿದೆ ಎಂದು ಅವರು ಬಳಿಕ ನಡೆದ ಸಭೆಯಲ್ಲಿ ತಿಳಿಸಿದರು.

ಡಾ. ಅಂಬೇಡ್ಕರರನ್ನು ಚುನಾವಣೆಯಲ್ಲಿ ಸೋಲಿಸಿದ ಕಾಂಗ್ರೆಸ್ ಪಕ್ಷದವರು ಬಿಜೆಪಿ ಮೀಸಲಾತಿ ವಿರೋಧಿ ಎಂದು ಟೀಕಿಸುತ್ತಾರೆ. ಆದರೆ, ಜನರಿಗೆ ಎಲ್ಲವೂ ತಿಳಿದಿದೆ ಎಂದು ಹೇಳಿದರು.

ಗರಿಷ್ಠ ಸಂಖ್ಯೆಯ ದಲಿತ ಸಚಿವರು ಹಾಗೂ ಹಿಂದುಳಿದ ಸಮುದಾಯಗಳ ಸಚಿವರನ್ನು ಸಂಸತ್ತಿಗೆ ಪರಿಚಯಿಸಲು ಅವಕಾಶ ಕೊಡದ ಕಾಂಗ್ರೆಸ್ ವರ್ತನೆ ಖಂಡನೀಯ ಎಂದರು. ಸಚಿವರನ್ನು ಜನರಿಗೆ ಪರಿಚಯಿಸಲು ಮತ್ತು ಕೇಂದ್ರದ ಸಾಧನೆಗಳ ಕುರಿತು ತಿಳಿಸಲು ಜನಾಶೀರ್ವಾದ ಯಾತ್ರೆ ಮಾಡಲಾಗುತ್ತಿದೆ. ಕಾಂಗ್ರೆಸ್‍ಗೆ ಅಭಿವೃದ್ಧಿ ಬೇಕಾಗಿಲ್ಲ ಎಂದು ಅವರು ಆಕ್ಷೇಪಿಸಿದರು.

]]>
https://iambjp.in/archives/396/feed 0
ಬಿಜೆಪಿ ಯಾವತ್ತೂ ಮೀಸಲಾತಿ ಪರವಾಗಿದೆ : ಕೇಂದ್ರ ಸಚಿವ ಎ. ನಾರಾಯಣಸ್ವಾಮಿ https://iambjp.in/archives/378 https://iambjp.in/archives/378#respond Wed, 18 Aug 2021 11:55:59 +0000 https://iambjp.in/?p=378 ಬೆಂಗಳೂರು: ದಲಿತ ಸಮುದಾಯ ಪ್ರಜ್ಞಾವಂತರನ್ನು- ವಿದ್ಯಾವಂತರನ್ನು ಹೊಂದಿದೆ. ಬಿಜೆಪಿ ಯಾವತ್ತೂ ಮೀಸಲಾತಿಪರವಾಗಿದೆ ಎಂಬುದು ಅವರಿಗೆ ತಿಳಿದಿದೆ ಎಂದು ಕೇಂದ್ರ ಸಮಾಜ ಕಲ್ಯಾಣ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾದ ಶ್ರೀ ಎ. ನಾರಾಯಣಸ್ವಾಮಿ ಅವರು ವಿಶ್ಲೇಷಿಸಿದರು.

ಜನಾಶೀರ್ವಾದ ಯಾತ್ರೆ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಇಂದು ಸಭೆಯಲ್ಲಿ ಮಾತನಾಡಿದ ಅವರು, 62 ವರ್ಷ ಕಾಲ ಕಾಂಗ್ರೆಸ್ಸಿಗರು ಹೆಂಡ ಕೊಟ್ಟು ಮತ ಪಡೆದರು. ಗ್ರಾಮ ಪಂಚಾಯಿತಿಯಿಂದ ಪ್ರಧಾನಮಂತ್ರಿ, ರಾಷ್ಟ್ರಪತಿ ವರೆಗೆ ಅಧಿಕಾರ ಅವರದಾಗಿತ್ತು. ಡಾ. ಅಂಬೇಡ್ಕರರನ್ನು ಚುನಾವಣೆಯಲ್ಲಿ ಸೋಲಿಸಿದ ಕಾಂಗ್ರೆಸ್ ಪಕ್ಷದವರು ಬಿಜೆಪಿ ಮೀಸಲಾತಿ ವಿರೋಧಿ ಎಂದು ಟೀಕಿಸುತ್ತಾರೆ. ಆದರೆ, ಜನರಿಗೆ ಎಲ್ಲವೂ ತಿಳಿದಿದೆ ಎಂದು ಹೇಳಿದರು.

ಗರಿಷ್ಠ ಸಂಖ್ಯೆಯ ದಲಿತ ಸಚಿವರು ಹಾಗೂ ಹಿಂದುಳಿದ ಸಮುದಾಯಗಳ ಸಚಿವರನ್ನು ಸಂಸತ್ತಿಗೆ ಪರಿಚಯಿಸಲು ಅವಕಾಶ ಕೊಡದ ಕಾಂಗ್ರೆಸ್ ವರ್ತನೆ ಖಂಡನೀಯ ಎಂದರು. ಸಚಿವರನ್ನು ಜನರಿಗೆ ಪರಿಚಯಿಸಲು ಮತ್ತು ಕೇಂದ್ರದ ಸಾಧನೆಗಳ ಕುರಿತು ತಿಳಿಸಲು ಜನಾಶೀರ್ವಾದ ಯಾತ್ರೆ ಮಾಡಲಾಗುತ್ತಿದೆ. ಕಾಂಗ್ರೆಸ್‍ಗೆ ಅಭಿವೃದ್ಧಿ ಬೇಕಾಗಿಲ್ಲ ಎಂದು ಆಕ್ಷೇಪಿಸಿದರು.

ಬಿಜೆಪಿ ಕೇವಲ 13 ವರ್ಷ ದೇಶದ ಆಡಳಿತ ಮಾಡಿದೆ. ಕಾಂಗ್ರೆಸ್ 62 ವರ್ಷಗಳ ಆಡಳಿತ ನೀಡಿದೆ. ಆದರೆ, ಕಾಂಗ್ರೆಸ್ ಪಕ್ಷ ಸಂಸತ್ತಿನ ನಿಯಮಾವಳಿ ಉಲ್ಲಂಘಿಸಿತು. 135 ಕೋಟಿ ಜನರನ್ನು ರಕ್ಷಣೆ ಮಾಡುವುದು ಲೋಕಸಭೆ- ರಾಜ್ಯಸಭೆಯ ಜವಾಬ್ದಾರಿ. ಆದರೆ, ಪುಸ್ತಕ ತೆಗೆದು ಸ್ಪೀಕರ್ ಮುಖಕ್ಕೆ ಎಸೆಯುವ ಸಂಸ್ಕøತಿ ಕಾಂಗ್ರೆಸ್ ಸದಸ್ಯರದು. ಟೇಬಲ್ ಮೇಲೆ ನಿಂತು ನರ್ತಿಸುವ ವಿರೋಧ ಪಕ್ಷದವರಿಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.

15- 20 ವರ್ಷಗಳ ಹಿಂದೆ ಬಿಜೆಪಿ ಎಂದರೆ ಬ್ರಾಹ್ಮಣರ ಪಕ್ಷ, ಗರ್ಭಗುಡಿ ರಾಜಕೀಯದ ಪಕ್ಷ, ದಲಿತರ ವಿರೋಧಿ ಪಕ್ಷ, ಹಿಂದುಳಿದವರ ಬಗ್ಗೆ ಕಳಕಳಿ ಇಲ್ಲದ ಪಕ್ಷ ಎಂದು ಟೀಕಿಸುತ್ತಿದ್ದರು. 1991- 92ರಲ್ಲಿ ಪಕ್ಷದ ಬಾವುಟ ಕಟ್ಟಿ ಮನೆಗೆ ಬಂದರೆ ಬೆಳಿಗ್ಗೆ ಆ ಬಾವುಟ ಇರುತ್ತಿರಲಿಲ್ಲ. ಬಾವುಟ ಕಟ್ಟಲು ಹೋದರೆ ಓಡಿಸಿಕೊಂಡು ಹೋಗುವ ಸ್ಥಿತಿ ಇತ್ತು. ಆ ದೌರ್ಜನ್ಯಕ್ಕೆ ಹೆದರದವರು ನಾಯಕರಾದರು ಎಂದರು.

ತುಳಿತಕ್ಕೆ ಒಳಗಾದ ನಾಗರಿಕರ ಪರವಾಗಿ, ಸಮಾಜದ ಪರವಾಗಿ ಎದೆ ತಟ್ಟಿ, ತೊಡೆ ತಟ್ಟಿ ನಿಲ್ಲುವವರೇ ನಾಯಕರಾಗುತ್ತಾರೆ. ದಲಿತರನ್ನು ಮುಖ್ಯವಾಹಿನಿಗೆ ತರಬೇಕೆಂಬ ಆಶಯವನ್ನು ಬಿಜೆಪಿ ಸಿದ್ಧಾಂತ ಹೊಂದಿದೆ. ನನಗೆ ಮತ ನೀಡಿದ ಮತದಾರರಿಗೆ ಕೃತಜ್ಞತೆಗಳು ಎಂದರು.

ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ಸದಾ ಕಾಲ ಬದ್ಧತೆಯನ್ನು ಹೊಂದಿದೆ. ಇಲ್ಲಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಅವರು ತಿಳಿಸಿದರು. ನಾನು ಬಿಜೆಪಿ ಸಿದ್ಧಾಂತವನ್ನು 30 ವರ್ಷ ಒಪ್ಪಿಕೊಂಡು ಬಿಜೆಪಿಯವ ಎಂದು ಬ್ರ್ಯಾಂಡೆಡ್ ಆಗಿದ್ದೇನೆ. ನನಗೂ ಬ್ರ್ಯಾಂಡ್ ಇದೆ. ತ್ಯಾಗ- ಸಂಸ್ಕಾರ- ಲಂಚ ಮುಟ್ಟಿದಿರುವುದೇ ನನ್ನ ಬ್ರ್ಯಾಂಡ್ ಎಂದರು.

ಏಳು ವರ್ಷಗಳ ಕಾಲ ಶ್ರೀ ನರೇಂದ್ರ ಮೋದಿ ಮತ್ತು ಎರಡು ವರ್ಷಗಳ ಕಾಲ ಶ್ರೀ ಯಡಿಯೂರಪ್ಪ ಅವರ ನೇತೃತ್ವದಲ್ಲಿ ದೇಶ- ರಾಜ್ಯವು ಅಭೂತಪೂರ್ವ ಅಭಿವೃದ್ಧಿ ಸಾಧಿಸಿವೆ ಎಂದು ತಿಳಿಸಿದರು. ಸಚಿವನನ್ನಾಗಿ ಮಾಡಿದ ಪಕ್ಷದ ಕೇಂದ್ರ- ರಾಜ್ಯದ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು.

ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಕೆ.ಎಸ್.ನವೀನ್, ಶಾಸಕರಾದ ಶ್ರೀ ಚಂದ್ರಪ್ಪ, ವಿಭಾಗ ಪ್ರಭಾರಿಗಳಾದ ಶ್ರೀ ಸುರೇಶ್, ಜಿಲ್ಲಾಧ್ಯಕ್ಷರಾದ ಶ್ರೀ ಎ. ಮುರಳಿ, ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಭಾಗವಹಿಸಿದ್ದರು.

ಬೆಳಿಗ್ಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಶ್ರೀ ಎ. ನಾರಾಯಣ ಸ್ವಾಮಿ ಅವರು ಗೋ ಪೂಜೆ ನೆರವೇರಿಸಿದರು. ಅಲ್ಲದೆ ನಿವೃತ್ತ ಯೋಧರಾದ ಶ್ರೀ ಟೀ ಪ್ರಭಾಕರ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಸನ್ಮಾನಿಸಿದರು. ಯೋಧರ ಸನ್ಮಾನ ಮಾಡಿದ್ದಲ್ಲದೆ, ಹಿರಿಯೂರಿನ ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.

]]>
https://iambjp.in/archives/378/feed 0
ದೇಶದಲ್ಲಿ ಹಿಂದುಳಿದವರ ಮತ್ತು ದಲಿತರ ಹೊಸ ಯುಗ ಆರಂಭ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ https://iambjp.in/archives/346 https://iambjp.in/archives/346#respond Tue, 17 Aug 2021 09:54:41 +0000 https://iambjp.in/?p=346 ಬೆಂಗಳೂರು: ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವಸಂಪುಟದ ವಿಸ್ತರಣೆ ಮೂಲಕ ದೇಶದಲ್ಲಿ ಹಿಂದುಳಿದವರ ಮತ್ತು ದಲಿತರ ಹೊಸ ಯುಗ ಆರಂಭವಾಗಿದೆ ಎಂದು ಕೇಂದ್ರ ಸಮಾಜ ಕಲ್ಯಾಣ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾದ ಶ್ರೀ ಎ. ನಾರಾಯಣಸ್ವಾಮಿ ಅವರು ವಿಶ್ಲೇಷಿಸಿದರು.

ಜನಾಶೀರ್ವಾದ ಯಾತ್ರೆ ಹಿನ್ನೆಲೆಯಲ್ಲಿ ನೆಲಮಂಗಲದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗದ ನಾಯಕ, ಗುಜರಾತ್‍ನ ಮುಖ್ಯಮಂತ್ರಿಯಾಗಿ, ದೇಶದ ಪ್ರಧಾನಿಯಾಗಿ ವಿಶ್ವದ ಗಮನ ಸೆಳೆದ ಶ್ರೀ ಮೋದಿಯವರು ಎರಡನೇ ಬಾರಿ ಮಂತ್ರಿಮಂಡಲ ವಿಸ್ತರಣೆ ಮಾಡಿದಾಗ ಎಸ್‍ಸಿ- 12, ಎಸ್‍ಟಿ- 6, ಪರಿಶಿಷ್ಟ ಪಂಗಡದ (ಟ್ರೈಬಲ್) ಇಬ್ಬರಿಗೆ ಸೇರಿದಂತೆ 20 ಮಂದಿಗೆ ಸಚಿವರಾಗುವ ಅವಕಾಶ ನೀಡಿದರು. ರಾಜ್ಯದಲ್ಲಿ ಹಿಂದೆ ಕೇಂದ್ರದ ಇಬ್ಬರು ಸಚಿವರಿದ್ದರು. ಈಗ ಮತ್ತೆ ನಾಲ್ವರಿಗೆ ಸಚಿವರಾಗುವ ಅವಕಾಶ ಲಭಿಸಿದ್ದು, ಅದಕ್ಕಾಗಿ ಪ್ರಧಾನಿಯವರಿಗೆ ಕೃತಜ್ಞತೆ ಸಮರ್ಪಿಸುವುದಾಗಿ ತಿಳಿಸಿದರು.

ನೂತನ ಸಚಿವರನ್ನು ಸದನಕ್ಕೆ ಪರಿಚಯಿಸಿ ದೇಶಕ್ಕೆ ಪರಿಚಯಿಸುವುದು ಸತ್ ಸಂಪ್ರದಾಯ. ಅದಕ್ಕೆ ವಿರೋಧ ಪಕ್ಷದವರು ಅವಕಾಶ ಮಾಡಿಕೊಟ್ಟಿಲ್ಲ. ಕಾಂಗ್ರೆಸ್‍ನವರು ಸದನ ನಡೆಯದಂತೆ ನೋಡಿಕೊಂಡರು. ಇದೇ ಕಾರಣಕ್ಕೆ ನೂತನ ಸಚಿವರ ಪರಿಚಯವನ್ನು ಜನಾಶೀರ್ವಾದದ ಮೂಲಕ ಮಾಡಿಕೊಡಲು ಪ್ರಧಾನಿ ಶ್ರೀ ನರೇಂದ್ರ ಮೋದಿ ಮತ್ತು ಪಕ್ಷದ ಮುಖಂಡರು ಮುಂದಾಗಿದ್ದಾರೆ ಎಂದು ವಿವರಿಸಿದರು.

ಕೇಂದ್ರ ಸರಕಾರದ ಏಳು ವರ್ಷಗಳ ಸಾಧನೆ, ಬಿಜೆಪಿಯ ರಾಜ್ಯ ಸರಕಾರಗಳ ಸಾಧನೆ, ಸಚಿವರಾಗಿ ತಮ್ಮ ಖಾತೆಯಿಂದ ಲಭಿಸಲಿರುವ ಸೌಲಭ್ಯಗಳ ಕಿರು ಪರಿಚಯ ಮಾಡಿಕೊಡಲು ಈ ಯಾತ್ರೆಯನ್ನು ಬಳಸಲು ತಿಳಿಸಿದ್ದಾರೆ. ಪಕ್ಷದ ಸಂದೇಶದಂತೆ ಸಚಿವರು, ಇತರ ಜನಪ್ರತಿನಿಧಗಳು, ಪಕ್ಷದ ಪದಾಧಿಕಾರಿಗಳ ಜೊತೆಗೂಡಿ ಜನಾಶೀರ್ವಾದ ಯಾತ್ರೆ ನಡೆಸಲಾಗುತ್ತಿದೆ ಎಂದರು.

56 ವರ್ಷಗಳ ಕಾಂಗ್ರೆಸ್ ಆಡಳಿತ, ಅನೇಕ ಪ್ರಧಾನಮಂತ್ರಿಗಳ ಕಾರ್ಯವೈಖರಿಯನ್ನು ನಾವು ನೋಡಿದ್ದೇವೆ. ಹಿಂದೆ ಫೇಸ್‍ಬುಕ್, ಇಲೆಕ್ಟ್ರಾನಿಕ್ ಮೀಡಿಯಾಗಳು ಇರಲಿಲ್ಲ. ಆದರೆ, ಹಿಂದೆ ಮುದ್ರಣ ಮಾಧ್ಯಮಗಳಲ್ಲಿ ವಿದೇಶಗಳಲ್ಲಿ ಪ್ರಧಾನಿಗಳ ನಾಯಕರ ಭೇಟಿ, ಊಟ, ವಿಹಾರದ ಕುರಿತ ಸುದ್ದಿಗಳು ಇರುತ್ತಿದ್ದವು. ಸ್ವಾತಂತ್ರ್ಯ ತಂದು ಕೊಟ್ಟವರು ನಾವೇ, ದಲಿತರ ಉದ್ಧಾರ ಮಾಡುತ್ತೇವೆ, ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತೇವೆ- ಮತ ಕೊಡಿ ಎಂದು ಕೇಳುತ್ತಿದ್ದರು. ಆದರೆ, ಅಭಿವೃದ್ಧಿ ಎಂಬುದು ಕೇವಲ ಕನಸಾಗಿಯೇ ಇತ್ತು ಎಂದರು.

ಸುಮಾರು 5 ದಶಕಕ್ಕೂ ಹೆಚ್ಚು ಕಾಲ ಈಶಾನ್ಯ ರಾಜ್ಯಗಳಿಗೆ ರೈಲ್ವೆ, ವಿಮಾನಗಳ ಸಂಪರ್ಕ ಇರಲಿಲ್ಲ. ಈ ರಾಜ್ಯಗಳ ಕಡೆ ವಿಶೇಷ ಗಮನ ಕೊಟ್ಟ ಶ್ರೀ ನರೇಂದ್ರ ಮೋದಿ ಅವರು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ವಿವರಿಸಿದರು.
ಶ್ರೀ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದ ಪ್ರತಿಯೊಬ್ಬ ನಾಗರಿಕನ ಮನೆಯಲ್ಲಿ ಶೌಚಾಲಯ ಇರುವಂತಾಗುವ ಸ್ವಚ್ಛ ಭಾರತ ಯೋಜನೆ, ಎಲ್ಲ ಹಳ್ಳಿಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಉಜಾಲಾ ಯೋಜನೆ, ವಿದ್ಯುತ್ ಸ್ವಾವಲಂಬಿತನ ಸಾಧ್ಯವಾಗಿದೆ. ವಸತಿ ಯೋಜನೆಯಲ್ಲೂ ಕ್ರಾಂತಿ ನಡೆದಿದೆ. ಫಸಲ್ ಬಿಮಾ ಯೋಜನೆ, ರೈತ ಸಮ್ಮಾನ್ ಯೋಜನೆ ಸೇರಿದಂತೆ ಅನೇಕ ಪ್ರಗತಿಗೆ ಪೂರಕವಾದ ಯೋಜನೆಗಳನ್ನು ಕೇಂದ್ರ ಸರಕಾರ ಜಾರಿಗೊಳಿಸಿದೆ ಎಂದು ಅವರು ತಿಳಿಸಿದರು.

ಹಿಂದೆ ರಾಜ್ಯದಲ್ಲಿ ಸಚಿವನಾಗಿದ್ದಾಗ ದಲಿತರು- ಹಿಂದುಳಿದವರ ಏಳಿಗೆಗೆ ಶ್ರಮಿಸಿದ್ದೇನೆ. ಕೇಂದ್ರ ಸಚಿವನಾಗಿ ಹಿಂದುಳಿದವರು ಮತ್ತು ದಲಿತರ ಅಭಿವೃದ್ಧಿಗೆ ಪ್ರಾಮಾಣಿಕತೆಯಿಂದ ಶ್ರಮಿಸಲಿದ್ದೇನೆ ಎಂದು ಅವರು ಹೇಳಿದರು.

ದೇಶದಾದ್ಯಂತ ಐಎಎಸ್, ಐಪಿಎಸ್ ಅಧಿಕಾರಿಗಳ ಕೊರತೆ ಇದೆ. ಆ ಕೊರತೆಯನ್ನು ನೀಗಿಸಬೇಕಿದೆ. ಆಡಳಿತ ವ್ಯವಸ್ಥೆಯಲ್ಲಿ ದಲಿತರ ಸಹಭಾಗಿತ್ವ ಬೇಕಿದೆ. ಆ ನಿಟ್ಟಿನಲ್ಲಿ ಐಎಎಸ್ ಕೋಚಿಂಗ್ ಅನ್ನು ಎಲ್ಲ ರಾಜ್ಯಗಳ ಪ್ರಮುಖ ವಿಶ್ವವಿದ್ಯಾನಿಲಯಗಳಲ್ಲಿ ಆರಂಭಿಸಲಾಗುವುದು. ತಲಾ 100 ಜನರಿಗೆ ಕೋಚಿಂಗ್ ಕೊಡಲಾಗುವುದು ಎಂದರು.

ಎಲ್ಲ ಮೀಸಲು ಲೋಕಸಭಾ ಕ್ಷೇತ್ರಗಳಲ್ಲಿ ಅಂಬೇಡ್ಕರ್ ನವೋದಯ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಅವರು ಪ್ರಕಟಿಸಿದರು. ಸ್ಕಿಲ್ ಇಂಡಿಯಾದಡಿ ತಾಂತ್ರಿಕ ಶಿಕ್ಷಣವನ್ನೂ ನೀಡಲಾಗುವುದು ಎಂದರು.

ರಾಜ್ಯದ ಸಚಿವರಾದ ಶ್ರೀ ಎಂ.ಟಿ.ಬಿ. ನಾಗರಾಜ್, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಕೆ.ಎಸ್. ನವೀನ್, ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪ, ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

]]>
https://iambjp.in/archives/346/feed 0