Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Warning: Cannot modify header information - headers already sent by (output started at /home3/buntss5v/iambjp.in/wp-includes/functions.php:6121) in /home3/buntss5v/iambjp.in/wp-includes/feed-rss2.php on line 8
Agriculture – I am BJP https://iambjp.in Making Bharat Vishwa Guru Tue, 31 Aug 2021 07:21:55 +0000 en-US hourly 1 https://wordpress.org/?v=6.8.1 https://iambjp.in/wp-content/uploads/2021/08/cropped-Smal-Logo-32x32.png Agriculture – I am BJP https://iambjp.in 32 32 ಈ ಬಾರಿಯ ಮೊಬೈಲ್ ಆ‍್ಯಪ್ ಬೆಳೆ ಸಮೀಕ್ಷೆ ಯಶಸ್ಸಿಗೂ ಎಲ್ಲರೂ ಕೈಜೋಡಿಸಿ :‌ ಸಚಿವ ಬಿ. ಸಿ. ಪಾಟೀಲ್ https://iambjp.in/archives/456 https://iambjp.in/archives/456#respond Tue, 31 Aug 2021 07:21:55 +0000 https://iambjp.in/?p=456 ಬೆಂಗಳೂರು, ಆ.31 : ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷದಿಂದ ಕೈಗೊಂಡಿರುವ ಮೊಬೈಲ್ ಆ‍್ಯಪ್ ಬೆಳೆ ಸಮೀಕ್ಷೆ ದೇಶದ್ಯಾಂತ ಗಮನ ಸೆಳೆದಿದ್ದು, ಕೇಂದ್ರದಿಂದ ಮೆಚ್ಚುಗೆಗೆ ಪಾತ್ರವಾಗಿರುವ ಈ ಮೊಬೈಲ್ ಬೆಳೆ ಸಮೀಕ್ಷೆ ಈ ಬಾರಿಯೂ ಕೂಡ ಯಶಸ್ವಿಯಾಗಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.

ವಿಕಾಸಸೌಧದ ಕಚೇರಿಯಲ್ಲಿ ಕೃಷಿ ಇಲಾಖಾಧಿಕಾರಿಗಳೊಂದಿಗೆ 2021-22 ನೇ ಸಾಲಿನ ಮೊಬೈಲ್ ಆ‍್ಯಪ್ ಬೆಳೆ ಸಮೀಕ್ಷೆ ಪ್ರಗತಿ ಕುರಿತು ಬಿ.ಸಿ.ಪಾಟೀಲ್ ಸಭೆ ನಡೆಸಿದರು.

ಕಳೆದ ವರ್ಷ ರಾಜ್ಯಾದ್ಯಂತ ಬೆಳೆ ಸಮೀಕ್ಷೆ ಕ್ಷಿಪ್ರ ಗತಿಯಲ್ಲಿ ಇತರೆ ಇಲಾಖೆಗಳ ಸಹಯೋಗದಲ್ಲಿ ಕೈಗೊಂಡು ಯಶಸ್ವಿಯೂ ಆಗಿದೆ. ಇತರೆ ರಾಜ್ಯಗಳಿಗೆ ಕರ್ನಾಟಕ ಕೃಷಿ ಇಲಾಖೆಯ ಈ ಸಾಧನೆ ಮಾದರಿಯೂ ಆಗಿದೆ. ಕೇಂದ್ರದಿಂದ ಅಗ್ರಿ ಟ್ರೆಂಡ್ ಸೆಟ್ಟರ್ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಇಂತಹ ಸಾಧನೆ ಇನ್ನು ಮುಂದೆಯೂ ಆಗಬೇಕು. ರೈತ ತಾನೇ ತನ್ನ ಬೆಳೆಗೆ ಪ್ರಮಾಣ ಪತ್ರ ನೀಡುವಂತಹ ಜಮೀನಿಗೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅರ್ಹನೆಂದು ಹೇಳಿಕೊಳ್ಳುವಂತಹ ಮೊಬೈಲ್ ಬೆಳೆ ಸಮೀಕ್ಷೆ ನಿರಂತರ ನಡೆಯಬೇಕು. ಕಳೆದ ಬಾರಿಯಂತೆ ಎಲ್ಲಾ ಕೃಷಿ ಅಧಿಕಾರಿಗಳು ಈ ಪ್ರಕ್ರಿಯೆ ಯಶಸ್ಸಿಗೆ ಮತ್ತೆ ಚುರುಕಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.

2021-22ನೇ ಸಾಲಿನಲ್ಲಿ ಪೂರ್ವ ಮುಂಗಾರಿನಲ್ಲಿ 2.94 ಲಕ್ಷ ತಾಕುಗಳನ್ನು ರೈತರೇ ಸ್ವತಃ ರೈತರ ಆ‍್ಯಪ್ ನಲ್ಲಿ ಹಾಗೂ 44.77 ಲಕ್ಷ ತಾಕುಗಳನ್ನು ಖಾಸಗಿ ನಿವಾಸಿಗಳ ಆ‍್ಯಪ್ ನಲ್ಲಿ ಬೆಳೆ ಮಾಹಿತಿಯನ್ನು ದಾಖಲು ಮಾಡಲಾಗಿರುತ್ತದೆ.2021-22ನೇ ಸಾಲಿನಲ್ಲಿ ಮುಂಗಾರಿನಲ್ಲಿ 6.18 ಲಕ್ಷ ತಾಕುಗಳನ್ನು ರೈತರೇ ಸ್ವತಃ ರೈತರ ಆ‍್ಯಪ್ ನಲ್ಲಿ ಹಾಗೂ 0.66 ಲಕ್ಷ ತಾಕುಗಳನ್ನು ಖಾಸಗಿ ನಿವಾಸಿಗಳ ಆ‍್ಯಪ್ ನಲ್ಲಿ ಆ.30 ರವರೆಗೆ ಅಪ್ಲೋಡ್ ಮಾಡಲಾಗಿದ್ದು ಬೆಳೆ ಸಮೀಕ್ಷೆಯು ಪ್ರಗತಿಯಲ್ಲಿದೆ.

ಅಂದ್ಹಾಗೆ ಪ್ರತಿ ವರ್ಷದಂತೆ ಈ ವರ್ಷವೂ ಸಹ ಮುಂಗಾರು ಹಂಗಾಮಿನಲ್ಲಿ ಸುಮಾರು 2.09 ಕೋಟಿ ತಾಕುಗಳಲ್ಲಿ ಬೆಳೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಿದ್ದು, ರೈತರಿಂದಲೇ ಅವರ ಜಮೀನಿನ ಬೆಳೆ ಮಾಹಿತಿಯನ್ನು ಆ‍್ಯಪ್ ಮೂಲಕ ಅಪ್ಲೋಡ್ ಮಾಡಿಸುವ ಉದ್ದೇಶವನ್ನು ಹೊಂದಿದ್ದು, ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರೇ ಸ್ವತಃ ಬೆಳೆ ಸಮೀಕ್ಷೆ ಮಾಹಿತಿಯನ್ನು ದಾಖಲಿಸಬೇಕೆಂದು ಕೃಷಿ ಸಚಿವರು ಈ ಮೂಲಕ ಮತ್ತೆ ರೈತರಲ್ಲಿ ಮನವಿ ಮಾಡಿದ್ದಾರೆ.

ಸಭೆಯಲ್ಲಿ ಕೃಷಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜ್ ಕುಮಾರ್ ಖತ್ರಿ, ಆಯುಕ್ತ ಬ್ರಿಜೆಶ್ ಕುಮಾರ್ ದೀಕ್ಷಿತ್, ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಮತ್ತಿತ್ತರರು ಪಾಲ್ಗೊಂಡಿದ್ದರು.

]]>
https://iambjp.in/archives/456/feed 0
2023 ರ ವರ್ಷ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ https://iambjp.in/archives/449 https://iambjp.in/archives/449#respond Fri, 27 Aug 2021 12:26:39 +0000 https://iambjp.in/?p=449 ಬೆಂಗಳೂರು : 2023 ರ ವರ್ಷ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಿಸಲಾಗುತ್ತಿದ್ದು, ಕರ್ನಾಟಕ ರಾಜ್ಯದಲ್ಲಿ ಸಿರಿಧಾನ್ಯ ಬೆಳೆಯಲು ಸಾಕಷ್ಟು ವಾತಾವರಣ ಹೆಚ್ಚಾಗಿದೆ. 2023 ರ ವೇಳೆಗೆ ಕರ್ನಾಟಕ ಸಿರಿಧಾನ್ಯ ರಫ್ತು ಮಾಡುವಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲನೇ ರಾಜ್ಯವಾಗಬೇಕು. ಎಲ್ಲಾ ದೇಶಗಳು ಈ ಪ್ರಸ್ತಾವನೆಯನ್ನು ಎಲ್ಲಾ ದೇಶಗಳು ಒಪ್ಪಿಕೊಂಡಿವೆ ಎಂದು ಕೇಂದ್ರದ ಕೃಷಿ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.

ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಕರ್ನಾಟಕದಲ್ಲಿ ಸಿರಿಧಾನ್ಯಕ್ಕೆ ಹೆಚ್ಚು ಒತ್ತು ನೀಡಲು ಹೆಚ್ಚು ಬೆಳೆಯಲು ಉತ್ತಮ ವಾತಾವರಣವಿದೆ. ಭಾರತದ ಸ್ವಾತಂತ್ರ್ಯೋತ್ಸವದ 75 ನೇ ವರ್ಷದ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ದಕ್ಷಿಣ ಭಾರತದ ಎಲ್ಲಾ ತೋಟಗಾರಿಕಾ ಮತ್ತು ಆಹಾರಧಾನ್ಯಗಳ ರಫ್ತುದಾರರನ್ನು ಸೇರಿಸಿ ಸೆಪ್ಟೆಂಬರ್ 22 ರಂದು ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಿಸಿದಂತೆ ರಫ್ತುದಾರರು ಇದರಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯದ ಕೃಷಿ ಇಲಾಖೆ ಮಾಡಿದ ಮೊಬೈಲ್ ಬೆಳೆ ಆಪ್ ಸಮೀಕ್ಷೆ ಇಡೀ ದೇಶಕ್ಕೆ ಮಾದರಿಯಾಗಿದೆ.ಒಂದು ಜಿಲ್ಲೆಒಂದು ಉತ್ಪನ್ನ ಯೋಜನೆಗೆ ಒತ್ತು ನೀಡಿ ಗುಣಮಟ್ಟದ ಉತ್ಪಾದನೆ, ಸಂಗ್ರಹಣೆ, ಮಾರ್ಕೆಟಿಂಗ್, ಮಾರಾಟ ಮಾಡಲು ಪ್ರತಿಯೊಂದು ಜಿಲ್ಲೆಯಲ್ಲಿಯೂ ಕ್ಲಸ್ಟರ್ ಮಾಡಲು ನಿರ್ಧರಿಸಲಾಗಿದೆ ಎಂದರು.

ರೈತ ಕೃಷಿಯಲ್ಲಿ ಮುಂದುವರೆದು ಲಾಭದಾಯಕವಾಕಬೇಕು. ಕೃಷಿ ಜೀವನಾಧಾರ ಕಸುಬಾಗಿದ್ದು, ಒಟ್ಟು ಕೃಷಿಕರಲ್ಲಿ ಶೇ.80 ರಷ್ಟು ಸಣ್ಣ ಮತ್ತು ಮಧ್ಯಮ ಕೃಷಿಕರಿದ್ದಾರೆ. ಈ ಸಣ್ಣ ಮತ್ತು ಮಧ್ಯಮ ರೈತರು ನಗರಕ್ಕೆ ವಲಸೆ ಬರುವುದು ಹೆಚ್ಚಾಗುತ್ತಿದ್ದು, ಕಳೆದ 5-6 ವರ್ಷಗಳಲ್ಲಿ ಕೃಷಿಕನ ಬದುಕಿಗೆ ಒತ್ತು ಕೊಡಲು ಹಾಗೂ ರೈತನನ್ನು ರೈತರ ಆದಾಯ ಇಮ್ಮಡಿಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ ಸರ್ಕಾರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದೆ.

ಮೋದಿ ನೇತೃತ್ವದಲ್ಲಿ 1.31 ಸಾವಿರ ಕೋಟಿ ಈ ವರ್ಷ ಕೃಷಿ ಬಜೆಟ್ ಆಗಿದೆ. ಇದನ್ನು ಹೊರತುಪಡಿಸಿ ಕೃಷಿ ಮೂಲಭೂತ ನಿಧಿ ಅಡಿಯಲ್ಲಿ 1 ಲಕ್ಷ ಕೋ.ರೂ.ಹೆಚ್ಚುವರಿ ಹಣವನ್ನು ಕೊಯ್ಲೋತ್ತರ ಉತ್ಪಾದನೆಗೆ ಮಾರ್ಕೆಟಿಂಗ್ ಗೆ ಕೇಂದ್ರ ಹಣ ತೊಡಗಿಸುತ್ತಿದೆ. ಸಣ್ಣ ರೈತ ಕೃಷಿ ಜೊತೆ ಮಿಶ್ರ ಬೆಳೆ ಬೆಳೆದ ರೈತ ಲಾಭದಾಯಕವಾಗಿದೆ. ಡೈರಿ, ಹಸು ಸಾಕಾಣೆ, ಪಶುಸಂಗೋಪನೆ, ಅಗ್ರೋ ಫಾರೆಸ್ಟ್ರಿ, ಮೀನುಗಾರಿಕೆ ಸೇರಿದಂತೆ ಹಲವಾರು ಉಪಕಸುಬುಗಳಿಗೆ ಸರ್ಕಾರ ನೆರವು ನೀಡುತ್ತಿದೆ.ಎಲ್ಲಾ ರಾಜ್ಯ ಒಗ್ಗೂಡಿ ರೈತನನ್ನು ಲಾಭದಾಯಕನನ್ನಾಗಿಸಲು ಕೇಂದ್ರ ಕಾರ್ಯಕ್ರಮ ಹಮ್ಮಿಕೊಂಡಿದೆ. ಮೀನುಗಾರಿಗೆ, ಪಶುಸಂಗೋಪನೆ ಸೇರಿದಂತೆ ಬೇರೆಬೇರೆ ಕಸುಬುಗಳಿಗೆ ಒತ್ತು ನೀಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಾಯ ಮಾಡುತ್ತಿವೆ. ಎಲ್ಲಾ ಸಣ್ಣ ರೈತರನ್ನು ಒಗ್ಗೂಡಿಸಲು ಎಫ್.ಪಿ.ಒ (ಕೃಷಿ ಉತ್ಪಾದಕರ ಸಂಘ) 10 ಸಾವಿರ ಕೃಷಿ ಉತ್ಪಾದಕರ ಸಂಘ ಮಾಡಲು ಕೇಂದ್ರ ಒತ್ತು ನೀಡಲು ನಿರ್ಧರಿಸಿದೆ.750 ಎಫ್.ಪಿ.ಓಗಳನ್ನು ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಾಗಲು ಸಿಎಂ ಬೊಮ್ಮಾಯಿ ಕರೆ ನೀಡಿದ್ದಾರೆ. ಅದರಂತೆ ಒಂದು ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ ಎಫ್.ಪಿ.ಓ ಮಾಡಲು ಉದ್ದೇಶಿಸಲಾಗಿದೆ.

ಪೆಟ್ರೋಲ್­ಗೆ ಪರ್ಯಾಯವಾಗಿ ಎಥೆನಾಲ್ ಬಳಸಬಹುದಾಗಿದ್ದು, ಕರ್ನಾಟಕದಲ್ಲಿ ಮಂಡ್ಯ ಸೇರಿದಂತೆ ಬಹುತೇಕ ನೀರಾವರಿ ಪ್ರದೇಶದಲ್ಲಿ ಕಬ್ಬು ಬೆಳೆಯುತ್ತಿದ್ದು, ಸಕ್ಕರೆಯಿಂದ ಎಥಿನಾಲ್ ತಯಾರಿಸಲು ಒತ್ತು ನೀಡಲಾಗುತ್ತಿದ್ದೆ. 9. 5 ಬಿಲಿಯನ್ ಮೆಟ್ರಿಕ್ ಟನ್ ಸಕ್ಕರೆಯಿಂದ ಎಥಿನಾಲ್ ಮಾಡಲಾಗಿದೆ. ಅದರಂತೆ ಗೋಧಿ ಸೇರಿದಂತೆ ಬಹುತೇಕ ಧಾನ್ಯಗಳಿಂದಲೂ ಎಥಿನಾಲ್ ತಯಾರಿಸಬಹುದಾಗಿದೆ ಎಂದು ವಿವರಿಸಿದರು.

ರಾಜ್ಯ ಸರ್ಕಾರ ಅಭಿವೃದ್ಧಿ ಪಡಿಸಿರುವ ಯೋಜನೆಯನ್ನು ದೇಶಾದ್ಯಂತ ವಿಸ್ತರಿಸಲಾಗುವುದು.ಆಂಧ್ರ ಪ್ರದೇಶದಲ್ಲಿ ಕೃಷಿ ಭರವಸಾ ಯೋಜನೆ ಜಾರಿ ಮಾಡಿದ್ದಾರೆ. ತಮಿಳುನಾಡಿನಲ್ಲಿ ತರಕಾರಿ ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಮಾಡಿದ್ದಾರೆ. ಈ ಯೋಜನೆಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಬೇಕು. ರಫ್ತು ಉದ್ಯಮಕ್ಕೆ ಉತ್ತೇಜನ ನೀಡಲು ಕ್ರಮ ವಹಿಸಲಾಗುವುದು. ಒಳನಾಡಿನ ಮೀನುಗಾರಿಕೆಗೆ ಉತ್ತೇಜನ. ರೇಷ್ಮೆ ಬೆಳೆ ಉತ್ತೇಜನ, ರೇಷ್ಮೆಗೆ ಈ ಮಾರುಕಟ್ಟೆ ಜಾರಿಗೆ ತರಲು ತೀರ್ಮಾನ. ಶೇ 50 ರಷ್ಟು ರೈತರು ಇ ಪೇಮೆಂಟ್ ವ್ಯವಸ್ಥೆಗೆ ಅಳವಡಿಸಿಕೊಂಡಿದ್ದಾರೆ.57.ಕೋಟಿ ರೈತರಿಗೆ ನೇರವಾಗಿ ಅವರ ಅಕೌಂಟ್ ಗೆ ಬೆಳೆ ವಿಮೆ ಹಣ ತಲುಪಿಸಲಾಗಿದೆ. ದೇಶ ಇತಿಹಾಸದಲ್ಲಿ 320 ಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದನೆ ಮಾಡಲಾಗಿದೆ. ಫುಡ್ ಪ್ರೊಸೆಸ್ಸಿಂಗ್ ಆಹಾರ ರಫ್ತು ಮಾಡಲು ಕೈಗಾರಿಕಾ ಇಲಾಖೆಯಲ್ಲಿ ಪ್ರತ್ಯೇಕ ವಿಂಗ್ ಮಾಡಲು ಮನವಿ ಮಾಡಿದ್ದೇನೆ. ಅವರೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು.

ಕೃಷಿಗೆ ಸಂಬಂಧಿಸಿದ ಕೆಲಸಗಳನ್ನು ಎನ್ ಆರ್.ಇಜಿ ಮೂಲಕ ಜಾರಿಗೆ ಆದ್ಯತೆ ನೀಡಲಾಗುವುದು. ಎಫ್‌ಪಿಒಗಳ ಮೂಲಕ ಕೃಷಿ ಉತ್ಪನ್ನಗಳ ಮಾರಾಟ ಮಾಡಲು ಕ್ರಮ ಕೈಗೊಳ್ಳಲಾಗುವುದು. ಎಫ್.ಪಿಒ 25 ವಿವಿಧ ರೀತಿಯ ಕ್ರಮಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.ಪ್ರವಾಹ ಪರಿಹಾರವಾಗಿ ಎನ್ ಡಿ ಆರ್ ಎಫ್ ಮೂಲಕ 630 ಕೋಟಿ ಬಿಡುಗಡೆ ಮಾಡಲಾಗಿದೆ. ಕೊರೊನಾದಿಂದ ಎರಡು ವರ್ಷ ಹಿನ್ನಡೆಯಾಗಿದೆ. ಕೊರೊನಾ.ಕಾರಣದಿಂದ ಸ್ವಲ್ಪ ಮುಂದೂಡಿಕೆಯಾಗಿದೆ.ರಸಗೊಬ್ಬರ ಬೆಲೆ ಹೆಚ್ಚಳವಾದರೂ ಕೇಂದ್ರ ಸರ್ಕಾರ ಸಬ್ಸಿಡಿ ಕೊಡುತ್ತಿದೆ. ಕೇಂದ್ರ ಸರ್ಕಾರ ಕೃಷಿಗೆ ಸಂಬಂಧಿಸಿದ ಮೂರು ಬಿಲ್ ಗಳ ಬಗ್ಗೆ ಬಹಳ ಸ್ಪಷ್ಟವಿದೆ. ಮೂವತ್ತು ವರ್ಷಗಳಿಂದ ಅನೇಕ ಸಮಿತಿಗಳು ನೀಡಿರುವ ವರದಿಗಳ ಆಧಾರದಲ್ಲಿ ಕಾಯ್ದೆಗಳನ್ನು ಜಾರಿಗೆ ಜಾರಿಗೆ ತರಲಾಗಿದೆ. ಸ್ವಾಮಿನಾಥನ್ ವರದಿ ಪ್ರಕಾರ ಎಪಿಎಂಸಿಯಲ್ಲಿ ರೈತರಿಗೆ ಅನ್ಯಾಯಗುತ್ತಿದೆ ಎಂದು ಹೇಳಿದ್ದಾರೆ. ರೈತರ ಜೊತೆ ಕೇಂದ್ರ ಸರ್ಕಾರ ಮಾತುಕತೆಗೆ ಸಿದ್ಧವಿದೆ ಎಂದರು.

]]>
https://iambjp.in/archives/449/feed 0
ತಮಿಳುನಾಡಿನಲ್ಲಿ ವಿವಿಧ ಕೃಷಿ ಬೆಳೆಗಳ ವೀಕ್ಷಣೆ ಮಾಡಿದ ಸಚಿವ ಜೆ. ಸಿ. ಮಾಧುಸ್ವಾಮಿ https://iambjp.in/archives/418 https://iambjp.in/archives/418#respond Mon, 23 Aug 2021 11:30:50 +0000 https://iambjp.in/?p=418 ತಮಿಳು ನಾಡು ರಾಜ್ಯ ಪ್ರವಾಸದಲ್ಲಿರುವ ಕಾನೂನು, ಸಂಸದೀಯ ವ್ಯವಹಾರ ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಶ್ರೀ ಜೆ. ಸಿ. ಮಾಧುಸ್ವಾಮಿಯವರು ಇಂದು ಕೊಯಮತ್ತೂರಿನ ತಮಿಳುನಾಡು ಕೃಷಿ ವಿಶ್ವವಿದ್ಯಾನಿಲಯದಲ್ಲಿ ಬೆಳೆದಿರುವ ವಿವಿಧ ಕೃಷಿ ಬೆಳೆಗಳು ಹಾಗೂ ಭತ್ತದ ತಳಿಗಳ ವೀಕ್ಷಣೆ ಮಾಡಿದರು.

ಇದೇ ಸಂದರ್ಭದಲ್ಲಿ ವಿವಿಧ ಭತ್ತದ ತಳಿಗಳನ್ನು ವೀಕ್ಷಿಸಿದ ಮಾನ್ಯ ಸಚಿವರು ಬೆಳೆಗೆ ಅಳವಡಿಸಿರುವ ಡ್ರಿಪ್ ಹಾಗೂ ಸೆನ್ಸರ್ ತಂತ್ರಜ್ಞಾನದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇದಕ್ಕೂ ಮುನ್ನ ತೆಂಗಿನ ಬೆಳೆಗೆ ಸಂಬಂಧಪಟ್ಟಂತೆ, ತೆಂಗಿನ ಕಾಯಿ, ಕೊಬ್ಬರಿ ಸುಳಿಯುವ ಯಂತ್ರಗಳ ಕಾರ್ಖಾನೆಗೆ ಹಾಗೂ ತೆಂಗಿನ ಕಾಯಿ ನಾರಿನ ಕಾರ್ಖಾನೆಗಳಿಗೆ ಸಚಿವರು ಭೇಟಿ ನೀಡಿ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಪ್ರಾಜೆಕ್ಟ್ ಡೈರೆಕ್ಟರ್ ಸುಜಾತಾ ಮೇಡಂ, ತಮಿಳುನಾಡು ಕೃಷಿ ವಿಶ್ವವಿದ್ಯಾನಿಲಯದ ಉಪ ಕುಲಪತಿಗಳು, ರಿಜಿಸ್ಟ್ರಾರ್, ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

]]>
https://iambjp.in/archives/418/feed 0
ಕರ್ನಾಟಕ ರಾಜ್ಯದ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಕೇಂದ್ರ ಸಚಿವರಿಗೆ‌ ಬಿ. ಸಿ. ಪಾಟೀಲ್ ಮನವಿ https://iambjp.in/archives/153 https://iambjp.in/archives/153#respond Tue, 10 Aug 2021 11:18:18 +0000 https://iambjp.in/?p=153 ನವದೆಹಲಿ/ಬೆಂಗಳೂರು : ಕೃಷಿ ಸಚಿವರಾದ ಬಿ.ಸಿ.ಪಾಟೀಲರು ನವದೆಹಲಿಯಲ್ಲಿ ಮಂಗಳವಾರ ಕೇಂದ್ರದ ರಾಜ್ಯ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಕೇಂದ್ರದ ರಾಜ್ಯ ರಾಸಾಯನಿಕ ಸಚಿವ ಭಗವಂತ್ ಖೂಬಾ ಅವರನ್ನು ಭೇಟಿ ಮಾಡಿ, ಶುಭಕೋರಿ ರಾಜ್ಯದ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಮಾಡಿದರು.

ಭೇಟಿ ವೇಳೆ ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ, ಖಾರಿಫ್‌ನಲ್ಲಿ ನಿರೀಕ್ಷೆ ಮೀರಿ ಸುಮಾರು 77 ಲಕ್ಷ ಹೆಕ್ಟೇರ್ ದಾಖಲೆಯ ಪ್ರಮಾಣದಷ್ಟು ಬಿತ್ತನೆ ಆಗಿತ್ತು. ಈ ಬಾರಿಯೂ ಕೂಡ ಬೇಗನೇ ಬಿತ್ತನೆಯಾಗಿದ್ದು,ಕೃಷಿ ಚಟುವಟಿಕೆ ಚುರುಕುಪಡೆದಿದೆ. ಆದ್ದರಿಂದ ಫಸಲು ಬರಲು ಯಾವುದೇ ರೀತಿಯ ಕೊರತೆಯಾಗದಂತೆ ಯೂರಿಯಾ ಸೇರಿದಂತೆ ಇತರೆ ರಸಗೊಬ್ಬರಗಳನ್ನು ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ಮೇರೆಗೆ ಪೂರೈಸುವಂತೆ ಕೇಂದ್ರ ರಾಸಾಯನಿಕ ಸಚಿವರಿಗೆ ಮನವಿ ಮಾಡಿದರು.

ಪ್ರಸಕ್ತ ವರ್ಷದಲ್ಲಿ, ಬಿತ್ತನೆಯ ಪ್ರದೇಶದಲ್ಲಿ ದಾಖಲೆಯ ಹೆಚ್ಚಳ ಮತ್ತು ಸಾಮಾನ್ಯ ಮಳೆಗಿಂತ ಅಧಿಕ ಮಳೆಯಿಂದಾಗಿ, ರಾಜ್ಯಗಳ ಯೂರಿಯಾದ ಅವಶ್ಯಕತೆಯೂ ಅನುಗುಣವಾಗಿ ಹೆಚ್ಚಾಗಿದೆ. ರಾಜ್ಯದಲ್ಲಿ ಸದ್ಯ 0.32 ಲಕ್ಷ ಟನ್ ಯೂರಿಯ ಬಫರ್ ಸ್ಟಾಕ್ ಇದೆ. ಈ ವರ್ಷದಲ್ಲಿ 07 ನೇ ಆಗಸ್ಟ್, 2021 ರವರೆಗೆ ಯೂರಿಯಾ ಪೂರೈಕೆಯು 6.18 ಲಕ್ಷ ಮೆಟ್ರಿಕ್ ಟನ್ ಆಗಿದೆ. ಈ ಬಾರಿಯೂ ಸಹ ಯಾವುದೇ ರೀತಿಯ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಅಲ್ಲದೇ ಕರ್ನಾಟಕ ರಾಜ್ಯದಲ್ಲಿ ಎಣ್ಣೆಕಾಳು ಬೆಳೆಗಳಿಗೆ ಉತ್ತೇಜನ ಮಾಡಲು ಹೆಚ್ಚಿನ ಕಾರ್ಯಕ್ರಮಗಳನ್ನು ನೀಡಬೇಕು.ಹಾಗೂ ಕೃಷಿ ಉತ್ಪನ್ನಗಳ ಹೆಚ್ಚಳಕ್ಕೆ ಹೆಚ್ಚು ಉತ್ತೇಜನ ನೀಡಬೇಕೆಂದು ಕೇಂದ್ರದ ಉಭಯ ಸಚಿವರಲ್ಲಿ ಬಿ.ಸಿ.ಪಾಟೀಲರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ ಕತ್ರಿ, ಅಪರ ಕೃಷಿ ನಿರ್ದೇಶಕರು (ಸಾವಯವ ಕೃಷಿ)ವೆಂಟಕರಮಣರೆಡ್ಡಿ ಜೊತೆಗಿದ್ದರು.

]]>
https://iambjp.in/archives/153/feed 0