og
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121wp-post-author
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121ನಂತರ ಮಾತನಾಡಿದ ಸಂಸದರು, ದೀನ್ ದಯಾಳ್ ಉಪಾಧ್ಯಾಯರ ಅಂತ್ಯೋದಯದ ಪರಿಕಲ್ಪನೆಯಂತೆ ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ತಲುಪುವಂತಹ ದೂರದೃಷ್ಟಿಯ ಯೋಜನೆಯನ್ನು ಜಾರಿಗೆ ತಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಅನಂತ ಧನ್ಯವಾದಗಳು ಎಂದರು.
]]>
ಬೈಂದೂರು : ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ ಪ್ರತಿಯೊಂದು ಕೆಲಸ ಕಾರ್ಯಗಳಿಗೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ಕಾರ್ಮಿಕರೇ ಜಾಸ್ತಿ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಯಿಂದ ಬರುವ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಉಡುಪಿ ಜಿಲ್ಲೆಯು ಕಳೆದ ಹಲವು ವರ್ಷಗಳಿಂದ ವಲಸೆ ಕಾರ್ಮಿಕರಿಗೆ ಉದ್ಯೋಗದಾತ ಜಿಲ್ಲೆಯಾಗಿ ಪರಿಣಮಿಸಿದ್ದಾರೂ ಸರಕಾರ ವಲಸೆ ಕಾರ್ಮಿಕರಿಗೆ ಕನಿಷ್ಠ ಬೇಕಾಗುವ ವಸತಿ, ನೀರು, ಶೌಚಾಲಯದ ವ್ಯವಸ್ಥೆ ಮಾಡುವಲ್ಲಿ ಸಂಪೂರ್ಣ ಸಫಲವಾಗಿಲ್ಲ.
ಜಿಲ್ಲೆಯಲ್ಲಿ ಪ್ರಸ್ತುತ ಕಟ್ಟಡ ನಿರ್ಮಾಣ,ಗಾರೆ ಕೆಲಸ, ರಸ್ತೆ ಕಾಮಗಾರಿ, ಮನೆಗೆಲಸ ಅಷ್ಟೇ ಅಲ್ಲದೆ ಕೃಷಿ ಕೆಲಸಗಳಿಗೂ ವಲಸೆ ಕಾರ್ಮಿಕರನ್ನು ಹೆಚ್ಚಾಗಿ ಅವಲಂಬಿಸಲಾಗುತ್ತಿದೆ. ಬಾಗಲಕೋಟೆ, ಬಳ್ಳಾರಿ, ರಾಯಚೂರು, ಹಾವೇರಿ, ವಿಜಯ ಪುರ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಹಾಗೂ ಹೊರ ರಾಜ್ಯಗಳ ವಲಸೆ ಕಾರ್ಮಿಕರು ಹೊಟ್ಟೆ ಪಾಡಿಗಾಗಿ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದರೂ ಅವರಿಗೆ ಸಮರ್ಪಕವಾದ ಸೂರಿಲ್ಲ. ಇದ್ದ ಕಡೆ ವ್ಯವಸ್ಥೆ ಅವ್ಯವಸ್ಥೆ ಯಿಂದ ಕೂಡಿದೆ. ಜಿಲ್ಲೆಯ ಹಲವು ಕಡೆ ವಲಸೆ ಕಾರ್ಮಿಕರಿಗೆ ಮೂಲ ಸೌಕರ್ಯವಿಲ್ಲದೆ ಶಾಲಾ ಮೈದಾನದಲ್ಲಿ ಮಲಗುವ ಅಥವಾ ದುಬಾರಿ ಮನೆ ಬಾಡಿಗೆ ನೀಡಲಾಗದ ಪರಿಸ್ಥಿಯಲ್ಲಿ ಇದ್ದಾರೆ ಹಾಗಾಗಿ ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರಿಗೆ ಜಿಲ್ಲಾಡಳಿತವೇ ವಸತಿ ಸಮುಚ್ಚಯದ ವ್ಯವಸ್ಥೆ ಕಲ್ಪಿಸಬೇಕು. ಇದರಿಂದ ವಲಸೆ ಕಾರ್ಮಿಕರು ಇರುವ ಪರಿಸರದಲ್ಲಿ ಉಂಟಾಗುವ ಅನೈರ್ಮಲ್ಯತೆಯನ್ನು ತಡೆಗಟ್ಟ ಬಹುದು.
ಬೈಂದೂರು ಹಾಗೂ ಕುಂದಾಪುರ ಭಾಗದಲ್ಲಿ ನೂರಾರು ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ಇರುವುದರಿಂದ ಅವರಿಗೆ ವಸತಿ ಸಮುಚ್ಚಯ ಮಾದರಿಯಲ್ಲಿ ತಾತ್ಕಾಲಿಕವಾಗಿ ಕಡಿಮೆ ಬಾಡಿಗೆಯಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲು ಸೂಕ್ತ ಕ್ರಮ ಹಾಗೂ ಪ್ರಸ್ತಾವನೆ ತಯಾರಿಸಲು ಈಗಾಗಲೇ ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸರಕಾರದ ಹಂತದಲ್ಲಿ ಸಂಬಂಧ ಪಟ್ಟ ಸಚಿವರ ಗಮನಕ್ಕೂ ಈ ವಿಚಾರವನ್ನು ಪತ್ರ ಮುಖೇನ ತರಲಾಗಿದೆ ಹಾಗೂ ಉಡುಪಿ ಜಿಲ್ಲಾಡಳಿತ ಈ ಉದ್ದೇಶಕ್ಕೆ ಅಗತ್ಯ ವಾಗಿ ಬೇಕಾಗಿರುವ ಕನಿಷ್ಠ ನಿವೇಶನ ವನ್ನು ಒದಗಿಸಬೇಕು ಪ್ರಕಟಣೆಯಲ್ಲಿ ಶಾಸಕರು ತಿಳಿಸಿದ್ದಾರೆ..
]]>ತಮ್ಮ ಫೇಸ್ ಬುಕ್ ಖಾತೆಯಲ್ಲಿ “ಈ ಆರ್ಥಿಕ ವರ್ಷದಿಂದ ಹಿಂದುಗಳು ಕಟ್ಟಿರುವ ತೆರಿಗೆ ಹಣ ಹಿಂದುಗಳ ಅಭಿವೃದ್ಧಿಗೆ ಮಾತ್ರ ಉಪಯೋಗ ಆಗಬೇಕು. ಹಿಂದುಗಳು ಕಟ್ಟಿದ ತೆರಿಗೆ ಹಣ ಬೇರೆ ಧರ್ಮದ ಜನರಿಗೆ ಸೇರುವುದು ಹಿಂದುಗಳಿಗೆ ಆಗುವ ಅನ್ಯಾಯ” ಎಂಬುದಾಗಿ ಬರೆದುಕೊಂಡಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ದಕ್ಷಿಣ ಭಾರತ ಉತ್ತರ ಭಾರತ ಎಂದು ಜನರ ತೆರಿಗೆಯ ದುಡ್ಡನ್ನು ವಿಭಜನೆ ಮಾಡುತ್ತಿದ್ದು ಇದಕ್ಕೆ ದೇಶದೆಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಈ ನಡೆಯು, ಹಲವಾರು ಕಂದಕಗಳನ್ನು ಸೃಷ್ಟಿ ಮಾಡಿದೆ. ಹಿಂದೂಗಳ ಹಣವನ್ನು ಹಿಂದುಗಳಿಗೆ ಉಪಯೋಗಿಸಿ ಎಂದು ಪ್ರತಿಪಾದಿಸುವ ಮೂಲಕ ಶಾಸಕ ಹರೀಶ್ ಪೂಂಜಾ ಅವರು ಕಾಂಗ್ರೆಸ್ ಸರ್ಕಾರದ ನಡೆಗೆ ಸಡ್ಡು ಹೊಡೆದಿದ್ದಾರೆ.
]]>ಇದಕ್ಕೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಸಿದ್ದರಾಮಯ್ಯ ಹೇಳಿಕೆ ಮತ್ತು ಆರ್ಎಸ್ಎಸ್ ಸರಸಂಘಚಾಲಕ ಮೋಹನ್ ಭಗವತ್ ಅವರ ಹೇಳಿಕೆಯ ಸ್ಕ್ರೀನ್ಶಾಟ್ ಹಾಕಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸಿದ್ದರಾಮಯ್ಯಗೆ ಕೌಂಟರ್ ನೀಡಿದ್ದಾರೆ.
Agenda Vs Fact pic.twitter.com/fAZOujR7oG
— Gurme Suresh Shetty (Modi Ka Parivar) (@GurmeSuresh) January 29, 2024
ಆರ್ಎಸ್ಎಸ್ ಮೀಸಲಾತಿ ವಿರೋಧಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಯಾಗಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಗವತ್ ಅವರ “ಸಮಾಜದಲ್ಲಿ ತಾರತಮ್ಯ ಇರುವವರೆಗೆ ಮೀಸಲಾತಿ ಮುಂದುವರೆಯಲಿ” ಎಂಬ ಹೇಳಿಕೆಯ ವರದಿಯನ್ನು ಹಾಕಿ ಕುಟುಕಿದ್ದಾರೆ.
ಮೀಸಲಾತಿ ವಿಚಾರವಾಗಿ ಮೋಹನ್ ಭಾಗವತ್ ಅವರು “ಸಾಮಾಜಿಕ ವ್ಯವಸ್ಥೆಯಲ್ಲಿ ನಮ್ಮದೇ ಸಹಜೀವಿಗಳನ್ನ ಹಿಂದೆ ಇರಿಸಿದ್ದೇವೆ. ನಾವು ಅವರ ಬಗ್ಗೆ ಕಾಳಜಿಯನ್ನೇ ವಹಿಸುತ್ತಿಲ್ಲ. 2000 ವರ್ಷಗಳ ವರೆಗೆ ಈ ಪ್ರಕ್ರಿಯೆ ಹೀಗೆ ಮುಂದುವರಿದಿದೆ. ಹಾಗಾಗಿ ಸಮಾಜದಲ್ಲಿ ಅಸಮಾನತೆಯನ್ನು ತೊಲಗಿಸುವವರೆಗೆ, ಅಸಮಾನತೆಗೆ ಒಳಗಾದವರ ಪುನಶ್ಚೇತನಕ್ಕಾಗಿ ವಿಶೇಷ ಪರಿಹಾರ ನೀಡಬೇಕು. ಅವುಗಳಲ್ಲಿ ಮೀಸಲಾತಿ ಕೂಡ ಒಂದು. ಆದ್ದರಿಂದ ಸಮಾಜದಲ್ಲಿ ತಾರತಮ್ಯ ಇರುವವರೆಗೆ ಮೀಸಲಾತಿ ಅನ್ನೋದು ಮುಂದುವರಿಯಬೇಕು” ಎಂದು ಈ ಹಿಂದೆ ಒತ್ತಾಯಿಸಿದ್ದರು.
]]>ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ತಮ್ಮ ಭಾಷಣದಲ್ಲಿ ರಾಜ್ಯ ಕಾರ್ಯದರ್ಶಿ ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೆಸರೆತ್ತಿದ್ದಾಗಲೆಲ್ಲಾ ಕಾರ್ಯಕರ್ತರು ಜೋರಾದ ಕರತಾಡನ ಮತ್ತು ಜೋರಾದ ಧ್ವನಿಯಲ್ಲಿ ಘೋಷಣೆ ಕೂಗುತ್ತಿದ್ದುದು ಗಮನ ಸೆಳೆಯುತ್ತಿತ್ತು.
ಜಿಲ್ಲಾಧ್ಯಕ್ಷ ಜವಾಬ್ದಾರಿ ಸ್ವೀಕರಿಸಿದ ಸತೀಶ್ ಕುಂಪಲ ತಮ್ಮ ಮಾತಿನ ಮಧ್ಯದಲ್ಲಿ ಕ್ಯಾಪ್ಟನ್ ಹೆಸರು ಪ್ರಸ್ತಾಪಿಸಿದಾಗ ಸಭಾಂಗಣದಲ್ಲಿ ನೆರೆದಿದ್ದವರು ಜೋರಾಗಿಯೇ ಜಯಕಾರದ ಘೋಷಣೆ ಕೂಗಿದರು. ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ತಮ್ಮ ಭಾಷಣದಲ್ಲಿ ಬ್ರಿಜೇಶ್ ಹೆಸರು ಪ್ರಸ್ತಾಪಿಸಿದಾಗ ಇದು ಪುನಾರಾವರ್ತನೆಯಾಯಿತು.
ರಾಜ್ಯ ನಾಯಕರ ಮುಂದೆ, ಹಾಲಿ ಸಂಸದರು ಮುಂದೆ ನೆರೆದಿದ್ದವರು ಕ್ಯಾಪ್ಟನ್ ಪರವಾಗಿ ಜಯಕಾರ ಹಾಕುವ ಮೂಲಕ ಪರೋಕ್ಷವಾಗಿ ತಮ್ಮ ಮುಂದಿನ ಲೋಕಸಭಾ ಅಭ್ಯರ್ಥಿ ‘ಇವರೇ ಆಗಲಿ’ ಎಂಬುದನ್ನು ಸೂಚ್ಯವಾಗಿ ತಿಳಿಸುತ್ತಿದ್ದರು.
ಹಾಗೆ ನೋಡಿದರೆ ಪದಗ್ರಹಣ ಸಮಾರಂಭದಲ್ಲಿ ನೆರೆದಿದ್ದವರು ಕ್ಯಾಪ್ಟನ್ ಅಭಿಮಾನಿ ಬಳಗದವರೂ ಅಲ್ಲ, ನಳಿನ್ ವಿರೋಧಿಗಳೂ ಅಲ್ಲ, ಅಲ್ಲಿದ್ದಿದ್ದು ಬಹುತೇಕ ಜಿಲ್ಲಾ, ಮಂಡಲ ಮತ್ತು ತಳಮಟ್ಟದ ಬಿಜೆಪಿ ಪದಾಧಿಕಾರಿಗಳೇ. ಇವರುಗಳೇ ಮುಂದಿನ ಲೋಕಸಭಾ ಚುನಾವಣೆಗೆ ಅಭ್ಯರ್ಥಿಯ ಬದಲಾವಣೆಗೆ ಒಲವು ತೋರಿದ್ದಾರೆ ಎನ್ನುವುದು ಸುಸ್ಪಷ್ಟ.
]]>ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡದ ನೂತನ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ಪದಗ್ರಹಣ ಸಮಾರಂಭದಲ್ಲಿ ಉಪಸ್ಥಿತರಿದ್ದು ಅವರು ಮಾತನಾಡಿದರು. ರಾಜ್ಯದಲ್ಲಿ ಎಲ್ಲ 28 ಕ್ಷೇತ್ರ ಗೆಲ್ಲಲು ನಾವು ಶ್ರಮಿಸಬೇಕು. ಆ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡೋಣ ಎಂದು ಮನವಿ ಮಾಡಿದರು.
ಮತದಾರರು ಚುನಾವಣೆ ಬಗ್ಗೆ ಉತ್ಸಾಹದಿಂದಿದ್ದಾರೆ. ಕಾರ್ಯಕರ್ತರು ಕೂಡ ಮೋದಿ ಮತ್ತೊಮ್ಮೆ ಎಂಬ ಆಶಯದೊಂದಿಗೆ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇಡೀ ದೇಶದಲ್ಲಿ ಲೋಕಸಭಾ ಚುನಾವಣೆಯನ್ನು ಉತ್ಸಾಹದಿಂದ ಎದುರು ನೋಡುತ್ತಿದ್ದಾರೆ. ದೇಶ ಮಾತ್ರವಲ್ಲದೆ ಹೊರದೇಶಗಳಲ್ಲೂ ಐದಾರು ತಿಂಗಳಿನಿಂದ ಫಲಿತಾಂಶದ ಚರ್ಚೆ ನಡೆದಿದೆ ಎಂದು ವಿಶ್ಲೇಷಿಸಿದರು. ರಾಜ್ಯ ಕಾರ್ಯಕಾರಿಣಿ ಯಶಸ್ಸಿನ ಕುರಿತು ಅವರು ಮೆಚ್ಚುಗೆ ಸೂಚಿಸಿದರು.
ಸ್ವಾತಂತ್ರ್ಯ ಬಂದ ಬಳಿಕ ಮೊದಲ ಬಾರಿಗೆ ಭಾರತಕ್ಕೆ ಹೆಮ್ಮೆಯ ಸ್ಥಾನ ಲಭಿಸಿದೆ. ಜಗತ್ತನ್ನು ಮುನ್ನಡೆಸುವ ಶಕ್ತಿ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದೆ ಎಂಬ ಮಾತು ಎಲ್ಲೆಡೆ ಕೇಳಿಸುತ್ತಿದೆ. ಅಂದು ಸ್ವಾಮಿ ವಿವೇಕಾನಂದರು ಭಾರತ ದೇಶದ ಕುರಿತು ಕಂಡ ಕನಸನ್ನು ಮೋದಿಜೀ ಅವರು ನನಸಾಗಿ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ವಿಧಾನಸಭಾ ಚುನಾವಣೆಯಲ್ಲಿ ನಮ್ಮ ತಪ್ಪಿನಿಂದಲೋ, ಜನರ ಕಣ್ಣಿಗೆ ಮಣ್ಣೆರಚಿದ ಪರಿಣಾಮವೋ ಎಂಬಂತೆ ಕಾಂಗ್ರೆಸ್ ಗೆಲುವು ಸಾಧಿಸಿತು. ಗ್ಯಾರಂಟಿ ಮೂಲಕ ಇತರ ರಾಜ್ಯಗಳಲ್ಲೂ ಗೆಲ್ಲುವ ಭ್ರಮೆ ಕಾಂಗ್ರೆಸ್ಸಿಗರದಾಗಿತ್ತು. ಪಂಚರಾಜ್ಯಗಳ ಚುನಾವಣೆಯಲ್ಲಿ ಇಲ್ಲಿನ ಮುಖಂಡರು ಗ್ಯಾರಂಟಿ ಬಗ್ಗೆ ಬಣ್ಣಬಣ್ಣದ ಮಾತನಾಡಿದರು. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಡಗಳ ಜನರು ಮೋದಿಜೀ ಗ್ಯಾರಂಟಿಯನ್ನು ಒಪ್ಪಿಕೊಂಡಿದ್ದಾರೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತಂದಿದ್ದಾರೆ. ಇದರ ಪರಿಣಾಮವಾಗಿ ಇಂಡಿ ಒಕ್ಕೂಟದ ಒಂದೊಂದೇ ದಳಗಳು ಉದುರಿಬೀಳುತ್ತಿವೆ. ಮುಂದಿನ ಚುನಾವಣೆ ವೇಳೆಗೆ ಕಾಂಗ್ರೆಸ್ನ ಎಷ್ಟು ಜನರು ಖಾಲಿ ಮಾಡುತ್ತಾರೋ ಗೊತ್ತಿಲ್ಲ ಎಂದು ತಿಳಿಸಿದರು.
ಇದೊಂದು ದೊಡ್ಡ ಜವಾಬ್ದಾರಿ. ಇದನ್ನು ಜವಾಬ್ದಾರಿಯುತವಾಗಿ ನಿರ್ವಹಿಸು. 28ಕ್ಕೆ 28 ಲೋಕಸಭಾ ಕ್ಷೇತ್ರ ಗೆಲ್ಲುವಂತೆ ಯಾವುದೇ ವಿಶ್ರಾಂತಿಯಿಲ್ಲದೆ ದುಡಿಯಬೇಕು ಎಂದು ತಂದೆಯವರಾದ ಯಡಿಯೂರಪ್ಪ ಅವರು ತಿಳಿಸಿದ್ದರು ಎಂದು ನೆನಪಿಸಿದ ಅವರು, ಯಾವ ಕ್ಷಣದಲ್ಲಾದರೂ ಲೋಕಸಭಾ ಚುನಾವಣೆ ದಿನಾಂಕ ಪ್ರಕಟ ಆಗಬಹುದು. ಮುಂದಿನ ಲೋಕಸಭಾ ಚುನಾವಣೆ ಭಾರತದ ಭವಿಷ್ಯ ನಿರ್ಧರಿಸುವ ಚುನಾವಣೆ. ಆದ್ದರಿಂದ ಪ್ರತಿಯೊಬ್ಬ ಕಾರ್ಯಕರ್ತರು ಜೊತೆಗೂಡಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.
ವಿಪಕ್ಷವನ್ನು ಹಗುರವಾಗಿ ತೆಗೆದುಕೊಳ್ಳದಿರಿ. ಕಾಂಗ್ರೆಸ್ಸಿಗರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರಿನಲ್ಲಿ ಕೆಲವರ ಮನೆಯಲ್ಲಿ 150 ಕೋಟಿ ಸಿಕ್ಕಿದೆ. ಕಾಂಗ್ರೆಸ್ನವರು ಸಿಕ್ಕಿದ್ದು ಕಪ್ಪು ಹಣ ಎನ್ನಲಿಲ್ಲ. ಲೋಕಸಭಾ ಚುನಾವಣೆ ಮುಗಿದ ಬಳಿಕ ಸಚಿವರನ್ನು ನೇಮಿಸುವುದಾದರೆ ಸ್ಕ್ಯಾರ್ ಫೀಟ್ ಸಚಿವ ಎಂಬ ಖಾತೆ ಕೊಟ್ಟರೂ ಅಚ್ಚರಿ ಇಲ್ಲ ಎಂದು ವ್ಯಂಗ್ಯವಾಗಿ ತಿಳಿಸಿದರು.
ಬಾಬಾ ಸಾಹೇಬ ಡಾ.ಅಂಬೇಡ್ಕರರನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಿದ ಪಕ್ಷ ಕಾಂಗ್ರೆಸ್. ಬಾಬಾ ಸಾಹೇಬರಿಗೆ ನಿರಂತರ ಅವಮಾನ ಮಾಡಿದ್ದಲ್ಲದೆ, ಅವರ ಶವಸಂಸ್ಕಾರಕ್ಕೂ ಜಾಗ ಕೊಡಲಿಲ್ಲ. ಆದರೆ, ಮೋದಿಜೀ ಅವರು, ಅಂಬೇಡ್ಕರರ ಜೀವಿಸಿದ್ದ 5 ಕ್ಷೇತ್ರಗಳನ್ನು ಪಂಚತೀರ್ಥ ಕ್ಷೇತ್ರಗಳನ್ನಾಗಿ ಅಭಿವೃದ್ಧಿಪಡಿಸುತ್ತಿದ್ದಾರೆ. ಕಾಂಗ್ರೆಸ್ಸಿನವರಿಗೆ ನಮ್ಮ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದು ತಿಳಿಸಿದರು.
ಸಂಕಷ್ಟದಲ್ಲಿರುವ ರೈತರಿಗೆ ಸರಕಾರ ಪರಿಹಾರ ಕೊಡುತ್ತಿಲ್ಲ ಎಂದು ಟೀಕಿಸಿದ ಅವರು, ಯಡಿಯೂರಪ್ಪ ಅವರ ನೇತೃತ್ವದ ಸರಕಾರ ನೆರೆ ಸಂದರ್ಭದಲ್ಲಿ ನಿಗದಿತ ಮೊತ್ತಕ್ಕಿಂತ ಹೆಚ್ಚು ಹಣ ನೀಡಿದೆ. ಕಾಂಗ್ರೆಸ್ ಸರಕಾರವು ಬಡವರ ಕುರಿತು ಮಾತನಾಡುವ ನೈತಿಕತೆ ಉಳಿಸಿಕೊಂಡಿಲ್ಲ. ರಾಜ್ಯದಲ್ಲಿರುವ ಸರಕಾರ ಬಡವರ, ರೈತರ ಮತ್ತು ಎಲ್ಲ ವರ್ಗದ ಜನರನ್ನು ಕಡೆಗಣಿಸಿದೆ ಎಂದು ತಿಳಿಸಿದರು.
ಸತೀಶ್ ಕುಂಪಲ ಅವರು ಸಜ್ಜನ ರಾಜಕಾರಣಿ. ಅವರ ಆಯ್ಕೆ ನನಗೂ ಸಂತಸ ತಂದಿದೆ ಎಂದು ತಿಳಿಸಿದರು. ಯಡಿಯೂರಪ್ಪ ಅವರಿಗೂ ದಕ್ಷಿಣ ಕನ್ನಡಕ್ಕೂ ಅವಿನಾಭಾವ ಸಂಬಂಧವಿದೆ. ದಕ್ಷಿಣ ಕನ್ನಡಕ್ಕೆ ಬಂದರೆ ನೆಮ್ಮದಿ ಸಿಗುತ್ತದೆ. ದಕ್ಷಿಣ ಕನ್ನಡ ಎಂದರೆ ದೈವಿಭಕ್ತಿ ಇರುವ ಜನರು ಇಲ್ಲಿ ಸಿಗುತ್ತಾರೆ. ಬುದ್ಧಿವಂತರ ಜಿಲ್ಲೆ ಇದು ಎಂದು ಶ್ಲಾಘಿಸಿದರು.
ನಿಕಟಪೂರ್ವ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ಮಾತನಾಡಿ, ಜಿಲ್ಲಾ ಪಂಚಾಯತ್ ಸದಸ್ಯ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷನಾಗಿ ಮಾತ್ರವಲ್ಲದೆ ಹಲವು ಜವಾಬ್ದಾರಿ ವಹಿಸಿ ಇಡೀ ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಸತೀಶ್ ಕುಂಪಲ ಅವರು ಕೆಲಸ ಮಾಡಿದ್ದಾರೆ ಎಂದರು. ಅಲ್ಲದೆ ಅವರನ್ನು ಅಭಿನಂದಿಸಿದರು.
ಮುಂದಿನ ಎಲ್ಲ ಚುನಾವಣೆಗಳಲ್ಲಿ ಅವರು ಬಿಜೆಪಿಯ ವಿಜಯಯಾತ್ರೆ ನೇತೃತ್ವವನ್ನು ವಹಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಿಕಟಪೂರ್ವ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ಅವರ ತಂಡವು ಎಲ್ಲ ಚುನಾವಣೆಗಳಲ್ಲಿ ಗೆಲುವನ್ನು ತಂದುಕೊಟ್ಟಿದೆ ಎಂದು ಅಭಿನಂದನೆ ಸಲ್ಲಿಸಿದರು.
ಇಂಡಿ ಒಕ್ಕೂಟ ಚೂರುಚೂರಾಗುತ್ತಿದೆ. ಬಿಜೆಪಿ ನೇತೃತ್ವದ ಎನ್ಡಿಎ ಅಭೂತಪೂರ್ವ ಸಾಧನೆ ಮಾಡುತ್ತಿದೆ. ಬಿಹಾರ ರಾಜ್ಯ ಮತ್ತೆ ಬಿಜೆಪಿ ತೆಕ್ಕೆಗೆ ಬಂದಿದೆ. ದೇಶಾದ್ಯಂತ ಮೋದಿ ಮತ್ತು ರಾಮನ ಹೆಸರು ಕೇಳುತ್ತಿದೆ ಎಂದು ನುಡಿದರು. ಮುಂದಿನ ಚುನಾವಣೆಯಲ್ಲಿ ಮೋದಿಜೀ ಅವರು ಮತ್ತೆ ಪ್ರಧಾನಿ ಆಗುವುದು ಶತಸ್ಸಿದ್ಧ ಎಂದು ತಿಳಿಸಿದರು.
ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಸಿದ್ದರಾಮಯ್ಯನವರಿಗೆ ಹೊಸದಾಗಿ ರಾಮನ ಕುರಿತು ಪ್ರೀತಿ ಬಂದಿದೆ. ತಮ್ಮ ಹೆಸರಿನಲ್ಲೇ ರಾಮ ಇರುವುದಾಗಿ ಹೇಳುತ್ತಿದ್ದಾರೆ. ವೀರಪ್ಪನ್ ವೀರರ ಅಪ್ಪ. ವೀರರ ಕೆಲಸ ಮಾಡಿದ್ದಾನಾ ಎಂದು ಪ್ರಶ್ನಿಸಿದರು. ನಿಮ್ಮ ಹೆಸರಿನಲ್ಲಿ ರಾಮ ಇದ್ದರೆ ಸಾಕಾಗದು. ನಿಮ್ಮ ಹೃದಯದಲ್ಲಿ ಟಿಪ್ಪು ಟಿಪ್ಪು ಎನ್ನುತ್ತಿದೆ. ಮೌಲ್ವಿಗಳ ಹೆಸರಿದೆ; ಬೇರೇನೂ ಇಲ್ಲ ಎಂದು ತಿಳಿಸಿದರು.
ಕಾಂಗ್ರೆಸ್ ಎಂದರೆ ಕೋಮುವಾದ. ಕೋಮುವಾದ ಎಂದರೆ ಕಾಂಗ್ರೆಸ್ ಎಂಬ ಸ್ಥಿತಿ ಇದೆ ಎಂದು ತಿಳಿಸಿದರು. ಇಂಡಿ ಒಕ್ಕೂಟ ಒಡೆದ ಮನೆಯಾಗಿದೆ. ರಾಹುಲ್ ಗಾಂಧಿಯವರೇ ಬಿಜೆಪಿಯ ಸ್ಟಾರ್ ಕ್ಯಾಂಪೇನರ್ ಎಂದು ತಿಳಿಸಿದರು. ರಾಹುಲ್ ಗಾಂಧಿಯವರು ಎಲ್ಲೆಲ್ಲಿ ಕಾಲಿಡುತ್ತಾರೋ ಅಲ್ಲೆಲ್ಲ ಬಿಜೆಪಿಗೆ ಪ್ರಯೋಜನ ಸಿಗುತ್ತದೆ ಎಂದು ವಿಶ್ಲೇಷಿಸಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, ಮೋದಿಜೀ ಅವರ ಸರಕಾರ ಮನೆಮನೆಗೆ ಅಡುಗೆ ಅನಿಲ ಸಿಲಿಂಡರ್ ತಲುಪಿಸಿದೆ. ಶೌಚಾಲಯಗಳನ್ನು ಕಟ್ಟಿಸಿಕೊಟ್ಟಿದೆ. ಭಾರತ ಮಹತ್ತರವಾಗಿ ಬದಲಾಗಿದೆ. ಭಾರತ ಸಮೃದ್ಧವಾಗುತ್ತಿದ್ದರೆ, ಸಿದ್ದರಾಮಯ್ಯನವರ ಸರಕಾರ ದುಸ್ಥಿತಿಗೆ ಇಳಿದಿದೆ ಎಂದರಲ್ಲದೆ, ಕಾಂತರಾಜ್ ವರದಿ ಅನುಷ್ಠಾನ ಮಾಡುವುದಾಗಿ ಹೇಳಲು ನೀವು ಸರಕಾರದ ವತಿಯಿಂದ ಸಮಾವೇಶ ಮಾಡಬೇಕಾಯಿತೇ ಎಂದು ಪ್ರಶ್ನಿಸಿದರು. ಇದೊಂದು ದುರಂತ ಎಂದು ತಿಳಿಸಿದರು. ಬಡವರಿಗೆ ವಂಚಿಸಲು ಆಯೋಗದ ಅವಧಿ ವಿಸ್ತರಿಸಿದ್ದಾರೆ ಎಂದು ಟೀಕಿಸಿದರು.
ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ನಾಯಕನಾಗಿದ್ದಾರೆ. ಹಿಂದೆ ಅವರು ಅಹಿಂದ ನಾಯಕನಾಗಿದ್ದರು. ಪರಿಶಿಷ್ಟರಿಗಾಗಿ ಮೀಸಲಿಟ್ಟ 11 ಸಾವಿರ ಕೋಟಿಯನ್ನು ಗ್ಯಾರಂಟಿಗೆ ವಿನಿಯೋಗ ಮಾಡಿದಿರಲ್ಲವೇ? ಯಾವ ನ್ಯಾಯ ನಿಮ್ಮದು ಎಂದು ಕೇಳಿದರು. ಇದೊಂದು ಕೆಟ್ಟ ಸರಕಾರ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಗೌರವಾನ್ವಿತ ದ್ರೌಪದಿ ಮುರ್ಮು ಅವರಂಥ ಬುಡಕಟ್ಟು ಜನಾಂಗದ ಮಹಿಳೆಯನ್ನು ಏಕವಚನದಲ್ಲಿ ಕರೆದಂಥ ರಾಜಕಾರಣಿ ಸಿದ್ದರಾಮಯ್ಯ ಅವರಲ್ಲವೇನು ಎಂದು ಟೀಕಿಸಿದರು.
ನೂತನ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಮಾತನಾಡಿ, ಸುದರ್ಶನ ಮೂಡಬಿದಿರೆ ಅವರ ತಂಡ ಅತ್ಯುತ್ತಮವಾಗಿ ಕೆಲಸ ಮಾಡಿದೆ ಎಂದು ಮೆಚ್ಚುಗೆ ಸೂಚಿಸಿದರು. ನಿರಂತರವಾಗಿ ಕಾರ್ಯದರ್ಶಿಯಾಗಿಯೇ ದುಡಿದಿದ್ದು, ಈ ಬಾರಿ ಜಿಲ್ಲಾಧ್ಯಕ್ಷನಾಗಿದ್ದೇನೆ. ಎಲ್ಲರ ಸಹಕಾರ ಇರಲಿ ಎಂದು ವಿನಂತಿಸಿದರು. ನಾನು ಕಾರ್ಯಕರ್ತರ ಜೊತೆ ಕಾರ್ಯಕರ್ತನಂತೆ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್, ಗಡೀಪಾರಿನಂಥ ಕಾಂಗ್ರೆಸ್ನ ದುಷ್ಟ ಮಾನಸಿಕತೆಯ ಕೆಲಸಗಳು ಈ ಜಿಲ್ಲೆಯಲ್ಲಿ ನಡೆಯುತ್ತಿವೆ. ಈ ಸವಾಲನ್ನು ಸಮರ್ಥವಾಗಿ ಎದುರಿಸೋಣ ಎಂದು ತಿಳಿಸಿದರು.
ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ, ಶಾಸಕರು, ಜನಪ್ರತಿನಿಧಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು. ವಿಜಯೇಂದ್ರ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
]]>ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮೊನ್ನೆ ತಾನೇ ಚಿತ್ರದುರ್ಗದಲ್ಲಿ ಶೋಷಿತರ ಸಮಾವೇಶ ಮಾಡಿದ್ದೀರಿ. ಶೋಷಿತರ ಎಲ್ಲ ಮತ ಪಡೆದ ನೀವು ಅವರಿಗೆ ಏನು ಕೊಟ್ಟಿದ್ದೀರಿ ಎಂದು ಕೇಳಿದರು. ನಿಮ್ಮ ಈ ಸಮಾವೇಶ ಕೇವಲ ‘ಚಿಕನ್ ಬಿರಿಯಾನಿಗೆ’ ಸೀಮಿತವಾಗಲಿಲ್ಲವೇ? ಎಂದು ಪ್ರಶ್ನೆಯನ್ನು ಮುಂದಿಟ್ಟರು. ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಹಿಂದವನ್ನು ಕೈಬಿಟ್ಟು ಅಲ್ಪಸಂಖ್ಯಾತರನ್ನು ಮಾತ್ರ (ಅ) ಅಪ್ಪಿಕೊಂಡಿದ್ದಿರಿ ಎಂದು ಟೀಕಿಸಿದರು.
ಅಂಬೇಡ್ಕರ್ ನಿಗಮ, ಬಂಜಾರ ನಿಗಮ, ಆದಿಜಾಂಬವ ನಿಗಮ, ಅಂಬಿಗರ ಚೌಡಯ್ಯ ನಿಗಮ, ಕಾಡುಗೊಲ್ಲ ಅಭಿವೃದ್ಧಿ ನಿಗಮ ಇತ್ಯಾದಿ ಹಿಂದುಳಿದ ವರ್ಗಗಳಿಗೆ ಎಸ್.ಸಿ., ಎಸ್.ಟಿ. ನಿಗಮಗಳಿಗೆ ಯಾವುದೇ ಹಣಕಾಸಿನ ಅನುದಾನ ನೀಡದಿರುವುದು ಸರಿಯೇ? ಎಂದರು. ಅವುಗಳಿಗೆ ಕೊಡುವ ಎಲ್ಲ ಹಣಕಾಸು ಅನುದಾನ ರದ್ದು ಮಾಡಿದ್ದಾರೆ ಎಂದು ವಿವರಿಸಿದರು.
ಬಿಜೆಪಿಯವರು ಮಾತ್ರ ಹಿಂದುಗಳೇ? ನಾವು ಹಿಂದುಗಳಲ್ಲವೇ ಎಂದು ಮಾನ್ಯ ಸಿದ್ದರಾಮಯ್ಯ ಮತ್ತು ಮಾನ್ಯ ಡಿ.ಕೆ.ಶಿವಕುಮಾರ್ ಅವರು ಕೇಳುತ್ತಿದ್ದಾರೆ. ನೀವೂ ಹಿಂದುಗಳಾಗಿದ್ದರೆ ಕೆರೆಗೋಡಿನಲ್ಲಿ ಹಾಕಿದ ಭಗವಾಧ್ವಜ, ಕೇಸರಿ ಧ್ವಜವನ್ನು ಇಳಿಸಿದಿರಿ? ಎಸ್ಸಿ ಎಸ್ಟಿ ಅಭಿವೃದ್ಧಿಗೆ ನೀಡಿದ ಹಣ, ಆದಿಜಾಂಬವ ಅಭಿವೃದ್ಧಿ ನಿಗಮ, ಬಂಜಾರ ಅಭಿವೃದ್ಧಿ ನಿಗಮಕ್ಕೆ ನೀಡಿದ ಅನುದಾನವನ್ನು ಸಂಪೂರ್ಣವಾಗಿ ಯಾಕೆ ನಿಲ್ಲಿಸಿದಿರಿ ಎಂದೂ ಅವರು ಪ್ರಶ್ನೆ ಮಾಡಿದರು.
ಇದು ಮುಲ್ಲಾ ಮೌಲ್ವಿ ಸರಕಾರ..
ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಘೋಷಿಸಿ 1 ಸಾವಿರ ಕೋಟಿಯ ಕಾರ್ಯಾದೇಶ ಮಾಡಿಸಿದ್ದಾರೆ. ಹಿಂದುಗಳಿಗೇನು ಕೊಟ್ಟಿರಿ? ತೆಂಗಿನಕಾಯಿ ಚಿಪ್ಪು ಕೊಟ್ಟಿರಿ. ಇದ್ಯಾವ ನ್ಯಾಯ ಸಿದ್ದರಾಮಯ್ಯನವರೇ ಎಂದು ಆಕ್ಷೇಪಿಸಿದರು. ಇದು ಸಿದ್ದರಾಮಯ್ಯರ ಸರಕಾರ ಅಲ್ಲ. ಮುಲ್ಲಾ ಮೌಲ್ವಿಗಳ ಸರಕಾರ ಎಂದು ಎನ್.ರವಿಕುಮಾರ್ ಅವರು ಆರೋಪಿಸಿದರು.
ಬಿಜೆಪಿ ಸರ್ಕಾರವಿದ್ದಾಗ ಮತಾಂತರ ಮತ್ತು ಗೋಹತ್ಯೆ ನಿಷೇಧ ಕಾನೂನುಗಳನ್ನು ಜಾರಿಗೊಳಿಸಲಾಗಿತ್ತು, ಆದರೆ ಈಗ ನಿರಂತರ ಗೋಹತ್ಯೆ ಮತ್ತು ರಾಜಾರೋಷವಾಗಿ ಮತಾಂತರಕ್ಕೆ ಅನುಮತಿ ನೀಡಿರುವುದು ಸರಿಯೇ? ನಿಮ್ಮದು ಹಿಂದೂಗಳ ಸರಕಾರವೇ ಎಂದು ಪ್ರಶ್ನಿಸಿದರು.
ಶಿವನ ದೇವಸ್ಥಾನ, ಕಾಳಮ್ಮನ ದೇವಸ್ಥಾನ, ಬಸವಣ್ಣನ ದೇವಸ್ಥಾನ ಸೇರಿ ರಾಜ್ಯದ ಸಾವಿರಾರು, ಲಕ್ಷಾಂತರ ದೇವಾಲಯಗಳ ಹಣ ಸರ್ಕಾರಕ್ಕೆ ಬೇಕು. ಆದರೆ, ಹಿಂದೂಗಳ ಆರಾಧ್ಯ ದೈವ ಹನುಮ ಧ್ವಜ ಹಾರಿಸುವುದು ಏಕೆ ಬೇಡ? ಇದು ಯಾವ ಸೆಕ್ಯುಲರಿಸಂ? ಎಂದು ಸಿದ್ದರಾಮಯ್ಯರಿಗೆ ಪ್ರಶ್ನೆ ಹಾಕಿದರು.
ಸಮಾಜ ಮುಂದೆ ಬರಲು ಎಸ್.ಸಿ., ಎಸ್.ಟಿ. ಗಳಿಗೆ, ಒಬಿಸಿಗಳಿಗೆ ಆದ್ಯತೆ ಕೊಡಲಾಗುತ್ತದೆ. ಎಸ್.ಸಿ., ಎಸ್.ಟಿ. ವರ್ಗಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣದಲ್ಲಿ 11,114 ಕೋಟಿ ಹಣವನ್ನು ನಿಮ್ಮ ಗ್ಯಾರಂಟಿಗಳಿಗೆ ಬಳಸಿದ್ದೇಕೆ? ಯಾಕೆಂದರೆ ನಿಮ್ಮದು ಮುಲ್ಲಾ ಮೌಲ್ವಿ ಸರಕಾರ ಅಲ್ಲವೇ ಎಂದು ಕೇಳಿದರು.
ಚುನಾವಣೆ ಹತ್ತಿರ ಬಂತೆಂದರೆ ನೀವು ಶೋಷಿತರ ಸಮಾವೇಶ, ಹಿಂದುಳಿದವರ ಸಮಾವೇಶ, ಅಲ್ಪಸಂಖ್ಯಾತರ ಸಮಾವೇಶ ಮಾಡುತ್ತೀರಿ. ಯಾಕೆ ಸಿದ್ದರಾಮಯ್ಯನವರೇ ಈಗ ಅಹಿಂದ ಕೈಬಿಟ್ಟಿದ್ದೀರಿ ಎಂದು ಪ್ರಶ್ನೆ ಕೇಳಿದರು. ಹಿಂದುಳಿದವರಿಗೆ ನೀವು ತೆಂಗಿನಕಾಯಿ ಚಿಪ್ಪು ಕೊಟ್ಟಿರಲ್ಲವೇ? ಎಂದು ಪ್ರಶ್ನಿಸಿದರು.
ಕೆರೆಗೋಡಿನಲ್ಲಿ ಹಿಂದೂ ಧ್ವಜವನ್ನು ತಕ್ಷಣ ಕೆಳಗಿಳಿಸುತ್ತೀರಿ. ಸರಕಾರಿ ಕಚೇರಿಗಳ ಮುಂದೆ, ಸರಕಾರಿ ಸಮುದಾಯ ಭವನದಲ್ಲಿ ಕೋಮುದ್ವೇಷ ಬಿತ್ತದಿರಿ ಎನ್ನುವ ನಿಮ್ಮ ಸರಕಾರವು ಕೋಮು ಸಂಘರ್ಷ ಉಂಟು ಮಾಡುವ ಟಿಪ್ಪು ಸುಲ್ತಾನ ಜಯಂತಿಯನ್ನು ವಿಧಾನಸೌಧದಲ್ಲಿ ಮಾಡಬಹುದೇ? ಬ್ಯಾಂಕ್ವೆಟ್ ಹಾಲ್ನಲ್ಲಿ ಮಾಡಬಹುದೇ? ಹಾಗಾಗಿ ನಿಮ್ಮ ಸರಕಾರ ಮುಲ್ಲಾ ಮೌಲ್ವಿ ಸರಕಾರ ಎಂದು ಟೀಕಿಸಿದರು.
ಹಿಂದೂಗಳ ಹೋರಾಟವಾದರೆ ಅವರ ಮೇಲೆ ಲಾಠಿಚಾರ್ಜ್ ಮಾಡುತ್ತಾರೆ. ಅವರ ಮೇಲೆ ಕೇಸು ಹಾಕುತ್ತಾರೆ. ಆದರೆ, ಕೆಎಫ್ಡಿ, ಪಿಎಫ್ಐ ಮೇಲಿನ ಕೇಸ್ ವಾಪಾಸ್ ಪಡೆಯುತ್ತೀರಿ. ಹಾಗಾಗಿ ಮುಲ್ಲಾ ಮೌಲ್ವಿ ಸರಕಾರ ನಿಮ್ಮದಲ್ಲವೇ ಎಂದರು. 1,600 ಜನ ಪುಂಡ ಪೋಕರಿಗಳು, ಉಗ್ರವಾದಿಗಳನ್ನು ಬಿಡುಗಡೆ ಮಾಡಿದ್ದೀರಿ ಎಂದು ಆಕ್ಷೇಪಿಸಿದರು.
ಸಿದ್ದರಾಮಯ್ಯನವರು ಕನ್ನಡ ವ್ಯಾಕರಣ ಮಾಸ್ತರ್. ಯಾರಾದರೂ ಏಕವಚನದಲ್ಲಿ ಮಾತನಾಡಿದರೆ ಅವರಿಗೆ ಕೋಪ ಬರುತ್ತದೆ. ಆದರೆ, ಸಿದ್ದರಾಮಯ್ಯನವರು ಯಾರಿಗೆ ಬೇಕಾದರೂ ಏಕವಚನದಲ್ಲಿ ಮಾತನಾಡಬಹುದು. ಮೋದಿಯವರಿಗೆ ಏಕವಚನ, ಯಡಿಯೂರಪ್ಪನವರಿಗೆ ಏಕವಚನದಲ್ಲಿ ಮಾತನಾಡಬಹುದು. ಮಾನ್ಯ ರಾಷ್ಟ್ರಪತಿ, ಒಬ್ಬ ಮಹಿಳೆಗೂ ಏಕವಚನದಲ್ಲಿ ಸಂಬೋಧನೆ ಸರಿಯೇ ಎಂದು ಕೇಳಿದರು. ಇದು ಸಂಸ್ಕಾರ ಇಲ್ಲದ ಸರಕಾರ ಎಂದು ಆರೋಪಿಸಿದರು.
ಏಕವಚನದಲ್ಲಿ ಮಾತನಾಡಿದ್ದೀರಿ ಎಂದು ಅನಂತಕುಮಾರ್ ಹೆಗಡೆಯವರಿಗೆ ನೀವು ಪಾಠ ಮಾಡುತ್ತೀರಿ. ನಿಮಗೆ ಪಾಠ ಮಾಡುವವರು ಯಾರೂ ಇಲ್ಲವೇ? ಮೌಲ್ವಿ ಸರಕಾರದ ಮುಖ್ಯಸ್ಥರಾದ ಸಿದ್ದರಾಮಯ್ಯನವರೇ ನಿಮಗೆ ಈ ಪ್ರಶ್ನೆ ಕೇಳುತ್ತೇನೆ ಎಂದರು.
ರಾಜ್ಯ ಸರಕಾರವು ಈ 12 ಪ್ರಶ್ನೆಗಳಿಗೆ ಉತ್ತರ ಕೊಡಬೇಕು ಎಂದು ಅವರು ಆಗ್ರಹಿಸಿದರು. ಇದು ಎಸ್ಸಿ, ಎಸ್ಟಿಗಳಿಗೆ ನ್ಯಾಯ ಕೊಡತಕ್ಕಂಥ, ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡತಕ್ಕಂಥ ಸರಕಾರ ಅಲ್ಲ. ಇದು ಅಹಿಂದ ಸರಕಾರ ಅಲ್ಲ. ಕರ್ನಾಟಕದ 6.5 ಕೋಟಿ ಜನರ ಸರಕಾರ ಅಲ್ಲ. ಇದು ಮುಲ್ಲಾ ಮೌಲ್ವಿಗಳನ್ನು ಮಾತ್ರ ಅಪ್ಪಿಕೊಳ್ಳುವ, ಒಪ್ಪಿಕೊಳ್ಳುವ ಒಂದು ವಿಶಿಷ್ಟವಾದ ಸೆಕ್ಯುಲರಿಸಂ ಬೋಧಿಸುವ ಮುಲ್ಲಾ ಮೌಲ್ವಿಗಳ ಸರಕಾರ ಎಂದು ಪುನರುಚ್ಚರಿಸಿದರು. ಈ ಸರಕಾರದಿಂದ ಕರ್ನಾಟಕಕ್ಕೆ ನ್ಯಾಯ ಸಿಗಲು ಸಾಧ್ಯವಿದೆಯೇ ಎಂದೂ ಕೇಳಿದರು.
]]>ಬಿಜೆಪಿ-ಜೆಡಿಎಸ್ ಮೈತ್ರಿಯಾಗಿ ಚುನಾವಣೆ ಎದುರಿಸುತ್ತಿದ್ದು ರಾಜ್ಯದ 28 ಕ್ಷೇತ್ರಗಳನ್ನೂ ಬಿಜೆಪಿ ಮೈತ್ರಿ ಗೆದ್ದರೆ ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸುವ ಗ್ಯಾರೆಂಟಿ ನಾವು ಕೊಡುತ್ತೇವೆ. ಕಾಂಗ್ರೆಸ್ನ ಐದು ಗ್ಯಾರೆಂಟಿಗೆ ನಮ್ಮದು ಒಂದೇ ಗ್ಯಾರೆಂಟಿ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ವತಿಯಿಂದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡುತ್ತಾ ಸರ್ಕಾರ ಪತನದ ಸುದ್ದಿ ಹೊರಹಾಕಿದ್ದಾರೆ.
ಕಾಂಗ್ರೆಸ್ ನಾಯಕರು ಗ್ಯಾರೆಂಟಿಗಳ ಬಗ್ಗೆ ಹೇಳಿದ್ದೇ ಹೇಳಿದ್ದು, ಚುನಾವಣೆಗೂ ಮುನ್ನ 10 ಕೆ.ಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಆದರೆ ಈಗ ಕೊಡುತ್ತಿರುವ ಐದು ಕೆಜಿ ಕೂಡ ಮೋದಿ ಸರ್ಕಾರದ್ದು, ಇದು ಜನರಿಗೆ ಮಾಡುತ್ತಿರುವ ಮೋಸ. 200 ಯುನಿಟ್ ಉಚಿತ ವಿದ್ಯುತ್ ಫ್ರೀ ಕೊಡುತ್ತೇವೆ ಹೇಳಿ ಈಗ ಅದಕ್ಕೂ ಕಂಡೀಷನ್ ಹಾಕಿದ್ದಾರೆ, ರಾಜ್ಯದಲ್ಲಿ ಒಬ್ಬರಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡಿರುವ ದಾಖಲೆ ಇದ್ದರೆ ಕೊಡಿ, ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.
]]>ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಇವರಿಗೆ ಸಂವಿಧಾನ ಕುರಿತ ಪರಿಜ್ಞಾನ ಇಲ್ಲ. ಇವರು ಜನರ ಭಾವನೆ ಅರ್ಥ ಮಾಡಿಕೊಂಡಿಲ್ಲ. ಅಗೌರವದಿಂದ ನಡೆದುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು. ಕೆರೆಗೋಡಿನಲ್ಲಿ ಕಾನೂನು ಪ್ರಕಾರ ಅನುಮತಿ ಪಡೆದೇ ಧ್ವಜ ಹಾರಿಸಿದ್ದಾರೆ. ಕಾನೂನು ಪ್ರಕಾರ ತಪ್ಪಾಗಿದ್ದರೆ ನೋಟಿಸ್ ಕೊಡಬೇಕಿತ್ತು ತಾನೇ ಎಂದು ಕೇಳಿದರು. ಈಗಲಾದರೂ ಸರಕಾರ ಗ್ರಾಮಸ್ಥರ ಭಾವನೆಗೆ ಗೌರವ ಕೊಡುವ ಕೆಲಸ ಮಾಡಲಿ ಎಂದು ಒತ್ತಾಯವನ್ನು ಮುಂದಿಟ್ಟರು.
ಏಕಾಏಕಿ ಮುಂಜಾನೆ ಹೋಗಿ ಭಗವಾಧ್ವಜ ಇಳಿಸಿದ್ದು ಸರಿಯೇ? ನಿಯಮ ಮೀರಿ ರಾಷ್ಟ್ರಧ್ವಜ ಹಾರಿಸಿದ್ದು ಸರಿಯೇ ಎಂದೂ ಅವರು ಪ್ರಶ್ನಿಸಿದರು. ಸ್ಥಳೀಯರು ಕೆರೆಗೋಡು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇನ್ನೂ ಯಾಕೆ ಎಫ್ಐಆರ್ ಮಾಡಿಲ್ಲ ಎಂದು ಕೇಳಿದರು.
ರಾಷ್ಟ್ರಧ್ವಜವನ್ನು ಪೂರ್ತಿ ಏರಿಸಿಲ್ಲ. ಇದೇನು ಸರಕಾರವೇ? ಯಾವ ರೀತಿ ನಡವಳಿಕೆ ಇದು ಎಂದು ಕೇಳಿದರು. ಬಿಜೆಪಿ- ಜೆಡಿಎಸ್ ನಡುವೆ ವೈಮನಸ್ಸು ಏನಿಲ್ಲ. ಮತ್ತೊಮ್ಮೆ ಮೋದಿ, ಮತ್ತೊಮ್ಮೆ ಬಿಜೆಪಿ ಎಂಬುದೇ ನಮ್ಮಲ್ಲರ ಗುರಿ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಮಾಜಿ ಪ್ರಧಾನಿ ದೇವೇಗೌಡರು ಕೂಡ ಅಭಿಮಾನದಿಂದ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿ ಆಗಲಿ ಎನ್ನುತ್ತಿದ್ದಾರೆ ಎಂದು ವಿವರಿಸಿದರು. ಮತ್ತೊಮ್ಮೆ ಬಿಜೆಪಿ, ಮತ್ತೊಮ್ಮೆ ಮೋದಿಜೀ ಬೇಕೆಂದು ಜನರು ಈಗಾಗಲೇ ನಿರ್ಧರಿಸಿದ್ದಾರೆ ಎಂದು ಅವರು ತಿಳಿಸಿದರು.
ಇದೊಂದು ತುಘಲಕ್ ಸರಕಾರ. ಕಾನೂನನ್ನು ಇವರು ಗೌರವಿಸುವುದಿಲ್ಲ ಎಂದು ಟೀಕಿಸಿದರು. ಅದು ಗ್ರಾಮಸ್ಥರೇ ಹಣ ಸೇರಿಸಿ ನಿಲ್ಲಿಸಿದ ಧ್ವಜಸ್ತಂಭ. ಪಂಚಾಯತ್ ಕೂಡ ರಾಷ್ಟ್ರಧ್ವಜ, ನಾಡಧ್ವಜ, ಭಗವಾಧ್ವಜ ಹಾರಿಸಲು ಅನುಮತಿ ಕೊಟ್ಟಿದೆ ಎಂದು ಗಮನ ಸೆಳೆದರು. ಮಾಜಿ ಸಚಿವ ಗೋಪಾಲಯ್ಯ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ.ರಾಮಮೂರ್ತಿ ಅವರು ಇದ್ದರು.
]]>ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವೂ ಈ ಬಾರಿ ಭಾರೀ ಸದ್ದು ಮಾಡುತ್ತಿದೆ. ಇಲ್ಲಿ ಹಾಲಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಸ್ವಪಕ್ಷದ ಕಾರ್ಯಕರ್ತರೇ ಅಡ್ಡಗಾಲಾಗುತ್ತಿದ್ದಾರೆ. 4ನೇ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಿದ್ಧತೆ ನಡೆಸುತ್ತಿರುವ ಕಟೀಲ್ ಅವರಿಗೆ ಈಗ ಬಿಗ್ ಶಾಕ್ ಎದುರಾಗಿದೆ.
ಕಾರ್ಯಕರ್ತರ ವಿರೋಧ ಎದುರಿಸುತ್ತಿರುವ ಕಟೀಲ್ ಅವರ ಬದಲಿಗೆ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಕಣಕ್ಕಿಳಿಸಲು ಬಿಜೆಪಿ ಪಾಳಯದಲ್ಲಿ ಬಿರುಸಿನ ಕಾರ್ಯಚಟುವಟಿಕೆ ಸದ್ದಿಲ್ಲದೆ ನಡೆಯುತ್ತಿದೆ. ಕ್ಯಾಪ್ಟನ್ ಅವರ ಹೆಸರಿಗೆ ವಿರೋಧ ಪಡಿಸುವ ಯಾವ ಕಾರಣವೂ ಕಟೀಲ್ ಬೆಂಬಲಿಗರಲ್ಲಿ ಇಲ್ಲ. ಪರಿವಾರ ಸಂಘಟನೆಗಳು ಕೂಡಾ ಕ್ಯಾಪ್ಟನ್ ಹೆಸರಿಗೆ ಸಮ್ಮತಿ ಸೂಚಿಸಿವೆ ಎಂದು ಹೇಳಲಾಗುತ್ತಿದೆ.
ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸುಶಿಕ್ಷಿತರು, ಸಂಘ ಹಾಗೂ ಸೇನೆಯ ಹಿನ್ನೆಲೆ ಹೊಂದಿರುವ ವ್ಯಕ್ತಿ. ರಾಜಕೀಯ ಜೀವನ ಅಥವಾ ಸಾಮಾಜಿಕ ಜೀವನದಲ್ಲಿ ಯಾವುದೇ ಕಪ್ಪುಚುಕ್ಕೆ ಇವರ ಮೇಲಿಲ್ಲ ಎಂಬುದೇ ಕ್ಯಾಪ್ಟನ್ ಪಾಲಿನ ಬಹುದೊಡ್ಡ ಪ್ಲಸ್ ಪಾಯಿಂಟ್. 2019 ರ ಲೋಕಸಭಾ ಚುನಾವಣೆಯಲ್ಲಿ ಇವರ ಹೆಸರು ಪ್ರಬಲವಾಗಿ ಕೇಳಿಬಂದಿದ್ದರೂ ಅಂತಿಮವಾಗಿ ನಳಿನ್ ಅವರು ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾದರು. ಮುಂದೆ ರಾಜಕೀಯ ತುಳಿತಕ್ಕೊಳಗಾಗಿ ಯಾವುದೇ ಪ್ರಮುಖ ಜವಾಬ್ದಾರಿ ಇಲ್ಲದೆ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಪೇರೆಂಟ್ ಬಾಡಿಯ ನಿರ್ಲಕ್ಷಕ್ಕೆ ಒಳಗಾಗಿದ್ದರು. ಅದೆಲ್ಲವನ್ನೂ ಸಮಚಿತ್ತದಿಂದ ಸ್ವೀಕರಿಸಿ, ತಾಳ್ಮೆಯ ಪ್ರತಿರೂಪ ಎಂಬಂತಿದ್ದರು. ಅವರ ಧ್ಯೇಯ ನಿಷ್ಠೆಗೆ ಈಗ ರಾಜ್ಯ ಕಾರ್ಯದರ್ಶಿ ಹುದ್ದೆ ಒಲಿದುಬಂದಿದೆ, ಅದರ ಬೆನ್ನಲ್ಲೇ ಕಾರ್ಯಕರ್ತರ ಲೋಕಸಭಾ ಅಭ್ಯರ್ಥಿಯಾಗಿ ಜನಮಾನಸದಲ್ಲಿ ಸುದ್ದಿಯಲ್ಲಿದ್ದಾರೆ.
ಕಾರ್ಯಕರ್ತರನ್ನು ನಿರ್ಲಕ್ಷ್ಯ ಮಾಡುತ್ತಿದ್ದ ನಳಿನ್ ಕುಮಾರ್ ಕಟೀಲ್ ಅವರು ಈಗ ಕಾರ್ಯಕರ್ತರನ್ನು ಸೆಳೆಯಲು ನಾನಾ ಕಸರತ್ತು ನಡೆಸುತ್ತಿದ್ದಾರೆ, ಇದೆಲ್ಲವೂ ಚುನಾವಣಾ ಗಿಮಿಕ್ ಎಂದು ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧದ ಅಲೆಯಿಂದ ಬೇಸತ್ತಿರುವ ಬಿಜೆಪಿ ತನ್ನ ಕಾರ್ಯಕರ್ತರನ್ನು ತಣಿಸುವ ನಿಟ್ಟಿನಲ್ಲಿ ಈ ಬಾರಿ ಟಿಕೆಟ್ ಬದಲಾವಣೆಯ ನಿರ್ಧಾರ ಮಾಡಿರುವುದು ಬಹುತೇಕ ಪಕ್ಕಾ ಆಗಿದೆ.
]]>ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಹೊಸ ಮುಖ ಕಣಕ್ಕೆ?
ಬಿಜೆಪಿ ಟಿಕೆಟ್ ರೇಸ್ನಲ್ಲಿ ಬ್ರಿಜೇಶ್ ಚೌಟಾ#LoksabhaElections2024 #LoksabhaElection #loksabhaelections #loksabha2024 #BJP #Karnataka #Mangaluru https://t.co/dJmsbTCnbP— TV9 Kannada (@tv9kannada) January 25, 2024