og
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121wp-post-author
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121ನಂತರ ಮಾತನಾಡಿದ ಸಂಸದರು, ದೀನ್ ದಯಾಳ್ ಉಪಾಧ್ಯಾಯರ ಅಂತ್ಯೋದಯದ ಪರಿಕಲ್ಪನೆಯಂತೆ ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ತಲುಪುವಂತಹ ದೂರದೃಷ್ಟಿಯ ಯೋಜನೆಯನ್ನು ಜಾರಿಗೆ ತಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಅನಂತ ಧನ್ಯವಾದಗಳು ಎಂದರು.
]]>
ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ತಮ್ಮ ಭಾಷಣದಲ್ಲಿ ರಾಜ್ಯ ಕಾರ್ಯದರ್ಶಿ ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೆಸರೆತ್ತಿದ್ದಾಗಲೆಲ್ಲಾ ಕಾರ್ಯಕರ್ತರು ಜೋರಾದ ಕರತಾಡನ ಮತ್ತು ಜೋರಾದ ಧ್ವನಿಯಲ್ಲಿ ಘೋಷಣೆ ಕೂಗುತ್ತಿದ್ದುದು ಗಮನ ಸೆಳೆಯುತ್ತಿತ್ತು.
ಜಿಲ್ಲಾಧ್ಯಕ್ಷ ಜವಾಬ್ದಾರಿ ಸ್ವೀಕರಿಸಿದ ಸತೀಶ್ ಕುಂಪಲ ತಮ್ಮ ಮಾತಿನ ಮಧ್ಯದಲ್ಲಿ ಕ್ಯಾಪ್ಟನ್ ಹೆಸರು ಪ್ರಸ್ತಾಪಿಸಿದಾಗ ಸಭಾಂಗಣದಲ್ಲಿ ನೆರೆದಿದ್ದವರು ಜೋರಾಗಿಯೇ ಜಯಕಾರದ ಘೋಷಣೆ ಕೂಗಿದರು. ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ತಮ್ಮ ಭಾಷಣದಲ್ಲಿ ಬ್ರಿಜೇಶ್ ಹೆಸರು ಪ್ರಸ್ತಾಪಿಸಿದಾಗ ಇದು ಪುನಾರಾವರ್ತನೆಯಾಯಿತು.
ರಾಜ್ಯ ನಾಯಕರ ಮುಂದೆ, ಹಾಲಿ ಸಂಸದರು ಮುಂದೆ ನೆರೆದಿದ್ದವರು ಕ್ಯಾಪ್ಟನ್ ಪರವಾಗಿ ಜಯಕಾರ ಹಾಕುವ ಮೂಲಕ ಪರೋಕ್ಷವಾಗಿ ತಮ್ಮ ಮುಂದಿನ ಲೋಕಸಭಾ ಅಭ್ಯರ್ಥಿ ‘ಇವರೇ ಆಗಲಿ’ ಎಂಬುದನ್ನು ಸೂಚ್ಯವಾಗಿ ತಿಳಿಸುತ್ತಿದ್ದರು.
ಹಾಗೆ ನೋಡಿದರೆ ಪದಗ್ರಹಣ ಸಮಾರಂಭದಲ್ಲಿ ನೆರೆದಿದ್ದವರು ಕ್ಯಾಪ್ಟನ್ ಅಭಿಮಾನಿ ಬಳಗದವರೂ ಅಲ್ಲ, ನಳಿನ್ ವಿರೋಧಿಗಳೂ ಅಲ್ಲ, ಅಲ್ಲಿದ್ದಿದ್ದು ಬಹುತೇಕ ಜಿಲ್ಲಾ, ಮಂಡಲ ಮತ್ತು ತಳಮಟ್ಟದ ಬಿಜೆಪಿ ಪದಾಧಿಕಾರಿಗಳೇ. ಇವರುಗಳೇ ಮುಂದಿನ ಲೋಕಸಭಾ ಚುನಾವಣೆಗೆ ಅಭ್ಯರ್ಥಿಯ ಬದಲಾವಣೆಗೆ ಒಲವು ತೋರಿದ್ದಾರೆ ಎನ್ನುವುದು ಸುಸ್ಪಷ್ಟ.
]]>ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವೂ ಈ ಬಾರಿ ಭಾರೀ ಸದ್ದು ಮಾಡುತ್ತಿದೆ. ಇಲ್ಲಿ ಹಾಲಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಸ್ವಪಕ್ಷದ ಕಾರ್ಯಕರ್ತರೇ ಅಡ್ಡಗಾಲಾಗುತ್ತಿದ್ದಾರೆ. 4ನೇ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಿದ್ಧತೆ ನಡೆಸುತ್ತಿರುವ ಕಟೀಲ್ ಅವರಿಗೆ ಈಗ ಬಿಗ್ ಶಾಕ್ ಎದುರಾಗಿದೆ.
ಕಾರ್ಯಕರ್ತರ ವಿರೋಧ ಎದುರಿಸುತ್ತಿರುವ ಕಟೀಲ್ ಅವರ ಬದಲಿಗೆ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಕಣಕ್ಕಿಳಿಸಲು ಬಿಜೆಪಿ ಪಾಳಯದಲ್ಲಿ ಬಿರುಸಿನ ಕಾರ್ಯಚಟುವಟಿಕೆ ಸದ್ದಿಲ್ಲದೆ ನಡೆಯುತ್ತಿದೆ. ಕ್ಯಾಪ್ಟನ್ ಅವರ ಹೆಸರಿಗೆ ವಿರೋಧ ಪಡಿಸುವ ಯಾವ ಕಾರಣವೂ ಕಟೀಲ್ ಬೆಂಬಲಿಗರಲ್ಲಿ ಇಲ್ಲ. ಪರಿವಾರ ಸಂಘಟನೆಗಳು ಕೂಡಾ ಕ್ಯಾಪ್ಟನ್ ಹೆಸರಿಗೆ ಸಮ್ಮತಿ ಸೂಚಿಸಿವೆ ಎಂದು ಹೇಳಲಾಗುತ್ತಿದೆ.
ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸುಶಿಕ್ಷಿತರು, ಸಂಘ ಹಾಗೂ ಸೇನೆಯ ಹಿನ್ನೆಲೆ ಹೊಂದಿರುವ ವ್ಯಕ್ತಿ. ರಾಜಕೀಯ ಜೀವನ ಅಥವಾ ಸಾಮಾಜಿಕ ಜೀವನದಲ್ಲಿ ಯಾವುದೇ ಕಪ್ಪುಚುಕ್ಕೆ ಇವರ ಮೇಲಿಲ್ಲ ಎಂಬುದೇ ಕ್ಯಾಪ್ಟನ್ ಪಾಲಿನ ಬಹುದೊಡ್ಡ ಪ್ಲಸ್ ಪಾಯಿಂಟ್. 2019 ರ ಲೋಕಸಭಾ ಚುನಾವಣೆಯಲ್ಲಿ ಇವರ ಹೆಸರು ಪ್ರಬಲವಾಗಿ ಕೇಳಿಬಂದಿದ್ದರೂ ಅಂತಿಮವಾಗಿ ನಳಿನ್ ಅವರು ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾದರು. ಮುಂದೆ ರಾಜಕೀಯ ತುಳಿತಕ್ಕೊಳಗಾಗಿ ಯಾವುದೇ ಪ್ರಮುಖ ಜವಾಬ್ದಾರಿ ಇಲ್ಲದೆ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಪೇರೆಂಟ್ ಬಾಡಿಯ ನಿರ್ಲಕ್ಷಕ್ಕೆ ಒಳಗಾಗಿದ್ದರು. ಅದೆಲ್ಲವನ್ನೂ ಸಮಚಿತ್ತದಿಂದ ಸ್ವೀಕರಿಸಿ, ತಾಳ್ಮೆಯ ಪ್ರತಿರೂಪ ಎಂಬಂತಿದ್ದರು. ಅವರ ಧ್ಯೇಯ ನಿಷ್ಠೆಗೆ ಈಗ ರಾಜ್ಯ ಕಾರ್ಯದರ್ಶಿ ಹುದ್ದೆ ಒಲಿದುಬಂದಿದೆ, ಅದರ ಬೆನ್ನಲ್ಲೇ ಕಾರ್ಯಕರ್ತರ ಲೋಕಸಭಾ ಅಭ್ಯರ್ಥಿಯಾಗಿ ಜನಮಾನಸದಲ್ಲಿ ಸುದ್ದಿಯಲ್ಲಿದ್ದಾರೆ.
ಕಾರ್ಯಕರ್ತರನ್ನು ನಿರ್ಲಕ್ಷ್ಯ ಮಾಡುತ್ತಿದ್ದ ನಳಿನ್ ಕುಮಾರ್ ಕಟೀಲ್ ಅವರು ಈಗ ಕಾರ್ಯಕರ್ತರನ್ನು ಸೆಳೆಯಲು ನಾನಾ ಕಸರತ್ತು ನಡೆಸುತ್ತಿದ್ದಾರೆ, ಇದೆಲ್ಲವೂ ಚುನಾವಣಾ ಗಿಮಿಕ್ ಎಂದು ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧದ ಅಲೆಯಿಂದ ಬೇಸತ್ತಿರುವ ಬಿಜೆಪಿ ತನ್ನ ಕಾರ್ಯಕರ್ತರನ್ನು ತಣಿಸುವ ನಿಟ್ಟಿನಲ್ಲಿ ಈ ಬಾರಿ ಟಿಕೆಟ್ ಬದಲಾವಣೆಯ ನಿರ್ಧಾರ ಮಾಡಿರುವುದು ಬಹುತೇಕ ಪಕ್ಕಾ ಆಗಿದೆ.
]]>ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಹೊಸ ಮುಖ ಕಣಕ್ಕೆ?
ಬಿಜೆಪಿ ಟಿಕೆಟ್ ರೇಸ್ನಲ್ಲಿ ಬ್ರಿಜೇಶ್ ಚೌಟಾ#LoksabhaElections2024 #LoksabhaElection #loksabhaelections #loksabha2024 #BJP #Karnataka #Mangaluru https://t.co/dJmsbTCnbP— TV9 Kannada (@tv9kannada) January 25, 2024