Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Warning: Cannot modify header information - headers already sent by (output started at /home3/buntss5v/iambjp.in/wp-includes/functions.php:6121) in /home3/buntss5v/iambjp.in/wp-includes/feed-rss2.php on line 8
Govind Karjol – I am BJP https://iambjp.in Making Bharat Vishwa Guru Tue, 10 Aug 2021 09:39:21 +0000 en-US hourly 1 https://wordpress.org/?v=6.8.1 https://iambjp.in/wp-content/uploads/2021/08/cropped-Smal-Logo-32x32.png Govind Karjol – I am BJP https://iambjp.in 32 32 625 ಅಂಕಗಳಿಸಿದ ವಿದ್ಯಾರ್ಥಿನಿಯ ಕಾಯಿಲೆಗೆ ಸ್ವಂದಿಸಿ ಮಾನವೀಯತೆ ಮೆರೆದ ಸಚಿವ ಗೋವಿಂದ ಕಾರಜೋಳ https://iambjp.in/archives/143 https://iambjp.in/archives/143#respond Tue, 10 Aug 2021 09:39:21 +0000 https://iambjp.in/?p=143 ಬಾಗಲಕೋಟೆ : 2020-21ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬಾಗಲಕೋಟೆ ತಾಲ್ಲೂಕಿನ ಮುಚಖಂಡಿ ತಾಂಡಾದ ಶ್ರೀ ದುರ್ಗಾದೇವಿ ಹೈಸ್ಕೂಲಿನ ವಿದ್ಯಾರ್ಥಿನಿ ಗಂಗಮ್ಮ ಬಸಪ್ಪ ಹುಡೇದ 625ಕ್ಕೆ 625 ಅಂಕ ಪಡೆದುಕೊಂಡಿದ್ದಕ್ಕೆ ಸಂತಸಗೊಂಡ ಅಭಿನಂದಿಸಿದ ಜಲಸಂಪನ್ಮೂಲ ಸಚಿವರಾದ  ಗೋವಿಂದ ಎಂ ಕಾರಜೋಳ ಅವರು, ಆ ಬಾಲಕಿಗೆ ಹೃದಯ ಸಂಬಂಧಿ ರೋಗವಿರುವುದು ಮಾಧ್ಯಮ ಪ್ರತಿನಿಧಿಯವರ ಮೂಲಕ ತಿಳಿದು ದಿಗ್ಭ್ರಾಂತರಾಗಿ, ಕೂಡಲೇ ಬಾಲಕಿ ಹಾಗೂ ಅವರ ಪೋಷಕರೊಂದಿಗೆ ಮಾತನಾಡಿ, ಬಾಲಕಿಗೆ ಹೃದಯ ಸಂಬಂಧಿ ರೋಗ, ಉಸಿರಾಟದ ತೊಂದರೆ ಇರುವುದನ್ನು ದೃಢಪಡಿಸಿಕೊಂಡು, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಕರೆ‌ಮಾಡಿ, ಬಾಲಕಿಗೆ ತಪಾಸಣೆಗೊಳಪಡಿಸಿ ಚಿಕಿತ್ಸೆ ನೀಡಿ, ಹೆಚ್ವಿನ ಚಿಕಿತ್ಸೆಯ ಅಗತ್ಯವಿದ್ದರೆ ಜಯದೇವ ಆಸ್ಪತ್ರೆಗೆ ದಾಖಲಿಸಲು ಕ್ರಮಕೈಹೊಳ್ಳಬೇಕು ಹಾಗು ಜಯದೇವ ಆಸ್ಪತ್ರೆಯ ನಿರ್ದೇಶಕರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಕೋರುವುದಾಗಿ ತಿಳಿಸಿ, ಮಾನವೀಯತೆ ಮೆರೆದರು.

]]>
https://iambjp.in/archives/143/feed 0
ರಾಜ್ಯಕ್ಕೆ ಹಂಚಿಕೆಯಾದ ನೀರಿನ ಸದ್ಬಳಕೆಗೆ ಕ್ರಮಕೈಗೊಳ್ಳಲು ಸಚಿವ ಗೋವಿಂದ ಕಾರಜೋಳ ಸೂಚನೆ https://iambjp.in/archives/140 https://iambjp.in/archives/140#respond Mon, 09 Aug 2021 09:32:40 +0000 https://iambjp.in/?p=140 ಬೆಂಗಳೂರು : ರಾಜ್ಯಕ್ಕೆ ಹಂಚಿಕೆಯಾಗಿರುವ ನೀರನ್ನು ಪೂರ್ಣಪ್ರಮಾಣದಲ್ಲಿ ಸದ್ಬಳಕೆ‌ಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ನೂತನ ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ. ಕಾರಜೋಳ ಅವರು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು‌.

ಕರ್ನಾಟಕ ನೀರಾವರಿ ನಿಗಮದಲ್ಲಿಂದು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಪ್ರಥಮ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯದ ವಿವಿಧ ಜಲಾಶಯಗಳ ನೀರನ್ನು ನ್ಯಾಯಾಲಯವು/ಜಲವಿವಾದ ನ್ಯಾಯಾಧಿಕರಣವು ನೀಡಿದ ತೀರ್ಪಿನಲ್ಲಿ ರಾಜ್ಯಕ್ಕೆ ಹಂಚಿಕೆಯಾದ ನೀರನ್ನು ಪೂರ್ಣಪ್ರಮಾಣದಲ್ಲಿ ಸದ್ಬಳಕೆಯಾಗಬೇಕು. ರಾಜ್ಯದಲ್ಲಿ 140 ಲಕ್ಷ ಹೆಕ್ಟೇರ್ ಪ್ರದೇಶವು ವ್ಯವಸಾಯಕ್ಕೆ ಯೋಗ್ಯವಾಗಿದ್ದು, 40.66 ಲಕ್ಷ ಹೆಕ್ಟೇರ್ ಪ್ರದೇಶವು ಅದರಲ್ಲಿ ಬೃಹತ್ ಮತ್ತು ಮಧ್ಯಮ ಜಲಸಂಪನ್ಮೂಲ ಇಲಾಖೆಯ ಯೋಜಿತ ನೀರಾವರಿ ಕ್ಷೇತ್ರವಾಗಿದೆ. ಅದರಲ್ಲಿ 29.18 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಲಾಗಿದೆ. ಪ್ರಸಕ್ತ ಆಯವ್ಯಯದಲ್ಲಿ 18702 ಕೋಟಿ ಅನುದಾನವನ್ನು ಮೀಸಲಿಡಲಾಗಿದ್ದು, ಜುಲೈ ಅಂತ್ಯಕ್ಕೆ 5053 ಕೋಟಿ ರೂ ಆರ್ಥಿಕ ಪ್ರಗತಿ ಸಾಧಿಸಲಾಗಿದೆ. ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಭೂಸ್ವಾಧೀನ ಪ್ರಕ್ರಿಯೆ ಪ್ರಮುಖವಾಗಿರುವುದರಿಂದ ಭೂ ಸ್ವಾಧೀನಕ್ಕೆ ಆದ್ಯತೆ ನೀಡಿ, ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.

ಸರ್ಕಾರಕ್ಕೆ ಹೆಚ್ಚಿನ ಹೊರೆಯಾಗದಂತಹ ನೀರಿನ ಸದ್ಬಳಕೆಯಾಗುವ ಹಾಗೂ ರೈತರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ರೂಪಿಸಬೇಕು. ಕೆರೆಗೆ ನೀರು ತುಂಬುವ ಯೋಜನೆ, ರೈತರ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣ ಯೋಜನೆಗಳು ಉತ್ತಮವಾಗಿದ್ದು, ಇದರಿಂದ ಅಂತರ್ ಜಲ ವೃದ್ದಿಯಾಗುತ್ತದೆ. ಸವಳು ಜವಳು ಸಮಸ್ಯೆ ಉದ್ವವವಾಗುವುದಿಲ್ಲ. ನಿರ್ವಹಣಾ ವೆಚ್ಚವೂ ಇರುವುದಿಲ್ಲ. ಕೃಷಿ ಹೊಂಡಗಳ ಒಳಭಾಗದಲ್ಲಿ ಉತ್ತಮ ಗುಣಮಟ್ಟದ ಶೀಟ್ ಅಳವಡಿಸಬೇಕು. ಇದರಿಂದ ನೀರು ಶೇಖರಣೆಗೆ ಅನುಕೂಲವಾಗುವುದರ ಜೊತೆಗೆ ಕೃಷಿ ಹೊಂಡಗಳಲ್ಲಿ ನೀರು ಇಂಗದೇ ಸದುಪಯೋಗ ವಾಗುತ್ತದೆ‌. ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸಬೇಕು ಎಂದು ಜಲಸಂಪನ್ಮೂಲ ಸಚಿವರು ಸೂಚಿಸಿದರು.

ಸಭೆಯಲ್ಲಿ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಕಾರ್ಯದರ್ಶಿ ಲಕ್ಷಣ ರಾವ್ ಪೇಶ್ವೆ, ಕೆಎನ್ ಎನ್ ಎಲ್ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ, ಕೆಬಿಜೆಎನ್ ಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್ ಚಿಣಿ, ಅಪರ ಕಾರ್ಯದರ್ಶಿಗಳಾದ ಕುಲಕರ್ಣಿ, ಜಂಟಿಕಾರ್ಯದರ್ಶಿ ಬಸವರಾಜಯ್ಯ , ಪ್ರಧಾನ ಇಂಜಿನಿಯರ್ ಸಿದ್ದಗಂಗಪ್ಪ , ಉಪಕಾರ್ಯದರ್ಶಿ ಕಿರಣ್ ಮಸೂತಿ, ಮತ್ತಿತರರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

]]>
https://iambjp.in/archives/140/feed 0