og
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121wp-post-author
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121ತಮ್ಮ ಫೇಸ್ ಬುಕ್ ಖಾತೆಯಲ್ಲಿ “ಈ ಆರ್ಥಿಕ ವರ್ಷದಿಂದ ಹಿಂದುಗಳು ಕಟ್ಟಿರುವ ತೆರಿಗೆ ಹಣ ಹಿಂದುಗಳ ಅಭಿವೃದ್ಧಿಗೆ ಮಾತ್ರ ಉಪಯೋಗ ಆಗಬೇಕು. ಹಿಂದುಗಳು ಕಟ್ಟಿದ ತೆರಿಗೆ ಹಣ ಬೇರೆ ಧರ್ಮದ ಜನರಿಗೆ ಸೇರುವುದು ಹಿಂದುಗಳಿಗೆ ಆಗುವ ಅನ್ಯಾಯ” ಎಂಬುದಾಗಿ ಬರೆದುಕೊಂಡಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ದಕ್ಷಿಣ ಭಾರತ ಉತ್ತರ ಭಾರತ ಎಂದು ಜನರ ತೆರಿಗೆಯ ದುಡ್ಡನ್ನು ವಿಭಜನೆ ಮಾಡುತ್ತಿದ್ದು ಇದಕ್ಕೆ ದೇಶದೆಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಈ ನಡೆಯು, ಹಲವಾರು ಕಂದಕಗಳನ್ನು ಸೃಷ್ಟಿ ಮಾಡಿದೆ. ಹಿಂದೂಗಳ ಹಣವನ್ನು ಹಿಂದುಗಳಿಗೆ ಉಪಯೋಗಿಸಿ ಎಂದು ಪ್ರತಿಪಾದಿಸುವ ಮೂಲಕ ಶಾಸಕ ಹರೀಶ್ ಪೂಂಜಾ ಅವರು ಕಾಂಗ್ರೆಸ್ ಸರ್ಕಾರದ ನಡೆಗೆ ಸಡ್ಡು ಹೊಡೆದಿದ್ದಾರೆ.
]]>ಶಾಸಕ ಹರೀಶ್ ಪೂಂಜರ ಅವರು ಸುಮಾರು 2 ಕೋಟಿ ಮೊತ್ತದ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿರುವುದು ಇಳಂತಿಳ ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ. ಬೆಳ್ತಂಗಡಿ ತಾಲ್ಲೂಕಿನ ಮೂಲೆ ಮೂಲೆಗೆ ರಸ್ತೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಬೆಳ್ತಂಗಡಿಯ ಶ್ರಮಿಕನಿಗೆ ಇಳಂತಿಳ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.
]]>ಕರ್ನಾಟಕ ರಾಜ್ಯದ ಕಾರ್ಮಿಕ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸಿದರು. ಕೋವಿಡ್ 3ನೆ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ತಂತ್ರಜ್ಞಾನ ಸಹಕಾರಿಯಾಗಲಿದೆ ಎನ್ನುವ ನಿಟ್ಟಿನಲ್ಲಿ ಮೊಬೈಲ್ ನೀಡಲಾಗಿದೆ ಎಂದು ಹರೀಶ್ ಪೂಂಜಾ ಅವರು ಹೇಳಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್,ತಾಲೂಕು ವೈದ್ಯಧಿಕಾರಿಗಳಾದ ಡಾ.ಕಲಾಮಧು, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪುಷ್ಪಾವತಿ ಶೆಟ್ಟಿ, ಬದುಕು ಕಟ್ಟೋಣ ಬನ್ನಿ ತಂಡದ ಮುಖ್ಯಸ್ಥರಾದ ಶ್ರೀ ರಾಜೇಶ್ ಪೈ ಹಾಗೂ ಮೋಹನ್ ಉಜಿರೆ,ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶ್ರೀನಿವಾಸ್ ರಾವ್ ಧರ್ಮಸ್ಥಳ ಹಾಗೂ ಗಣೇಶ್ ನಾವರ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದ್ದರು.
]]>ಕರಾವಳಿ ಭಾಗದಲ್ಲಿ ಮತಾಂಧರ ಅಟ್ಟಹಾಸಕ್ಕೆ ಎದೆಯೊಡ್ಡಿ ತನ್ನದೇ ರೀತಿಯಲ್ಲಿ ತೀಕ್ಷ್ಣ ಮಾತುಗಳ ಮೂಲಕ ಎಚ್ಚರಿಕೆ ನೀಡಿದ್ದ ಹರೀಶ್ ಪೂಂಜಾ ಅವರು ಗೃಹ ಸಚಿವರನ್ನು ಭೇಟಿ ಮಾಡಿರುವುದರಿಂದ ಮತಾಂಧರ ಮಟ್ಟಹಾಕಲು ಪೊಲೀಸರಿಗೆ ಇನ್ನಷ್ಟು ಬಲಸಿಗಲಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ.
ಕೆಲವು ಸಮಯದ ಹಿಂದೆ ಬಹಿರಂಗ ಸಭೆಯಲ್ಲಿ ಎಸ್ಡಿಪಿಐ ಮುಖಂಡರ ವಿರುದ್ಧ ಬೆಂಕಿಯ ಮಾತುಗಳನ್ನಾಡಿದ್ದ ಹರೀಶ್ ಪೂಂಜಾ ಅವರು ಸಮಾಜ ಘಾತುಕ ಶಕ್ತಿಗಳನ್ನು ಮಟ್ಟಹಾಕಲು ಪೊಲೀಸರಿಗೆ ಪೂರ್ಣ ಪ್ರಮಾಣದ ಸ್ವಾತಂತ್ರ್ಯ ನೀಡಲು ಗೃಹ ಸಚಿವರಿಗೆ ಮನವಿ ಮಾಡಿದ್ದರೆನ್ನಲಾಗಿದೆ.
ಈ ಬಗ್ಗೆ ವಿಡಿಯೋವನ್ನು ಹರೀಶ್ ಪೂಂಜಾ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡು ” ಕರ್ನಾಟಕ ರಾಜ್ಯದ ಮುಖ್ಯಮಂತ್ರಿಲಾದ್ ಜವಾಬ್ಧಾರಿ ವಹಿಸೊಂಡಿ ಬೋಕ್ಕ ಸುರೂತ ಸರ್ತಿ ತುಳುನಾಡ್ಗ್ ಬತ್ತಿನ ಶ್ರೀ ಬಸವರಾಜ ಬೊಮ್ಮಾಯಿ ಮೆರೆಡ ನಮ್ಮ ಅಪ್ಪೆ ಬಾಷೆ ಆಯಿನ ತುಳು ಬಾಷೆಗ್ 8ನೆ ಪರಿಚ್ಛೇದದ ಮಾನಾದಿಗೆ ಒದಗಾದ್ ಕೊರೋಡು ಪಂಡ್ದ್ ಮಾನ್ಯ ಮುಖ್ಯಮಂತ್ರಿಲೆಡ ಬಿನ್ನ ಮಲ್ತೊಂಡೆ” ಎಂದು ಬರೆದುಕೊಂಡಿದ್ದಾರೆ.
ಶಾಸಕರ ಈ ನಡೆ ತುಳುನಾಡಿನ ಜನರ ಮೆಚ್ಚುಗೆಗೆ ಪಾತ್ರವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರ ಬಗ್ಗೆ ಶ್ಲಾಘನೆ ವ್ಯಕ್ತ ಪಡಿಸುತ್ತಿದ್ದಾರೆ. ಆದಷ್ಟು ಶೀಘ್ರವಾಗಿ ತುಳು ಭಾಷೆ 8ನೇ ಪರಿಚ್ಛೇಧಕ್ಕೆ ಸೇರ್ಪಡೆಯಾಗಲಿ.
]]>ಬೆಳ್ತಂಗಡಿ ಸರಕಾರಿ ಪ್ರವಾಸಿ ಬಂಗಲೆಯಲ್ಲಿ ಮಂಗಳವಾರ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸಂದಿಗ್ದ ಪರಿಸ್ಥಿತಿಯಲ್ಲೂ ಕೂಡ ತಾಲೂಕಿನಲ್ಲಿ ಅಭಿವೃದ್ಧಿಯ ವೇಗ ಕಡಿಮೆಯಾಗಿಲ್ಲ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲರ ಜೊತೆ ಸೇರಿ ಇಲ್ಲಿನ ಯುವ ಶಾಸಕರು ಪರಿಸ್ಥಿತಿ ಎದುರಿಸಿದ ರೀತಿ ಎಲ್ಲರಿಗೂ ಮಾದರಿ. ಚಾರ್ಮಾಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆರೆಯಿಂದ ತೊಂದರೆಯಾದಾಗ ಶ್ರೀಕ್ಷೇತ್ರ ಧರ್ಮಸ್ಥಳ ಹೆಗ್ಗಡೆಯವರನ್ನು, ಉಜಿರೆಯ ಬದುಕು ಕಟ್ಟೋಣ ಬನ್ನಿ ತಂಡದವರನ್ನೂ ಸೇರಿದಂತೆ ಸ್ವಯಂ ಸೇವಾ ಸಂಘದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರಕಾರ ಅನುದಾನ, ಸ್ಥಳೀಯ ಸಂಪನ್ಮೂಲ ಬಳಸಿ ಅಲ್ಲಿನನವರ ಮನೆಗಳ ಪುನರ್ ನಿರ್ಮಾಣ, ಕೃಷಿಯ ಮರುಸ್ಥಾಪನೆ ದೃಷ್ಟಿಯಲ್ಲಿ ವಿಶೇಷ ಪ್ರಯತ್ನ ಮಾಡಿದ್ದಾರೆ. ಅವರ ಈ ಕಾರ್ಯವನ್ನು ಬಿಜೆಪಿ ಅಭಿನಂದನೆ ಸಲ್ಲಿಸುತ್ತದೆ ಎಂದರು.
ಶಾಸಕರು ತಾಲೂಕಿನಲ್ಲಿ ಅನುಷ್ಟಾನಿಸಿದ ಯೋಜನೆಗಳ ವ್ಯಾಪ್ತಿಯನ್ನು ನೋಡಿದರೆ, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಎತ್ತಿನಹೊಳೆ ಯೋಜನೆಗೆ ಪರ್ಯಾಯವಾಗಿ ನೀರಿನ ಯೋಜನೆ ಮಾಡುವ ಉದ್ದೇಶದಿಂದ ಒಟ್ಟು ಪ್ರಯತ್ನ ಮಾಡಿದರ ಫಲವಾಗಿ ನೀರಾವರಿ ಯೋಜನೆಯ ಇತಿಹಾಸದಲ್ಲೇ ಅಪೂರ್ವವಾದದ್ದು. ತಾಲೂಕಿನಲ್ಲಿ ಆಗಿರುವ ಕಿಂಡಿ ಅಣೆಕಟ್ಟುಗಳು, ಜಿಲ್ಲೆಯ ಇತಿಹಸದಲೇ ಮೊದಲ ಬಾರಿಗೆ ಮಂಜೂರಾಗಿರುವ ಏತ ನೀರಾವರಿ ಯೋಜನೆಯಿಂದ ನೀರಿನ ಅಂತರ್ಜಲ ಮಟ್ಟ ಏರಿಸುವ ಕೆಲಸವಾಗಿದೆ. ತಾಲೂಕಿನಲ್ಲಿ 28 ಕಿಂಡಿ ಅಣೆಕಟ್ಟುಗಳು ಪೂರ್ತಿ ಯಾಗುತ್ತಿದೆ. ಇದರಿಂದ 94 ಕಿ.ಮೀ ನೀರು ನಿಲ್ಲಿಸುವ ಪ್ರಯತ್ನ ಆಗಿದೆ.
ದ.ಕ ಜಿಲ್ಲೆಯ 240 ಕೋಟಿ ರೂ.ಅನುದಾನದಲ್ಲಿ ಏತನೀರಾವರಿ ಯೋಜನೆಗೆ ಕ್ಯಾಬಿನೆಟ್ನಲ್ಲಿ ಮಂಜೂರಾತಿಯಾಗಿದ್ದು, ಇದರಿಂದಾಗಿ 300 ಕಿ.ಮೀ ವ್ಯಾಪ್ತಿಯಲ್ಲಿ ನೀರಿನ ಅಭಾವ ನೀಗಿಸುವ ವಾತಾವರಣ ನಿರ್ಮಾಣವಾಗುತ್ತದೆ. ಅಂತರ್ಜಲ ಮಟ್ಟ ಏರುತ್ತದೆ. ಕೊಳವೆಬಾವಿ ಸಮಸ್ಯೆಗಳಿಗೆ ಉತ್ತರ ದೊರೆಯುತ್ತದೆ. ಕೇಂದ್ರ ಸರಕಾರದ ಜಲಜೀವನ್ ಮೆಷಿನ್ ನಡಿ ಪ್ರತೀ ಮನೆಗೆ ನಳ್ಳಿ ನೀರು ಒದಗಿಸುವ ಕನಸಿನ ಯೋಜನೆಯೂ ಪೂರ್ಣವಾಗುತ್ತದೆ ಎಂದರು.
ಈ ಹಿಂದೆ ಸರಕಾರಗಳು ವಿಶ್ವಬ್ಯಾಂಕ್ ನಿಂದ ಸಾಲ ಪಡೆದು ತಂದ ಕೆಲವು ನೀರಾವರಿ ಯೋಜನೆಗಳು ನೀರಿನಲಭ್ಯತೆ ಇಲ್ಲದೆ ಫಲ ನೀಡದ ಇತಿಹಾಸ ಇರುವಾಗ ಈ ಕಿಂಡಿ ಅಣೆಕಟ್ಟು ಮತ್ತು ಏತನೀರಾವರಿ ಯೋಜನೆಗಳು ಮಾದರಿಯಾಗಿದೆ.
ಶಿಕ್ಷಣ ಕ್ಷೇತ್ರದಲ್ಲೂ 5.50 ಕೋಟಿ ರೂ. ಎಂ.ಆರ್.ಪಿ.ಎಲ್ ಅನುದಾನದಲ್ಲಿ 55 ಸರಕಾರಿ ಶಾಲೆಗಳಲ್ಲಿ ವ್ಯವಸ್ಥಿತವಾದ ಶೌಚಾಲಯದ ನಿರ್ಮಿಸಿರುವುದು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಜನರಿಗೆ ಆಸಕ್ತಿ ಮೂಡುವ ರೀತಿಯ ವಿಚಾರವಾಗಿದೆ. ಒಟ್ಟಿನಲ್ಲಿ ತಾಲೂಕನ್ನು ಅಭಿವೃದ್ಧಿಯ ದೃಷ್ಟಿಯಲ್ಲಿ ಓರ್ವ ಶಾಸಕ ಏನು ಮಾಡಬಹುದು ಎಂಬುದನ್ನು ಅಧ್ಯಯನ ಮಾಡುವ ರೀತಿಯಲ್ಲಿ ರೂಪಿಸಿದ್ದಾರೆ.
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಮಾದರಿಯಲ್ಲಿ ಗ್ರಾಮಾಂತರದ ರಸ್ತೆಯನ್ನೂ 18 ಅಡಿ ಮಾಡಿ, ಎರಡು ವಾಹನ ಹಾದುಹೋಗುವ ರೀತಿಯಲ್ಲಿ ಸರ್ವ ಋತು ರಸ್ತೆಯಾಗಿ ಮಾಡಿದ್ದಾರೆ. ಉತ್ತಮ ಕಲ್ಪನೆ, ಕನಸು ಇದ್ದಾಗ ಹೇಗೆ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಎಂದು ತೋರಿಸಿದ್ದಾರೆ. ಒಟ್ಟಾರೆಯಾಗಿ ತಾಲೂಕನ್ನು ಪ್ರವಾಸೋದ್ಯಮ ರೀತಿಯಲ್ಲಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ.
ಏತ ನೀರಾವರಿಯಿಂದ ಎಂಟು ಗ್ರಾಮಗಳಿಗೆ ಪ್ರಯೋಜನದ ಜೊತೆಗೆ ಮುಗೆರಡ್ಕ -ಉಪ್ಪಿನಂಗಡಿ ಹೈಬೇ ಸೇರಿಸುವ ಕಾರ್ಯ, ಗುರುವಾಯನಕೆರೆ ಕೆರೆಯನ್ನು ಪ್ರವಾಸೋದ್ಯಮ ದೃಷ್ಟಿಯಲ್ಲಿ ಅಭಿವೃದ್ಧಿ ಪಡಿಸಲು 15 ಕೋಟಿ ರೂ. ಯೋಜನೆ ಅನುಷ್ಠಾನಕ್ಕೆ ತರುತ್ತಿದ್ದಾರೆ.ನಗರದ ಪ್ರಮುಖ ಭಾಗದಲ್ಲಿ ಸಾಲುಮರ ತಿಮ್ಮಕ್ಕ ಪಾರ್ಕ್ ಹೆಸರಿನಲ್ಲಿ 28 ಎಕ್ರೆ ಜಾಗದಲ್ಲಿ ಪ್ರವಾಸೋದ್ಯಮ ಕೇಂದ್ರ ಆಗುವ ರೀತಿಯಲ್ಲಿ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ತರುತ್ತಿದ್ದಾರೆ. ಉಜಿರೆ ನಿನ್ನಿಕಲ್ಲು ಬಳಿ 100 ಎಕ್ರೆ ಸ್ಥಳವನ್ನು ಕೈಗಾರಿಕಾ ಪಾರ್ಕ್ ಮಾಡುವಲ್ಲಿ ದೂರಗಾಮಿ ಯೋಜನೆ ರೂಪಿಸಿದ್ದು ಅದು ಮಂಜೂರಾಗುವ ಹಂತಕ್ಕೆ ಬಂದು ನಿಂತಿದೆ. ಪ್ರತೀ ಪಂಚಾಯತ್ ಗಳಲ್ಲೂ ತ್ಯಾಜ್ಯ ವಿಲೇವಾರಿ ದೃಷ್ಟಿಯಲ್ಲಿ ಕೆಲಸ ಹಾಗೂ ತಾಲೂಕಿನ ಎಲ್ಲಾ ತ್ಯಾಜ್ಯಗಳನದನೂ ವಿಲೇ ವಾರಿ ಮಾಡುವ ದೃಷ್ಟಿಯಿಂದ ಸಂಪೂರ್ಣ ನೈರ್ಮಲ್ಯ ದೊಂದಿಗೆ ಸಂಜೆ ವೇಳೆ ವಾಕಿಂಗ್ ಮಾಡುವ ರೀತಿಯಲ್ಲಿ ಸಂಸ್ಕರಣ ಘಟಕ ನಿರ್ಮಿಸುವ ಉದ್ದೇಶ ಅವರ ಪರಿಕಲ್ಪನೆ ಯಲ್ಲಿದೆ. ಬೆಳ್ತಂಗಡಿ ಮಾದರಿ ಶಾಲೆಯನ್ನು ಕನ್ನಡ ಕಲಿಯುವ ಪ್ರೇರಣೆ ದೊಡ್ಡ ರೂಪವನ್ನು ಕೊಡುವ ದೊಡ್ಡ ಉದ್ದೇಶದಿಂದ ಮಹತ್ವಪೂರ್ಣವಾಗಿ ಕಟ್ಟಲು ಕನಸು ಇಟ್ಟುಕೊಂಡಿದ್ದಾರೆ. ಒಟ್ಟಾರೆಯಾಗಿ ತಾಲೂಕಿನಲ್ಲಿ ಅಭಿವೃದ್ದಿ ಒಂದೇ ನಮ್ಮ ಮಂತ್ರ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರದ ಯೋಜನೆಗಳನ್ನು ಅಭಿವೃದ್ಧಿಯ ಹಿನ್ನೆಲೆಯಲ್ಲಿ ಇನ್ನಷ್ಟು ಹೊಸಯೋಚನೆ, ಯೋಜನೆಗಳನ್ನು ತರುವ ದೃಷ್ಟಿಯಲ್ಲಿ ವಿರೋಧ ಪಕ್ಷದವರಿಗೆ ಚರ್ಚೆಗೆ ಅವಕಾಶವೇ ಇಲ್ಲದ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.
ವಿರೋಧ ಪಕ್ಷಗಳು ಚರ್ಚೆ ಮಾಡಬೇಕಾದ ಜಾಗದಲ್ಲಿ ಚರ್ಚೆಗಳನ್ನು ಮಾಡದೆ ಬೀದಿ ಬೀದಿಯಲ್ಲಿ ನಿಂತು ಚರ್ಚೆ ಮಾಡುವುದು ಸರಿಯಲ್ಲ. ಪ್ರತಿಪಕ್ಷ ಎಂಬ ಕಾರಣಕ್ಕೆ ಮಾತನಾಡುತ್ತಾರೆಯೇ ಹೊರತು ಅಭಿವೃದ್ಧಿ ಪೂರಕವಾಗಿ ಚರ್ಚಿಸದೇ ಇರುವುದು ಖೇದಕರ. ಈ ರೀತಿಯಾಗಿ ಮೊಸರಿನಲ್ಲಿ ಕಲ್ಲು ಹುಡುಕುವವರಿಗೆ ಸಮಾಧಾನ ಹೇಳಲು ನಮ್ಮಿಂದ ಸಾಧ್ಯವಿಲ್ಲ. ಯಾರೇ ಆಗಲಿ ಮಾಡಿದ ಕೆಲಸ ಹೇಳುವುದರಲ್ಲಿ ಸಣ್ಣತನ ಅಲ್ಲ.ಒಳ್ಳೆಯ ಕೆಲಸ ಮಾಡಿದರೆ ಕನಿಷ್ಠ ಪಕ್ಷ ಒಳ್ಳೆಯ ಮಾತನ್ನಾದರೂ ಹೇಳಬಹುದು. ಸುಮ್ಮನೆ ಟೀಕಿಸಿ ಅಭಿವೃದ್ಧಿಯ ವೇಗ ಕುಂಠಿತಗೊಳಿಸಬೇಡಿ ಎಂದು ಯಾರ ಹೆಸರನ್ನೂ ಪ್ರಸ್ತಾಪಿಸದೆ ಪ್ರತ್ಯುತ್ತರ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ, ಬಿಜೆಪಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್, ಮಾಜಿ ಅಧ್ಯಕ್ಷರುಗಳಾದ ಬಾಲಕೃಷ್ಣ ವಿ ಶೆಟ್ಟಿ ಸವಣಾಲು ಮತ್ತು ಪೂವಾಜೆ ಕುಶಾಲಪ್ಪ ಗೌಡ ಉಪಸ್ಥಿತರಿದ್ದರು.
]]>