Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Warning: Cannot modify header information - headers already sent by (output started at /home3/buntss5v/iambjp.in/wp-includes/functions.php:6121) in /home3/buntss5v/iambjp.in/wp-includes/feed-rss2.php on line 8
JanSwaraj – I am BJP https://iambjp.in Making Bharat Vishwa Guru Fri, 19 Nov 2021 08:33:30 +0000 en-US hourly 1 https://wordpress.org/?v=6.8.1 https://iambjp.in/wp-content/uploads/2021/08/cropped-Smal-Logo-32x32.png JanSwaraj – I am BJP https://iambjp.in 32 32 ಮಿನಿ ಸಮರದಲ್ಲಿ ಬಿಜೆಪಿ ಬೆಂಬಲಿಸಿ- ಶೋಭಾ ಕರಂದ್ಲಾಜೆ https://iambjp.in/archives/702 https://iambjp.in/archives/702#respond Fri, 19 Nov 2021 08:33:30 +0000 https://iambjp.in/?p=702 ಉಡುಪಿ :  ಡಿ. 10 ರ ವಿಧಾನಪರಿಷತ್ ಚುನಾವಣೆ ರಾಜ್ಯದ ಮಿನಿ ಸಮರ. ಇದರಲ್ಲಿ ವಿಧಾನಪರಿಷತ್ತಿನ ಸಭಾ ನಾಯಕರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಮತ್ತೆ ಗೆಲ್ಲಿಸಿ ಎಂದು ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ತಿಳಿಸಿದರು.

ಉಡುಪಿಯಲ್ಲಿ ಇಂದು ಜನಸ್ವರಾಜ್ ಯಾತ್ರೆಯಲ್ಲಿ ಮಾತನಾಡಿದ ಅವರು, ಸರಕಾರದ ಯಾವುದೇ ಮಸೂದೆ ಮಂಜೂರಾಗಲು ವಿಧಾನಪರಿಷತ್‍ನಲ್ಲೂ ಬಹುಮತ ಬೇಕು. ವಿಧಾನಸಭೆಯಲ್ಲಿ ಮಂಜೂರಾದ ಗೋಹತ್ಯಾ ಬಿಲ್ ವಿಧಾನಪರಿಷತ್‍ನಲ್ಲಿ ಮಂಜೂರಾಗಲು ಕಷ್ಟವಾಯಿತು. ಆದ್ದರಿಂದ ನಾವು ಹೆಚ್ಚು ಸ್ಥಾನ ಗೆಲ್ಲಬೇಕಿದೆ ಎಂದರು. ನರೇಂದ್ರ ಮೋದಿಯವರಿಗೆ ದಕ್ಷಿಣ ಭಾರತದಲ್ಲಿ ಇರುವ ಬೆಂಬಲಕ್ಕೆ ಈ ಚುನಾವಣೆ ಒರೆಗಲ್ಲು ಇದ್ದಂತೆ ಎಂದು ತಿಳಿಸಿದರು. ಉಡುಪಿಯಲ್ಲಿ ಪಕ್ಷ ಗೆಲ್ಲುವ ವಿಶ್ವಾಸ ನಮಗಿದೆ ಎಂದರು.

ಉತ್ತರ ಪ್ರದೇಶದ ಚುನಾವಣೆ ಎಂದರೆ ರಾಮಮಂದಿರದ ಚುನಾವಣೆ. ಉತ್ತರ ಪ್ರದೇಶದಲ್ಲಿ ಯೋಗಿಯವರ ನೇತೃತ್ವದಲ್ಲಿ ಮತ್ತೆ ನಮ್ಮ ಸರಕಾರ ಬರಬೇಕಿದೆ. ಅದೇರೀತಿ ರಾಜ್ಯದಲ್ಲೂ ಪಕ್ಷವು ಅತಿ ಹೆಚ್ಚು ವಿಧಾನಪರಿಷತ್ ಚುನಾವಣೆಯಲ್ಲಿ ಗರಿಷ್ಠ ಸ್ಥಾನಗಳನ್ನು ಗೆಲ್ಲಬೇಕಿದೆ ಎಂದು ತಿಳಿಸಿದರು. ನರೇಂದ್ರ ಮೋದಿಯವರು ಈಗ ಪ್ರಪಂಚದ ನಾಯಕರಾಗಿದ್ದಾರೆ. ನುಡಿದಂತೆ ನಡೆದ ನಾಯಕ ಅವರು ಎಂದು ವಿವರಿಸಿದರು.

ಕೋವಿಡ್ ನಿಭಾಯಿಸುವಲ್ಲಿ ನಮ್ಮ ದೇಶ ಮಾಡಿದ ಕಾರ್ಯ ಅತ್ಯಂತ ಶ್ಲಾಘನೀಯ. ಸಮರ್ಥ ನೇತೃತ್ವ ನೀಡುವ ಕಾರ್ಯವನ್ನು ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದಾರೆ. ಆದರೆ, ಕಾಂಗ್ರೆಸ್‍ನವರು ಕೋವಿಡ್ ಲಸಿಕೆಯನ್ನು ವಿರೋಧಿಸಿದರು ಎಂದು ತಿಳಿಸಿದರು. 100 ಕೋಟಿಗೂ ಹೆಚ್ಚು ಜನರಿಗೆ ಈಗಾಗಲೇ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. 2023ರಲ್ಲಿ ಮತ್ತೆ ರಾಜ್ಯದಲ್ಲಿ ನಮ್ಮ ಸರಕಾರ ಮತ್ತು 2024ರಲ್ಲಿ ಮತ್ತೆ ಮೋದಿಯವರು ಪ್ರಧಾನಿಯಾಗುವಂತೆ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದಗೌಡ ಅವರು ಮಾತನಾಡಿ, ಕೇಂದ್ರ- ರಾಜ್ಯ ಸರಕಾರಗಳ ಸಾಧನೆ ಮತ್ತು ಜನಪರ ಕಾರ್ಯಕ್ರಮಗಳನ್ನು ಜನಪ್ರತಿನಿಧಿಗಳಿಗೆ ತಿಳಿಸಿ ಹೇಳಬೇಕು. ಕಾಂಗ್ರೆಸ್‍ನ ಬುರುಡೆ ಬಿಡುವವರಿಗೆ ಈ ಸಮಾವೇಶ ಸ್ಪಷ್ಟ ಉತ್ತರ ನೀಡುವಂತಿದೆ ಎಂದರು.

ಗ್ರಾಮಗಳಿಗೆ ಉದ್ಯೋಗ ಸಂಬಂಧ ಅನುದಾನವನ್ನು 150 ಮಾನವ ದಿನಕ್ಕೆ ಕೇಂದ್ರ ಸರಕಾರ ಹೆಚ್ಚಿಸಿದೆ. ಹಿಂದೆ ಕಾಂಗ್ರೆಸ್ ಸರಕಾರ ಇದ್ದಾಗ ಭ್ರಷ್ಟಾಚಾರ ಎಲ್ಲೆಡೆ ತಾಂಡವವಾಡುತ್ತಿತ್ತು. ಈಗ ಭ್ರಷ್ಟಾಚಾರರಹಿತವಾಗಿ ಕೆಲಸಗಳು ನಡೆಯುತ್ತಿವೆ ಎಂದು ವಿವರಿಸಿದರು.

ಮನೆ ಮನೆಗೆ ಶುದ್ಧ ನೀರು ಸರಬರಾಜಿಗೆ ರಾಜ್ಯಕ್ಕೆ 1,008 ಕೋಟಿ ರೂಪಾಯಿ ನೀಡಲಾಗಿದೆ. ಸೌರ ವಿದ್ಯುತ್‍ಗೆ ಹಣ ಕೊಡಲಾಗಿದೆ. ಇಂಟರ್‍ನೆಟ್ ಕನೆಕ್ಟಿವಿಟಿ ಪ್ರತಿ ಗ್ರಾಮ ಪಂಚಾಯಿತಿಗೆ 20203ರ ವೇಳೆಗೆ ಲಭಿಸಲಿದೆ. 2025ಕ್ಕೆ ದೇಶದ ಪ್ರತಿಯೊಬ್ಬರಿಗೂ ಸೂರು ಒದಗಿಸಲು ಸರಕಾರ ಮುಂದಾಗಿದೆ ಎಂದು ತಿಳಿಸಿದರು. ಸ್ವಾಭಿಮಾನಿ ಭಾರತದ ನಿರ್ಮಾಣದ ಕನಸನ್ನು ನನಸಾಗಿಸಲು ಪ್ರಧಾನಿಯವರು ಮುಂದಾಗಿದ್ದಾರೆ ಎಂದು ತಿಳಿಸಿದರು. ಹೊಸ ಶಿಕ್ಷಣ ನೀತಿ ಉದ್ಯೋಗ ಸೃಷ್ಟಿಗೆ ಪೂರಕ ಪಠ್ಯಕ್ರಮವನ್ನು ಹೊಂದಿದೆ ಎಂದರು.

ವಿಧಾನಪರಿಷತ್‍ನ 25 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಬಿಜೆಪಿಯ ಫೈರ್ ಬ್ರಾಂಡ್ ತಂಡ ಇಲ್ಲಿನದು. ಈ ಬಾರಿಯ ಚುನಾವಣೆ ಎ+++ ಫಲಿತಾಂಶ ನೀಡಲಿದೆ ಎಂದು ವಿಶ್ವಾಸದಿಂದ ನುಡಿದರು. ರೈತರ ಆದಾಯ ದ್ವಿಗುಣಗೊಳಿಸಲು ಸರಕಾರ ಬದ್ಧವಾಗಿದೆ ಎಂದು ತಿಳಿಸಿದರು. ರೈತರು, ಬೆಳೆಗಾರರನ್ನು ನಾವು ಬಿಟ್ಟು ಹಾಕುವುದಿಲ್ಲ. ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಸುಪ್ರೀಂ ಕೋರ್ಟ್‍ಗೂ ಮನವರಿಕೆ ಮಾಡಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಮಾತನಾಡಿ, ಉಡುಪಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಬಗ್ಗೆ ಪರಿಶೀಲನೆ ನಡೆದಿದೆ. ನವೋದಯ ಚಾರಿಟೆಬಲ್ ಟ್ರಸ್ಟ್‍ಗೆ ಡಿಸಿಸಿ ಬ್ಯಾಂಕಿನಿಂದ 19 ಲಕ್ಷ ಹಣ ವರ್ಗಾವಣೆ, ಬ್ಯಾಂಕಿನ ಶಾಖೆಯನ್ನು ಇದೇ ಟ್ರಸ್ಟಿನ ಕಟ್ಟಡದಲ್ಲಿ ನಡೆಸುವುದು ಕಾನೂನುಬಾಹಿರ. ಮಂಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರ ವಜಾಕ್ಕೆ ನೋಟಿಸ್ ಕೊಟ್ಟಿದ್ದೇವೆ ಎಂದು ತಿಳಿಸಿದರು. ಈ ವರ್ಷ 20,810 ಕೋಟಿ ಸಾಲವನ್ನು ನೀಡುವ ಗುರಿ ಇದ್ದು 10,591 ಕೋಟಿ ಹಣವನ್ನು ಸಾಲವಾಗಿ ರೈತರಿಗೆ ಈಗಾಗಲೇ ನೀಡಲು ಚಾಲನೆ ಕೊಟ್ಟಿದ್ದೇವೆ ಎಂದರು.

ಕೋಟ ಶ್ರೀನಿವಾಸ ಪೂಜಾರಿಯವರು ವಿಧಾನಪರಿಷತ್‍ನಲ್ಲಿ ಪಕ್ಷ ಮತ್ತು ಸರಕಾರವನ್ನು ಸಮರ್ಥವಾಗಿ ಪ್ರತಿನಿಧಿಸಿ ಉತ್ತರ ನೀಡುತ್ತಾರೆ. ಅವರನ್ನು ಗರಿಷ್ಠ ಮತಗಳಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಸಹಕಾರ ಇಲಾಖೆ ಅಧಿಕಾರಿಗಳು ಜನರಿಗೆ ಸರಿಯಾಗಿ ಸ್ಪಂದಿಸದೆ ಇದ್ದರೆ ಅದನ್ನು ಸಹಿಸಲಾಗದು ಎಂದು ಎಚ್ಚರಿಸಿದರು.

ಸಚಿವರಾದ ಎಸ್. ಅಂಗಾರ, ವಿ ಸುನೀಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಶ್ವತ್ಥನಾರಾಯಣ, ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ವಿನಯ್ ಬಿದರೆ, ಪಕ್ಷದ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಸುಕುಮಾರ್ ಶೆಟ್ಟಿ, ಉಮಾನಾಥ್ ಕೋಟ್ಯಾನ್, ರಘುಪತಿ ಭಟ್, ವಿಭಾಗ ಪ್ರಭಾರಿಗಳಾದ ಉದಯ ಕುಮಾರ್ ಶೆಟ್ಟಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಎಂ ಶಂಕರಪ್ಪ, ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಯಶ್‍ಪಾಲ್ ಸುವರ್ಣ, ಜನಪ್ರತಿನಿಧಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

]]>
https://iambjp.in/archives/702/feed 0
ಬಿಜೆಪಿಗೆ ಅತಿ ಹೆಚ್ಚು ವಿಧಾನಪರಿಷತ್ ಸ್ಥಾನ – ನಳಿನ್‍ ಕುಮಾರ್ ಕಟೀಲ್ ವಿಶ್ವಾಸ https://iambjp.in/archives/699 https://iambjp.in/archives/699#respond Thu, 18 Nov 2021 11:06:09 +0000 https://iambjp.in/?p=699 ಬೆಂಗಳೂರು: ಗ್ರಾಮ ಪಂಚಾಯಿತಿ ಸದಸ್ಯರಿಗೆ ಗೌರವ, ಹೆಚ್ಚು ಅನುದಾನ, ಗೌರವಧನವನ್ನು ಬಿಜೆಪಿ ಸರಕಾರಗಳು ನೀಡಿವೆ. ಆದ್ದರಿಂದ ಸ್ವಾಭಿಮಾನದ ಬದುಕು ನೀಡಲು ಪಂಚಾಯಿತಿ ಸದಸ್ಯರ ಗೌರವಧನವನ್ನು 10 ಸಾವಿರಕ್ಕೆ ಹೆಚ್ಚಿಸಲು ಯೋಜಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.

ಕೊಪ್ಪಳದಲ್ಲಿ ಇಂದು ನಡೆದ ಜನಸ್ವರಾಜ್ ಯಾತ್ರೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿಗಳಿಗೆ ಹೆಚ್ಚು ಅನುದಾನವನ್ನು ನೀಡಲಾಗಿದೆ. ಮುಂದಿನ ಸಾಲಿನಲ್ಲಿ 5,500 ಗ್ರಾಮಗಳಿಗೆ ಅಮೃತ ಯೋಜನೆ ವಿಸ್ತರಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು. ಗರಿಷ್ಠ ಪ್ರಮಾಣದ ಪಂಚಾಯಿತಿ ಸದಸ್ಯರು ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಅತಿ ಹೆಚ್ಚಿನ ವಿಧಾನಪರಿಷತ್ ಸ್ಥಾನಗಳು ಸಿಗಲಿವೆ. ಇನ್ನೆರಡು ದಿನಗಳಲ್ಲಿ ಪಕ್ಷದ ಅಭ್ಯರ್ಥಿಗಳ ವಿವರ ಪ್ರಕಟಗೊಳ್ಳಲಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಕೇವಲ ಮೋಸ, ಸುಳ್ಳು, ವಂಚನೆಯನ್ನೇ ಮಾಡುತ್ತಾ ಬಂದಿದೆ. ಕಾಂಗ್ರೆಸ್ ಕಾಲದಲ್ಲೇ ರಫೇಲ್ ಹಗರಣ ನಡೆದಿದೆ. ಬಿಟ್ ಕಾಯಿನ್ ಕುರಿತು ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್‍ನವರು ಬಿಟ್ ಕಾಯಿನ್‍ನ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರು ಇರುವುದನ್ನು ಪತ್ರಿಕೆಗಳೇ ಬರೆದಿವೆ ಎಂದರು.

ಕಾಂಗ್ರೆಸ್ ಆಡಳಿತ ಡ್ರಗ್ ಮಾಫಿಯಾದಡಿ ಬದುಕಿತ್ತು. ಡ್ರಗ್ ಮಾಫಿಯಾವನ್ನು ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ನಿಯಂತ್ರಿಸಿದೆ. ಬೊಮ್ಮಾಯಿಯವರ ನೇತೃತ್ವದಲ್ಲಿ ಪಕ್ಷ ಸದೃಢವಾಗಿದೆ ಎಂದು ವಿವರಿಸಿದರು.

ಅಭಿವೃದ್ಧಿಗೆ ಹಲವು ಯೋಜನೆ

ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ತುಂಗಭದ್ರಾ ಎಡದಂಡೆ ಕಾಲುವೆ ಆಧುನೀಕರಣಕ್ಕೆ 1,200 ಕೋಟಿ ಮಂಜೂರು ಮಾಡಿ ಕೆಲಸ ಮಾಡಿಸಿದ ಸಮಾಧಾನ ನನಗಿದೆ. 10-15 ವರ್ಷ ಕಾಂಗ್ರೆಸ್ ಆಡಳಿತವಿದ್ದರೂ ಇದನ್ನು ಗಮನಿಸಿರಲಿಲ್ಲ. ಇದು ಕಾಂಗ್ರೆಸ್ ನೀತಿ ಎಂದರು. ಕೃಷ್ಣಾ ನೀರಾವರಿ ಯೋಜನೆಗಳ ವಿಚಾರದಲ್ಲೂ ಇದೇ ಮಾದರಿಯಲ್ಲಿ ಕಾಂಗ್ರೆಸ್‍ನಿಂದ ಕಡೆಗಣನೆ ಮಾಡಲಾಯಿತು ಎಂದು ಆಕ್ಷೇಪಿಸಿದರು. ಕೊಪ್ಪಳಕ್ಕೆ ನೀರಾವರಿ ವಿಚಾರದಲ್ಲಿ ಸತತ ಅನ್ಯಾಯ ಮಾಡಲಾಗಿತ್ತು ಎಂದರು.

ವಿವಿಧ ಏತ ನೀರಾವರಿ ಕಾಮಗಾರಿ ಅನುಷ್ಠಾನ, ಕೊಪ್ಪಳ ಜಿಲ್ಲೆಗೇ ನೀರಾವರಿಗೆ ವ್ಯವಸ್ಥೆ ಮಾಡಲಾಗಿತ್ತು. ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಘೋಷಣೆಯು ಕೇವಲ ಘೋಷಣೆಗೇ ಸೀಮಿತವಾಯಿತು. ಉತ್ತರ ಕರ್ನಾಟಕದ ರೈತರಿಗೆ ಕಾಂಗ್ರೆಸ್ ಪಕ್ಷ ಅನ್ಯಾಯ ಮಾಡಿದೆ ಎಂದರು. ಒಂದೂವರೆ ವರ್ಷದಲ್ಲಿ ಕೊಪ್ಪಳ ಏತ ನೀರಾವರಿ ಯೋಜನೆ ಪೂರ್ಣಗೊಳ್ಳಲಿದೆ ಎಂದರು. ಸಿಂಗಟಾಲೂರು ಏತ ನೀರಾವರಿ ಯೋಜನೆಯನ್ನೂ ಕಡೆಗಣಿಸಲಾಗಿದೆ. ಅದನ್ನು ಬೇಗನೆ ಪೂರ್ಣಗೊಳಿಸುತ್ತೇವೆ ಎಂದು ತಿಳಿಸಿದರು.

ಜನಪರ ಕೆಲಸಗಳ ಬದ್ಧತೆ, ದೂರದೃಷ್ಟಿ ಸರಕಾರಕ್ಕೆ ಇರಬೇಕು. ಹೈದರಾಬಾದ್ ಕರ್ನಾಟಕ ಗುಲಾಮಗಿರಿಯ ಸಂಕೇತ. ಅದರ ಹೆಸರನ್ನು ಕಲ್ಯಾಣ ಕರ್ನಾಟಕ ಮಾಡಲು ನಮ್ಮ ನಾಯಕರಾದ ಯಡಿಯೂರಪ್ಪ ಅವರು ಪ್ರೇರಣೆ ನೀಡಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ 3 ಸಾವಿರ ಕೋಟಿ ನೀಡಲಾಗುವುದು ಎಂದು ತಿಳಿಸಿದರು. ತುಂಗಭದ್ರಾ ಅಣೆಕಟ್ಟಿನ ಹೂಳು ತೆಗೆಸಲು ಕೊಪ್ಪಳದ ಶ್ರೀಗಳು ಕ್ರಾಂತಿಕಾರಿ ಕೆಲಸ ಮಾಡಿದ್ದಾರೆ. ಸಮಾನಾಂತರ ಬ್ಯಾರೇಜ್ ನಿರ್ಮಾಣಕ್ಕೆ ಯೋಜನೆ ಸಿದ್ಧವಿದೆ. ಬ್ಯಾರೇಜ್ ಕಟ್ಟಲು ಹೆಜ್ಜೆ ಮುಂದಿಡಲಿದ್ದೇವೆ ಎಂದು ಹೇಳಿದರು.

ಕನ್ನಡ ನಾಡನ್ನು ಸುಭಿಕ್ಷ, ಸುರಕ್ಷಿತ, ಸಂಪದ್ಭರಿತ ನಾಡಾಗಿ ಪರಿವರ್ತಿಸುವ ಸಂಕಲ್ಪ ನನ್ನದು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಎಲ್ಲ ರೀತಿಯ ಸೌಕರ್ಯ ನೀಡಲಾಗುವುದು. ಅದಕ್ಕಾಗಿಯೇ ರಾಜ್ಯದ ರೈತರ ಮಕ್ಕಳಿಗೆ ವಿದ್ಯಾರ್ಥಿವೇತನ ಕೊಡುವ ಯೋಜನೆ ಜಾರಿಗೊಳಿಸಲಾಗಿದೆ. ರೈತರು, ರೈತ ಕುಟುಂಬ ಉಳಿದರೆ ದೇಶ ಉಳಿದೀತೆಂಬ ಚಿಂತನೆ ಇದರ ಹಿಂದಿದೆ. ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ ಮಾಸಾಶನವನ್ನೂ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಅಮೃತ ಯೋಜನೆಯಡಿ 750 ಪಂಚಾಯಿತಿಗಳ ಸಮಗ್ರ ಅಭಿವೃದ್ಧಿ ನಡೆಯುತ್ತಿದೆ. ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ಒತ್ತು ಕೊಡಲಾಗಿದೆ ಎಂದು ತಿಳಿಸಿದರು. ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ ಎಂದು ವಿವರಿಸಿದರು. ನೈಜ ಅಧಿಕಾರ ವಿಕೇಂದ್ರೀಕರಣಕ್ಕಾಗಿ ಬಿಜೆಪಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಅಧಿಕಾರದ ಕನಸು ಭಗ್ನವಾಗಿದೆ. ಅದಕ್ಕಾಗಿಯೇ ಕೆಸರೆರೆಚಾಟ ಮುಂದುವರಿಸಿದ್ದು, ಅವರ ಕೈಗೇ ಕೆಸರು ಹತ್ತಿದೆ. ಕಾಂಗ್ರೆಸ್ ಕಾಲದಲ್ಲೇ ಬಿಟ್ ಕಾಯಿನ್ ಅವ್ಯವಹಾರ ಆಗಿದೆ ಎಂದು ಸ್ಪಷ್ಟಪಡಿಸಿದರು. 2016ರಲ್ಲೇ ತನಿಖೆ ಮಾಡಿದ್ದರೆ ಎಲ್ಲವೂ ಬಹಿರಂಗ ಆಗುತ್ತಿತ್ತಲ್ಲವೇ ಎಂದು ಪ್ರಶ್ನಿಸಿದರು.

ಕೇಂದ್ರ ಸಚಿವರಾದ ಭಗವಂತ ಖೂಬಾ ಅವರು ಮಾತನಾಡಿ, ವಿಧಾನಪರಿಷತ್‍ನ 25 ಸ್ಥಾನಗಳ ಪೈಕಿ 20 ಅನ್ನು ಗೆಲ್ಲಿಸಿಕೊಡುವಂತೆ ಮನವಿ ಮಾಡಿದರು. ಸುಳ್ಳು ಹೇಳುವುದೇ ಕಾಂಗ್ರೆಸ್ ಸಾಧನೆ ಎಂದು ಅವರು ಟೀಕಿಸಿದರು. ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಗೆಲ್ಲುವುದು ಅನಿವಾರ್ಯ ಎಂದರು.

ರಾಜ್ಯ ಸಚಿವರಾದ ಹಾಲಪ್ಪ ಆಚಾರ್, ಮುರುಗೇಶ್ ನಿರಾಣಿ, ಸಂಸದರುಗಳಾದ ಕರಡಿ ಸಂಗಣ್ಣ, ಪ್ರತಾಪ್ ಸಿಂಹ, ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸಿದ್ದರು.

]]>
https://iambjp.in/archives/699/feed 0
ಕೊಪ್ಪಳದಲ್ಲಿ ಜನಸ್ವರಾಜ್ ಸಮಾವೇಶ ಆರಂಭ https://iambjp.in/archives/692 https://iambjp.in/archives/692#respond Thu, 18 Nov 2021 10:22:48 +0000 https://iambjp.in/?p=692 ಕೊಪ್ಪಳದಲ್ಲಿ ಜನಸ್ವರಾಜ್ ಯಾತ್ರೆಯು ಇಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ನಳಿನ್‍ಕುಮಾರ್ ಕಟೀಲ್, ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಿತು.

ಪಕ್ಷವನ್ನು ಸದೃಢಗೊಳಿಸುವುದು ಮತ್ತು ವಿಧಾನಪರಿಷತ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ದೃಷ್ಟಿಯಿಂದ ನಾಲ್ಕು ತಂಡಗಳಲ್ಲಿ ಜನಸ್ವರಾಜ್ ಯಾತ್ರೆ ನಡೆಯುತ್ತಿದೆ ಎಂದು ಮುಖಂಡರು ತಿಳಿಸಿದರು. ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಅವರು ಮನವಿ ಮಾಡಿದರು.

ಕೇಂದ್ರಮಂತ್ರಿಗಳಾದ ಭಗವಂತ ಖೂಬಾ ರಾಜ್ಯಸಚಿವರಾದ ಹಾಲಪ್ಪ ಆಚಾರ್ ಮುರುಗೇಶ್ ನಿರಾಣಿ ಸಂಸದರಗಳಾದ ಕರಡಿ ಸಂಗಣ್ಣ ಪ್ರತಾಪ್ ಸಿಂಹ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸಿದ್ದರು.

]]>
https://iambjp.in/archives/692/feed 0
ಎಂಎಸ್‍ಸಿ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ಕೊಡಿ – ಕೆ.ಎಸ್. ಈಶ್ವರಪ್ಪ ಮನವಿ https://iambjp.in/archives/689 https://iambjp.in/archives/689#respond Thu, 18 Nov 2021 10:19:55 +0000 https://iambjp.in/?p=689 ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅತಿ ಹೆಚ್ಚು ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. ವಿಧಾನಪರಿಷತ್ತಿನ ಚುನಾವಣೆಯಲ್ಲೂ ಬಿಜೆಪಿಯ ಅತ್ಯಧಿಕ ಸದಸ್ಯರು ಆಯ್ಕೆ ಆಗುವಂತೆ ನೋಡಿಕೊಳ್ಳಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು.

ಚಿಕ್ಕಮಗಳೂರಿನಲ್ಲಿ ಇಂದು ಜನಸ್ವರಾಜ್ ಯಾತ್ರೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ನಡೆಯುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲೂ ಪಕ್ಷ ಹೆಚ್ಚು ಸ್ಥಾನ ಗೆದ್ದು ಅಧಿಕಾರ ನಡೆಸುವಂತಾಗಬೇಕು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಬೇಕು. ಲೋಕಸಭಾ ಚುನಾವಣೆಯ ನಂತರ ಮತ್ತೊಮ್ಮೆ ಪ್ರಧಾನಮಂತ್ರಿಗಳಾಗಿ ನರೇಂದ್ರ ಮೋದಿ ಅವರನ್ನು ನಾವು ಕಾಣಬೇಕು ಎಂದು ಆಶಿಸಿದರು.

ದೇಶ- ರಾಜ್ಯದಲ್ಲಿ ಆಗಿರುವ ಬಿಜೆಪಿ ಸರಕಾರಗಳ ನೇತೃತ್ವದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಎಲ್ಲರೂ ಬಿಜೆಪಿ ಬೆಂಬಲಿಸುವ ಸ್ಥಿತಿ ನಿರ್ಮಾಣವಾಗಿದೆ. ನೀರಿನ ಯೋಜನೆ, ರಸ್ತೆ ಸೌಕರ್ಯ ಸೇರಿ ಮೂಲಸೌಕರ್ಯಕ್ಕೆ ನಮ್ಮ ಸರಕಾರಗಳು ಆದ್ಯತೆ ನೀಡಿವೆ ಎಂದು ತಿಳಿಸಿದರು. ಕೇಂದ್ರದ ಕಾಂಗ್ರೆಸ್ ಸರಕಾರಗಳು 70 ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನೂ ಮೀರುವಂತೆ ನರೇಂದ್ರ ಮೋದಿಯವರ ಸರಕಾರ ಕಳೆದ ಏಳು ವರ್ಷಗಳಲ್ಲಿ ಕೆಲಸ ಮಾಡಿದೆ ಎಂದು ವಿವರಿಸಿದರು. ಕೋವಿಡ್ ವಿಚಾರದಲ್ಲಿ ಕಾಂಗ್ರೆಸ್ ಅಪಪ್ರಚಾರದಲ್ಲಿ ನಿರತವಾದರೂ ನಮ್ಮ ಸರಕಾರ ಅದನ್ನು ನಿಯಂತ್ರಿಸುವಲ್ಲಿ ಮಹತ್ವದ ಕಾರ್ಯ ಮಾಡಿದೆ ಎಂದರು.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ ಅವರು ಮಾತನಾಡಿ, ಕಾಂಗ್ರೆಸ್ ಅವಧಿ ಮತ್ತು ಬಿಜೆಪಿ ಅವಧಿಯ ಸಾಧನೆಗಳನ್ನು ತುಲನೆ ಮಾಡುವಂತೆ ಮನವಿ ಮಾಡಿದರು. ಗ್ರಾಮ ಪಂಚಾಯಿತಿಗೆ ಹಿಂದಿನ ಕಾಂಗ್ರೆಸ್ ಅವಧಿಯಲ್ಲಿ ಕೊಟ್ಟ ಅನುದಾನ ಮತ್ತು ಈಗಿನ ಕೊಡುಗೆಯನ್ನು ಹೋಲಿಸಿ ನೋಡಿ ಎಂದು ತಿಳಿಸಿದರು. ಎಲ್ಲ ಹಳ್ಳಿಗಳಿಗೆ ವಿದ್ಯುತ್, ಮಹಿಳೆಯರ ಗೌರವ ಹೆಚ್ಚಿಸಲು ಶೌಚಾಲಯಗಳ ನಿರ್ಮಾಣ ಸೇರಿದಂತೆ ಎಲ್ಲ ಯೋಜನೆಗಳು ಭ್ರಷ್ಟಾಚಾರರಹಿತವಾಗಿ ಕಾರ್ಯಗತಗೊಳಿಸುತ್ತಿವೆ ಎಂದರು. ಮೋದಿಯವರ – ಬಿಜೆಪಿ ರಾಜ್ಯ ಸರಕಾರದ ಕಾರ್ಯಗಳನ್ನು ಗಮನಿಸಿ ವಿಧಾನಪರಿಷತ್ ಸ್ಥಾನಕ್ಕೆ ಸ್ಪರ್ಧಿಸಿದ ಎಲ್ಲ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ವಿನಂತಿಸಿದರು.

ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದಗೌಡ ಅವರು ಮಾತನಾಡಿ, ಚಿಕ್ಕಮಗಳೂರು ಜಿಲ್ಲೆಗೆ ಬಿಜೆಪಿ ಎಲ್ಲ ಕೊಡುಗೆಗಳನ್ನು ನೀಡಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕೇಂದ್ರ ಸಚಿವ ಸ್ಥಾನ, ವಿಧಾನ ಪರಿಷತ್ ಉಪ ಸಭಾಪತಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸೇರಿ ಹಲವು ಪ್ರಮುಖ ಸ್ಥಾನಗಳನ್ನು ನೀಡಿದೆ. ಚಿಕ್ಕಮಗಳೂರು ಜಿಲ್ಲೆ ಬಿಜೆಪಿ ತಂಡ ಅತ್ಯಂತ ಬಲಿಷ್ಠವಾಗಿದೆ. ಇದೇ ರೀತಿಯಲ್ಲಿ ವಿಧಾನಪರಿಷತ್ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ವಿನಂತಿಸಿದರು.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ. ರವಿ, ರಾಜ್ಯದ ಸಚಿವರಾದ ಆರ್. ಅಶೋಕ್, ಎಸ್.ಟಿ. ಸೋಮಶೇಖರ್, ಜಿಲ್ಲಾಧ್ಯಕ್ಷರಾದ ಕಲ್ಮರುಡಪ್ಪ, ವಿಧಾನ ಪರಿಷತ್ ಉಪ ಸಭಾಪತಿಗಳಾದ ಪ್ರಾಣೇಶ್, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಎಂ ಶಂಕರಪ್ಪ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಶ್ವಥ್‍ನಾರಾಯಣ, ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ವಿನಯ್ ಬಿದರೆ, ಶಾಸಕರಾದ ಡಿ.ಎಸ್. ಸುರೇಶ್, ಬೆಳ್ಳಿ ಪ್ರಕಾಶ್, ಎಂ.ಪಿ. ಕುಮಾರಸ್ವಾಮಿ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಜೀವರಾಜ್ ಉಪಸ್ಥಿತರಿದ್ದರು.

]]>
https://iambjp.in/archives/689/feed 0