og
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121wp-post-author
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121ಅಧ್ಯಕ್ಷೀಯ ಭಾಷಣವನ್ನು ಮಾಡಿದ ಮಾನ್ಯ ಭಾಜಪಾ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ರಾಜಕಾರಣದಲ್ಲಿ ಆತ್ಮ ಬಿ.ಎಲ್.ಎ 2 ಆಗಿದೆ, ರಾಮದಾಸ್ ಅವರು ಮಾತು ಕಡಿಮೆ ಮಾಡಿ ಕೆಲಸ ಹೆಚ್ಚು ಮಾಡಿ ಬಿ.ಎಲ್.ಎ. 2 ಗಳ ನೇಮಕ ಮಾಡಿದ್ದಾರೆ. ಪ್ರಧಾನ ಮಂತ್ರಿ, ಮುಖ್ಯಮಂತ್ರಿ, ರಾಜ್ಯ ಅಧ್ಯಕ್ಷರ ಮನೆ ಯಿಂದ ಪಾರ್ಟಿ ಬೆಳೆಯುವುದಿಲ್ಲ, ಪಾರ್ಟಿ ಬೆಳೆಯುವುದು ಕಾರ್ಯಕರ್ತರಿಂದ. ಒಂದು ಕಾಲದಲ್ಲಿ ಅಭ್ಯರ್ಥಿಗಳನ್ನು ಹುಡುಕುತ್ತಿದ್ದೇವೆ.
ಕೆ.ಆರ್ ಕ್ಷೇತ್ರದಲ್ಲಿ 11 ಸಾವಿರ ಪೇಜ್ ಪ್ರಮುಖರ ನೇಮಕವಾಗಿದೆ ಮನೆ ಮನೆಯಲ್ಲಿ ಕೆ.ಆರ್ ಕ್ಷೇತ್ರದಲ್ಲಿ ಪಾರ್ಟಿ ಬಹಳ ಸಂಘಟನಾತ್ಮಕವಾಗಿ ಇದೆ. ಕಾಂಗ್ರೆಸ್ ಇಂದು ದೇಶದಲ್ಲಿ ವಿನಾಶದ ಅಂಚಿನಲ್ಲಿದೆ ಆದರೆ ಮನೆ ಮನೆಯಲ್ಲಿ ಕಮಲ ಅರಳುತ್ತಿದೆ. ಕೆ.ಆರ್ ಕ್ಷೇತ್ರವನ್ನು ನೋಡಿ ನಾನು ಹೇಳುತ್ತೇನೆ ಕರ್ನಾಟಕದಲ್ಲಿ ಹಾಗೂ ದೇಶದಲ್ಲಿ ಭಾಜಪಾ ಕ್ಕೆ ವಿನಾಶವೇ ಇಲ್ಲ ಎಂದು. ಇಂದು ಭಾಜಪಾ ಸುಭದ್ರವಾಗಿದೆ ಎಂದರೆ ಅದಕ್ಕೆ ನಮ್ಮ ಕಾರ್ಯ ಪದ್ಧತಿಯೇ ಕಾರಣ. ಸಿದ್ದರಾಮಯ್ಯನವರಿಗೆ ನಾನು ಹೇಳುತ್ತೇನೆ ನಿಮ್ಮ ಊರಿನ ಹತ್ತಿರವೇ ಇರುವ ಕೆ.ಆರ್ ಕ್ಷೇತ್ರಕ್ಕೆ ಬಂದು ನೋಡಿ ಹೇಗೆ ಪಾರ್ಟಿ ಕಟ್ಟಿದ್ದಾರೆ ಎಂದು, ನಿಮಗೆ ಸಾಧ್ಯವಾದರೆ ನಿಮ್ಮ ಒಂದು ಬೂತ್ ನಲ್ಲಿ ಈ ರೀತಿ ಪಾರ್ಟಿಯನ್ನ ಕಟ್ಟಿ. ನಾವು ಮತಗಟ್ಟೆಯನ್ನು ನೆಂಬಿದ್ದೇವೆ, ಆದರೆ ಕಾಂಗ್ರೆಸ್ ಬರೀ ರಾಜಕಾರಣವನ್ನು ನಂಬಿದ್ದಾರೆ.
ಶಾಸಕರಾದ ರಾಮದಾಸ್ ಅವರ ಮನೆ ಮುಂದೆ ನಾಮಫಲಕ ಹಾಕುವ ಕಾರ್ಯ ಇಂದು ಇಡೀ ರಾಜ್ಯದಲ್ಲಿ ವಿಸ್ತಾರ ಆಗಿದೆ. ಬಿ.ಎಲ್.ಎ – 2 ಪಾರ್ಟಿ ಮತ್ತು ಸರ್ಕಾರದ ಕೊಂಡಿಗಳು ನೀವು ಅತ್ಯಂತ ಶ್ರೇಷ್ಠ ಕಾರ್ಯ ಮಾಡುತ್ತಿದ್ದೀರಿ, ನಿಜಕ್ಕೂ ನೀವು ಪುಣ್ಯವಂತರು. ರಾಜ್ಯದ ಎಲ್ಲಾ 80% ನಷ್ಟು ಬೂತ್ಗಳಲ್ಲಿ ಪಂಚ ರತ್ನ ಪೂರ್ಣವಾಗಿದೆ, ಪೇಜ್ ಪ್ರಮುಖರು ಆಯ್ಕೆಯಾಗಿದ್ದಾರೆ ಇದು ನಮ್ಮ ಭಾಜಪಾದ ಶಕ್ತಿ. ರಾಜ್ಯದಲ್ಲಿ ಮೊದಲ ಬಾರಿಗೆ ಬೂತ್ ಅಧ್ಯಕ್ಷರ ಕಾರ್ಯಾಗಾರ, ಪೇಜ್ ಪ್ರಮುಖರ ಕಾರ್ಯಾಗಾರ, ಬೂತ್ ಅಧ್ಯಕ್ಷರ ಮನೆ ಮುಂದೆ ನಾಮಫಲಕ ಅಳವಡಿಸುವ ಕಾರ್ಯ ಪ್ರಪ್ರಥಮವಾಗಿ ಮಾಡಿದ್ದು ಕೆ.ಆರ್ ಕ್ಷೇತ್ರದಲ್ಲಿ. ನಾವು ಸಂಘಟನಾತ್ಮಕವಾಗಿ ಇನ್ನಷ್ಟು ಕಾರ್ಯಪ್ರವೃತ್ತವಾಗಬೇಕಿದೆ. ರಾಷ್ಟ್ರದಲ್ಲಿ ಇನ್ನೊಂದು ಮಾದರಿಯನ್ನು ಕೆ.ಆರ್ ಕ್ಷೇತ್ರದಲ್ಲಿ ಮಾಡಲಾಗಿದೆ ಅದೇ ಕ್ಷೇತ್ರದ 18 ರಿಂದ 25 ವರ್ಷಗಳವರೆಗಿನ ಯುವ ಜನತೆಯನ್ನು ಕರೆದು ರಾಷ್ಟ್ರೀಯತೆಯ ಬಗ್ಗೆ ಚಿಂತನೆಯನ್ನು ತುಂಬುವ ಪ್ರಯೋಗ ಮಾಡಿದ್ದಾರೆ ಇದು ನಿಜಕ್ಕೂ ಪ್ರಶಂಸನೀಯ ಹಾಗೂ ರಾಷ್ಟ್ರಮಟ್ಟದಲ್ಲಿಯೇ ಒಂದು ವಿನೂತನವಾದ ಕಾರ್ಯ.
ರಾಮದಾಸ್ ಅವರ ನೇತೃತ್ವದಲ್ಲಿ ಪಾರ್ಟಿಯನ್ನು ಅದ್ಭುತವಾಗಿ ಕೆ.ಆರ್ ಕ್ಷೇತ್ರದಲ್ಲಿ ಕಟ್ಟಿದ್ದಾರೆ. ಬೂತ್ ಅಧ್ಯಕ್ಷರಾಗಿದ್ದ ಅಮಿತ್ ಶಾ ಭಾಜಪಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು, ಬೂತ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ವೆಂಕಯ್ಯ ನಾಯ್ಡು ಅವರು ಇಂದು ರಾಷ್ಟ್ರದ ಉಪರಾಷ್ಟ್ರಪತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಅಂತಹ ಶಕ್ತಿ ಭಾಜಪಾಕ್ಕೆ ಇದೆ. ರಾಮದಾಸ್ ಅವರ ನೇತೃತ್ವದಲ್ಲಿ ಕೆ.ಆರ್ ಕ್ಷೇತ್ರದಲ್ಲಿ ನಡೆಯುತ್ತಿರುವ ಸಂಘಟನಾತ್ಮಕ ಈ ಮಾದರಿ ಕಾರ್ಯಗಳು ರಾಜ್ಯಕ್ಕೆ ಲಾಭ ಸಿಗಲಿ ಎಂದು ಆಶಿಸುತ್ತೇನೆ ಎಂದರು.
]]>ವಿಶೇಷವಾಗಿ ಶಾಸಕ ರಾಮದಾಸ್ ತನ್ನ ಕ್ಷೇತ್ರದ ಕಾರ್ಯಕರ್ತರನ್ನು ಹಾಗೂ ಪದಾಧಿಕಾರಿಗಳನ್ನ ಹಾಗೂ ಅವರ ಸಾಧನೆಗಳನ್ನು ಅರುಣ್ ಸಿಂಗ್ ಜಿ ಗೆ ವಿವರಿಸಿದರು, ಇದಕ್ಕೆ ಅರುಣ್ ಸಿಂಗ್ ಜಿ ಹರ್ಷ ವ್ಯಕ್ತಪಡಿಸಿದ್ದಾರೆ ಅಲ್ಲದೇ ಕ್ಷೇತ್ರದಲ್ಲಿ 11 ಸಾವಿರ ಪೇಜ್ ಪ್ರಮುಖರನ್ನು ಗುರುತಿಸಿದ ವಿಷಯವನ್ನು ರಾಮದಾಸ್ ಅವರು ಹೇಳಿದ್ದಕ್ಕೆ ಅರುಣ್ ಸಿಂಗ್ ಜಿ ಅವರು ಬಹಳ ಹರ್ಷ ವ್ಯಕ್ತಪಡಿಸಿದರು.
]]>ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು ಕಾರ್ಯಕ್ರಮವನ್ನು ಆಯೊಜಿಸಿದ ಮಹಿಳಾಮೋರ್ಚಾದವರಿಗೆ ಮತ್ತು ನೆರೆದಿದ್ದ ವಿದ್ಯಾರ್ಥಿನಿಯರಿಗೆ ಅಭಿನಂದನೆ ತಿಳಿಸುತ್ತಾ ಇಂದಿನ ಕಾರ್ಯಕ್ರಮ ಬಹಳ ವಿಶೇಷವಾದದ್ದು ಕಾರಣ ಇದೆ ಅದರ ಬಗ್ಗೆ ನೆರೆದಿದ್ದವರಿಗೆ ಶಾಸಕರು ಪ್ರಶ್ನಿಸಿದರು ಇಂದು ವ್ಯಾಸ ಪೂರ್ಣಿಮೆ ಇಂದು ಸಹೋದರ ಸಹೋದರಿಯರಿಗೆ ಬಹಳಾ ವಿಶೇಷ ಅಂದು ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸುತ್ತಾ ನಾವು ಪೂರ್ಣಪ್ರಮಾಣದಲ್ಲಿ ನಿನ್ನ ರಕ್ಷಣೆಯಲ್ಲಿ ಇರುತ್ತೇವೆ ಎಂದು ಸಂಕಲ್ಪ ಮಾಡೋಣ, ಈ ಭಾರತದ ಭವಿಷ್ಯ ರೂಪಿಸುವ ನೀವಲ್ಲರು ತಾಯಿ ಭಾರತೀಯ ರಕ್ಷಣೆ ಮಾಡಲು ನಿಲ್ಲಬೇಕಿದ್ದು ನಿಮ್ಮೆಲ್ಲರ ರಕ್ಷಣೆಯ ಜವಾಬ್ದಾರಿ ನನ್ನದಾಗಿರುತ್ತದೆ.
ನಾವೆಲ್ಲಾ ಕಳೆದ 3 ದಶಕಗಳಿಂದ ಸಮಾಜ ಸೇವೆಯಲ್ಲಿ ನಿರಂತರವಾಗಿದ್ದೇವೆ ಮುಂದಿನ ಪೀಳಿಗೆಯಲ್ಲಿ ಸಮಾಜ ಸೇವೆ ಮಾಡುವ ಮನೋಭಾವನೆಯನ್ನು ಬೆಳಸಿಕೊಳ್ಳಬೇಕಿರುತ್ತದೆ. ಕಷ್ಟದಲ್ಲಿ ಇರುವವರಿಗೆ ನಮ್ಮ ಕೈಯಲ್ಲಿ ಆಗುವಂತಹ ಸೇವೆಯನ್ನು ಸಲ್ಲಿಸಬೇಕಿರುತ್ತದೆ. ಕೇಂದ್ರ ಸರ್ಕಾರದ , ರಾಜ್ಯ ಸರ್ಕಾರದ ಹಲವಾರು ಜನಪರ ಯೋಜನೆಗಳಿದ್ದು ಇಂತಹ ಯೋಜನೆಗಳನ್ನು ಅರ್ಹ ಸಾರ್ವಜನಿಕರಿಗೆ ತಲುಪಿಸುವ ಮೂಲಕ ಸೇವೆ ಸಲ್ಲಿಸಬಹುದು.
ನಾವು ಸ್ವತಂತ್ರ ಪಡೆಯುವುದರ ಹಿಂದೆ ಹಲವಾರು ತ್ಯಾಗಗಳಿದೆ ಲಕ್ಷಾಂತರ ಜನ ತ್ಯಾಗ ಮಾಡಿರುತ್ತಾರೆ. ರಾಜಕಾರಣ ಹಾಳಾದ್ದಲ್ಲಿ ದೇಶ ಹಾಳಾಗುವುದು, ದೇಶವೇ ಹಾಳಾದರೆ ಇನ್ನು ನಾವು ನೀವು ಇರಲು ಹೇಗೆ ಸಾದ್ಯ. ಇತ್ತಿಚಿನ ದಿನಗಳಲ್ಲಿ ಆಫ್ಘಾನ್ ದೇಶದಲ್ಲಿ ತಾಲಿಬಾನಿಗಳು ನಡೆಸುತ್ತಿರುವ ಅಟ್ಟಹಾಸವನ್ನು ಇಡೀ ಪ್ರಪಂಚವೇ ನೋಡುತ್ತಿದೆ ಅಲ್ಲಿಯ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯಗಳ ಬಗ್ಗೆ ಪ್ರಪಂಚಾಧ್ಯಂತ ವಿರೋಧ ವ್ಯಕ್ತವಾಗಿದೆ. ನಾವು ಯಾವುದೇ ಸಂದರ್ಭ ಬಂದರೂ ಅನ್ಯಾಯದ ವಿರುದ್ದ ನಿಂತುಕೊಳ್ಳಬೇಕು ಎಂದು ತಿಳಿಸಿದರು.
ನೆರೆದಿದ್ದವರೆಲ್ಲರು ಭಾರತ್ ಮಾತಾ ಕಿ ಜೈ. ಎಂದು ಘೋಷಣೆ ಕೂಗಿ ತಮ್ಮ ತಮ್ಮ ಹೆಸರುಗಳನ್ನು ಹೇಳುತ್ತಾ …………….ಎಂಬ ಹೆಸರಿನವಳಾದ ನಾನು ಯುವ ಭಾರತೀಯಳಾಗಿ ದೇಶಪ್ರೇಮಿಯಾಗಿ, ದೇಶ ನಿರ್ಮಾಣಕ್ಕಾಗಿ ನನ್ನ ದಿನದ ಕೆಲವು ಸಮಯವನ್ನು ಮುಡಿಪಾಗಿಟ್ಟು ಕನಿಷ್ಟ 25 ಜನ ಯುವತಿಯರನ್ನು ದೇಶದ ಕಾರ್ಯಕ್ಕಾಗಿ ಜೋಡಿಸಿ ಭಾರತದ ರಕ್ಷಣೆಯನ್ನು ಮಾಡುತ್ತೇನೆಂದು ಪ್ರಮಾಣ ಮಾಡುತ್ತೇನೆ. ಎಂದು ಸಂಕಲ್ಪ ಮಾಡಿದರು.
]]>ಕೆ.ಆರ್.ಕ್ಷೇತ್ರದಲ್ಲಿ ಬೂತ್ ಅಧ್ಯಕ್ಷರ ಮನೆ ಮುಂದೆ ಬಂದು ಪೇಜ್ ಪ್ರಮುಖರನ್ನು ಆಯ್ಕೆ ಮಾಡುವ ಪ್ರಕ್ರಿಯೆ ರಾಜ್ಯದಲ್ಲಿ ಸಂಘಟನೆ ದೃಷ್ಟಿಯಿಂದ ಬಹು ವಿಶೇಷವಾಗಿದೆ. ಪೇಜ್ ಪ್ರಮುಖರ ಕಾರ್ಯ ಬರಿಯ ಚುನಾವಣಾ ದೃಷ್ಠಿಯಿಂದ ಮಾತ್ರ ಅಲ್ಲ ತಮ್ಮ ಪೇಜ್ ನಲ್ಲಿ ಬರುವ 8,10 ಮನೆಗಳ ಯೋಗಕ್ಷೇಮ ವಿಚಾರಿಸುವ ಕಾರ್ಯವೂ ಅವರದ್ದಾಗಿರುತ್ತದೆ. ನೀವು ಮಾಡುವಂತಹ ಈ ಪುಣ್ಯ ಕಾರ್ಯ ನಿಮ್ಮ ಕುಟುಂಬವನ್ನು ಕಾಯುತ್ತದೆ. ಪ್ರಧಾನಿ ಮೋದಿಜಿ ಅವರು ಸಾಕಷ್ಟು ಯೋಜನೆಗಳನ್ನು ನೀಡಿದ್ದಾರೆ, ಅದನ್ನು ಅನುಷ್ಠಾನ ಮಾಡುವ ಜವಾಬ್ದಾರಿ ಪೇಜ್ ಪ್ರಮುಖರದಾಗಿರುತ್ತದೆ. ಇಂತಹ ಯೋಜನೆಗಳನ್ನು ನಾವು ಜನಕ್ಕೆ ತಲುಪಿಸಿದಾಗ ಅವರಿಗಾದ ಆನಂದ ಹೇಳತೀರದು. ಮುಂದಿನ ದಿನಗಳಲ್ಲಿ ಪೇಜ್ ಪ್ರಮುಖರಿಗೆ ಸರ್ಕಾರಿ ಯೋಜನೆಗಳ ಅನುಷ್ಠಾನದ ಬಗ್ಗೆ ಪ್ರತಿ ವಾರ್ಡ್ ನಲ್ಲೂ ಟ್ರೈನಿಂಗ್ ನೀಡುವ ಕೆಲಸ ಮಾಡುತ್ತೇವೆ, 15 ನೆ ತಾರೀಖು ಸ್ವಾತಂತ್ರ್ಯ ದಿನ, ಅಂದಿನ ದಿನದಂದು ಬೂತ್ ಅಧ್ಯಕ್ಷರು ತಮ್ಮ ಮನೆಯ ಮುಂದೆ ಧ್ವಜಾರೋಹಣ ಮಾಡಿ ಹಬ್ಬದ ರೀತಿ ಆಚರಿಸಬೇಕು. ಇದು ಎಲ್ಲರೂ ಸೇರಿ ಮಾಡುವಂಥಹ ಸಮಾಜದ ಕೆಲಸವಾಗಿದೆ ಎಂದರು.
ವಿಶೇಷವಾಗಿ ಹೋದ ಬೂತ್ ನಲ್ಲಿ ಸ್ಥಳೀಯ ನಾಗರೀಕರೂ ಈ ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಣೆಯಿಂದ ಪಾಲ್ಗೊಂಡಿದ್ದರು ಅಲ್ಲದೇ ನಾವೂ ನಿಮ್ಮೊಂದಿಗೆ ಇದ್ದೇವೆ ಎನ್ನುವ ಸಂದೇಶವನ್ನು ಕೊಟ್ಟರು. ಹಲವಾರು ಹಿರಿಯ ನಾಗರೀಕರು ಮಂತ್ರಿ ಸ್ಥಾನ ಸಿಗದೇ ಇದ್ದದ್ದು ಬೇಜಾರಾಗಿದೆ, ಮುಂದೆ ಆ ದೇವರು ಒಳ್ಳೆ ರೀತಿಯ ಆಶೀರ್ವಾದ ಮಾಡುತ್ತಾನೆ ಎಂದು ಶುಭ ಹಾರೈಕೆಗಳ ಸುರಿಮಳೆಯನ್ನೇ ಸುರಿಸಿದರು.
]]>ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಪ್ರಧಾನಿ ನರೇಂದ್ರ ಮೋದಿಜಿ ಸರ್ಕಾರದ ಯೋಜನೆಗಳನ್ನು ಹಾಗೂ ರಾಜ್ಯ ಸರ್ಕಾರದ ಯೋಜನಲೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಹಾಗೂ ಜವಾಬ್ದಾರಿ ಬೂತ್ ಅಧ್ಯಕ್ಷ ಹಾಗೂ ಪೇಜ್ ಪ್ರಮುಖರದ್ದು. ಬರೀ ಚುನಾವಣಾ ದೃಷ್ಠಿಯಿಂದ ಮಾತ್ರ ಬಿಜೆಪಿ ಕಾರ್ಯಕರ್ತರಾದ ನಾವು ಕೆಲಸ ಮಾಡಬಾರದು, ನಮ್ಮ ಕೆಲಸ ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ತಲುಪುವಂತಿರಬೇಕು.
ಬಿಜೆಪಿಯಲ್ಲಿ ಬೂತ್ ಅಧ್ಯಕ್ಷರ ಜವಾಬ್ದಾರಿ ಅತೀ ಮುಖ್ಯವಾದದ್ದು. ಮನೆಯ ಜವಾಬ್ದಾರಿ ಇದ್ದರೂ ಸಹ ಸಮಾಜದ ಕೆಲಸ ಮಾಡಬೇಕು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಬೂತ್ ಅಧ್ಯಕ್ಷರು ಭಾಗಿಯಾಗುತ್ತಾರೆ ಇದು ಭಾಜಪಾದ ವಿಶೇಷತೆ. ಜನರ ಕಣ್ಣೀರನ್ನು ಒರೆಸುವ ಕಾರ್ಯ ಬೂತ್ ಅಧ್ಯಕ್ಷರದ್ದು. ಇವತ್ತು ದೇಶದಲ್ಲಿ ಮೋದಿಜಿ ಒಂದು ವಿಷಯವನ್ನು ಕೊಟ್ಟಿದ್ದಾರೆ, ಭ್ರಷ್ಟಾಚಾರ ಮುಕ್ತವಾಗಬೇಕು ಎಲ್ಲೆಡೆಯಲ್ಲಿ ಪಾರದರ್ಶಕ ಆಡಳಿತ ತರಬೇಕು ಎಂದು, ಅದೇ ನಿಟ್ಟಿನಲ್ಲಿ ಕೆ.ಆರ್ ಕ್ಷೇತ್ರವನ್ನೂ ಸಹ ಭ್ರಷ್ಟಾಚಾರ ಮುಕ್ತವಾಗಿಸಬೇಕು. ನೂರೊಂದು ಗಣಪತಿ ದೇವಸ್ಥಾನದಿಂದ ನಂಜುಮಳಿಗೆ ವರೆಗೆ ರಸ್ತೆ ಅಭಿವೃದ್ಧಿ ಗೆ 10 ಕೋಟಿ ರೂ ಗಳನ್ನು ಬಿಡುಗಡೆ ಮಾಡಿದ್ದೇವೆ.
ಕೃಷ್ಣರಾಜ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಸಂಕಲ್ಪಿಸೋಣ, ಬ್ರಷ್ಟಾಚಾರ ರಹಿತ ಕ್ಷೇತ್ರವನ್ನಾಗಿಸೋಣ. ನಮ್ಮ ಮನೆಯಲ್ಲಿರುವ ಮಕ್ಕಳಲ್ಲಿ ಸಮಾಜ ಸೇವೆಗೆ ಜೋಡಿಸುವ ಜವಬ್ದಾರಿ ನಮ್ಮೆಲರ ಮೇಲೆ ಇದೆ ಎಂದು ತಿಳಿಸಿದರು. ಬರುವ ದಿನಗಳಲ್ಲಿ ರಾಜ್ಯದಲ್ಲಿ ನಮ್ಮ ಕ್ಷೇತ್ರ ರಾಜ್ಯ ಮತ್ತು ಕೇಂದ್ರ ಯೋಜನೆಗಳ ಅನುಷ್ಠಾನ ಮಾಡಿಸುವಲ್ಲಿ ಮತ್ತು ಪಕ್ಷದ ಸಂಘಟನಾತ್ಮಕವಾಗಿ ಪ್ರಥಮವಾಗಿಸಲು ಶ್ರಮಿಸೋಣ ಎಂದರು.
]]>