Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Warning: Cannot modify header information - headers already sent by (output started at /home3/buntss5v/iambjp.in/wp-includes/functions.php:6121) in /home3/buntss5v/iambjp.in/wp-includes/feed-rss2.php on line 8
Mangalore North – I am BJP https://iambjp.in Making Bharat Vishwa Guru Mon, 11 Oct 2021 12:09:02 +0000 en-US hourly 1 https://wordpress.org/?v=6.8.1 https://iambjp.in/wp-content/uploads/2021/08/cropped-Smal-Logo-32x32.png Mangalore North – I am BJP https://iambjp.in 32 32 ದಿವ್ಯಾಂಗರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದ ಶಾಸಕ ಡಾ. ಭರತ್‌ ಶೆಟ್ಟಿ https://iambjp.in/archives/644 https://iambjp.in/archives/644#respond Mon, 11 Oct 2021 12:09:02 +0000 https://iambjp.in/?p=644 ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ದಿವ್ಯಾಂಗರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು, ಸಾಧನ ಸಲಕರಣೆಗಳನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಯವರು ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ನಂತರ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಹೊಸಬೆಟ್ಟು  ತಾವರೆಕೊಳ ಬಡಾವಣೆಯಲ್ಲಿ  78 ಲಕ್ಷ ರೂ ವೆಚ್ಚದಲ್ಲಿ  4 ಹೊಸ ಕಿರು ಸೇತುವೆ ನಿರ್ಮಾಣಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಗುದ್ದಲಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ಕೆಲ  ಸಮಯದಿಂದ ಈ ಭಾಗದಲ್ಲಿ ರಸ್ತೆ ಸಂಚಾರಕ್ಕೆ ತೊಡಕುಂಟಾಗಿದ್ದು,  ಬೈಲಾರೆ ತಾವರೆಕೊಳ  ಪ್ರದೇಶಗಳು ಮಳೆ ನೀರು ನಿಲ್ಲುವ ಪ್ರದೇಶವಾಗಿದ್ದು 15 ನೇಯ ಹಣಕಾಸು ಅನುದಾನದಡಿ ಸುಸಜ್ಜಿತ ಕಿರು ಸೇತುವೆ ಮಾಡಲಾಗುವುದು ಎಂದರು. ತಾಂತ್ರಿಕ ತೊಂದರೆಯಿಂದ ವಿಳಂಬವಾಗಿದೆ. 2, 3 ತಿಂಗಳಲ್ಲಿ  ಕಾಮಗಾರಿ  ಮುಗಿಸಲಾಗುವುದು ಎಂದು  ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಉಪಮೇಯರ್ ವೇದಾವತಿ, ಕಾರ್ಪೋರೇಟರ್ ನಯನ ಆರ್ ಕೋಟ್ಯಾನ್, ಕಾರ್ಪೋರೇಟರ್ ವರುಣ್ ಚೌಟ, ಬಿಜೆಪಿ ಮುಖಂಡರಾದ ವಿಠ್ಠಲ್ ಸಾಲ್ಯಾನ್, ರಾಘವೇಂದ್ರ ಶೆಣೈ, ಸತೀಶ್ ದೇವಾಡಿಗ, ಶಂಕರ್ ಶೆಟ್ಟಿ, ಜಯಂತ ಕರ್ಕೇರ, ಸುರೇಶ್ ಸಾಲ್ಯಾನ್, ಕಾರ್ಯಕರ್ತರು ಹಾಗೂ ಸ್ಥಳೀಯ ನಾಗರೀಕರು ಉಪಸ್ಥಿತರಿದ್ದರು.

]]>
https://iambjp.in/archives/644/feed 0
1.30 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ – ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಡಾ. ಭರತ್‌ ಶೆಟ್ಟಿ https://iambjp.in/archives/414 https://iambjp.in/archives/414#respond Mon, 23 Aug 2021 09:49:17 +0000 https://iambjp.in/?p=414 ಸುರತ್ಕಲ್ ಕಾನ ರಸ್ತೆಯನ್ನು 10 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದ್ದು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು.

ಮನಪಾ ವ್ಯಾಪ್ತಿಯ ಸುರತ್ಕಲ್ ವಾರ್ಡ್ 2 ರಲ್ಲಿ ಸುಮಾರು 1.30 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಂಕ್ರಟೀಕರಣ ಕಾಮಗಾರಿ ಉದ್ಘಾಟನೆ ಹಾಗೂ ಮೂರು ಹೊಸ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಅವರು ಸೋಮವಾರ ನೆರವೇರಿಸಿ ಮಾತನಾಡಿದರು.

ಈ ಸಂದರ್ಭ ಮಾತನಾಡಿದ ಅವರು ಕೊರೊನಾ ಸಮಸ್ಯೆ ನಡುವೆಯೂ ಅಭಿವೃದ್ಧಿ ಕಾರ್ಯಕ್ಕೆ ಬಂದ ಅನುದಾನದಲ್ಲಿ ನಿರಂತರವಾಗಿ ಕೆಲಸ ಕಾರ್ಯಗಳು ನಡೆಯುತ್ತಿವೆ. ವಾರ್ಡ್ 2ರಲ್ಲಿ ಈಗಾಗಲೇ ಜಲಸಿರಿ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದ್ದು ಇದೀಗ ಒಳ ಚರಂಡಿ, ಮಳೆ ನೀರು ಹರಿಯುವ ತೋಡಿನ ಕೆಲಸ, ರಸ್ತೆಗಳನ್ನು ಸುಸಜ್ಜಿತಗೊಳಿಸುವತ್ತಾ ಗಮನ ಹರಿಸಿದ್ದೇವೆ. ಸರಕಾರದಿಂದ ಬರುವ ವಿವಿಧ ಇಲಾಖೆಗಳ ಅನುದಾನವನ್ನು ಸಮರ್ಥವಾಗಿ ಸದ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಮನಾಪ ಸದಸ್ಯೆ ಶ್ವೇತಾ ಪೂಜಾರಿ, ಶಕ್ತಿ ಕೇಂದ್ರ ಪ್ರಮುಖರಾದ ಸುರೇಂದ್ರ ಸುವರ್ಣ,,ಸಹ ಪ್ರಮುಖರಾದ ರಾಕೇಶ್, ಬೂತ್ ಅಧ್ಯಕ್ಷರಾದ ಸಂತೋಷ್ ತಡಂಬೈಲ್, ಸಜಿತ್ ರಾಜ್, ರೇಖಾ, ವಿಠಲ್ ದಾಸ್ , ಜಗನ್ನಾಥ ಶೆಟ್ಟಿ, ಪಕ್ಷದ ಪ್ರಮುಖರಾದ ಸುಧಾಕರ್, ಅರುಣ, ಪ್ರಶಾಂತ್ ಶೆಟ್ಟಿ, ಲೋಕನಾಥ್, ಪದ್ಮನಾಭ, ವರು ಶೆಟ್ಟಿಗಾರ್, ಹಿತೇಶ್, ಪ್ರವೀಣ್, ಧನು, ಕಾರ್ಯಕರ್ತರು ಉಪಸ್ಥಿತರಿದ್ದರು.

]]>
https://iambjp.in/archives/414/feed 0
ಕ್ಯಾಟರಿಂಗ್ ವಲಯದ ಪುನಶ್ಚೇತನಕ್ಕೆ ನೆರವು – ಶಾಸಕ ಡಾ. ಭರತ್ ಶೆಟ್ಟಿ https://iambjp.in/archives/203 https://iambjp.in/archives/203#respond Wed, 11 Aug 2021 07:31:11 +0000 https://iambjp.in/?p=203 ಮಂಗಳೂರು : ಕೋವಿಡ್ ಸಂದರ್ಭದಲ್ಲಿ ಸಂಕಷ್ಟಕ್ಕೀಡಾಗಿರುವ ಕ್ಯಾಟರಿಂಗ್ ವಲಯದ ಪುನಶ್ಚೇತನಕ್ಕೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ ತಿಳಿಸಿದ್ದಾರೆ. ಅವರು ದಕ್ಷಿಣ ಕನ್ನಡ ಕ್ಯಾಟರಿಂಗ್ ಮಾಲಕರ ‍‌ ಮಹಾಸಭೆ ಮತ್ತು ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ದ್ದೇಶಿಸಿ ಮಾತನಾಡಿದರು.

ಕ್ಯಾಟರಿಂಗ್ ಮಾಲಕರ ಸಂಘ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಹೆಚ್ಚು ಕಷ್ಟದಲ್ಲಿರುವವರಿಗೆ ದಿನಸಿ ಸಾಮಾಗ್ರಿಗಳ ಕಿಟ್ ನೀಡುವುದು, ಕಾರ್ಮಿಕರಿಗೆ ಸೌಲಭ್ಯ ಒದಗಿಸಿಕೊಡುವುದು,ಕೋವಿಡ್ ನಿಯಂತ್ರಣಕ್ಕಾಗಿ ನೀಡಲಾಗುವ ಲಸಿಕೆಯನ್ನು ಎಲ್ಲಾ ಸದಸ್ಯರಿಗೆ ದೊರಕಿಸಿಕೊಡುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಕೆಲಸ ಶ್ಲಾಘನೀಯ ಎಂದು ಡಾ. ಭರತ್ ಶೆಟ್ಟಿ ಶುಭ ಹಾರೈಸಿದರು.

ಕ್ಯಾಟರಿಂಗ್ ಮಾಲಕರ ಸಂಘದ ಸ್ಥಾಪಕ ಸಂಘಟನಾ ಕಾರ್ಯದರ್ಶಿ ರಾಜಗೋಪಾಲ ರೈ, ಮನಪಾ ಸದಸ್ಯ ಸಂದೀಪ್ ಗರೋಡಿ, ಮಾಜಿ ಅಧ್ಯಕ್ಷ ಸುಧಾಕರ ಕಾಮತ್, ಸತೀಶ್ ಬೋಳಾರ್, ವಿಜಯ್ ಕುಮಾರ್, ಕ್ಯಾಟರಿಂಗ್ ಮಾಲಕರ ಸಂಘದ ಹಿರಿಯ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

]]>
https://iambjp.in/archives/203/feed 0