Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Warning: Cannot modify header information - headers already sent by (output started at /home3/buntss5v/iambjp.in/wp-includes/functions.php:6121) in /home3/buntss5v/iambjp.in/wp-includes/feed-rss2.php on line 8
Minister – I am BJP https://iambjp.in Making Bharat Vishwa Guru Thu, 06 Jan 2022 10:31:30 +0000 en-US hourly 1 https://wordpress.org/?v=6.8.1 https://iambjp.in/wp-content/uploads/2021/08/cropped-Smal-Logo-32x32.png Minister – I am BJP https://iambjp.in 32 32 ಜನವರಿ 12 ರಿಂದ ನಡೆಯಲಿರುವ ಯುವ ಸಪ್ತಾಹ ಯಶಸ್ವಿಗೊಳಿಸಿ : ಸಚಿವ ಡಾ. ನಾರಾಯಣಗೌಡ   https://iambjp.in/archives/758 https://iambjp.in/archives/758#respond Thu, 06 Jan 2022 10:31:30 +0000 https://iambjp.in/?p=758 ಬೆಂಗಳೂರು : ಸ್ವಾಮಿ ವಿವೇಕಾನಂದರ 150 ನೇ ಜನ್ಮ ದಿನಾಚರಣೆ ಹಾಗೂ ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದು ವಾರ ಯುವ ಸಪ್ತಾಹ ಹಮ್ಮಿಕೊಳ್ಳಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ತಿಳಿಸಿದರು.

ಜನವರಿ 12 ರಿಂದ 18 ವರೆಗೂ ಯುವ ಸಪ್ತಾಹ ಹಮ್ಮಿಕೊಳ್ಳಲಾಗಿದ್ದು, ಈ ಅಭಿಯಾನವನ್ನು ಯಶಸ್ವಿಗೊಳಿಸಲು ರಾಜ್ಯ ಮಟ್ಟದಿಂದ ಗ್ರಾಮ ಮಟ್ಟದವರೆಗೂ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ವಿಧಾನಸೌಧದಲ್ಲಿ ಇಂದು ಸಚಿವ ಡಾ.ನಾರಾಯಣಗೌಡ ಅವರು ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಯುವ ಸಪ್ತಾಹವನ್ನು ಯಶಸ್ವಿಗೊಳಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.

ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಯುವ ಸಮುದಾಯಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜನವರಿ 12- ಎಲ್ಲಾ ಶಾಲೆಗಳು-ಕಾಲೇಜುಗಳಲ್ಲಿ ‘ಯುವ ಸಂಸದ್’ ಮತ್ತು ಗ್ರಾಮ ಮಟ್ಟದಲ್ಲಿ ಯುವ ಗ್ರಾಮ ಸಭೆಗಳನ್ನು ನಡೆಸುವುದು.

ಜನವರಿ-13: ಸ್ವಾಮಿ ವಿವೇಕಾನಂದರ ವಿಚಾರಧಾರೆ, ಉದ್ದೇಶಗಳು ಮತ್ತು ತಾತ್ವಿಕ ಆಶಯಗಳ ಕುರಿತು ಸಾಂಸ್ಕೃತಿಕ ಕಾರ್ಯಕ್ರಮ.

ಜನವರಿ 14: ಪೌಷ್ಟಿಕಾಂಶ ಮತ್ತು ಆರೋಗ್ಯ ಶಿಬಿರಗಳು, ರಸ್ತೆ ಸುರಕ್ಷತೆ ಕುರಿತು ಜಾಗೃತಿ.

ಜನವರಿ15: ಸ್ಥಳೀಯ ಗ್ರಾಮೀಣ ಕ್ರೀಡಾ ಉತ್ಸವ.

ಜನವರಿ 16: ಮಾದಕ ವ್ಯವನ, ಮಹಿಳಾ ದೌರ್ಜನ್ಯ ಮತ್ತು ಸೈಬರ್ ಅಪರಾಧಗಳ ತಡೆಗಟ್ಟುವ ಬಗ್ಗೆ ಜಾಗೃತಿ.

ಜನವರಿ 17: ಕಾನೂನು ನೆರವು ಸೇವೆಗಳ ಬಗ್ಗೆ ಜಾಗೃತಿ.

ಜನವರಿ 18: ಕೌಶಲ್ಯ ಕರ್ನಾಟಕದ ಅಡಿಯಲ್ಲಿ ಘನತ್ಯಾಜ್ಯ ನಿರ್ವಹಣೆ ತಂತ್ರಜ್ಞಾನ , ಉದ್ಯಮಶೀಲತರ ಅಭಿವೃದ್ಧಿ ಮತ್ತು ಸಾಫ್ಟ್ ಸ್ಕಿಲ್ ತರಬೇತಿ ಕುರಿತು ಕೌಶಲ್ಯ ಅಭಿವೃದ್ಧಿ ಕುರಿತು ತರಬೇತಿ.

ಯುವ ಸಪ್ತಾಹದ ಹಿನ್ನೆಲೆಯಲ್ಲಿ ಜನವರಿ 12 ರಿಂದ 18 ರವರೆಗೂ ಯುವ ಗ್ರಾಮ ಸಭೆ, ಯುವ ಸಂಸದ್, ಸ್ವಾಮಿ ವಿವೇಕಾನಂದರ ವಿಚಾರಧಾರೆ, ಉದ್ದೇಶಗಳ ಕುರಿತು ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಪ್ರತಿದಿನ ಒಂದೊಂದು ರೀತಿಯ ಕಾರ್ಯಕ್ರಮ, ಜಾಗೃತಿ ಅಭಿಯಾನ ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ‌.

ಇವತ್ತು ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಲಾಗಿದೆ. ಯುವ ಸಪ್ತಾಹವನ್ನು ಯಶಸ್ವಿಗೊಳಿಸಲಾಗುತ್ತದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

ಸರ್ಕಾರದಿಂದ ಸಾವಿರಾರು ಯೋಜನೆಗಳಿದ್ದು ಇದರಲ್ಲಿ 540 ಯೋಜನೆಗಳು ಯುವ ಸಮುದಾಯದ ಯೋಜನೆಗಳಿವೆ. ಆದರೆ ಅವುಗಳ ಬಗ್ಗೆ ಹೆಚ್ಚಿನ ಜನರಿಗೆ ಮಾಹಿತಿ ಇಲ್ಲ. ಯುವ ಸಪ್ತಾಹ ಅಭಿಯಾನದ ಸಂದರ್ಭದಲ್ಲಿ ಯುವ ಸಮುದಾಯಕ್ಕೆ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಎಲ್ಲಾ ಇಲಾಖೆಗಳು ಕೈಜೋಡಿಸಿದರೆ ಯಶಸ್ವಿಯಾಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

]]>
https://iambjp.in/archives/758/feed 0
ತಮಿಳುನಾಡಿನಲ್ಲಿ ವಿವಿಧ ಕೃಷಿ ಬೆಳೆಗಳ ವೀಕ್ಷಣೆ ಮಾಡಿದ ಸಚಿವ ಜೆ. ಸಿ. ಮಾಧುಸ್ವಾಮಿ https://iambjp.in/archives/418 https://iambjp.in/archives/418#respond Mon, 23 Aug 2021 11:30:50 +0000 https://iambjp.in/?p=418 ತಮಿಳು ನಾಡು ರಾಜ್ಯ ಪ್ರವಾಸದಲ್ಲಿರುವ ಕಾನೂನು, ಸಂಸದೀಯ ವ್ಯವಹಾರ ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಶ್ರೀ ಜೆ. ಸಿ. ಮಾಧುಸ್ವಾಮಿಯವರು ಇಂದು ಕೊಯಮತ್ತೂರಿನ ತಮಿಳುನಾಡು ಕೃಷಿ ವಿಶ್ವವಿದ್ಯಾನಿಲಯದಲ್ಲಿ ಬೆಳೆದಿರುವ ವಿವಿಧ ಕೃಷಿ ಬೆಳೆಗಳು ಹಾಗೂ ಭತ್ತದ ತಳಿಗಳ ವೀಕ್ಷಣೆ ಮಾಡಿದರು.

ಇದೇ ಸಂದರ್ಭದಲ್ಲಿ ವಿವಿಧ ಭತ್ತದ ತಳಿಗಳನ್ನು ವೀಕ್ಷಿಸಿದ ಮಾನ್ಯ ಸಚಿವರು ಬೆಳೆಗೆ ಅಳವಡಿಸಿರುವ ಡ್ರಿಪ್ ಹಾಗೂ ಸೆನ್ಸರ್ ತಂತ್ರಜ್ಞಾನದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇದಕ್ಕೂ ಮುನ್ನ ತೆಂಗಿನ ಬೆಳೆಗೆ ಸಂಬಂಧಪಟ್ಟಂತೆ, ತೆಂಗಿನ ಕಾಯಿ, ಕೊಬ್ಬರಿ ಸುಳಿಯುವ ಯಂತ್ರಗಳ ಕಾರ್ಖಾನೆಗೆ ಹಾಗೂ ತೆಂಗಿನ ಕಾಯಿ ನಾರಿನ ಕಾರ್ಖಾನೆಗಳಿಗೆ ಸಚಿವರು ಭೇಟಿ ನೀಡಿ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಪ್ರಾಜೆಕ್ಟ್ ಡೈರೆಕ್ಟರ್ ಸುಜಾತಾ ಮೇಡಂ, ತಮಿಳುನಾಡು ಕೃಷಿ ವಿಶ್ವವಿದ್ಯಾನಿಲಯದ ಉಪ ಕುಲಪತಿಗಳು, ರಿಜಿಸ್ಟ್ರಾರ್, ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

]]>
https://iambjp.in/archives/418/feed 0
ತುಮಕೂರಿನಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ ನಡೆಸಿದ ಸಚಿವ ಮಾಧುಸ್ವಾಮಿ https://iambjp.in/archives/261 https://iambjp.in/archives/261#respond Fri, 13 Aug 2021 09:16:04 +0000 https://iambjp.in/?p=261 ಕಾನೂನು, ಸಂಸದೀಯ ವ್ಯವಹಾರ ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ ಸಿ ಮಾಧುಸ್ವಾಮಿಯವರು ಇಂದು ತುಮಕೂರಿನ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ 75 ನೇ ಸುವರ್ಣ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯನ್ನು ನಡೆಸಿದರು.

ನಂತರ ಕೋವಿಡ್ -19ಮೂರನೇ ನೇ ಅಲೆಗೆ ಸಂಬಂಧಪಟ್ಟಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಎಲ್ಲಾ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿಲ್ಲಾಪಂಚಾಯತ್ ಸಿ ಇ ಓ ರವರು, ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

]]>
https://iambjp.in/archives/261/feed 0
ರಾಜ್ಯಗಳಿಗೆ ಒಬಿಸಿ ಪಟ್ಟಿ ಅಧಿಕಾರ ಮರುಸ್ಥಾಪನೆ – ಸಚಿವ ಬಿ. ಶ್ರೀರಾಮುಲು ಧನ್ಯವಾದ https://iambjp.in/archives/216 https://iambjp.in/archives/216#respond Wed, 11 Aug 2021 11:46:43 +0000 https://iambjp.in/?p=216 ಬೆಂಗಳೂರು: ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಜಾತಿಗಳನ್ನು ಸೇರಿಸುವ ರಾಜ್ಯಗಳ ಅಧಿಕಾರವನ್ನು ಮರುಸ್ಥಾಪಿಸುವ ಸಂವಿಧಾನದ ತಿದ್ದುಪಡಿ ವಿಧೇಯಕವನ್ನು ಕೇಂದ್ರ ಸರಕಾರವು ಅಂಗೀಕರಿಸಿದ್ದು ಸ್ವಾಗತಾರ್ಹ. ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಕ್ರಮವಾಗಿದ್ದು, ಇದಕ್ಕಾಗಿ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಸಂಪುಟಕ್ಕೆ ಧನ್ಯವಾದ ಸಮರ್ಪಿಸುವುದಾಗಿ ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವರಾದ  ಬಿ. ಶ್ರೀರಾಮುಲು ಅವರು ತಿಳಿಸಿದರು.

ಕಾರ್ಯಕರ್ತರ ಭೇಟಿ, ಕಾರ್ಯಕರ್ತರ ಸಮಸ್ಯೆಗಳಿಗೆ ಪರಿಹಾರ ಕೊಡುವ ದೃಷ್ಟಿಯಿಂದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಇಂದು ಭೇಟಿ ನೀಡಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್‍ಕುಮಾರ್ ಕಟೀಲ್ ಅವರ ಸೂಚನೆ ಮೇರೆಗೆ ನಿಗದಿತ ದಿನದಂದು ರಾಜ್ಯ ಕಾರ್ಯಾಲಯಕ್ಕೆ ಭೇಟಿ ಕೊಡಲಿದ್ದೇನೆ ಎಂದು ಅವರು ಹೇಳಿದರು.

ಮೀಸಲಾತಿ ಮುಂದುವರಿಕೆ ಅಗತ್ಯದ ಕುರಿತಂತೆ ಆರೆಸ್ಸೆಸ್ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಸ್ವಾಗತಾರ್ಹ. ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರಗಳು ಮತ್ತು ಆರೆಸ್ಸೆಸ್ ಸಂಘಟನೆ ನಿರಂತರವಾಗಿ ದಲಿತರ ಪರವಾಗಿ ಕೆಲಸ ಮಾಡುತ್ತಿವೆ. ಆದರೆ, ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲು ಕಾಂಗ್ರೆಸ್ ಮುಖಂಡರು ಬಿಜೆಪಿ ಹಾಗೂ ಆರೆಸ್ಸೆಸ್ ಬಗ್ಗೆ ಅಪಪ್ರಚಾರ ಮಾಡುತ್ತಿದ್ದವು. ಈಗ ಈ ಸತ್ಯ ಜನರಿಗೂ ಅರಿವಾಗಿದೆ ಎಂದು ತಿಳಿಸಿದರು.

ಈಗ ದಲಿತರು, ಶೋಷಿತರು ಮತ್ತು ಹಿಂದುಳಿದ ವರ್ಗದವರು ಕಾಂಗ್ರೆಸ್‍ನ ಪೊಳ್ಳು ಭರವಸೆಯನ್ನು ಅರ್ಥೈಸಿಕೊಂಡಿದ್ದಾರೆ. ಇನ್ನೊಂದೆಡೆ ವಿಶ್ವವಂದ್ಯ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಕಾರ್ಯವೈಖರಿ, ದಲಿತರ ಪರ ಕಾರ್ಯಗಳನ್ನು ಗಮನಿಸಿ ಬಿಜೆಪಿಗೆ ಪೂರ್ಣ ಪ್ರಮಾಣದಿಂದ ಬೆಂಬಲ ನೀಡುತ್ತಿದ್ದಾರೆ. ಇದರಿಂದ ಎಲ್ಲ ಕಡೆಗಳಲ್ಲಿ ಬಿಜೆಪಿ ಗೆಲ್ಲುತ್ತಿದೆ ಹಾಗೂ ಕಾಂಗ್ರೆಸ್ ಪಕ್ಷ ಸೋಲುತ್ತಿದೆ ಎಂದು ತಿಳಿಸಿದರು.

ಕೇಂದ್ರದ ಸಚಿವ ಸಂಪುಟ, ರಾಜ್ಯಪಾಲರ ನೇಮಕಾತಿ ವಿಚಾರದಲ್ಲೂ ಕೇಂದ್ರ ಸರಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದವರಿಗೆ ಗರಿಷ್ಠ ಆದ್ಯತೆ ನೀಡಿದೆ. ಇದು ಕೇಂದ್ರದ ಶ್ರೀ ನರೇಂದ್ರ ಮೋದಿ ಅವರ ಬಿಜೆಪಿ ಸರಕಾರದ ದಲಿತ- ಹಿಂದುಳಿದ ಪರ ಕಾರ್ಯವೈಖರಿಯನ್ನು ಪ್ರತಿಬಿಂಬಿಸುವಂತಿದೆ ಎಂದು ಅವರು ಮೆಚ್ಚುಗೆ ಸೂಚಿಸಿದರು.

]]>
https://iambjp.in/archives/216/feed 0
ಪುತ್ತೂರಿನಲ್ಲಿ ರೈಲ್ವೆ ಕೆಳಸೇತುವೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ನಳಿನ್ ಕುಮಾರ್ ಕಟೀಲ್ ಮನವಿ https://iambjp.in/archives/212 https://iambjp.in/archives/212#respond Wed, 11 Aug 2021 09:33:09 +0000 https://iambjp.in/?p=212 ನವದೆಹಲಿ / ಪುತ್ತೂರು : ಪುತ್ತೂರು ನಗರಕ್ಕೆ ಅತ್ಯವಶ್ಯಕ ಯೋಜನೆಯಾದ ಎ.ಪಿ.ಎಂ.ಸಿ ಯನ್ನು ಸಂಪರ್ಕಿಸುವ ರಸ್ತೆಗೆ ರೈಲ್ವೆ ಕೆಳಸೇತುವೆಯನ್ನು ನಿರ್ಮಾಣ ಮಾಡುವ ಬಗ್ಗೆ ಇಂದು ದೆಹಲಿಯ ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಖಾತೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್ ಮತ್ತು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಅವರು ಭೇಟಿಯಾಗಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರವು ತನ್ನ ಪಾಲಿನ ಶೇಕಡ 50% ಅನುದಾನವನ್ನು ಮೂಲಭೂತ ಸೌಕರ್ಯ ಇಲಾಖೆ ಮೂಲಕ ಕಾದಿರಿಸಿದ್ದು, ಕೇಂದ್ರ ಸರ್ಕಾರದಿಂದ ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಕೋರಿದರು.

ಈ ಸಂದರ್ಭದಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷರಾದ  ದಿನೇಶ್ ಮೆದು ಹಾಗೂ ನಿರ್ದೇಶಕರಾದ  ಬಾಲಕೃಷ್ಣ ಬಾಣಜಾಲು ಅವರು ಉಪಸ್ಥಿತರಿದ್ದರು.

]]>
https://iambjp.in/archives/212/feed 0
ವಿನೂತನ ರೀತಿಯಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಸುನಿಲ್ ಕುಮಾರ್ https://iambjp.in/archives/180 https://iambjp.in/archives/180#respond Wed, 11 Aug 2021 06:15:26 +0000 https://iambjp.in/?p=180 ದಿನಕ್ಕೊಂದು ಕನ್ನಡ ಪತ್ರಿಕೆ, ತಿಂಗಳಿಗೊಂದು ಕನ್ನಡ ಪುಸ್ತಕ ಓದುವ ಪರಿಪಾಠ ರೂಢಿಸಿಕೊಳ್ಳಿ- ಸುನಿಲ್ ಕುಮಾರ್ ಮನವಿ

ಬೆಂಗಳೂರು :  ಪ್ರತಿದಿನ ಕನ್ನಡ ಪತ್ರಿಕೆಯೊಂದನ್ನು ಓದುವ ಹಾಗೂ ತಿಂಗಳಿಗೊಂದು ಕನ್ನಡ ಪುಸ್ತಕ ಕೊಂಡು ಓದುವ, ಹಾಗೆಯೇ ಎರಡು ತಿಂಗಳಿಗೊಂದು ಕನ್ನಡ ಚಲನಚಿತ್ರ ನೋಡುವ ಅಭ್ಯಾಸ ಮಾಡಿಕೊಂಡರೆ ಆ ಮೂಲಕವೇ ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳೆಸುವಲ್ಲಿ ಜನರೂ ಸಹ ಪಾಲುಗೊಳ್ಳಲು ಸಾಧ್ಯವಾಗುತ್ತದೆ ಎಂದು ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.

ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಭಾರತಾಂಬೆ ಹಾಗೂ ಕನ್ನಡಾಂಬೆಯ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಇಲಾಖೆ ಸಚಿವರಾಗಿ ಕಾರ್ಯಾರಂಭ ಮಾಡಿದರು.

ಪವರ್ ಇಲಾಖೆಯಲ್ಲಿ ಸಂಸ್ಕೃತಿ ತರುವ, ಸಂಸ್ಕೃತಿ ಇಲಾಖೆಗೆ ಪವರ್ ತುಂಬುವ ಕೆಲಸ ಮಾಡಬೇಕಿದೆ, ಅದನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಅವರು ಹೇಳಿದರು.

ಎರಡು ಇಲಾಖೆಗಳ ಆಡಳಿತ ಸುಧಾರಣೆಗೆ ಮತ್ತು ಕಾರ್ಯಕ್ರಮಗಳ ಸಮರ್ಥ ಅನುಷ್ಠಾನಕ್ಕೆ ಬೇಕಾಗುವ ಎಲ್ಲಾ ಕ್ರಮಗಳನ್ನು ನಿರ್ದಾಕ್ಷಿಣ್ಯವಾಗಿ ಕೈಗೊಳ್ಳುತ್ತೇನೆ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ 2019 ಮತ್ತು 20 ನೇ ಸಾಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾನಪದಶ್ರೀ ಪ್ರಶಸ್ತಿ ಗೆ ಆಯ್ಕೆ ಆದ ಶ್ರೀಮತಿ ಭೀಮವ್ವ ದೊಡ್ಡ ಬಾಳವ್ವ ಶಿಳ್ಳೆಕ್ಯಾತರ, ಹಾಗೂ ಬಿ ವಿ ಕಾರಂತ ಪ್ರಶಸ್ತಿಗೆ ಆಯ್ಕೆಆದ ಹೆಚ್.ವಿ.ವೆಂಕಟಸುಬ್ಬಯ್ಯ ಅವರಿಗೆ ಕಲಾಕ್ಷೇತ್ರದ ಮುಂಭಾಗದಲ್ಲಿಯೇ ಪ್ರಶಸ್ತಿ ಪ್ರದಾನ ಮಾಡಿದರು.

ಕಲಾಕ್ಷೇತ್ರದ ಮೆಟ್ಟಿಲುಗಳ ಮೇಲೆ ಕುಳಿತು ಇಲಾಖೆಯ ಕಡತಗಳಿಗೆ ಸಹಿಮಾಡಿ ಅಧಿಕೃತ ಕಾರ್ಯಾರಂಭ ಮಾಡಿದರು.

ಆ ನಂತರ ಕಲಾಕ್ಷೇತ್ರದ ಆವರಣದಲ್ಲಿ ಇರುವ ಕನ್ನಡ ಪುಸ್ತಕ ಪ್ರಾಧಿಕಾರದ ಸಿರಿಗನ್ನಡ ಮಾರಾಟ ಮಳಿಗೆಗೆ ಭೇಟಿ ಕೊಟ್ಟು ಕನಕಾವಲೋಕನ, ಪುಸ್ತಕ ಹಾಗೂ ಡಿ ವಿ ಜಿ ಅವರ ನೆನಪಿನ ಚಿತ್ರಗಳು ಮತ್ತು ಶಿವರಾಮ ಕಾರಂತರ ನಾಟಕಗಳು ಎಂಬ ಮೂರು ಪುಸ್ತಕಗಳನ್ನು ದುಡ್ಡುಕೊಟ್ಟು ಖರೀದಿ ಮಾಡಿದರು.

ಆನಂತರ ಅದರ ಮುಂಭಾಗದಲ್ಲಿಯೇ ಇದ್ದ ಕ್ಯಾಂಟೀನಲ್ಲಿ ಸಾಹಿತಿ ಮತ್ತು ಕಲಾವಿದರ ಜೊತೆ ಕಾಫಿ ಸೇವನೆ ಮಾಡಿದರು.

ರವೀಂದ್ರ ಕಲಾಕ್ಷೇತ್ರದ ಮೆಟ್ಟಿಲುಗಳಿಗೆ ನಮಸ್ಕರಿಸಿ ಅಡಿಯಿಟ್ಟ ಸಚಿವ ಸುನಿಲ್ ಕುಮಾರ್ ಇಡೀ ಕಾರ್ಯಕ್ರಮದಲ್ಲಿ ಲವಲವಿಕೆಯಿಂದ ಸಾಂಸ್ಕೃತಿಕ ವಾತಾವರಣಕ್ಕೆ ಮೆರುಗು ಕೊಟ್ಟರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್ ನಾಗಾಭರಣ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾಕ್ಟರ್ ಎಂ ಎನ್ ನಂದೀಶ್ ಹಂಚೆ, ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ವಸಂತಕುಮಾರ್ ಬಿವಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಆನೂರು ಅನಂತ ಕೃಷ್ಣಶರ್ಮ, ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಮಹಿಂದ್ರ, ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ, ನಾಟಕಕಾರ ಬಿ ವಿ ರಾಜಾರಾಮ್ , ಕಲಾನಿರ್ದೇಶಕ ಶಶಿಧರ್ ಅಡಪ, ಕಲಾವಿದೆ ಮಾಳವಿಕಾ ಅವಿನಾಶ್, ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ, ಕನಕ ಅಧ್ಯಯನ ಪೀಠದ ಸುಮ್ಮನೆ ಸಮನ್ವಯಾಧಿಕಾರಿ ಎಂ ಆರ್. ಸತ್ಯನಾರಾಯಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಜೇ. ರವಿಶಂಕರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್ ರಂಗಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.

]]>
https://iambjp.in/archives/180/feed 0