Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Warning: Cannot modify header information - headers already sent by (output started at /home3/buntss5v/iambjp.in/wp-includes/functions.php:6121) in /home3/buntss5v/iambjp.in/wp-includes/feed-rss2.php on line 8
Shobha Karandlaje – I am BJP https://iambjp.in Making Bharat Vishwa Guru Fri, 19 Nov 2021 08:33:30 +0000 en-US hourly 1 https://wordpress.org/?v=6.8.1 https://iambjp.in/wp-content/uploads/2021/08/cropped-Smal-Logo-32x32.png Shobha Karandlaje – I am BJP https://iambjp.in 32 32 ಮಿನಿ ಸಮರದಲ್ಲಿ ಬಿಜೆಪಿ ಬೆಂಬಲಿಸಿ- ಶೋಭಾ ಕರಂದ್ಲಾಜೆ https://iambjp.in/archives/702 https://iambjp.in/archives/702#respond Fri, 19 Nov 2021 08:33:30 +0000 https://iambjp.in/?p=702 ಉಡುಪಿ :  ಡಿ. 10 ರ ವಿಧಾನಪರಿಷತ್ ಚುನಾವಣೆ ರಾಜ್ಯದ ಮಿನಿ ಸಮರ. ಇದರಲ್ಲಿ ವಿಧಾನಪರಿಷತ್ತಿನ ಸಭಾ ನಾಯಕರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಮತ್ತೆ ಗೆಲ್ಲಿಸಿ ಎಂದು ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ತಿಳಿಸಿದರು.

ಉಡುಪಿಯಲ್ಲಿ ಇಂದು ಜನಸ್ವರಾಜ್ ಯಾತ್ರೆಯಲ್ಲಿ ಮಾತನಾಡಿದ ಅವರು, ಸರಕಾರದ ಯಾವುದೇ ಮಸೂದೆ ಮಂಜೂರಾಗಲು ವಿಧಾನಪರಿಷತ್‍ನಲ್ಲೂ ಬಹುಮತ ಬೇಕು. ವಿಧಾನಸಭೆಯಲ್ಲಿ ಮಂಜೂರಾದ ಗೋಹತ್ಯಾ ಬಿಲ್ ವಿಧಾನಪರಿಷತ್‍ನಲ್ಲಿ ಮಂಜೂರಾಗಲು ಕಷ್ಟವಾಯಿತು. ಆದ್ದರಿಂದ ನಾವು ಹೆಚ್ಚು ಸ್ಥಾನ ಗೆಲ್ಲಬೇಕಿದೆ ಎಂದರು. ನರೇಂದ್ರ ಮೋದಿಯವರಿಗೆ ದಕ್ಷಿಣ ಭಾರತದಲ್ಲಿ ಇರುವ ಬೆಂಬಲಕ್ಕೆ ಈ ಚುನಾವಣೆ ಒರೆಗಲ್ಲು ಇದ್ದಂತೆ ಎಂದು ತಿಳಿಸಿದರು. ಉಡುಪಿಯಲ್ಲಿ ಪಕ್ಷ ಗೆಲ್ಲುವ ವಿಶ್ವಾಸ ನಮಗಿದೆ ಎಂದರು.

ಉತ್ತರ ಪ್ರದೇಶದ ಚುನಾವಣೆ ಎಂದರೆ ರಾಮಮಂದಿರದ ಚುನಾವಣೆ. ಉತ್ತರ ಪ್ರದೇಶದಲ್ಲಿ ಯೋಗಿಯವರ ನೇತೃತ್ವದಲ್ಲಿ ಮತ್ತೆ ನಮ್ಮ ಸರಕಾರ ಬರಬೇಕಿದೆ. ಅದೇರೀತಿ ರಾಜ್ಯದಲ್ಲೂ ಪಕ್ಷವು ಅತಿ ಹೆಚ್ಚು ವಿಧಾನಪರಿಷತ್ ಚುನಾವಣೆಯಲ್ಲಿ ಗರಿಷ್ಠ ಸ್ಥಾನಗಳನ್ನು ಗೆಲ್ಲಬೇಕಿದೆ ಎಂದು ತಿಳಿಸಿದರು. ನರೇಂದ್ರ ಮೋದಿಯವರು ಈಗ ಪ್ರಪಂಚದ ನಾಯಕರಾಗಿದ್ದಾರೆ. ನುಡಿದಂತೆ ನಡೆದ ನಾಯಕ ಅವರು ಎಂದು ವಿವರಿಸಿದರು.

ಕೋವಿಡ್ ನಿಭಾಯಿಸುವಲ್ಲಿ ನಮ್ಮ ದೇಶ ಮಾಡಿದ ಕಾರ್ಯ ಅತ್ಯಂತ ಶ್ಲಾಘನೀಯ. ಸಮರ್ಥ ನೇತೃತ್ವ ನೀಡುವ ಕಾರ್ಯವನ್ನು ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದಾರೆ. ಆದರೆ, ಕಾಂಗ್ರೆಸ್‍ನವರು ಕೋವಿಡ್ ಲಸಿಕೆಯನ್ನು ವಿರೋಧಿಸಿದರು ಎಂದು ತಿಳಿಸಿದರು. 100 ಕೋಟಿಗೂ ಹೆಚ್ಚು ಜನರಿಗೆ ಈಗಾಗಲೇ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. 2023ರಲ್ಲಿ ಮತ್ತೆ ರಾಜ್ಯದಲ್ಲಿ ನಮ್ಮ ಸರಕಾರ ಮತ್ತು 2024ರಲ್ಲಿ ಮತ್ತೆ ಮೋದಿಯವರು ಪ್ರಧಾನಿಯಾಗುವಂತೆ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದಗೌಡ ಅವರು ಮಾತನಾಡಿ, ಕೇಂದ್ರ- ರಾಜ್ಯ ಸರಕಾರಗಳ ಸಾಧನೆ ಮತ್ತು ಜನಪರ ಕಾರ್ಯಕ್ರಮಗಳನ್ನು ಜನಪ್ರತಿನಿಧಿಗಳಿಗೆ ತಿಳಿಸಿ ಹೇಳಬೇಕು. ಕಾಂಗ್ರೆಸ್‍ನ ಬುರುಡೆ ಬಿಡುವವರಿಗೆ ಈ ಸಮಾವೇಶ ಸ್ಪಷ್ಟ ಉತ್ತರ ನೀಡುವಂತಿದೆ ಎಂದರು.

ಗ್ರಾಮಗಳಿಗೆ ಉದ್ಯೋಗ ಸಂಬಂಧ ಅನುದಾನವನ್ನು 150 ಮಾನವ ದಿನಕ್ಕೆ ಕೇಂದ್ರ ಸರಕಾರ ಹೆಚ್ಚಿಸಿದೆ. ಹಿಂದೆ ಕಾಂಗ್ರೆಸ್ ಸರಕಾರ ಇದ್ದಾಗ ಭ್ರಷ್ಟಾಚಾರ ಎಲ್ಲೆಡೆ ತಾಂಡವವಾಡುತ್ತಿತ್ತು. ಈಗ ಭ್ರಷ್ಟಾಚಾರರಹಿತವಾಗಿ ಕೆಲಸಗಳು ನಡೆಯುತ್ತಿವೆ ಎಂದು ವಿವರಿಸಿದರು.

ಮನೆ ಮನೆಗೆ ಶುದ್ಧ ನೀರು ಸರಬರಾಜಿಗೆ ರಾಜ್ಯಕ್ಕೆ 1,008 ಕೋಟಿ ರೂಪಾಯಿ ನೀಡಲಾಗಿದೆ. ಸೌರ ವಿದ್ಯುತ್‍ಗೆ ಹಣ ಕೊಡಲಾಗಿದೆ. ಇಂಟರ್‍ನೆಟ್ ಕನೆಕ್ಟಿವಿಟಿ ಪ್ರತಿ ಗ್ರಾಮ ಪಂಚಾಯಿತಿಗೆ 20203ರ ವೇಳೆಗೆ ಲಭಿಸಲಿದೆ. 2025ಕ್ಕೆ ದೇಶದ ಪ್ರತಿಯೊಬ್ಬರಿಗೂ ಸೂರು ಒದಗಿಸಲು ಸರಕಾರ ಮುಂದಾಗಿದೆ ಎಂದು ತಿಳಿಸಿದರು. ಸ್ವಾಭಿಮಾನಿ ಭಾರತದ ನಿರ್ಮಾಣದ ಕನಸನ್ನು ನನಸಾಗಿಸಲು ಪ್ರಧಾನಿಯವರು ಮುಂದಾಗಿದ್ದಾರೆ ಎಂದು ತಿಳಿಸಿದರು. ಹೊಸ ಶಿಕ್ಷಣ ನೀತಿ ಉದ್ಯೋಗ ಸೃಷ್ಟಿಗೆ ಪೂರಕ ಪಠ್ಯಕ್ರಮವನ್ನು ಹೊಂದಿದೆ ಎಂದರು.

ವಿಧಾನಪರಿಷತ್‍ನ 25 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಬಿಜೆಪಿಯ ಫೈರ್ ಬ್ರಾಂಡ್ ತಂಡ ಇಲ್ಲಿನದು. ಈ ಬಾರಿಯ ಚುನಾವಣೆ ಎ+++ ಫಲಿತಾಂಶ ನೀಡಲಿದೆ ಎಂದು ವಿಶ್ವಾಸದಿಂದ ನುಡಿದರು. ರೈತರ ಆದಾಯ ದ್ವಿಗುಣಗೊಳಿಸಲು ಸರಕಾರ ಬದ್ಧವಾಗಿದೆ ಎಂದು ತಿಳಿಸಿದರು. ರೈತರು, ಬೆಳೆಗಾರರನ್ನು ನಾವು ಬಿಟ್ಟು ಹಾಕುವುದಿಲ್ಲ. ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಸುಪ್ರೀಂ ಕೋರ್ಟ್‍ಗೂ ಮನವರಿಕೆ ಮಾಡಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಮಾತನಾಡಿ, ಉಡುಪಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಬಗ್ಗೆ ಪರಿಶೀಲನೆ ನಡೆದಿದೆ. ನವೋದಯ ಚಾರಿಟೆಬಲ್ ಟ್ರಸ್ಟ್‍ಗೆ ಡಿಸಿಸಿ ಬ್ಯಾಂಕಿನಿಂದ 19 ಲಕ್ಷ ಹಣ ವರ್ಗಾವಣೆ, ಬ್ಯಾಂಕಿನ ಶಾಖೆಯನ್ನು ಇದೇ ಟ್ರಸ್ಟಿನ ಕಟ್ಟಡದಲ್ಲಿ ನಡೆಸುವುದು ಕಾನೂನುಬಾಹಿರ. ಮಂಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರ ವಜಾಕ್ಕೆ ನೋಟಿಸ್ ಕೊಟ್ಟಿದ್ದೇವೆ ಎಂದು ತಿಳಿಸಿದರು. ಈ ವರ್ಷ 20,810 ಕೋಟಿ ಸಾಲವನ್ನು ನೀಡುವ ಗುರಿ ಇದ್ದು 10,591 ಕೋಟಿ ಹಣವನ್ನು ಸಾಲವಾಗಿ ರೈತರಿಗೆ ಈಗಾಗಲೇ ನೀಡಲು ಚಾಲನೆ ಕೊಟ್ಟಿದ್ದೇವೆ ಎಂದರು.

ಕೋಟ ಶ್ರೀನಿವಾಸ ಪೂಜಾರಿಯವರು ವಿಧಾನಪರಿಷತ್‍ನಲ್ಲಿ ಪಕ್ಷ ಮತ್ತು ಸರಕಾರವನ್ನು ಸಮರ್ಥವಾಗಿ ಪ್ರತಿನಿಧಿಸಿ ಉತ್ತರ ನೀಡುತ್ತಾರೆ. ಅವರನ್ನು ಗರಿಷ್ಠ ಮತಗಳಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಸಹಕಾರ ಇಲಾಖೆ ಅಧಿಕಾರಿಗಳು ಜನರಿಗೆ ಸರಿಯಾಗಿ ಸ್ಪಂದಿಸದೆ ಇದ್ದರೆ ಅದನ್ನು ಸಹಿಸಲಾಗದು ಎಂದು ಎಚ್ಚರಿಸಿದರು.

ಸಚಿವರಾದ ಎಸ್. ಅಂಗಾರ, ವಿ ಸುನೀಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಶ್ವತ್ಥನಾರಾಯಣ, ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ವಿನಯ್ ಬಿದರೆ, ಪಕ್ಷದ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಸುಕುಮಾರ್ ಶೆಟ್ಟಿ, ಉಮಾನಾಥ್ ಕೋಟ್ಯಾನ್, ರಘುಪತಿ ಭಟ್, ವಿಭಾಗ ಪ್ರಭಾರಿಗಳಾದ ಉದಯ ಕುಮಾರ್ ಶೆಟ್ಟಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಎಂ ಶಂಕರಪ್ಪ, ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಯಶ್‍ಪಾಲ್ ಸುವರ್ಣ, ಜನಪ್ರತಿನಿಧಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

]]>
https://iambjp.in/archives/702/feed 0
ಯಾವುದೇ ಯೋಜನೆಯ ರುವಾರಿ ಕರ್ನಾಟಕ : ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ https://iambjp.in/archives/507 https://iambjp.in/archives/507#respond Sun, 05 Sep 2021 07:49:03 +0000 https://iambjp.in/?p=507 ಬೆಂಗಳೂರು : ದೇಶದ ಯಾವುದೇ ಯೋಜನೆಯಾಗಲೀ ಅದರ ರುವಾರಿ ಕರ್ನಾಟಕ ಎಂದರೆ ಅದು ಕರ್ನಾಟಕ.ಕಿಸಾನ್ ಬಜೆಟ್ ಮಂಡಿಸಿದ ಮೊದಲ ಹೆಗ್ಗಳಿಕೆ ಮಾಜಿ ಸಿಎಂ ಯಡಿಯೂರಪ್ಪ ಅವರದ್ದಾಗಿದೆ ಎಂದು ಕೇಂದ್ರ ಕೃಷಿ ಕಲ್ಯಾಣ ರೈತ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಶ್ಲಾಘಿಸಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕೃಷಿ ಇಲಾಖೆ ಸಹಯೋಗದಲ್ಲಿ ಕರ್ನಾಟಕ ಸರ್ಕಾರದಿಂದ ಹಮ್ಮಿಕೊಂಡಿದ್ದ ರೈತ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಲೋಕಾರ್ಪಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ರೈತರ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಪ್ರತಿವರ್ಷ ಸಹಾಯಧನ‌ ವಿದ್ಯಾರ್ಥಿವೇತನ ನೀಡುವ ದೇಶದ ಮೊದಲ ಯೋಜನೆ ವಿದ್ಯಾನಿಧಿ ಯೋಜನೆ.ಶೇ.75ರಷ್ಟು ಜನ ಮಳೆಯಾಧಾರಿತ ಕೃಷಿ ಮಾಡುತ್ತಿದ್ದು ಕಿಸಾನ್ ಸಮ್ಮಾನ್ ಯೋಜನೆ, ಸಾವಯವ ಹನಿನೀರಾವರಿ ಸೇರಿದಂತೆ ಸಣ್ಣ ರೈತನ ಕಲ್ಯಾಣಕ್ಕಾಗಿ ಬಾಡಿಗೆಗೆ ಕೃಷಿ ಯಂತ್ರೋಪಕರಣ, ಆಹಾರ ಉತ್ಪನ್ನ ಆಹಾರ ಮಾರುಕಟ್ಟೆ ಸೇರಿದಂತೆ ಕೃಷಿ ಉತ್ಪಾದಕರ ಸಂಘದ ಮೂಲಕ ದೇಶದ ಸಣ್ಣ ರೈತ ಲಾಭದಾಯಕನಾಗಲು ಕೃಷಿ ಉದ್ಯಮಿಯಾಗುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ ಎಂದರು.

ತೋಟಗಾರಿಕೆ ಇಲಾಖೆಯೂ ಕೂಡ ಕೃಷಿಯಂತೆ ಕೃಷಿ ವಿಶ್ವವಿದ್ಯಾಲಯವಾಗಬೇಕು. ಕಟ್ಟಕಡೆಯ ರೈತನನ್ನು ಕೂಡ ಯೋಜನೆಗಳು ತಲುಪಬೇಕು ಎಂದರು.

ಕಾರ್ಯಕ್ರಮದಲ್ಲಿ ಕೇಂದ್ರದ ಸಚಿವರಾದ ನರೇಂದ್ರ ಸಿಂಗ್ ತೋಮರ್, ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಸಚಿವರಾದ ಬಿ.ಸಿ.ಪಾಟೀಲ್, ಮುನಿರತ್ನ, ಬಿ.ಸಿ ನಾಗೇಶ್ ಸೇರಿದಂತೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

]]>
https://iambjp.in/archives/507/feed 0
2023 ರ ವರ್ಷ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ https://iambjp.in/archives/449 https://iambjp.in/archives/449#respond Fri, 27 Aug 2021 12:26:39 +0000 https://iambjp.in/?p=449 ಬೆಂಗಳೂರು : 2023 ರ ವರ್ಷ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಿಸಲಾಗುತ್ತಿದ್ದು, ಕರ್ನಾಟಕ ರಾಜ್ಯದಲ್ಲಿ ಸಿರಿಧಾನ್ಯ ಬೆಳೆಯಲು ಸಾಕಷ್ಟು ವಾತಾವರಣ ಹೆಚ್ಚಾಗಿದೆ. 2023 ರ ವೇಳೆಗೆ ಕರ್ನಾಟಕ ಸಿರಿಧಾನ್ಯ ರಫ್ತು ಮಾಡುವಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲನೇ ರಾಜ್ಯವಾಗಬೇಕು. ಎಲ್ಲಾ ದೇಶಗಳು ಈ ಪ್ರಸ್ತಾವನೆಯನ್ನು ಎಲ್ಲಾ ದೇಶಗಳು ಒಪ್ಪಿಕೊಂಡಿವೆ ಎಂದು ಕೇಂದ್ರದ ಕೃಷಿ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.

ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಕರ್ನಾಟಕದಲ್ಲಿ ಸಿರಿಧಾನ್ಯಕ್ಕೆ ಹೆಚ್ಚು ಒತ್ತು ನೀಡಲು ಹೆಚ್ಚು ಬೆಳೆಯಲು ಉತ್ತಮ ವಾತಾವರಣವಿದೆ. ಭಾರತದ ಸ್ವಾತಂತ್ರ್ಯೋತ್ಸವದ 75 ನೇ ವರ್ಷದ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ದಕ್ಷಿಣ ಭಾರತದ ಎಲ್ಲಾ ತೋಟಗಾರಿಕಾ ಮತ್ತು ಆಹಾರಧಾನ್ಯಗಳ ರಫ್ತುದಾರರನ್ನು ಸೇರಿಸಿ ಸೆಪ್ಟೆಂಬರ್ 22 ರಂದು ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಿಸಿದಂತೆ ರಫ್ತುದಾರರು ಇದರಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯದ ಕೃಷಿ ಇಲಾಖೆ ಮಾಡಿದ ಮೊಬೈಲ್ ಬೆಳೆ ಆಪ್ ಸಮೀಕ್ಷೆ ಇಡೀ ದೇಶಕ್ಕೆ ಮಾದರಿಯಾಗಿದೆ.ಒಂದು ಜಿಲ್ಲೆಒಂದು ಉತ್ಪನ್ನ ಯೋಜನೆಗೆ ಒತ್ತು ನೀಡಿ ಗುಣಮಟ್ಟದ ಉತ್ಪಾದನೆ, ಸಂಗ್ರಹಣೆ, ಮಾರ್ಕೆಟಿಂಗ್, ಮಾರಾಟ ಮಾಡಲು ಪ್ರತಿಯೊಂದು ಜಿಲ್ಲೆಯಲ್ಲಿಯೂ ಕ್ಲಸ್ಟರ್ ಮಾಡಲು ನಿರ್ಧರಿಸಲಾಗಿದೆ ಎಂದರು.

ರೈತ ಕೃಷಿಯಲ್ಲಿ ಮುಂದುವರೆದು ಲಾಭದಾಯಕವಾಕಬೇಕು. ಕೃಷಿ ಜೀವನಾಧಾರ ಕಸುಬಾಗಿದ್ದು, ಒಟ್ಟು ಕೃಷಿಕರಲ್ಲಿ ಶೇ.80 ರಷ್ಟು ಸಣ್ಣ ಮತ್ತು ಮಧ್ಯಮ ಕೃಷಿಕರಿದ್ದಾರೆ. ಈ ಸಣ್ಣ ಮತ್ತು ಮಧ್ಯಮ ರೈತರು ನಗರಕ್ಕೆ ವಲಸೆ ಬರುವುದು ಹೆಚ್ಚಾಗುತ್ತಿದ್ದು, ಕಳೆದ 5-6 ವರ್ಷಗಳಲ್ಲಿ ಕೃಷಿಕನ ಬದುಕಿಗೆ ಒತ್ತು ಕೊಡಲು ಹಾಗೂ ರೈತನನ್ನು ರೈತರ ಆದಾಯ ಇಮ್ಮಡಿಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ ಸರ್ಕಾರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದೆ.

ಮೋದಿ ನೇತೃತ್ವದಲ್ಲಿ 1.31 ಸಾವಿರ ಕೋಟಿ ಈ ವರ್ಷ ಕೃಷಿ ಬಜೆಟ್ ಆಗಿದೆ. ಇದನ್ನು ಹೊರತುಪಡಿಸಿ ಕೃಷಿ ಮೂಲಭೂತ ನಿಧಿ ಅಡಿಯಲ್ಲಿ 1 ಲಕ್ಷ ಕೋ.ರೂ.ಹೆಚ್ಚುವರಿ ಹಣವನ್ನು ಕೊಯ್ಲೋತ್ತರ ಉತ್ಪಾದನೆಗೆ ಮಾರ್ಕೆಟಿಂಗ್ ಗೆ ಕೇಂದ್ರ ಹಣ ತೊಡಗಿಸುತ್ತಿದೆ. ಸಣ್ಣ ರೈತ ಕೃಷಿ ಜೊತೆ ಮಿಶ್ರ ಬೆಳೆ ಬೆಳೆದ ರೈತ ಲಾಭದಾಯಕವಾಗಿದೆ. ಡೈರಿ, ಹಸು ಸಾಕಾಣೆ, ಪಶುಸಂಗೋಪನೆ, ಅಗ್ರೋ ಫಾರೆಸ್ಟ್ರಿ, ಮೀನುಗಾರಿಕೆ ಸೇರಿದಂತೆ ಹಲವಾರು ಉಪಕಸುಬುಗಳಿಗೆ ಸರ್ಕಾರ ನೆರವು ನೀಡುತ್ತಿದೆ.ಎಲ್ಲಾ ರಾಜ್ಯ ಒಗ್ಗೂಡಿ ರೈತನನ್ನು ಲಾಭದಾಯಕನನ್ನಾಗಿಸಲು ಕೇಂದ್ರ ಕಾರ್ಯಕ್ರಮ ಹಮ್ಮಿಕೊಂಡಿದೆ. ಮೀನುಗಾರಿಗೆ, ಪಶುಸಂಗೋಪನೆ ಸೇರಿದಂತೆ ಬೇರೆಬೇರೆ ಕಸುಬುಗಳಿಗೆ ಒತ್ತು ನೀಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಾಯ ಮಾಡುತ್ತಿವೆ. ಎಲ್ಲಾ ಸಣ್ಣ ರೈತರನ್ನು ಒಗ್ಗೂಡಿಸಲು ಎಫ್.ಪಿ.ಒ (ಕೃಷಿ ಉತ್ಪಾದಕರ ಸಂಘ) 10 ಸಾವಿರ ಕೃಷಿ ಉತ್ಪಾದಕರ ಸಂಘ ಮಾಡಲು ಕೇಂದ್ರ ಒತ್ತು ನೀಡಲು ನಿರ್ಧರಿಸಿದೆ.750 ಎಫ್.ಪಿ.ಓಗಳನ್ನು ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಾಗಲು ಸಿಎಂ ಬೊಮ್ಮಾಯಿ ಕರೆ ನೀಡಿದ್ದಾರೆ. ಅದರಂತೆ ಒಂದು ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ ಎಫ್.ಪಿ.ಓ ಮಾಡಲು ಉದ್ದೇಶಿಸಲಾಗಿದೆ.

ಪೆಟ್ರೋಲ್­ಗೆ ಪರ್ಯಾಯವಾಗಿ ಎಥೆನಾಲ್ ಬಳಸಬಹುದಾಗಿದ್ದು, ಕರ್ನಾಟಕದಲ್ಲಿ ಮಂಡ್ಯ ಸೇರಿದಂತೆ ಬಹುತೇಕ ನೀರಾವರಿ ಪ್ರದೇಶದಲ್ಲಿ ಕಬ್ಬು ಬೆಳೆಯುತ್ತಿದ್ದು, ಸಕ್ಕರೆಯಿಂದ ಎಥಿನಾಲ್ ತಯಾರಿಸಲು ಒತ್ತು ನೀಡಲಾಗುತ್ತಿದ್ದೆ. 9. 5 ಬಿಲಿಯನ್ ಮೆಟ್ರಿಕ್ ಟನ್ ಸಕ್ಕರೆಯಿಂದ ಎಥಿನಾಲ್ ಮಾಡಲಾಗಿದೆ. ಅದರಂತೆ ಗೋಧಿ ಸೇರಿದಂತೆ ಬಹುತೇಕ ಧಾನ್ಯಗಳಿಂದಲೂ ಎಥಿನಾಲ್ ತಯಾರಿಸಬಹುದಾಗಿದೆ ಎಂದು ವಿವರಿಸಿದರು.

ರಾಜ್ಯ ಸರ್ಕಾರ ಅಭಿವೃದ್ಧಿ ಪಡಿಸಿರುವ ಯೋಜನೆಯನ್ನು ದೇಶಾದ್ಯಂತ ವಿಸ್ತರಿಸಲಾಗುವುದು.ಆಂಧ್ರ ಪ್ರದೇಶದಲ್ಲಿ ಕೃಷಿ ಭರವಸಾ ಯೋಜನೆ ಜಾರಿ ಮಾಡಿದ್ದಾರೆ. ತಮಿಳುನಾಡಿನಲ್ಲಿ ತರಕಾರಿ ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಮಾಡಿದ್ದಾರೆ. ಈ ಯೋಜನೆಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಬೇಕು. ರಫ್ತು ಉದ್ಯಮಕ್ಕೆ ಉತ್ತೇಜನ ನೀಡಲು ಕ್ರಮ ವಹಿಸಲಾಗುವುದು. ಒಳನಾಡಿನ ಮೀನುಗಾರಿಕೆಗೆ ಉತ್ತೇಜನ. ರೇಷ್ಮೆ ಬೆಳೆ ಉತ್ತೇಜನ, ರೇಷ್ಮೆಗೆ ಈ ಮಾರುಕಟ್ಟೆ ಜಾರಿಗೆ ತರಲು ತೀರ್ಮಾನ. ಶೇ 50 ರಷ್ಟು ರೈತರು ಇ ಪೇಮೆಂಟ್ ವ್ಯವಸ್ಥೆಗೆ ಅಳವಡಿಸಿಕೊಂಡಿದ್ದಾರೆ.57.ಕೋಟಿ ರೈತರಿಗೆ ನೇರವಾಗಿ ಅವರ ಅಕೌಂಟ್ ಗೆ ಬೆಳೆ ವಿಮೆ ಹಣ ತಲುಪಿಸಲಾಗಿದೆ. ದೇಶ ಇತಿಹಾಸದಲ್ಲಿ 320 ಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದನೆ ಮಾಡಲಾಗಿದೆ. ಫುಡ್ ಪ್ರೊಸೆಸ್ಸಿಂಗ್ ಆಹಾರ ರಫ್ತು ಮಾಡಲು ಕೈಗಾರಿಕಾ ಇಲಾಖೆಯಲ್ಲಿ ಪ್ರತ್ಯೇಕ ವಿಂಗ್ ಮಾಡಲು ಮನವಿ ಮಾಡಿದ್ದೇನೆ. ಅವರೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು.

ಕೃಷಿಗೆ ಸಂಬಂಧಿಸಿದ ಕೆಲಸಗಳನ್ನು ಎನ್ ಆರ್.ಇಜಿ ಮೂಲಕ ಜಾರಿಗೆ ಆದ್ಯತೆ ನೀಡಲಾಗುವುದು. ಎಫ್‌ಪಿಒಗಳ ಮೂಲಕ ಕೃಷಿ ಉತ್ಪನ್ನಗಳ ಮಾರಾಟ ಮಾಡಲು ಕ್ರಮ ಕೈಗೊಳ್ಳಲಾಗುವುದು. ಎಫ್.ಪಿಒ 25 ವಿವಿಧ ರೀತಿಯ ಕ್ರಮಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.ಪ್ರವಾಹ ಪರಿಹಾರವಾಗಿ ಎನ್ ಡಿ ಆರ್ ಎಫ್ ಮೂಲಕ 630 ಕೋಟಿ ಬಿಡುಗಡೆ ಮಾಡಲಾಗಿದೆ. ಕೊರೊನಾದಿಂದ ಎರಡು ವರ್ಷ ಹಿನ್ನಡೆಯಾಗಿದೆ. ಕೊರೊನಾ.ಕಾರಣದಿಂದ ಸ್ವಲ್ಪ ಮುಂದೂಡಿಕೆಯಾಗಿದೆ.ರಸಗೊಬ್ಬರ ಬೆಲೆ ಹೆಚ್ಚಳವಾದರೂ ಕೇಂದ್ರ ಸರ್ಕಾರ ಸಬ್ಸಿಡಿ ಕೊಡುತ್ತಿದೆ. ಕೇಂದ್ರ ಸರ್ಕಾರ ಕೃಷಿಗೆ ಸಂಬಂಧಿಸಿದ ಮೂರು ಬಿಲ್ ಗಳ ಬಗ್ಗೆ ಬಹಳ ಸ್ಪಷ್ಟವಿದೆ. ಮೂವತ್ತು ವರ್ಷಗಳಿಂದ ಅನೇಕ ಸಮಿತಿಗಳು ನೀಡಿರುವ ವರದಿಗಳ ಆಧಾರದಲ್ಲಿ ಕಾಯ್ದೆಗಳನ್ನು ಜಾರಿಗೆ ಜಾರಿಗೆ ತರಲಾಗಿದೆ. ಸ್ವಾಮಿನಾಥನ್ ವರದಿ ಪ್ರಕಾರ ಎಪಿಎಂಸಿಯಲ್ಲಿ ರೈತರಿಗೆ ಅನ್ಯಾಯಗುತ್ತಿದೆ ಎಂದು ಹೇಳಿದ್ದಾರೆ. ರೈತರ ಜೊತೆ ಕೇಂದ್ರ ಸರ್ಕಾರ ಮಾತುಕತೆಗೆ ಸಿದ್ಧವಿದೆ ಎಂದರು.

]]>
https://iambjp.in/archives/449/feed 0
ವಿಶ್ವ ಛಾಯಾಗ್ರಾಹಕರ ದಿನ : ಛಾಯಾಗ್ರಾಹಕರಿಗೆ ಸಚಿವೆ ಶೋಭಾ ಕರಂದ್ಲಾಜೆ ಸನ್ಮಾನ https://iambjp.in/archives/393 https://iambjp.in/archives/393#respond Thu, 19 Aug 2021 10:49:01 +0000 https://iambjp.in/?p=393 ವಿಶ್ವ ಛಾಯಾಗ್ರಾಹಕರ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ಇಂದು ಉಡುಪಿಯಲ್ಲಿ ವಿವಿಧ ಪತ್ರಿಕೆಗಳ ಛಾಯಾಗ್ರಾಹಕರಿಗೆ ಸನ್ಮಾನ ಮಾಡಿದರು.

ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ಕೇಂದ್ರ ಸರಕಾರದ ಸರ್ವತೋಮುಖ ಅಭಿವೃದ್ಧಿ ಕಾರ್ಯವನ್ನು ಮೆಚ್ಚಿಕೊಂಡರು.

ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ಒಗ್ಗೂಡಿ ರೈತರು ಸ್ವಾವಲಂಬಿ ಆಗುವ ನಿಟ್ಟಿನಲ್ಲಿ ಶ್ರಮಿಸುತ್ತಿವೆ. ರೈತರ ಉತ್ಪನ್ನಕ್ಕೆ ಹೆಚ್ಚಿನ ದರ ಸಿಗುವ ನಿಟ್ಟಿನಲ್ಲಿ ಪ್ತಯತ್ನ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಸಂಸತ್ತಿಗೆ ನೂತನ ಸಚಿವರ ಪರಿಚಯ ಮಾಡಲು ವಿರೋಧ ಪಕ್ಷಗಳು ಅವಕಾಶ ಕೊಡಲಿಲ್ಲ. ಇದೇ ಕಾರಣಕ್ಕೆ ಸುಮಾರು 500ರಷ್ಟು ಸಂಸದರ ಬದಲಾಗಿ 130 ಕೋಟಿ ಜನರ ಮುಂದೆ ಹೊಸ ಸಚಿವರನ್ನು ತೆಗೆದುಕೊಂಡು ಹೋಗಲು ಮತ್ತು ಜನರಿಗೆ ನೂತನ ಸಚಿವರನ್ನು ಪರಿಚಯಿಸಲು ನಿರ್ಧರಿಸಲಾಯಿತು. ಅದೇ ಕಾರಣಕ್ಕೆ ಈ ಯಾತ್ರೆ ನಡೆಯುತ್ತಿದೆ ಎಂದು ತಿಳಿಸಿದರು.

]]>
https://iambjp.in/archives/393/feed 0
10 ಸಾವಿರ ಕೃಷಿ ಉತ್ಪಾದಕರ ಘಟಕ ಸ್ಥಾಪನೆ – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ https://iambjp.in/archives/375 https://iambjp.in/archives/375#respond Wed, 18 Aug 2021 11:51:00 +0000 https://iambjp.in/?p=375 ಬೆಂಗಳೂರು: ದೇಶದಲ್ಲಿ 10 ಸಾವಿರ ಕೃಷಿ ಉತ್ಪಾದಕರ ಘಟಕಗಳನ್ನು (ಎಫ್‍ಪಿಒ) ಆರಂಭಿಸುವ ಸಂಕಲ್ಪ ನಮ್ಮ ಜನಪರ ಪ್ರಧಾನಿ ಶ್ರೀ ನರೇಂದ್ರ ಮೋದಿಯವರದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ತಿಳಿಸಿದರು.

ಚಿಕ್ಕಮಗಳೂರಿನಲ್ಲಿ ಇಂದು ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಿಕ್ಕ ರೈತರನ್ನು ಒಗ್ಗೂಡಿಸಿ ಅವರಿಗೆ ಕೃಷಿ ಸಲಕರಣೆಗಳನ್ನು ಒದಗಿಸುವ ಚಿಂತನೆ ಇದೆ. ಈಗಲೂ ಕಡಿಮೆ ಬಾಡಿಗೆಗೆ ಕೃಷಿ ಸಲಕರಣೆಗಳು ಲಭಿಸುತ್ತಿವೆ. ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು. ಖಾದ್ಯ ತೈಲದ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿ ಆಗುವ ನಿಟ್ಟಿನಲ್ಲಿ ಮುನ್ನಡೆದಿದೆ ಎಂದರು.

ರೈತರನ್ನು ದಲ್ಲಾಳಿಗಳ ಸಮಸ್ಯೆಯಿಂದ ಮುಕ್ತರನ್ನಾಗಿಸಿದ ಕೇಂದ್ರ ಸರಕಾರ ನಮ್ಮದು ಎಂದ ಅವರು, ಈಗ ಆಹಾರ ಪದಾರ್ಥ, ತೋಟಗಾರಿಕಾ ಉತ್ಪನ್ನಗಳನ್ನು ರಫ್ತು ಮಾಡಲಾಗುತ್ತಿದೆ. ಹಿಂದೆ ಆಹಾರಕ್ಕಾಗಿ ವಿದೇಶಗಳ ಎದುರು ಅಂಗಲಾಚುವ ಸ್ಥಿತಿ ಇತ್ತು ಎಂದು ತಿಳಿಸಿದರು.

2014ರಲ್ಲಿ ಯುಪಿಎ ಸರಕಾರ ಇದ್ದಾಗ ಬಜೆಟ್‍ನಡಿ ಕೇವಲ 21 ಸಾವಿರ ಕೋಟಿಯನ್ನು ಕೃಷಿ ಕ್ಷೇತ್ರಕ್ಕೆ ಬಳಸಲಾಗುತ್ತಿತ್ತು. ಕೇವಲ ಆರೇಳು ವರ್ಷಗಳಲ್ಲಿ 1,30,000 ಕೋಟಿ ರೂಪಾಯಿ ಕೃಷಿ ಅಭಿವೃದ್ಧಿಗೆ ಕೊಡಲಾಗಿದೆ. ಸುಮಾರು ಶೇ 460ರಷ್ಟು ಬಜೆಟ್‍ನಡಿ ಹೆಚ್ಚಳವನ್ನು ಇದೊಂದು ಕ್ಷೇತ್ರದಲ್ಲೇ ನಾವು ಕಾಣುತ್ತಿದ್ದೇವೆ ಎಂದು ವಿವರಿಸಿದರು.

ಇದಲ್ಲದೆ ಕೃಷಿ ಮೂಲಸೌಕರ್ಯ ಹೆಚ್ಚಳಕ್ಕೆ 1 ಲಕ್ಷ ಕೋಟಿಯ ಹೆಚ್ಚುವರಿ ಹಣವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ನೀಡಿದ್ದಾರೆ. ಇದು ಬಿಜೆಪಿ ಸರಕಾರದ ಕೃಷಿಕರ ಅಭಿವೃದ್ಧಿ ಕುರಿತ ಬದ್ಧತೆಗೆ ಸ್ಪಷ್ಟ ನಿದರ್ಶನ ಎಂದು ತಿಳಿಸಿದರು. ಸಣ್ಣಪುಟ್ಟ ಸ್ವಸಹಾಯ ಸಂಘಗಳನ್ನು ರಚಿಸಿ ಈರುಳ್ಳಿ, ಆಲೂಗಡ್ಡೆ ಮತ್ತಿತರ ಉತ್ಪನ್ನಗಳ ಸಂಸ್ಕರಣೆ- ಮೌಲ್ಯವರ್ಧನೆ ನಡೆಸಲು ಅವಕಾಶವಿದೆ ಎಂದು ಕಿವಿಮಾತು ಹೇಳಿದರು.

ರಾಜ್ಯದಿಂದ ಕಾಫಿ ಮತ್ತು ಕರಿಮೆಣಸು ಮಾತ್ರ ರಫ್ತಾಗುತ್ತಿದೆ. ಕಾಫಿ ಬೆಳೆಗಾರರಿಗೂ ಸಬ್ಸಿಡಿ ನೀಡಲು ನಿರ್ಧರಿಸಲಾಗಿದೆ. ತೆಂಗು ಮತ್ತು ತೆಂಗಿನ ಉತ್ಪನ್ನಗಳ ರಫ್ತು ಮಾಡಲು ಅವಕಾಶ ಮಾಡಿಕೊಡಲಾಗಿದೆ. ಇದರಿಂದ ಬೆಳೆಗಾರರಿಗೆ ಹೆಚ್ಚು ದರ ಲಭಿಸಲಿದೆ ಎಂದು ತಿಳಿಸಿದರು.

ಕೋವಿಡ್ ಸಮಸ್ಯೆ ಇದ್ದರೂ ಕೃಷಿಕರ ಆದಾಯ ದ್ವಿಗುಣಗೊಳಿಸಲು ಹಲವಾರು ಯೋಜನೆಗಳನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಜಾರಿಗೊಳಿಸಿದ್ದಾರೆ. ಬಿತ್ತನೆ ಬೀಜ ಅಭಿವೃದ್ಧಿ, ಶೇ 80ರಷ್ಟು ಸಣ್ಣ ರೈತರ ಅಭಿವೃದ್ಧಿಗೂ ಕೇಂದ್ರದ ಬಿಜೆಪಿ ಸರಕಾರ ಅನೇಕ ಯೋಜನೆಗಳನ್ನು ಭ್ರಷ್ಟಾಚಾರವಿಲ್ಲದೆ ಅನುಷ್ಠಾನಕ್ಕೆ ತಂದಿದೆ ಎಂದು ತಿಳಿಸಿದರು.

ಕಿಸಾನ್ ಸಮ್ಮಾನ್ ಯೋಜನೆಯಡಿ ಇಲ್ಲಿನವರೆಗೆ 21 ಕೋಟಿ ರೈತರಿಗೆ 1,57,000 ಕೋಟಿ ರೂಪಾಯಿ ಬ್ಯಾಂಕ್ ಖಾತೆಗಳಿಗೆ ನೇರ ಸೌಲಭ್ಯ ವರ್ಗಾವಣೆ (ಡಿಬಿಟಿ) ಮೂಲಕ ವರ್ಗಾವಣೆಗೊಂಡಿದೆ. ಫಸಲ್ ಬಿಮಾ ಯೋಜನೆಯನ್ನು ಸರಳಗೊಳಿಸಿದ್ದು, ರೈತರು ಉತ್ಪನ್ನ ನಷ್ಟವಾದ ಕುರಿತ ದಾಖಲೆಗಳನ್ನು ಯಾವುದೇ ಅಧಿಕಾರಿಗಳು, ಮಧ್ಯವರ್ತಿಗಳ ನೆರವಿಲ್ಲದೆ ತಮ್ಮ ಮೊಬೈಲ್ ಮೂಲಕ ಅಪ್‍ಲೋಡ್ ಮಾಡಲು ಅವಕಾಶ ಮಾಡಿಕೊಡಲಾಗಿದೆ ಎಂದು ವಿವರಿಸಿದರು.

ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ಒಗ್ಗೂಡಿ ರೈತರು ಸ್ವಾವಲಂಬಿ ಆಗುವ ನಿಟ್ಟಿನಲ್ಲಿ ಶ್ರಮಿಸುತ್ತಿವೆ. ರೈತರ ಉತ್ಪನ್ನಕ್ಕೆ ಹೆಚ್ಚಿನ ದರ ಸಿಗುವ ನಿಟ್ಟಿನಲ್ಲಿ ಪ್ತಯತ್ನ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಸಂಸತ್ತಿಗೆ ನೂತನ ಸಚಿವರ ಪರಿಚಯ ಮಾಡಲು ವಿರೋಧ ಪಕ್ಷಗಳು ಅವಕಾಶ ಕೊಡಲಿಲ್ಲ. ಇದೇ ಕಾರಣಕ್ಕೆ ಸುಮಾರು 500ರಷ್ಟು ಸಂಸದರ ಬದಲಾಗಿ 130 ಕೋಟಿ ಜನರ ಮುಂದೆ ಹೊಸ ಸಚಿವರನ್ನು ತೆಗೆದುಕೊಂಡು ಹೋಗಲು ಮತ್ತು ಜನರಿಗೆ ನೂತನ ಸಚಿವರನ್ನು ಪರಿಚಯಿಸಲು ನಿರ್ಧರಿಸಲಾಯಿತು. ಅದೇ ಕಾರಣಕ್ಕೆ ಈ ಯಾತ್ರೆ ನಡೆಯುತ್ತಿದೆ ಎಂದು ತಿಳಿಸಿದರು.

ಸ್ಥಳೀಯವಾಗಿ ಹೆಚ್ಚಿನ ಗುರುತೇ ಇಲ್ಲದ ನನ್ನನ್ನು ಗೆಲ್ಲಿಸಿದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮ ಕ್ಷೇತ್ರವನ್ನು ಪ್ರತಿನಿಧಿಸುವ ನನಗೆ ಸಚಿವ ಸ್ಥಾನ ಅದರಲ್ಲೂ ಕೃಷಿ ಖಾತೆ ಸಿಕ್ಕಿದೆ. ಇದಕ್ಕಾಗಿ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ ಕೃತಜ್ಞತೆಗಳು ಎಂದರು. ಗರಿಷ್ಠ ಜಂಟಿ ಕಾರ್ಯದರ್ಶಿಗಳಿರುವ ಖಾತೆ ಇದು. ಹಲವಾರು ಯೋಜನೆಗಳನ್ನು ಈ ಖಾತೆಗೆ ಪ್ರಧಾನಿಯವರು ಕೊಟ್ಟಿದ್ದಾರೆ ಎಂದು ತಿಳಿಸಿದರು.

ರಾಜ್ಯದ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಉಪಸಭಾಪತಿಗಳಾದ ಶ್ರೀ ಪ್ರಾಣೇಶ್, ಜಿಲ್ಲಾಧ್ಯಕ್ಷರಾದ ಶ್ರೀ ಕಲ್ಮರುಡಪ್ಪ, ಮಾಜಿ ಸಚಿವರಾದ ಶ್ರೀ ಜೀವರಾಜ್, ರಾಜ್ಯ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಶ್ರೀ ತುಳಸಿ ಮುನಿರಾಜು ಗೌಡ, ಶಾಸಕರಾದ ಶ್ರೀ ಎಂ.ಪಿ. ಕುಮಾರಸ್ವಾಮಿ, ಶ್ರೀ ಸುರೇಶ್, ಶ್ರೀ ಬೆಳ್ಳಿ ಪ್ರಕಾಶ್, ಕಾಫಿ ಮಂಡಳಿ ಅಧ್ಯಕ್ಷರಾದ ಶ್ರೀ ಎಮ್.ಎಸ್. ಬೋಜೆಗೌಡ, ವಿಭಾಗ ಪ್ರಭಾರಿಗಳಾದ ಶ್ರೀ ಗಿರೀಶ್ ಪಟೇಲ್, ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

]]>
https://iambjp.in/archives/375/feed 0
ರೈತರ ಆದಾಯ ದ್ವಿಗುಣಗೊಳಿಸಲು ಶ್ರಮ – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ https://iambjp.in/archives/326 https://iambjp.in/archives/326#respond Mon, 16 Aug 2021 08:48:48 +0000 https://iambjp.in/?p=326 ಬೆಂಗಳೂರು: ರೈತರ ಆದಾಯ ದ್ವಿಗುಣಗೊಳಿಸಲು ಪ್ರಧಾನಿಯವರು ಶ್ರಮಿಸುತ್ತಿದ್ದು, ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಆ ಯೋಜನೆಗಳನ್ನು ಕೊನೆಯ ರೈತರ ತನಕ ತಲುಪಿಸಲು ಸಚಿವ ಶ್ರೀ ನರೇಂದ್ರ ಸಿಂಗ್ ತೋಮರ್ ಅವರ ನೇತೃತ್ವದಲ್ಲಿ ಶ್ರಮಿಸುವುದಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ತಿಳಿಸಿದರು.

ಮಂಡ್ಯದಲ್ಲಿ ಇಂದು ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಖಾದ್ಯ ತೈಲ, ಎಣ್ಣೆಯಲ್ಲಿ ನಾವು ಸ್ವಾವಲಂಬನೆ ಸಾಧಿಸಬೇಕಿದೆ. ಶೇ 70 ಖಾದ್ಯ ತೈಲ ಬೇರೆ ದೇಶಗಳಿಂದ ಬರುತ್ತಿದೆ. ಟ್ರ್ಯಾಕ್ಟರ್, ಟಿಲ್ಲರ್ ಸಬ್ಸಿಡಿಯಲ್ಲಿ ನೀಡುವುದು, ಬಾಡಿಗೆಯಲ್ಲಿ ಯಂತ್ರೋಪಕರಣ ಒದಗಿಸುವುದು, ಕೃಷಿ ಸಿಂಚಾಯಿ ಯೋಜನೆಗೆ ವಿಶೇಷವಾದ ಅನುಕೂಲತೆ, ರಸಗೊಬ್ಬರಕ್ಕೆ ಸಬ್ಸಿಡಿ, ಖಾದ್ಯ ತೈಲವನ್ನು ಉಚಿತವಾಗಿ ನೀಡಲು ಉದ್ದೇಶಿಸಲಾಗಿದೆ. ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ಮೂಲಕ ಸ್ವಾವಲಂಬಿತನ ಸಾಧಿಸಲಾಗುವುದು ಎಂದು ನುಡಿದರು.

ರಾಜ್ಯದಲ್ಲಿ ನಾಲ್ಕು ಸಚಿವರು ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಬಹಳ ಅದ್ಭುತವಾದ ಸ್ವಾಗತವನ್ನು ಮಂಡ್ಯ ಮತ್ತು ಮದ್ದೂರಿನ ಜನರು ನನಗೆ ನೀಡಿದ್ದಾರೆ ಎಂದು ವಿವರಿಸಿದರು.

ದೇಶದಾದ್ಯಂತ ನೂತನ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ಆರಂಭವಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ಸಮುದಾಯ, ಮಹಿಳೆಯರಿಗೆ ಶ್ರೀ ನರೇಂದ್ರ ಮೋದಿ ಅವರ ಕೇಂದ್ರ ಸಚಿವ ಸಂಪುಟದಲ್ಲಿ ಆದ್ಯತೆ ಕೊಡಲಾಗಿದೆ ಎಂದು ತಿಳಿಸಿದರು. ಅತ್ಯಂತ ಹಿಂದುಳಿದ ಪ್ರದೇಶದ ರೈತನ ಮಗಳಾದ ತಮಗೆ ಸಚಿವ ಸ್ಥಾನ ನೀಡಿದ್ದಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಮರ್ಪಿಸುವುದಾಗಿ ತಿಳಿಸಿದರು.

ಮಂಡ್ಯದ ಸಕ್ಕರೆ- ಬೆಲ್ಲ ರಫ್ತು ಮಾಡಲು ಉತ್ತೇಜನ ಕೊಡಲಾಗುವುದು. ಕೋವಿಡ್ ಸಂದರ್ಭದಲ್ಲಿ ಹಲವಾರು ದೇಶಗಳಲ್ಲಿ ಆಹಾರದ ಕೊರತೆ ಕಾಡಿತ್ತು. ಆದರೆ, ಭಾರತವು ಆಹಾರದ ಸಮಸ್ಯೆ ಎಸುರಿಸಲಿಲ್ಲ. ರೈತರ ಪರಿಶ್ರಮದ ಪರಿಣಾಮವಾಗಿ ಭಾರತದ ಎಲ್ಲರಿಗೂ ಆಹಾರ ಸಮಸ್ಯೆ ಕಾಡಲಿಲ್ಲ. ಎಲ್ಲರಿಗೂ ಆಹಾರ ಲಭಿಸಿದೆ ಎಂದು ವಿಶ್ಲೇಷಿಸಿದರು.

ರೈತರಿಗೆ ಹೆಚ್ಚು ಅನುಕೂಲ ಮಾಡುವ ಸಂಕಲ್ಪ ಕೇಂದ್ರದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರದ್ದಾಗಿದೆ. 1,23,000 ಕೋಟಿ ರೂಪಾಯಿಯನ್ನು ಕೃಷಿ ಇಲಾಖೆಗೆ ಈ ಸಾಲಿನ ಬಜೆಟ್‍ನಲ್ಲಿ ಮೀಸಲಿಡಲಾಗಿದೆ. ಸಂಶೋಧನೆ ಮತ್ತು ಶಿಕ್ಷಣಕ್ಕೆ 8,500 ಕೋಟಿ ರೂಪಾಯಿ ನೀಡಿದ್ದಾರೆ. ಇದು ರೈತರನ್ನು ಸಮರ್ಪಕವಾಗಿ ತಲುಪಲು ಪ್ರಯತ್ನಿಸುವುದಾಗಿ ತಿಳಿಸಿದರು.

ರೈತರ ಉನ್ನತಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರದ ಜೊತೆಗೂಡಿ ಕೆಲಸ ಮಾಡುವುದಾಗಿ ಅವರು ತಿಳಿಸಿದರು. ಮಹಿಳೆಯರ ಜೊತೆ ಗದ್ದೆ ನಾಟಿ ಮಾಡಿದರು. ಪಡಿತರ ಕೇಂದ್ರಕ್ಕೂ ಭೇಟಿ ನೀಡಿ ಪಡಿತರ ಸಕಾಲದಲ್ಲಿ ಲಭಿಸುತ್ತಿರುವ ಕುರಿತು ಮಾಹಿತಿ ಪಡೆದುಕೊಂಡರು.

ರಾಜ್ಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ನಾರಾಯಣ ಗೌಡ, ಶಾಸಕರಾದ ಶ್ರೀ ಎಲ್.ನಾಗೇಂದ್ರ,. ವಿಭಾಗ ಪ್ರಭಾರಿಗಳಾದ ಶ್ರೀ ಮೈ.ವಿ.ರವಿಶಂಕರ್, ಜಿಲ್ಲಾ ಅಧ್ಯಕ್ಷರಾದ ಶ್ರೀ ಕೆ. ಜೆ. ವಿಜಯ ಕುಮಾರ್, ಮುಖಂಡರಾದ ಶ್ರೀ ಎ. ಮಂಜು. ಡಾ|| ಸಿದ್ದರಾಮಯ್ಯ, ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

]]>
https://iambjp.in/archives/326/feed 0
ಕರ್ನಾಟಕ ರಾಜ್ಯದ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಕೇಂದ್ರ ಸಚಿವರಿಗೆ‌ ಬಿ. ಸಿ. ಪಾಟೀಲ್ ಮನವಿ https://iambjp.in/archives/153 https://iambjp.in/archives/153#respond Tue, 10 Aug 2021 11:18:18 +0000 https://iambjp.in/?p=153 ನವದೆಹಲಿ/ಬೆಂಗಳೂರು : ಕೃಷಿ ಸಚಿವರಾದ ಬಿ.ಸಿ.ಪಾಟೀಲರು ನವದೆಹಲಿಯಲ್ಲಿ ಮಂಗಳವಾರ ಕೇಂದ್ರದ ರಾಜ್ಯ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಕೇಂದ್ರದ ರಾಜ್ಯ ರಾಸಾಯನಿಕ ಸಚಿವ ಭಗವಂತ್ ಖೂಬಾ ಅವರನ್ನು ಭೇಟಿ ಮಾಡಿ, ಶುಭಕೋರಿ ರಾಜ್ಯದ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಮಾಡಿದರು.

ಭೇಟಿ ವೇಳೆ ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ, ಖಾರಿಫ್‌ನಲ್ಲಿ ನಿರೀಕ್ಷೆ ಮೀರಿ ಸುಮಾರು 77 ಲಕ್ಷ ಹೆಕ್ಟೇರ್ ದಾಖಲೆಯ ಪ್ರಮಾಣದಷ್ಟು ಬಿತ್ತನೆ ಆಗಿತ್ತು. ಈ ಬಾರಿಯೂ ಕೂಡ ಬೇಗನೇ ಬಿತ್ತನೆಯಾಗಿದ್ದು,ಕೃಷಿ ಚಟುವಟಿಕೆ ಚುರುಕುಪಡೆದಿದೆ. ಆದ್ದರಿಂದ ಫಸಲು ಬರಲು ಯಾವುದೇ ರೀತಿಯ ಕೊರತೆಯಾಗದಂತೆ ಯೂರಿಯಾ ಸೇರಿದಂತೆ ಇತರೆ ರಸಗೊಬ್ಬರಗಳನ್ನು ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ಮೇರೆಗೆ ಪೂರೈಸುವಂತೆ ಕೇಂದ್ರ ರಾಸಾಯನಿಕ ಸಚಿವರಿಗೆ ಮನವಿ ಮಾಡಿದರು.

ಪ್ರಸಕ್ತ ವರ್ಷದಲ್ಲಿ, ಬಿತ್ತನೆಯ ಪ್ರದೇಶದಲ್ಲಿ ದಾಖಲೆಯ ಹೆಚ್ಚಳ ಮತ್ತು ಸಾಮಾನ್ಯ ಮಳೆಗಿಂತ ಅಧಿಕ ಮಳೆಯಿಂದಾಗಿ, ರಾಜ್ಯಗಳ ಯೂರಿಯಾದ ಅವಶ್ಯಕತೆಯೂ ಅನುಗುಣವಾಗಿ ಹೆಚ್ಚಾಗಿದೆ. ರಾಜ್ಯದಲ್ಲಿ ಸದ್ಯ 0.32 ಲಕ್ಷ ಟನ್ ಯೂರಿಯ ಬಫರ್ ಸ್ಟಾಕ್ ಇದೆ. ಈ ವರ್ಷದಲ್ಲಿ 07 ನೇ ಆಗಸ್ಟ್, 2021 ರವರೆಗೆ ಯೂರಿಯಾ ಪೂರೈಕೆಯು 6.18 ಲಕ್ಷ ಮೆಟ್ರಿಕ್ ಟನ್ ಆಗಿದೆ. ಈ ಬಾರಿಯೂ ಸಹ ಯಾವುದೇ ರೀತಿಯ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಅಲ್ಲದೇ ಕರ್ನಾಟಕ ರಾಜ್ಯದಲ್ಲಿ ಎಣ್ಣೆಕಾಳು ಬೆಳೆಗಳಿಗೆ ಉತ್ತೇಜನ ಮಾಡಲು ಹೆಚ್ಚಿನ ಕಾರ್ಯಕ್ರಮಗಳನ್ನು ನೀಡಬೇಕು.ಹಾಗೂ ಕೃಷಿ ಉತ್ಪನ್ನಗಳ ಹೆಚ್ಚಳಕ್ಕೆ ಹೆಚ್ಚು ಉತ್ತೇಜನ ನೀಡಬೇಕೆಂದು ಕೇಂದ್ರದ ಉಭಯ ಸಚಿವರಲ್ಲಿ ಬಿ.ಸಿ.ಪಾಟೀಲರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ ಕತ್ರಿ, ಅಪರ ಕೃಷಿ ನಿರ್ದೇಶಕರು (ಸಾವಯವ ಕೃಷಿ)ವೆಂಟಕರಮಣರೆಡ್ಡಿ ಜೊತೆಗಿದ್ದರು.

]]>
https://iambjp.in/archives/153/feed 0