og
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121wp-post-author
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕೃಷ್ಣದಲ್ಲಿಂದು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕೃಷ್ಣ ಮೇಲ್ದಂಡೆ ಯೋಜನೆ ಹಂತ-3 ರಡಿಯ ಭೂಸ್ವಾಧೀನ ಪ್ರಕ್ರಿಯೆ ಮತ್ತು ಪುನರ್ ನಿರ್ಮಾಣ ಮತ್ತು ಪುನರ್ವಸತಿ ಕುರಿತು ಕೈಗೊಳ್ಳಬೇಕಾಗಿರುವ ಕ್ರಮಗಳು, ಆರ್ಥಿಕ ಹೊಂದಾಣಿಕೆ ಮತ್ತು ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ರೂಪುರೇಷೆಗಳ ಕುರಿತು ಚರ್ಚಿಸಿದರು.
ಪ್ರಸ್ತುತ ಅನುಷ್ಠಾನಕ್ಕೆ ಕೈಗೊಂಡಿರುವ ಸೂಕ್ಷ್ಮ ನೀರಾವರಿ ಪದ್ದತಿಯಲ್ಲಿನ ರೂಪುರೇಷೆಗಳನ್ನು ಮರು ಪರಿಶೀಲಿಸುವ ಅವಶ್ಯಕತೆ, ನೀರಾವರಿ ಯೋಜನೆಗಳಿಗೆ ಖರ್ಚು ಮಾಡಲಾದ ವೆಚ್ಚಕ್ಕೆ ಪೂರಕವಾಗಿ ನಿರ್ಮಾಣಗೊಳಿಸಲಾದ ಯೋಜನೆಗಳ ಭೌತಿಕ ಪ್ರಗತಿ ಮತ್ತು ಕಲ್ಪಿಸಲಾದ ನೀರಾವರಿ ಸಾಮರ್ಥ್ಯ ಕುರಿತು ಮೌಲ್ಯಮಾಪನ ಕೈಗೊಳ್ಳುವ ಬಗ್ಗೆ ಚರ್ಚಿಸಿದರು. ಕೃಷ್ಣ ಮೇಲ್ದಂಡೆ ಯೋಜನೆ, ಭದ್ರಾ ಮೇಲ್ದಂಡೆ ಯೋಜನೆ, ಎತ್ತಿನಹೊಳೆ ಯೋಜನೆ, ನವಿಲೆ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಹಾಗೂ ಯೋಜನೆಗಳಡಿ ಕಲ್ಪಿಸಲಾಗುತ್ತಿರುವ ನೀರಾವರಿ ಸಾಮರ್ಥ್ಯದ ಬಗ್ಗೆ ಮತ್ತು ಪ್ರಸಕ್ತ ಸಾಲಿನ ಆಯವ್ಯಯ ಅನುದಾನ, ವೆಚ್ಚಗಳ ಕುರಿತು ಚರ್ಚಿಸಿದರು. ನೀರಾವರಿ ಯೋಜನೆಗಳಡಿ ಅನುಷ್ಟಾನಗೊಳಿಸುತ್ತಿರುವ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.
ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ ಕಾರಜೋಳ ಅವರು ಮಾತನಾಡಿ, ಗ್ರಾಮಗಳ ಸಮೀಪದಲ್ಲಿ ಹಾದುಹೋಗುವ ನದಿಗಳ ಪಾತ್ರಗಳ ಬಳಿ ತಡೆಗೋಡೆಗಳನ್ನು ವೈಜ್ಞಾನಿಕವಾಗಿ ನಿರ್ಮಿಸಬೇಕು. ಕೃಷಿಹೊಂಡ, ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳಿಂದ ಅಂತರ್ ಜಲ ವೃದ್ಧಿಯಾಗುವುದರ ಜೊತೆಗೆ ರೈತರಿಗೆ ಅನುಕೂಲವಾಗುತ್ತದೆ.ಈ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.
ಕೃಷ್ಣ ಮೇಲ್ದಂಡೆ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಯುಕೆಪಿಗೆ ಪೂರ್ಣ ಪ್ರಮಾಣದಲ್ಲಿ ಆಯುಕ್ತರನ್ನು ನೇಮಕ ಮಾಡಬೇಕು. ವಿಶೇಷ ಭೂಸ್ವಾಧೀನ ಅಧಿಕಾರಿಗಳನ್ನು ನೇಮಕ ಮಾಡಿ, ಭೂಸ್ವಾಧೀನ ಪ್ರಕ್ರಿಯೆಯು ತ್ವರಿತವಾಗಿ ನಡೆಸಬೇಕಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಗಮನ ನೀಡಬೇಕು ಎಂದು ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ ಕಾರಜೋಳ ಅವರು ಮುಖ್ಯಮಂತ್ರಿಗಳಿಗೆ ಕೋರಿದರು.
ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಕಾರ್ಯದರ್ಶಿ ಎನ್. ಲಕ್ಷಣರಾವ್ ಪೇಶ್ವೆ, ಯುಕೆಪಿಯ ಪುನರ್ ವಸತಿ ಮತ್ತು ನಿರ್ಮಾಣ ಯೋಜನೆಯ ಆಯುಕ್ತರಾದ ಶಿವಯೋಗಿ ಕಳಸದ ಅವರು ಯೋಜನೆಗಳ ಬಗ್ಗೆ ವಿವರಿಸಿದರು.
ಸಭೆಯಲ್ಲಿ ಆರ್ಥಿಕ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳಾದ ಐಎಸ್ಎಸ್ ಪ್ರಸಾದ್, ಕೆಎನ್ಎನೆಲ್ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಜೈಪ್ರಕಾಶ್, ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ ಚಿಣಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಸಚಿವರ ಆಪ್ತಕಾರ್ಯದರ್ಶಿ ವಿ.ಶ್ರೀನಿವಾಸ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
]]>ಕರ್ನಾಟಕ ನೀರಾವರಿ ನಿಗಮದಲ್ಲಿಂದು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಪ್ರಥಮ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯದ ವಿವಿಧ ಜಲಾಶಯಗಳ ನೀರನ್ನು ನ್ಯಾಯಾಲಯವು/ಜಲವಿವಾದ ನ್ಯಾಯಾಧಿಕರಣವು ನೀಡಿದ ತೀರ್ಪಿನಲ್ಲಿ ರಾಜ್ಯಕ್ಕೆ ಹಂಚಿಕೆಯಾದ ನೀರನ್ನು ಪೂರ್ಣಪ್ರಮಾಣದಲ್ಲಿ ಸದ್ಬಳಕೆಯಾಗಬೇಕು. ರಾಜ್ಯದಲ್ಲಿ 140 ಲಕ್ಷ ಹೆಕ್ಟೇರ್ ಪ್ರದೇಶವು ವ್ಯವಸಾಯಕ್ಕೆ ಯೋಗ್ಯವಾಗಿದ್ದು, 40.66 ಲಕ್ಷ ಹೆಕ್ಟೇರ್ ಪ್ರದೇಶವು ಅದರಲ್ಲಿ ಬೃಹತ್ ಮತ್ತು ಮಧ್ಯಮ ಜಲಸಂಪನ್ಮೂಲ ಇಲಾಖೆಯ ಯೋಜಿತ ನೀರಾವರಿ ಕ್ಷೇತ್ರವಾಗಿದೆ. ಅದರಲ್ಲಿ 29.18 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಲಾಗಿದೆ. ಪ್ರಸಕ್ತ ಆಯವ್ಯಯದಲ್ಲಿ 18702 ಕೋಟಿ ಅನುದಾನವನ್ನು ಮೀಸಲಿಡಲಾಗಿದ್ದು, ಜುಲೈ ಅಂತ್ಯಕ್ಕೆ 5053 ಕೋಟಿ ರೂ ಆರ್ಥಿಕ ಪ್ರಗತಿ ಸಾಧಿಸಲಾಗಿದೆ. ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಭೂಸ್ವಾಧೀನ ಪ್ರಕ್ರಿಯೆ ಪ್ರಮುಖವಾಗಿರುವುದರಿಂದ ಭೂ ಸ್ವಾಧೀನಕ್ಕೆ ಆದ್ಯತೆ ನೀಡಿ, ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಸರ್ಕಾರಕ್ಕೆ ಹೆಚ್ಚಿನ ಹೊರೆಯಾಗದಂತಹ ನೀರಿನ ಸದ್ಬಳಕೆಯಾಗುವ ಹಾಗೂ ರೈತರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ರೂಪಿಸಬೇಕು. ಕೆರೆಗೆ ನೀರು ತುಂಬುವ ಯೋಜನೆ, ರೈತರ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣ ಯೋಜನೆಗಳು ಉತ್ತಮವಾಗಿದ್ದು, ಇದರಿಂದ ಅಂತರ್ ಜಲ ವೃದ್ದಿಯಾಗುತ್ತದೆ. ಸವಳು ಜವಳು ಸಮಸ್ಯೆ ಉದ್ವವವಾಗುವುದಿಲ್ಲ. ನಿರ್ವಹಣಾ ವೆಚ್ಚವೂ ಇರುವುದಿಲ್ಲ. ಕೃಷಿ ಹೊಂಡಗಳ ಒಳಭಾಗದಲ್ಲಿ ಉತ್ತಮ ಗುಣಮಟ್ಟದ ಶೀಟ್ ಅಳವಡಿಸಬೇಕು. ಇದರಿಂದ ನೀರು ಶೇಖರಣೆಗೆ ಅನುಕೂಲವಾಗುವುದರ ಜೊತೆಗೆ ಕೃಷಿ ಹೊಂಡಗಳಲ್ಲಿ ನೀರು ಇಂಗದೇ ಸದುಪಯೋಗ ವಾಗುತ್ತದೆ. ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸಬೇಕು ಎಂದು ಜಲಸಂಪನ್ಮೂಲ ಸಚಿವರು ಸೂಚಿಸಿದರು.
ಸಭೆಯಲ್ಲಿ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಕಾರ್ಯದರ್ಶಿ ಲಕ್ಷಣ ರಾವ್ ಪೇಶ್ವೆ, ಕೆಎನ್ ಎನ್ ಎಲ್ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ, ಕೆಬಿಜೆಎನ್ ಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್ ಚಿಣಿ, ಅಪರ ಕಾರ್ಯದರ್ಶಿಗಳಾದ ಕುಲಕರ್ಣಿ, ಜಂಟಿಕಾರ್ಯದರ್ಶಿ ಬಸವರಾಜಯ್ಯ , ಪ್ರಧಾನ ಇಂಜಿನಿಯರ್ ಸಿದ್ದಗಂಗಪ್ಪ , ಉಪಕಾರ್ಯದರ್ಶಿ ಕಿರಣ್ ಮಸೂತಿ, ಮತ್ತಿತರರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
]]>